Homeಕರ್ನಾಟಕಹುಕ್ಕೇರಿ: ಶಿಕ್ಷಕಿಯಿಂದ ಅಸ್ಪೃಶ್ಯತೆ ಆಚರಣೆ; ಶಾಲಾ ಆವರಣದಲ್ಲಿ ಪೋಷಕರ ಪ್ರತಿಭಟನೆ

ಹುಕ್ಕೇರಿ: ಶಿಕ್ಷಕಿಯಿಂದ ಅಸ್ಪೃಶ್ಯತೆ ಆಚರಣೆ; ಶಾಲಾ ಆವರಣದಲ್ಲಿ ಪೋಷಕರ ಪ್ರತಿಭಟನೆ

ಶಿಕ್ಷಕಿಯನ್ನು ವರ್ಗಾವಣೆ ಮಾಡುವಂತೆ ಶಿಕ್ಷಣಾಧಿಕಾರಿಯ ಕಾಲಿಗೆ ಬಿದ್ದ ಪೋಷಕರು

- Advertisement -
- Advertisement -

“ಸಂವಿಧಾನದ ಭಾರತದಲ್ಲಿ ಈಗಲೂ ಅಸಮಾನತೆ, ತಾರತಮ್ಯ, ಶ್ರೇಣಿಕೃತ ವ್ಯವಸ್ಥೆ ಕಾಡುತ್ತಿದೆ. ಕೊಳಕು ಜಾತಿವ್ಯವಸ್ಥೆಯಿಂದ ಹೊರಗಡೆ ಬರಲು ಸಾಧ್ಯವಾಗಿಲ್ಲ. ಮಹಿಳೆಯರು, ಮಕ್ಕಳ ಮೇಲೆ ಅತ್ಯಾಚಾರಗಳು ನಿರಂತರವಾಗಿವೆ. ಈ ಥರದ ಸಮಾಜವನ್ನು ಬದಲಾಯಿಸಲು ಸಂವಿಧಾನ ಕಟ್ಟಿಕೊಂಡಿದ್ದೇವೆ. ಶಿಕ್ಷಣ ವ್ಯವಸ್ಥೆಯೇ ಸಂವಿಧಾನದ ತೊಟ್ಟಿಲು. ನಿಜವಾದ ಸಂವಿಧಾನ ಆಶಯಗಳನ್ನು ಈಡೇರಿಸಬೇಕಾದರೆ ನೀವು ಬಲಿಷ್ಠ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಬೇಕು” ಎನ್ನುತ್ತಾರೆ ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ. ಆದರೆ ಶಿಕ್ಷಕರೇ ಮತೀಯವಾಗಿಗಳು, ಜಾತಿವಾದಿಗಳು ಆದರೆ ಏನು ಮಾಡುವುದು? ಶಿಕ್ಷಕರ ಮೇಲೆಯೇ ಇಂತಹ ಆರೋಪಗಳು ಬಂದರೆ?

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದ ಸರಕಾರಿ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆಂಬ ಆರೋಪ ಬಂದಿದ್ದು, ದಲಿತ ಸಮುದಾಯದ ಪೋಷಕರು ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಮಕ್ಕಳ ಮನಸ್ಸಿನಲ್ಲಿ ಜಾತಿ ವಿಷ ಬೀಜ ಬಿತ್ತುವ ಶಿಕ್ಷಕಿಯನ್ನು ತಕ್ಷಣ ಬೇರೆಡೆಗೆ ವರ್ಗಾವಣೆ ಮಾಡಿ ನಮ್ಮ ಮಕ್ಕಳಿಗಾಗಿ ಉತ್ತಮ ಶಿಕ್ಷಕರನ್ನು ನೇಮಿಸಿ ಎಂದು ಬೇಡಿಕೆ ಇಟ್ಟಿರುವ ಹುಕ್ಕೇರಿ ತಾಲೂಕಿನ ದಲಿತ ಮುಖಂಡರು ಹುಕ್ಕೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾಲಿಗೆ ಬಿದ್ದಿರುವ ಪ್ರಸಂಗವೂ ನಡೆದಿದೆ.

