Homeಕರ್ನಾಟಕಹುಕ್ಕೇರಿ: ಶಿಕ್ಷಕಿಯಿಂದ ಅಸ್ಪೃಶ್ಯತೆ ಆಚರಣೆ; ಶಾಲಾ ಆವರಣದಲ್ಲಿ ಪೋಷಕರ ಪ್ರತಿಭಟನೆ

ಹುಕ್ಕೇರಿ: ಶಿಕ್ಷಕಿಯಿಂದ ಅಸ್ಪೃಶ್ಯತೆ ಆಚರಣೆ; ಶಾಲಾ ಆವರಣದಲ್ಲಿ ಪೋಷಕರ ಪ್ರತಿಭಟನೆ

ಶಿಕ್ಷಕಿಯನ್ನು ವರ್ಗಾವಣೆ ಮಾಡುವಂತೆ ಶಿಕ್ಷಣಾಧಿಕಾರಿಯ ಕಾಲಿಗೆ ಬಿದ್ದ ಪೋಷಕರು

- Advertisement -
- Advertisement -

“ಸಂವಿಧಾನದ ಭಾರತದಲ್ಲಿ ಈಗಲೂ ಅಸಮಾನತೆ, ತಾರತಮ್ಯ, ಶ್ರೇಣಿಕೃತ ವ್ಯವಸ್ಥೆ ಕಾಡುತ್ತಿದೆ. ಕೊಳಕು ಜಾತಿವ್ಯವಸ್ಥೆಯಿಂದ ಹೊರಗಡೆ ಬರಲು ಸಾಧ್ಯವಾಗಿಲ್ಲ. ಮಹಿಳೆಯರು, ಮಕ್ಕಳ ಮೇಲೆ ಅತ್ಯಾಚಾರಗಳು ನಿರಂತರವಾಗಿವೆ. ಈ ಥರದ ಸಮಾಜವನ್ನು ಬದಲಾಯಿಸಲು ಸಂವಿಧಾನ ಕಟ್ಟಿಕೊಂಡಿದ್ದೇವೆ. ಶಿಕ್ಷಣ ವ್ಯವಸ್ಥೆಯೇ ಸಂವಿಧಾನದ ತೊಟ್ಟಿಲು. ನಿಜವಾದ ಸಂವಿಧಾನ ಆಶಯಗಳನ್ನು ಈಡೇರಿಸಬೇಕಾದರೆ ನೀವು ಬಲಿಷ್ಠ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಬೇಕು” ಎನ್ನುತ್ತಾರೆ ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ. ಆದರೆ ಶಿಕ್ಷಕರೇ ಮತೀಯವಾಗಿಗಳು, ಜಾತಿವಾದಿಗಳು ಆದರೆ ಏನು ಮಾಡುವುದು? ಶಿಕ್ಷಕರ ಮೇಲೆಯೇ ಇಂತಹ ಆರೋಪಗಳು ಬಂದರೆ?

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದ ಸರಕಾರಿ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆಂಬ ಆರೋಪ ಬಂದಿದ್ದು, ದಲಿತ ಸಮುದಾಯದ ಪೋಷಕರು ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಮಕ್ಕಳ ಮನಸ್ಸಿನಲ್ಲಿ ಜಾತಿ ವಿಷ ಬೀಜ ಬಿತ್ತುವ ಶಿಕ್ಷಕಿಯನ್ನು ತಕ್ಷಣ ಬೇರೆಡೆಗೆ ವರ್ಗಾವಣೆ ಮಾಡಿ ನಮ್ಮ ಮಕ್ಕಳಿಗಾಗಿ ಉತ್ತಮ ಶಿಕ್ಷಕರನ್ನು ನೇಮಿಸಿ ಎಂದು ಬೇಡಿಕೆ ಇಟ್ಟಿರುವ ಹುಕ್ಕೇರಿ ತಾಲೂಕಿನ ದಲಿತ ಮುಖಂಡರು ಹುಕ್ಕೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾಲಿಗೆ ಬಿದ್ದಿರುವ ಪ್ರಸಂಗವೂ ನಡೆದಿದೆ.

