Homeಕರ್ನಾಟಕಹುಕ್ಕೇರಿ: ಶಿಕ್ಷಕಿಯಿಂದ ಅಸ್ಪೃಶ್ಯತೆ ಆಚರಣೆ; ಶಾಲಾ ಆವರಣದಲ್ಲಿ ಪೋಷಕರ ಪ್ರತಿಭಟನೆ

ಹುಕ್ಕೇರಿ: ಶಿಕ್ಷಕಿಯಿಂದ ಅಸ್ಪೃಶ್ಯತೆ ಆಚರಣೆ; ಶಾಲಾ ಆವರಣದಲ್ಲಿ ಪೋಷಕರ ಪ್ರತಿಭಟನೆ

ಶಿಕ್ಷಕಿಯನ್ನು ವರ್ಗಾವಣೆ ಮಾಡುವಂತೆ ಶಿಕ್ಷಣಾಧಿಕಾರಿಯ ಕಾಲಿಗೆ ಬಿದ್ದ ಪೋಷಕರು

- Advertisement -
- Advertisement -

“ಸಂವಿಧಾನದ ಭಾರತದಲ್ಲಿ ಈಗಲೂ ಅಸಮಾನತೆ, ತಾರತಮ್ಯ, ಶ್ರೇಣಿಕೃತ ವ್ಯವಸ್ಥೆ ಕಾಡುತ್ತಿದೆ. ಕೊಳಕು ಜಾತಿವ್ಯವಸ್ಥೆಯಿಂದ ಹೊರಗಡೆ ಬರಲು ಸಾಧ್ಯವಾಗಿಲ್ಲ. ಮಹಿಳೆಯರು, ಮಕ್ಕಳ ಮೇಲೆ ಅತ್ಯಾಚಾರಗಳು ನಿರಂತರವಾಗಿವೆ. ಈ ಥರದ ಸಮಾಜವನ್ನು ಬದಲಾಯಿಸಲು ಸಂವಿಧಾನ ಕಟ್ಟಿಕೊಂಡಿದ್ದೇವೆ. ಶಿಕ್ಷಣ ವ್ಯವಸ್ಥೆಯೇ ಸಂವಿಧಾನದ ತೊಟ್ಟಿಲು. ನಿಜವಾದ ಸಂವಿಧಾನ ಆಶಯಗಳನ್ನು ಈಡೇರಿಸಬೇಕಾದರೆ ನೀವು ಬಲಿಷ್ಠ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಬೇಕು” ಎನ್ನುತ್ತಾರೆ ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ. ಆದರೆ ಶಿಕ್ಷಕರೇ ಮತೀಯವಾಗಿಗಳು, ಜಾತಿವಾದಿಗಳು ಆದರೆ ಏನು ಮಾಡುವುದು? ಶಿಕ್ಷಕರ ಮೇಲೆಯೇ ಇಂತಹ ಆರೋಪಗಳು ಬಂದರೆ?

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದ ಸರಕಾರಿ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆಂಬ ಆರೋಪ ಬಂದಿದ್ದು, ದಲಿತ ಸಮುದಾಯದ ಪೋಷಕರು ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಮಕ್ಕಳ ಮನಸ್ಸಿನಲ್ಲಿ ಜಾತಿ ವಿಷ ಬೀಜ ಬಿತ್ತುವ ಶಿಕ್ಷಕಿಯನ್ನು ತಕ್ಷಣ ಬೇರೆಡೆಗೆ ವರ್ಗಾವಣೆ ಮಾಡಿ ನಮ್ಮ ಮಕ್ಕಳಿಗಾಗಿ ಉತ್ತಮ ಶಿಕ್ಷಕರನ್ನು ನೇಮಿಸಿ ಎಂದು ಬೇಡಿಕೆ ಇಟ್ಟಿರುವ ಹುಕ್ಕೇರಿ ತಾಲೂಕಿನ ದಲಿತ ಮುಖಂಡರು ಹುಕ್ಕೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾಲಿಗೆ ಬಿದ್ದಿರುವ ಪ್ರಸಂಗವೂ ನಡೆದಿದೆ.