ಇಲ್ಲಿನ ಶಿಕ್ಷಕಿ ಎಂ.ಟಿ.ಅನುಪಮಾ ಅವರು ನಮ್ಮ ಗ್ರಾಮದ ಶಾಲೆಗೆ ಬಂದಾಗಿಲಿಂದ ದಲಿತ ಮಕ್ಕಳ ಬಗ್ಗೆ ಅಸಮಾನತೆಯ ಬೀಜ ಬಿತ್ತುವುದಲ್ಲದೆ, ದಲಿತ ಮಕ್ಕಳಿಗೆ ಅವಾಚ್ಯ ಪದಗಳನ್ನು ಬಳಸಿ ನಿಂದಿಸುತ್ತಾರೆ. ಮಕ್ಕಳ ಪಾಲಕರು ಈ ಬಗ್ಗೆ ಪ್ರಶ್ನಿಸಿದರೆ ಉಡಾಫೆ ಮಾತುಗಳನ್ನಾಡಿ ಬೇಜವಾಬ್ದಾರಿಯಿಂದ ವರ್ತಿಸುತ್ತಾರೆ ಎಂದು ಮದಿಹಳ್ಳಿ ಗ್ರಾಮದ ಗ್ರಾಮಸ್ಥರು ದಿಢೀರನೆ ಪ್ರತಿಭಟನೆ ಮಾಡುವ ಮೂಲಕ ನಮಗೆ ಈ ಶಿಕ್ಷಕಿ ಬೇಡ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿರಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಕಳೆದ ಆಗಸ್ಟ್‌ 15ರ ಸ್ವಾತಂತ್ರ್ಯ ಉತ್ಸವ ದಿನದಂದು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್ ಅವರ ಭಾವಚಿತ್ರವನ್ನು ಪೂಜೆಗೆ ಇರಿಸಿರಲಿಲ್ಲ. ಅಲ್ಲದೆ ದಲಿತ ಮಕ್ಕಳನ್ನು ಎರಡನೇ ದರ್ಜೆಯ ಪ್ರಜೆಗಳ ರೀತಿ ನೋಡಿಕೊಳ್ಳುತ್ತಾರೆ. ಹೀಗಾಗಿ ಈ ಕೂಡಲೇ ಮುಖ್ಯಶಿಕ್ಷಕಿ ಅನುಪಮಾ ಅವರನ್ನು ಇಲ್ಲಿಂದ ವರ್ಗಾವಣೆ ಮಾಡಬೇಕು ಎಂದು ದಲಿತಪರ ಸಂಘಟನೆಗಳು ಈ ಹಿಂದೆಯೂ ಪ್ರತಿಭಟಿಸಿದ್ದವು.

ಪ್ರತಿಭಟನೆಗೆ ಸ್ಪಂದಿಸಿ ಮುಖ್ಯ ಶಿಕ್ಷಕಿ ಅನುಪಮಾ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಬೇರೆ ಶಾಲೆಗೆ ವರ್ಗಾವಣೆ ಮಾಡಿದ್ದರು. ಆದರೆ ಇದೀಗ ಮತ್ತೆ ಕೆಲವು ಮೇಲ್ಜಾತಿಯ ಪ್ರಭಾವಿಗಳ ಒತ್ತಡಕ್ಕೆ ಮಣಿದು ಅನುಪಮಾ ಅವರನ್ನು ಮತ್ತೆ ಇದೇ ಶಾಲೆಗೆ ಮರು ನೇಮಿಸಲಾಗಿದೆ ಎಂದು ಪೋಷಕರು ಹಾಗೂ ದಲಿತ ಸಂಘಟನೆಗಳ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ. ಶಿಕ್ಷಕಿ ಅನುಪಮಾ ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

‘ಮಾತೆತ್ತಿದರೆ ನಾವೆಲ್ಲ ಹಿಂದೂ, ದುಡ್ಡಿನ ಆಸೆಗೆ ಮತಾಂತರ ಮಾಡ್ತಾರೆ ಎಂದೆಲ್ಲ ಹೋರಾಟ ಮಾಡುವ ಹಿಂದೂ ಸಂಘಟನೆಗಳು ಅಸ್ಪೃಶ್ಯತೆ ವಿರುದ್ಧ ಯಾಕೆ ಧ್ವನಿ ಎತ್ತುತ್ತಿಲ್ಲ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಪೋಷಕರು ತಮ್ಮ ಅಳಲು ತೋಡಿಕೊಂಡಿದ್ದಾರೆ. “ಶಿಕ್ಷಕಿ ಅನುಪಮಾ ನಮ್ಮ ಗ್ರಾಮದ ಶಾಲೆಗೆ ಬಂದಾಗಿಲಿಂದ ದಲಿತ ಮಕ್ಕಳ ಬಗ್ಗೆ ಅಸಮಾನತೆಯ ಬೀಜ ಬಿತ್ತುವುದಲ್ಲದೆ, ದಲಿತ ಮಕ್ಕಳಿಗೆ ಅವಾಚ್ಯ ಪದಗಳನ್ನು ಬಳಸಿ ನಿಂದಿಸುತ್ತಾರೆ. ಮಕ್ಕಳ ಪಾಲಕರು ಈ ಬಗ್ಗೆ ಪ್ರಶ್ನಿಸಿದರೆ ಉಡಾಫೆ ಮಾತುಗಳನ್ನಾಡಿ ಬೇಜವಾಬ್ದಾರಿಯಿಂದ ವರ್ತಿಸುತ್ತಾರೆ” ಎಂದು ತಿಳಿಸಿದ್ದಾರೆ.

