Homeಕರ್ನಾಟಕಹುಕ್ಕೇರಿ: ಶಿಕ್ಷಕಿಯಿಂದ ಅಸ್ಪೃಶ್ಯತೆ ಆಚರಣೆ; ಶಾಲಾ ಆವರಣದಲ್ಲಿ ಪೋಷಕರ ಪ್ರತಿಭಟನೆ

ಹುಕ್ಕೇರಿ: ಶಿಕ್ಷಕಿಯಿಂದ ಅಸ್ಪೃಶ್ಯತೆ ಆಚರಣೆ; ಶಾಲಾ ಆವರಣದಲ್ಲಿ ಪೋಷಕರ ಪ್ರತಿಭಟನೆ

ಶಿಕ್ಷಕಿಯನ್ನು ವರ್ಗಾವಣೆ ಮಾಡುವಂತೆ ಶಿಕ್ಷಣಾಧಿಕಾರಿಯ ಕಾಲಿಗೆ ಬಿದ್ದ ಪೋಷಕರು

- Advertisement -
- Advertisement -

“ಸಂವಿಧಾನದ ಭಾರತದಲ್ಲಿ ಈಗಲೂ ಅಸಮಾನತೆ, ತಾರತಮ್ಯ, ಶ್ರೇಣಿಕೃತ ವ್ಯವಸ್ಥೆ ಕಾಡುತ್ತಿದೆ. ಕೊಳಕು ಜಾತಿವ್ಯವಸ್ಥೆಯಿಂದ ಹೊರಗಡೆ ಬರಲು ಸಾಧ್ಯವಾಗಿಲ್ಲ. ಮಹಿಳೆಯರು, ಮಕ್ಕಳ ಮೇಲೆ ಅತ್ಯಾಚಾರಗಳು ನಿರಂತರವಾಗಿವೆ. ಈ ಥರದ ಸಮಾಜವನ್ನು ಬದಲಾಯಿಸಲು ಸಂವಿಧಾನ ಕಟ್ಟಿಕೊಂಡಿದ್ದೇವೆ. ಶಿಕ್ಷಣ ವ್ಯವಸ್ಥೆಯೇ ಸಂವಿಧಾನದ ತೊಟ್ಟಿಲು. ನಿಜವಾದ ಸಂವಿಧಾನ ಆಶಯಗಳನ್ನು ಈಡೇರಿಸಬೇಕಾದರೆ ನೀವು ಬಲಿಷ್ಠ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಬೇಕು” ಎನ್ನುತ್ತಾರೆ ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ. ಆದರೆ ಶಿಕ್ಷಕರೇ ಮತೀಯವಾಗಿಗಳು, ಜಾತಿವಾದಿಗಳು ಆದರೆ ಏನು ಮಾಡುವುದು? ಶಿಕ್ಷಕರ ಮೇಲೆಯೇ ಇಂತಹ ಆರೋಪಗಳು ಬಂದರೆ?

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದ ಸರಕಾರಿ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆಂಬ ಆರೋಪ ಬಂದಿದ್ದು, ದಲಿತ ಸಮುದಾಯದ ಪೋಷಕರು ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಮಕ್ಕಳ ಮನಸ್ಸಿನಲ್ಲಿ ಜಾತಿ ವಿಷ ಬೀಜ ಬಿತ್ತುವ ಶಿಕ್ಷಕಿಯನ್ನು ತಕ್ಷಣ ಬೇರೆಡೆಗೆ ವರ್ಗಾವಣೆ ಮಾಡಿ ನಮ್ಮ ಮಕ್ಕಳಿಗಾಗಿ ಉತ್ತಮ ಶಿಕ್ಷಕರನ್ನು ನೇಮಿಸಿ ಎಂದು ಬೇಡಿಕೆ ಇಟ್ಟಿರುವ ಹುಕ್ಕೇರಿ ತಾಲೂಕಿನ ದಲಿತ ಮುಖಂಡರು ಹುಕ್ಕೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾಲಿಗೆ ಬಿದ್ದಿರುವ ಪ್ರಸಂಗವೂ ನಡೆದಿದೆ.

