Homeಕರ್ನಾಟಕಮಾಧುಸ್ವಾಮಿ ಹೇಳಿಕೆ ವಿರೋಧಿಸಿ ಕುರುಬ ಸಮುದಾಯ ಕರೆಕೊಟ್ಟ ಹುಳಿಯಾರ್‌ ಬಂ‌ದ್‌ಗೆ ವ್ಯಾಪಕ ಬೆಂಬಲ.. ವಿಡಿಯೋ ನೋಡಿ

ಮಾಧುಸ್ವಾಮಿ ಹೇಳಿಕೆ ವಿರೋಧಿಸಿ ಕುರುಬ ಸಮುದಾಯ ಕರೆಕೊಟ್ಟ ಹುಳಿಯಾರ್‌ ಬಂ‌ದ್‌ಗೆ ವ್ಯಾಪಕ ಬೆಂಬಲ.. ವಿಡಿಯೋ ನೋಡಿ

- Advertisement -
- Advertisement -

ಈಶ್ವರಾನಂದಪುರಿ ಸ್ವಾಮಿಗಳ ಬಗ್ಗೆ ತುಚ್ಚವಾಗಿ ಮಾತನಾಡಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರನ್ನು ಸಂಪುಟದಿಂದ ವಜಾಮಾಡುವಂತೆ ಒತ್ತಾಯಿಸಿ ಕುರುಬ ಸಮುದಾಯದ ಸಂಘಟನೆಗಳು ಕರೆನೀಡಿರುವ ಚಿಕ್ಕನಾಯನಹಳ್ಳಿಯ ಹುಳಿಯಾರ್ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಬಂದ್ ಗೆ ಬೆಂಬಲ ನೀಡಿದ್ದಾರೆ.

ಹುಳಿಯಾರಿನ ಹೊಸದುರ್ಗರಸ್ತೆಯಲ್ಲಿರುವ ವೃತ್ತಕ್ಕೆ ಕನಕದಾಸರ ಹೆಸರನ್ನು ಇಡುವ ವಿಚಾರದಲ್ಲಿ ಸಚಿವ ಮಾಧುಸ್ವಾಮಿ ಕುರುಬ ಸಮುದಾಯದ ಸ್ವಾಮೀಜಿಗೆ ಏಕವಚನದಲ್ಲಿ ಮಾತನಾಡಿದ್ದರು. ಕನಕ ವೃತ್ತವೆಂದು ನಾಮಕರಣ ಮಾಡಲು ಸಚಿವರು ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಆಕ್ರೋಶ ವ್ಯಕ್ತಪಡಿಸಿರುವ ಕುರುಬ ಸಮುದಾಯದ ಸಂಘಟನೆಗಳು ಹಾಲುಮತ ಮಹಾಸಭಾ ನೇತೃತ್ವದಲ್ಲಿ ಹುಳಿಯಾರಿನಲ್ಲಿ ಪ್ರತಿಭಟನೆ ನಡಸಲಾಯಿತು.

ಬಂದ್ ಹಿನ್ನೆಲೆಯಲ್ಲಿ ಬಸ್, ಆಟೋ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿತ್ತು. ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಿದ್ದವು. ಹುಳಿಯಾರಿನ ರಸ್ತೆಗಳು ಜನರ ಓಡಾಟವಿಲ್ಲದೆ ಖಾಲಿ ರಸ್ತೆಗಳು ಕಂಡುಬಂದವು. ಹುಳಿಯಾರು ಹೋಬಳಿ ಕೇಂದ್ರದಲ್ಲಿ ಸಚಿವ ಮಾಧುಸ್ವಾಮಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಚಿವರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಾವು ಹೋರಾಟವನ್ನು ಮುಂದುವರೆಸುತ್ತೇವೆಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಮಾಜಿ ಶಾಸಕ ಮತ್ತು ಕುರುಬ ಸಮುದಾಯದ ಮುಖಂಡ ಸುರೇಶ್ ಬಾಬು ಮಾತನಾಡಿ, ಸಚಿವರು ಶಾಂತಿಸಭೆ ಕರೆದು ಅಶಾಂತಿ ಸೃಷ್ಟಿಸಿದ್ದಾರೆ. ಕಾನೂನು ಪಾಲಿಸಬೇಕಾದ ಕಾನೂನು ಸಚಿವರೇ ಜನರನ್ನು ಪ್ರಚೋದನೆಗೆ ಒಳಪಡಿಸಿದ್ದಾರೆ. ಸಚಿವರ ಉದ್ದಟತನದ ನಡವಳಿಕೆಯಿಂದ ಇಷ್ಟೆಲ್ಲ ಅನಾಹುತ ನಡೆಯಲು ಕಾರಣ. ಶಾಂತಿಸಭೆಯಲ್ಲಿ ಎಲ್ಲರನ್ನೂ ಸಮಾಧಾನ ಮಾಡಿದ್ದರೆ ಸಮಸ್ಯೆ ಉದ್ಭವಿಸುತ್ತಿರಲಿಲ್ಲ. ಗುರುಗಳು ಮತ್ತು ಜನಪ್ರತಿನಿಧಿಗಳನ್ನು ಕೇವಲವಾಗಿ ಕಂಡ ಕಾರಣ ಬೇಸರ ವ್ಯಕ್ತವಾಗಿದೆ. ಸಚಿವ ಜೆ.ಸಿ.ಮಾಧುಸ್ವಾಮಿ ಉದ್ಧಟತನದಿಂದ ಮುಖ್ಯಮಂತ್ರಿಗಳು ಕ್ಷಮೆ ಕೋರುವಂತಾಯಿತು. ನಮಗೆ ಮುಖ್ಯಮಂತ್ರಿಗಳು ಕ್ಷಮೆ ಕೋರುವ ಅವಶ್ಯಕತೆ ಇಲ್ಲ. ಸಚಿವರೇ ಕ್ಷಮೆ ಕೇಳಬೇಕು. ಇಂಥವರು ಸಂಪುಟದಲ್ಲಿದ್ದರೆ ಮುಖ್ಯಮಂತ್ರಿಗಳಿಗೆ ಶೋಭೆ ತರುವುದಿಲ್ಲ. ಹೀಗಾಗಿ ಸಂಪುಟದಿಂದ ತೆಗೆದುಹಾಕಿ ಎಂದು ಆಗ್ರಹಿಸಿದರು.