ಇಲ್ಲಿನ ಶಿಕ್ಷಕಿ ಎಂ.ಟಿ.ಅನುಪಮಾ ಅವರು ನಮ್ಮ ಗ್ರಾಮದ ಶಾಲೆಗೆ ಬಂದಾಗಿಲಿಂದ ದಲಿತ ಮಕ್ಕಳ ಬಗ್ಗೆ ಅಸಮಾನತೆಯ ಬೀಜ ಬಿತ್ತುವುದಲ್ಲದೆ, ದಲಿತ ಮಕ್ಕಳಿಗೆ ಅವಾಚ್ಯ ಪದಗಳನ್ನು ಬಳಸಿ ನಿಂದಿಸುತ್ತಾರೆ. ಮಕ್ಕಳ ಪಾಲಕರು ಈ ಬಗ್ಗೆ ಪ್ರಶ್ನಿಸಿದರೆ ಉಡಾಫೆ ಮಾತುಗಳನ್ನಾಡಿ ಬೇಜವಾಬ್ದಾರಿಯಿಂದ ವರ್ತಿಸುತ್ತಾರೆ ಎಂದು ಮದಿಹಳ್ಳಿ ಗ್ರಾಮದ ಗ್ರಾಮಸ್ಥರು ದಿಢೀರನೆ ಪ್ರತಿಭಟನೆ ಮಾಡುವ ಮೂಲಕ ನಮಗೆ ಈ ಶಿಕ್ಷಕಿ ಬೇಡ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿರಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಕಳೆದ ಆಗಸ್ಟ್‌ 15ರ ಸ್ವಾತಂತ್ರ್ಯ ಉತ್ಸವ ದಿನದಂದು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್ ಅವರ ಭಾವಚಿತ್ರವನ್ನು ಪೂಜೆಗೆ ಇರಿಸಿರಲಿಲ್ಲ. ಅಲ್ಲದೆ ದಲಿತ ಮಕ್ಕಳನ್ನು ಎರಡನೇ ದರ್ಜೆಯ ಪ್ರಜೆಗಳ ರೀತಿ ನೋಡಿಕೊಳ್ಳುತ್ತಾರೆ. ಹೀಗಾಗಿ ಈ ಕೂಡಲೇ ಮುಖ್ಯಶಿಕ್ಷಕಿ ಅನುಪಮಾ ಅವರನ್ನು ಇಲ್ಲಿಂದ ವರ್ಗಾವಣೆ ಮಾಡಬೇಕು ಎಂದು ದಲಿತಪರ ಸಂಘಟನೆಗಳು ಈ ಹಿಂದೆಯೂ ಪ್ರತಿಭಟಿಸಿದ್ದವು.

ಪ್ರತಿಭಟನೆಗೆ ಸ್ಪಂದಿಸಿ ಮುಖ್ಯ ಶಿಕ್ಷಕಿ ಅನುಪಮಾ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಬೇರೆ ಶಾಲೆಗೆ ವರ್ಗಾವಣೆ ಮಾಡಿದ್ದರು. ಆದರೆ ಇದೀಗ ಮತ್ತೆ ಕೆಲವು ಮೇಲ್ಜಾತಿಯ ಪ್ರಭಾವಿಗಳ ಒತ್ತಡಕ್ಕೆ ಮಣಿದು ಅನುಪಮಾ ಅವರನ್ನು ಮತ್ತೆ ಇದೇ ಶಾಲೆಗೆ ಮರು ನೇಮಿಸಲಾಗಿದೆ ಎಂದು ಪೋಷಕರು ಹಾಗೂ ದಲಿತ ಸಂಘಟನೆಗಳ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ. ಶಿಕ್ಷಕಿ ಅನುಪಮಾ ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

‘ಮಾತೆತ್ತಿದರೆ ನಾವೆಲ್ಲ ಹಿಂದೂ, ದುಡ್ಡಿನ ಆಸೆಗೆ ಮತಾಂತರ ಮಾಡ್ತಾರೆ ಎಂದೆಲ್ಲ ಹೋರಾಟ ಮಾಡುವ ಹಿಂದೂ ಸಂಘಟನೆಗಳು ಅಸ್ಪೃಶ್ಯತೆ ವಿರುದ್ಧ ಯಾಕೆ ಧ್ವನಿ ಎತ್ತುತ್ತಿಲ್ಲ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಪೋಷಕರು ತಮ್ಮ ಅಳಲು ತೋಡಿಕೊಂಡಿದ್ದಾರೆ. “ಶಿಕ್ಷಕಿ ಅನುಪಮಾ ನಮ್ಮ ಗ್ರಾಮದ ಶಾಲೆಗೆ ಬಂದಾಗಿಲಿಂದ ದಲಿತ ಮಕ್ಕಳ ಬಗ್ಗೆ ಅಸಮಾನತೆಯ ಬೀಜ ಬಿತ್ತುವುದಲ್ಲದೆ, ದಲಿತ ಮಕ್ಕಳಿಗೆ ಅವಾಚ್ಯ ಪದಗಳನ್ನು ಬಳಸಿ ನಿಂದಿಸುತ್ತಾರೆ. ಮಕ್ಕಳ ಪಾಲಕರು ಈ ಬಗ್ಗೆ ಪ್ರಶ್ನಿಸಿದರೆ ಉಡಾಫೆ ಮಾತುಗಳನ್ನಾಡಿ ಬೇಜವಾಬ್ದಾರಿಯಿಂದ ವರ್ತಿಸುತ್ತಾರೆ” ಎಂದು ತಿಳಿಸಿದ್ದಾರೆ.