ಇಲ್ಲಿನ ಶಿಕ್ಷಕಿ ಎಂ.ಟಿ.ಅನುಪಮಾ ಅವರು ನಮ್ಮ ಗ್ರಾಮದ ಶಾಲೆಗೆ ಬಂದಾಗಿಲಿಂದ ದಲಿತ ಮಕ್ಕಳ ಬಗ್ಗೆ ಅಸಮಾನತೆಯ ಬೀಜ ಬಿತ್ತುವುದಲ್ಲದೆ, ದಲಿತ ಮಕ್ಕಳಿಗೆ ಅವಾಚ್ಯ ಪದಗಳನ್ನು ಬಳಸಿ ನಿಂದಿಸುತ್ತಾರೆ. ಮಕ್ಕಳ ಪಾಲಕರು ಈ ಬಗ್ಗೆ ಪ್ರಶ್ನಿಸಿದರೆ ಉಡಾಫೆ ಮಾತುಗಳನ್ನಾಡಿ ಬೇಜವಾಬ್ದಾರಿಯಿಂದ ವರ್ತಿಸುತ್ತಾರೆ ಎಂದು ಮದಿಹಳ್ಳಿ ಗ್ರಾಮದ ಗ್ರಾಮಸ್ಥರು ದಿಢೀರನೆ ಪ್ರತಿಭಟನೆ ಮಾಡುವ ಮೂಲಕ ನಮಗೆ ಈ ಶಿಕ್ಷಕಿ ಬೇಡ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿರಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಕಳೆದ ಆಗಸ್ಟ್‌ 15ರ ಸ್ವಾತಂತ್ರ್ಯ ಉತ್ಸವ ದಿನದಂದು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್ ಅವರ ಭಾವಚಿತ್ರವನ್ನು ಪೂಜೆಗೆ ಇರಿಸಿರಲಿಲ್ಲ. ಅಲ್ಲದೆ ದಲಿತ ಮಕ್ಕಳನ್ನು ಎರಡನೇ ದರ್ಜೆಯ ಪ್ರಜೆಗಳ ರೀತಿ ನೋಡಿಕೊಳ್ಳುತ್ತಾರೆ. ಹೀಗಾಗಿ ಈ ಕೂಡಲೇ ಮುಖ್ಯಶಿಕ್ಷಕಿ ಅನುಪಮಾ ಅವರನ್ನು ಇಲ್ಲಿಂದ ವರ್ಗಾವಣೆ ಮಾಡಬೇಕು ಎಂದು ದಲಿತಪರ ಸಂಘಟನೆಗಳು ಈ ಹಿಂದೆಯೂ ಪ್ರತಿಭಟಿಸಿದ್ದವು.

ಪ್ರತಿಭಟನೆಗೆ ಸ್ಪಂದಿಸಿ ಮುಖ್ಯ ಶಿಕ್ಷಕಿ ಅನುಪಮಾ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಬೇರೆ ಶಾಲೆಗೆ ವರ್ಗಾವಣೆ ಮಾಡಿದ್ದರು. ಆದರೆ ಇದೀಗ ಮತ್ತೆ ಕೆಲವು ಮೇಲ್ಜಾತಿಯ ಪ್ರಭಾವಿಗಳ ಒತ್ತಡಕ್ಕೆ ಮಣಿದು ಅನುಪಮಾ ಅವರನ್ನು ಮತ್ತೆ ಇದೇ ಶಾಲೆಗೆ ಮರು ನೇಮಿಸಲಾಗಿದೆ ಎಂದು ಪೋಷಕರು ಹಾಗೂ ದಲಿತ ಸಂಘಟನೆಗಳ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ. ಶಿಕ್ಷಕಿ ಅನುಪಮಾ ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

‘ಮಾತೆತ್ತಿದರೆ ನಾವೆಲ್ಲ ಹಿಂದೂ, ದುಡ್ಡಿನ ಆಸೆಗೆ ಮತಾಂತರ ಮಾಡ್ತಾರೆ ಎಂದೆಲ್ಲ ಹೋರಾಟ ಮಾಡುವ ಹಿಂದೂ ಸಂಘಟನೆಗಳು ಅಸ್ಪೃಶ್ಯತೆ ವಿರುದ್ಧ ಯಾಕೆ ಧ್ವನಿ ಎತ್ತುತ್ತಿಲ್ಲ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಪೋಷಕರು ತಮ್ಮ ಅಳಲು ತೋಡಿಕೊಂಡಿದ್ದಾರೆ. “ಶಿಕ್ಷಕಿ ಅನುಪಮಾ ನಮ್ಮ ಗ್ರಾಮದ ಶಾಲೆಗೆ ಬಂದಾಗಿಲಿಂದ ದಲಿತ ಮಕ್ಕಳ ಬಗ್ಗೆ ಅಸಮಾನತೆಯ ಬೀಜ ಬಿತ್ತುವುದಲ್ಲದೆ, ದಲಿತ ಮಕ್ಕಳಿಗೆ ಅವಾಚ್ಯ ಪದಗಳನ್ನು ಬಳಸಿ ನಿಂದಿಸುತ್ತಾರೆ. ಮಕ್ಕಳ ಪಾಲಕರು ಈ ಬಗ್ಗೆ ಪ್ರಶ್ನಿಸಿದರೆ ಉಡಾಫೆ ಮಾತುಗಳನ್ನಾಡಿ ಬೇಜವಾಬ್ದಾರಿಯಿಂದ ವರ್ತಿಸುತ್ತಾರೆ” ಎಂದು ತಿಳಿಸಿದ್ದಾರೆ.