ಇಲ್ಲಿನ ಶಿಕ್ಷಕಿ ಎಂ.ಟಿ.ಅನುಪಮಾ ಅವರು ನಮ್ಮ ಗ್ರಾಮದ ಶಾಲೆಗೆ ಬಂದಾಗಿಲಿಂದ ದಲಿತ ಮಕ್ಕಳ ಬಗ್ಗೆ ಅಸಮಾನತೆಯ ಬೀಜ ಬಿತ್ತುವುದಲ್ಲದೆ, ದಲಿತ ಮಕ್ಕಳಿಗೆ ಅವಾಚ್ಯ ಪದಗಳನ್ನು ಬಳಸಿ ನಿಂದಿಸುತ್ತಾರೆ. ಮಕ್ಕಳ ಪಾಲಕರು ಈ ಬಗ್ಗೆ ಪ್ರಶ್ನಿಸಿದರೆ ಉಡಾಫೆ ಮಾತುಗಳನ್ನಾಡಿ ಬೇಜವಾಬ್ದಾರಿಯಿಂದ ವರ್ತಿಸುತ್ತಾರೆ ಎಂದು ಮದಿಹಳ್ಳಿ ಗ್ರಾಮದ ಗ್ರಾಮಸ್ಥರು ದಿಢೀರನೆ ಪ್ರತಿಭಟನೆ ಮಾಡುವ ಮೂಲಕ ನಮಗೆ ಈ ಶಿಕ್ಷಕಿ ಬೇಡ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿರಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಕಳೆದ ಆಗಸ್ಟ್‌ 15ರ ಸ್ವಾತಂತ್ರ್ಯ ಉತ್ಸವ ದಿನದಂದು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್ ಅವರ ಭಾವಚಿತ್ರವನ್ನು ಪೂಜೆಗೆ ಇರಿಸಿರಲಿಲ್ಲ. ಅಲ್ಲದೆ ದಲಿತ ಮಕ್ಕಳನ್ನು ಎರಡನೇ ದರ್ಜೆಯ ಪ್ರಜೆಗಳ ರೀತಿ ನೋಡಿಕೊಳ್ಳುತ್ತಾರೆ. ಹೀಗಾಗಿ ಈ ಕೂಡಲೇ ಮುಖ್ಯಶಿಕ್ಷಕಿ ಅನುಪಮಾ ಅವರನ್ನು ಇಲ್ಲಿಂದ ವರ್ಗಾವಣೆ ಮಾಡಬೇಕು ಎಂದು ದಲಿತಪರ ಸಂಘಟನೆಗಳು ಈ ಹಿಂದೆಯೂ ಪ್ರತಿಭಟಿಸಿದ್ದವು.

ಪ್ರತಿಭಟನೆಗೆ ಸ್ಪಂದಿಸಿ ಮುಖ್ಯ ಶಿಕ್ಷಕಿ ಅನುಪಮಾ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಬೇರೆ ಶಾಲೆಗೆ ವರ್ಗಾವಣೆ ಮಾಡಿದ್ದರು. ಆದರೆ ಇದೀಗ ಮತ್ತೆ ಕೆಲವು ಮೇಲ್ಜಾತಿಯ ಪ್ರಭಾವಿಗಳ ಒತ್ತಡಕ್ಕೆ ಮಣಿದು ಅನುಪಮಾ ಅವರನ್ನು ಮತ್ತೆ ಇದೇ ಶಾಲೆಗೆ ಮರು ನೇಮಿಸಲಾಗಿದೆ ಎಂದು ಪೋಷಕರು ಹಾಗೂ ದಲಿತ ಸಂಘಟನೆಗಳ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ. ಶಿಕ್ಷಕಿ ಅನುಪಮಾ ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

‘ಮಾತೆತ್ತಿದರೆ ನಾವೆಲ್ಲ ಹಿಂದೂ, ದುಡ್ಡಿನ ಆಸೆಗೆ ಮತಾಂತರ ಮಾಡ್ತಾರೆ ಎಂದೆಲ್ಲ ಹೋರಾಟ ಮಾಡುವ ಹಿಂದೂ ಸಂಘಟನೆಗಳು ಅಸ್ಪೃಶ್ಯತೆ ವಿರುದ್ಧ ಯಾಕೆ ಧ್ವನಿ ಎತ್ತುತ್ತಿಲ್ಲ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಪೋಷಕರು ತಮ್ಮ ಅಳಲು ತೋಡಿಕೊಂಡಿದ್ದಾರೆ. “ಶಿಕ್ಷಕಿ ಅನುಪಮಾ ನಮ್ಮ ಗ್ರಾಮದ ಶಾಲೆಗೆ ಬಂದಾಗಿಲಿಂದ ದಲಿತ ಮಕ್ಕಳ ಬಗ್ಗೆ ಅಸಮಾನತೆಯ ಬೀಜ ಬಿತ್ತುವುದಲ್ಲದೆ, ದಲಿತ ಮಕ್ಕಳಿಗೆ ಅವಾಚ್ಯ ಪದಗಳನ್ನು ಬಳಸಿ ನಿಂದಿಸುತ್ತಾರೆ. ಮಕ್ಕಳ ಪಾಲಕರು ಈ ಬಗ್ಗೆ ಪ್ರಶ್ನಿಸಿದರೆ ಉಡಾಫೆ ಮಾತುಗಳನ್ನಾಡಿ ಬೇಜವಾಬ್ದಾರಿಯಿಂದ ವರ್ತಿಸುತ್ತಾರೆ” ಎಂದು ತಿಳಿಸಿದ್ದಾರೆ.