ಆದೇಶ: ಪೋಷಕರ ಆಗ್ರಹಕ್ಕೆ ಸ್ಪಂದಿಸಿರುವ ಶಿಕ್ಷಣಾಧಿಕಾರಿ, ಜಾತಿವಾದದ ಆರೋಪ ಹೊತ್ತಿರುವ ಶಿಕ್ಷಕಿಯನ್ನು ಬೇರೆ ಶಾಲೆಗೆ ವರ್ಗಾವಣೆ ಮಾಡಿದ್ದಾರೆ ಎನ್ನಲಾಗಿದೆ.

ಉತ್ತರಪ್ರದೇಶದಲ್ಲೂ ಇಂತಹದ್ದೇ ಪ್ರಕರಣ ಬಯಲಿಗೆ

ಶಿಕ್ಷಕರೇ ಜಾತಿಯನ್ನು ಪ್ರಚೋದಿಸುವ ಬೆಳವಣಿಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವಂತಿದೆ. ಉತ್ತರ ಪ್ರದೇಶದಲ್ಲಿ ಇಂತಹದ್ದೇ ಪ್ರಕರಣ ಇತ್ತೀಚೆಗೆ ವರದಿಯಾಗಿತ್ತು. ಮಧ್ಯಾಹ್ನದ ಬಿಸಿಯೂಟಕ್ಕಾಗಿ ದಲಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ತಟ್ಟೆಗಳನ್ನು ಇರಿಸಿದ್ದರಿಂದ ಶಾಲೆಯ ಮುಖ್ಯಶಿಕ್ಷಕಿಯನ್ನು ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿತ್ತು.

ಇದನ್ನೂ ಓದಿರಿ: ಬೆಂಗಳೂರು: ಪೌರಕಾರ್ಮಿಕರ ಘನತೆಯ ಬದುಕು, ಗೌರವ, ವಸತಿ, ಶಿಕ್ಷಣಕ್ಕಾಗಿ 15 ದಿನಗಳ ಜಾಥಾ

ಶಾಲೆಯ ಬಿಸಿಯೂಟ ನೌಕರರು ದಲಿತ ವಿದ್ಯಾರ್ಥಿಗಳ ತಟ್ಟೆಗಳನ್ನೂ ಮುಟ್ಟುವುದಿಲ್ಲ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿತ್ತು. ಮೈನ್‌‌ಪುರಿ ಜಿಲ್ಲೆಯ ದೌಡಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿರುವ 80 ಮಕ್ಕಳಲ್ಲಿ 60 ಮಕ್ಕಳು ಪರಿಶಿಷ್ಟ ಜಾತಿಯವರು. ಆದಾಗ್ಯೂ, ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಮಕ್ಕಳ ಪಾತ್ರೆಗಳನ್ನು ಮಾತ್ರ ಅಡುಗೆಮನೆಯಲ್ಲಿ ಇರಿಸಲಾಗಿತ್ತು. ಈ ಕುರಿತ ವಿಡಿಯೋ ಕೆಲವು ದಿನಗಳ ಹಿಂದೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌‌ ಆಗಿತ್ತು.

ಗ್ರಾಮದ ಜನಸಂಖ್ಯೆಯಲ್ಲಿ ಶೇ. 35ರಷ್ಟು ದಲಿತರು, ಅಷ್ಟೇ ಪ್ರಮಾಣದಲ್ಲಿ ಠಾಕೂರರು ಇದ್ದು, ಉಳಿದವರು ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದಾರೆ ಎಂದು ಸಾಹಬ್ ಸಿಂಗ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದರು.

ಇದನ್ನೂ ಓದಿರಿ: ರೈತರ ಹತ್ಯಾಕಾಂಡ ವಿರೋಧಿಸಿ ಮಹಾರಾಷ್ಟ್ರ ಬಂದ್: ಅಂಗಡಿ ಮುಂಗಟ್ಟು, ಮಾರುಕಟ್ಟೆ ಸಂಪೂರ್ಣ ಬಂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...