ಸಮುದಾಯದ ಮುಖಂಡರು ಮಾತನಾಡಿ ಹಿಂದಿನಿಂದಲೂ ಹಿಂದುಳಿದ ವರ್ಗದ ಜನರನ್ನು ಕಂಡರೆ ಅವರಿಗೆ ಆಗುವುದಿಲ್ಲ. ಅದೇ ಉದ್ಧಟ ತನದಿಂದ ನಮ್ಮ ಸಮುದಾಯದ ಸ್ವಾಮಿಗಳ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಕಾನೂನು ಗೌರವಿಸಬೇಕಾದ ಸಚಿವರೇ ಹೀಗೆ ನಡೆದುಕೊಂಡರೆ ಸಾಮಾನ್ಯರ ಪಾಡೇನು? ಸಂವಿಧಾನಬದ್ಧವಾಗಿ ಪ್ರಮಾಣವಚನ ಸ್ವೀಕರಿಸಿ ಈಗ ಒಂದು ಸಮುದಾಯದ ಸಚಿವರಂತೆ ವರ್ತಿಸುತ್ತಿರುವುದು ನಾಚಿಕೆಗೇಡಿನ ಸಂಗತಿ. ಸಮ್ಮ ಸಮುದಾಯದ ಸ್ವಾಮೀಜಿಗೆ ಅವಮಾನ ಮಾಡಿದ್ದು ಕೂಡಲೇ ಅವರನ್ನು ವಜಾ ಮಾಢಬೇಕು. ಮಾಧುಸ್ವಾಮಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಬಸವಣ್ಣ ಮತ್ತು ಕನಕದಾಸರು ಅನಿಷ್ಠ ಜಾತಿಪದ್ದತಿಯನ್ನು ಕಿತ್ತೊಗೆಯಬೇಕು. ಅದರಿಂದ ಹೊರಬರಬೇಕು ಎಂದು ಹೇಳಿದ್ದಾರೆ. ಆದರೆ ಸಚಿವರು ಜಾತಿಗೆ ಅಂಟಿಕೊಂಡು ಕುಳಿತಿದ್ದಾರೆ. ಸಚಿವರ ಬದಲಿಗೆ ಮುಖ್ಯಮಂತ್ರಿಗಳು ಕ್ಷಮೆ ಕೋರಿರುವುದು ಶ್ಲಾಘನೀಯ. 2010ರಲ್ಲೇ ಕನಕ ವೃತ್ತ ಎಂದು ಗ್ರಾಮ ಪಂಚಾಯಿತಿ ಸಭೆಯಲ್ಲೇ ತೀರ್ಮಾನ ಮಾಡಲಾಗಿದೆ. ಆದರೆ ಹೀಗೆ ಸಚಿವರು ಅದನ್ನು ಉಲ್ಲಂಘಿಸಲು ಹೊರಟಿರುವು ಕಿಡಿಗೇಡಿತನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಂದ್ ಗೆ 18ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದವು. ಬಂದ್ ಪ್ರತಿಭಟನೆಯಲ್ಲಿ ಕುರುಬರ ಮುಖಂಡರಾದ ಶಿವಮೂರ್ತಿ, ಮಹಾಲಿಂಗಯ್ಯ ಮೊದಲಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...