ಆದೇಶ: ಪೋಷಕರ ಆಗ್ರಹಕ್ಕೆ ಸ್ಪಂದಿಸಿರುವ ಶಿಕ್ಷಣಾಧಿಕಾರಿ, ಜಾತಿವಾದದ ಆರೋಪ ಹೊತ್ತಿರುವ ಶಿಕ್ಷಕಿಯನ್ನು ಬೇರೆ ಶಾಲೆಗೆ ವರ್ಗಾವಣೆ ಮಾಡಿದ್ದಾರೆ ಎನ್ನಲಾಗಿದೆ.

ಉತ್ತರಪ್ರದೇಶದಲ್ಲೂ ಇಂತಹದ್ದೇ ಪ್ರಕರಣ ಬಯಲಿಗೆ

ಶಿಕ್ಷಕರೇ ಜಾತಿಯನ್ನು ಪ್ರಚೋದಿಸುವ ಬೆಳವಣಿಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವಂತಿದೆ. ಉತ್ತರ ಪ್ರದೇಶದಲ್ಲಿ ಇಂತಹದ್ದೇ ಪ್ರಕರಣ ಇತ್ತೀಚೆಗೆ ವರದಿಯಾಗಿತ್ತು. ಮಧ್ಯಾಹ್ನದ ಬಿಸಿಯೂಟಕ್ಕಾಗಿ ದಲಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ತಟ್ಟೆಗಳನ್ನು ಇರಿಸಿದ್ದರಿಂದ ಶಾಲೆಯ ಮುಖ್ಯಶಿಕ್ಷಕಿಯನ್ನು ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿತ್ತು.

ಇದನ್ನೂ ಓದಿರಿ: ಬೆಂಗಳೂರು: ಪೌರಕಾರ್ಮಿಕರ ಘನತೆಯ ಬದುಕು, ಗೌರವ, ವಸತಿ, ಶಿಕ್ಷಣಕ್ಕಾಗಿ 15 ದಿನಗಳ ಜಾಥಾ

ಶಾಲೆಯ ಬಿಸಿಯೂಟ ನೌಕರರು ದಲಿತ ವಿದ್ಯಾರ್ಥಿಗಳ ತಟ್ಟೆಗಳನ್ನೂ ಮುಟ್ಟುವುದಿಲ್ಲ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿತ್ತು. ಮೈನ್‌‌ಪುರಿ ಜಿಲ್ಲೆಯ ದೌಡಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿರುವ 80 ಮಕ್ಕಳಲ್ಲಿ 60 ಮಕ್ಕಳು ಪರಿಶಿಷ್ಟ ಜಾತಿಯವರು. ಆದಾಗ್ಯೂ, ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಮಕ್ಕಳ ಪಾತ್ರೆಗಳನ್ನು ಮಾತ್ರ ಅಡುಗೆಮನೆಯಲ್ಲಿ ಇರಿಸಲಾಗಿತ್ತು. ಈ ಕುರಿತ ವಿಡಿಯೋ ಕೆಲವು ದಿನಗಳ ಹಿಂದೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌‌ ಆಗಿತ್ತು.

ಗ್ರಾಮದ ಜನಸಂಖ್ಯೆಯಲ್ಲಿ ಶೇ. 35ರಷ್ಟು ದಲಿತರು, ಅಷ್ಟೇ ಪ್ರಮಾಣದಲ್ಲಿ ಠಾಕೂರರು ಇದ್ದು, ಉಳಿದವರು ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದಾರೆ ಎಂದು ಸಾಹಬ್ ಸಿಂಗ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದರು.

ಇದನ್ನೂ ಓದಿರಿ: ರೈತರ ಹತ್ಯಾಕಾಂಡ ವಿರೋಧಿಸಿ ಮಹಾರಾಷ್ಟ್ರ ಬಂದ್: ಅಂಗಡಿ ಮುಂಗಟ್ಟು, ಮಾರುಕಟ್ಟೆ ಸಂಪೂರ್ಣ ಬಂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...