ಆದೇಶ: ಪೋಷಕರ ಆಗ್ರಹಕ್ಕೆ ಸ್ಪಂದಿಸಿರುವ ಶಿಕ್ಷಣಾಧಿಕಾರಿ, ಜಾತಿವಾದದ ಆರೋಪ ಹೊತ್ತಿರುವ ಶಿಕ್ಷಕಿಯನ್ನು ಬೇರೆ ಶಾಲೆಗೆ ವರ್ಗಾವಣೆ ಮಾಡಿದ್ದಾರೆ ಎನ್ನಲಾಗಿದೆ.

ಉತ್ತರಪ್ರದೇಶದಲ್ಲೂ ಇಂತಹದ್ದೇ ಪ್ರಕರಣ ಬಯಲಿಗೆ

ಶಿಕ್ಷಕರೇ ಜಾತಿಯನ್ನು ಪ್ರಚೋದಿಸುವ ಬೆಳವಣಿಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವಂತಿದೆ. ಉತ್ತರ ಪ್ರದೇಶದಲ್ಲಿ ಇಂತಹದ್ದೇ ಪ್ರಕರಣ ಇತ್ತೀಚೆಗೆ ವರದಿಯಾಗಿತ್ತು. ಮಧ್ಯಾಹ್ನದ ಬಿಸಿಯೂಟಕ್ಕಾಗಿ ದಲಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ತಟ್ಟೆಗಳನ್ನು ಇರಿಸಿದ್ದರಿಂದ ಶಾಲೆಯ ಮುಖ್ಯಶಿಕ್ಷಕಿಯನ್ನು ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿತ್ತು.

ಇದನ್ನೂ ಓದಿರಿ: ಬೆಂಗಳೂರು: ಪೌರಕಾರ್ಮಿಕರ ಘನತೆಯ ಬದುಕು, ಗೌರವ, ವಸತಿ, ಶಿಕ್ಷಣಕ್ಕಾಗಿ 15 ದಿನಗಳ ಜಾಥಾ

ಶಾಲೆಯ ಬಿಸಿಯೂಟ ನೌಕರರು ದಲಿತ ವಿದ್ಯಾರ್ಥಿಗಳ ತಟ್ಟೆಗಳನ್ನೂ ಮುಟ್ಟುವುದಿಲ್ಲ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿತ್ತು. ಮೈನ್‌‌ಪುರಿ ಜಿಲ್ಲೆಯ ದೌಡಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿರುವ 80 ಮಕ್ಕಳಲ್ಲಿ 60 ಮಕ್ಕಳು ಪರಿಶಿಷ್ಟ ಜಾತಿಯವರು. ಆದಾಗ್ಯೂ, ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಮಕ್ಕಳ ಪಾತ್ರೆಗಳನ್ನು ಮಾತ್ರ ಅಡುಗೆಮನೆಯಲ್ಲಿ ಇರಿಸಲಾಗಿತ್ತು. ಈ ಕುರಿತ ವಿಡಿಯೋ ಕೆಲವು ದಿನಗಳ ಹಿಂದೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌‌ ಆಗಿತ್ತು.

ಗ್ರಾಮದ ಜನಸಂಖ್ಯೆಯಲ್ಲಿ ಶೇ. 35ರಷ್ಟು ದಲಿತರು, ಅಷ್ಟೇ ಪ್ರಮಾಣದಲ್ಲಿ ಠಾಕೂರರು ಇದ್ದು, ಉಳಿದವರು ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದಾರೆ ಎಂದು ಸಾಹಬ್ ಸಿಂಗ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದರು.

ಇದನ್ನೂ ಓದಿರಿ: ರೈತರ ಹತ್ಯಾಕಾಂಡ ವಿರೋಧಿಸಿ ಮಹಾರಾಷ್ಟ್ರ ಬಂದ್: ಅಂಗಡಿ ಮುಂಗಟ್ಟು, ಮಾರುಕಟ್ಟೆ ಸಂಪೂರ್ಣ ಬಂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...