ಆದೇಶ: ಪೋಷಕರ ಆಗ್ರಹಕ್ಕೆ ಸ್ಪಂದಿಸಿರುವ ಶಿಕ್ಷಣಾಧಿಕಾರಿ, ಜಾತಿವಾದದ ಆರೋಪ ಹೊತ್ತಿರುವ ಶಿಕ್ಷಕಿಯನ್ನು ಬೇರೆ ಶಾಲೆಗೆ ವರ್ಗಾವಣೆ ಮಾಡಿದ್ದಾರೆ ಎನ್ನಲಾಗಿದೆ.

ಉತ್ತರಪ್ರದೇಶದಲ್ಲೂ ಇಂತಹದ್ದೇ ಪ್ರಕರಣ ಬಯಲಿಗೆ

ಶಿಕ್ಷಕರೇ ಜಾತಿಯನ್ನು ಪ್ರಚೋದಿಸುವ ಬೆಳವಣಿಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವಂತಿದೆ. ಉತ್ತರ ಪ್ರದೇಶದಲ್ಲಿ ಇಂತಹದ್ದೇ ಪ್ರಕರಣ ಇತ್ತೀಚೆಗೆ ವರದಿಯಾಗಿತ್ತು. ಮಧ್ಯಾಹ್ನದ ಬಿಸಿಯೂಟಕ್ಕಾಗಿ ದಲಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ತಟ್ಟೆಗಳನ್ನು ಇರಿಸಿದ್ದರಿಂದ ಶಾಲೆಯ ಮುಖ್ಯಶಿಕ್ಷಕಿಯನ್ನು ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿತ್ತು.

ಇದನ್ನೂ ಓದಿರಿ: ಬೆಂಗಳೂರು: ಪೌರಕಾರ್ಮಿಕರ ಘನತೆಯ ಬದುಕು, ಗೌರವ, ವಸತಿ, ಶಿಕ್ಷಣಕ್ಕಾಗಿ 15 ದಿನಗಳ ಜಾಥಾ

ಶಾಲೆಯ ಬಿಸಿಯೂಟ ನೌಕರರು ದಲಿತ ವಿದ್ಯಾರ್ಥಿಗಳ ತಟ್ಟೆಗಳನ್ನೂ ಮುಟ್ಟುವುದಿಲ್ಲ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿತ್ತು. ಮೈನ್‌‌ಪುರಿ ಜಿಲ್ಲೆಯ ದೌಡಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿರುವ 80 ಮಕ್ಕಳಲ್ಲಿ 60 ಮಕ್ಕಳು ಪರಿಶಿಷ್ಟ ಜಾತಿಯವರು. ಆದಾಗ್ಯೂ, ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಮಕ್ಕಳ ಪಾತ್ರೆಗಳನ್ನು ಮಾತ್ರ ಅಡುಗೆಮನೆಯಲ್ಲಿ ಇರಿಸಲಾಗಿತ್ತು. ಈ ಕುರಿತ ವಿಡಿಯೋ ಕೆಲವು ದಿನಗಳ ಹಿಂದೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌‌ ಆಗಿತ್ತು.

ಗ್ರಾಮದ ಜನಸಂಖ್ಯೆಯಲ್ಲಿ ಶೇ. 35ರಷ್ಟು ದಲಿತರು, ಅಷ್ಟೇ ಪ್ರಮಾಣದಲ್ಲಿ ಠಾಕೂರರು ಇದ್ದು, ಉಳಿದವರು ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದಾರೆ ಎಂದು ಸಾಹಬ್ ಸಿಂಗ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದರು.

ಇದನ್ನೂ ಓದಿರಿ: ರೈತರ ಹತ್ಯಾಕಾಂಡ ವಿರೋಧಿಸಿ ಮಹಾರಾಷ್ಟ್ರ ಬಂದ್: ಅಂಗಡಿ ಮುಂಗಟ್ಟು, ಮಾರುಕಟ್ಟೆ ಸಂಪೂರ್ಣ ಬಂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...