Homeಕರ್ನಾಟಕಮಾಧುಸ್ವಾಮಿ ಹೇಳಿಕೆ ವಿರೋಧಿಸಿ ಕುರುಬ ಸಮುದಾಯ ಕರೆಕೊಟ್ಟ ಹುಳಿಯಾರ್‌ ಬಂ‌ದ್‌ಗೆ ವ್ಯಾಪಕ ಬೆಂಬಲ.. ವಿಡಿಯೋ ನೋಡಿ

ಮಾಧುಸ್ವಾಮಿ ಹೇಳಿಕೆ ವಿರೋಧಿಸಿ ಕುರುಬ ಸಮುದಾಯ ಕರೆಕೊಟ್ಟ ಹುಳಿಯಾರ್‌ ಬಂ‌ದ್‌ಗೆ ವ್ಯಾಪಕ ಬೆಂಬಲ.. ವಿಡಿಯೋ ನೋಡಿ

- Advertisement -
- Advertisement -

ಈಶ್ವರಾನಂದಪುರಿ ಸ್ವಾಮಿಗಳ ಬಗ್ಗೆ ತುಚ್ಚವಾಗಿ ಮಾತನಾಡಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರನ್ನು ಸಂಪುಟದಿಂದ ವಜಾಮಾಡುವಂತೆ ಒತ್ತಾಯಿಸಿ ಕುರುಬ ಸಮುದಾಯದ ಸಂಘಟನೆಗಳು ಕರೆನೀಡಿರುವ ಚಿಕ್ಕನಾಯನಹಳ್ಳಿಯ ಹುಳಿಯಾರ್ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಬಂದ್ ಗೆ ಬೆಂಬಲ ನೀಡಿದ್ದಾರೆ.

ಹುಳಿಯಾರಿನ ಹೊಸದುರ್ಗರಸ್ತೆಯಲ್ಲಿರುವ ವೃತ್ತಕ್ಕೆ ಕನಕದಾಸರ ಹೆಸರನ್ನು ಇಡುವ ವಿಚಾರದಲ್ಲಿ ಸಚಿವ ಮಾಧುಸ್ವಾಮಿ ಕುರುಬ ಸಮುದಾಯದ ಸ್ವಾಮೀಜಿಗೆ ಏಕವಚನದಲ್ಲಿ ಮಾತನಾಡಿದ್ದರು. ಕನಕ ವೃತ್ತವೆಂದು ನಾಮಕರಣ ಮಾಡಲು ಸಚಿವರು ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಆಕ್ರೋಶ ವ್ಯಕ್ತಪಡಿಸಿರುವ ಕುರುಬ ಸಮುದಾಯದ ಸಂಘಟನೆಗಳು ಹಾಲುಮತ ಮಹಾಸಭಾ ನೇತೃತ್ವದಲ್ಲಿ ಹುಳಿಯಾರಿನಲ್ಲಿ ಪ್ರತಿಭಟನೆ ನಡಸಲಾಯಿತು.

ಬಂದ್ ಹಿನ್ನೆಲೆಯಲ್ಲಿ ಬಸ್, ಆಟೋ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿತ್ತು. ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಿದ್ದವು. ಹುಳಿಯಾರಿನ ರಸ್ತೆಗಳು ಜನರ ಓಡಾಟವಿಲ್ಲದೆ ಖಾಲಿ ರಸ್ತೆಗಳು ಕಂಡುಬಂದವು. ಹುಳಿಯಾರು ಹೋಬಳಿ ಕೇಂದ್ರದಲ್ಲಿ ಸಚಿವ ಮಾಧುಸ್ವಾಮಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಚಿವರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಾವು ಹೋರಾಟವನ್ನು ಮುಂದುವರೆಸುತ್ತೇವೆಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಮಾಜಿ ಶಾಸಕ ಮತ್ತು ಕುರುಬ ಸಮುದಾಯದ ಮುಖಂಡ ಸುರೇಶ್ ಬಾಬು ಮಾತನಾಡಿ, ಸಚಿವರು ಶಾಂತಿಸಭೆ ಕರೆದು ಅಶಾಂತಿ ಸೃಷ್ಟಿಸಿದ್ದಾರೆ. ಕಾನೂನು ಪಾಲಿಸಬೇಕಾದ ಕಾನೂನು ಸಚಿವರೇ ಜನರನ್ನು ಪ್ರಚೋದನೆಗೆ ಒಳಪಡಿಸಿದ್ದಾರೆ. ಸಚಿವರ ಉದ್ದಟತನದ ನಡವಳಿಕೆಯಿಂದ ಇಷ್ಟೆಲ್ಲ ಅನಾಹುತ ನಡೆಯಲು ಕಾರಣ. ಶಾಂತಿಸಭೆಯಲ್ಲಿ ಎಲ್ಲರನ್ನೂ ಸಮಾಧಾನ ಮಾಡಿದ್ದರೆ ಸಮಸ್ಯೆ ಉದ್ಭವಿಸುತ್ತಿರಲಿಲ್ಲ. ಗುರುಗಳು ಮತ್ತು ಜನಪ್ರತಿನಿಧಿಗಳನ್ನು ಕೇವಲವಾಗಿ ಕಂಡ ಕಾರಣ ಬೇಸರ ವ್ಯಕ್ತವಾಗಿದೆ. ಸಚಿವ ಜೆ.ಸಿ.ಮಾಧುಸ್ವಾಮಿ ಉದ್ಧಟತನದಿಂದ ಮುಖ್ಯಮಂತ್ರಿಗಳು ಕ್ಷಮೆ ಕೋರುವಂತಾಯಿತು. ನಮಗೆ ಮುಖ್ಯಮಂತ್ರಿಗಳು ಕ್ಷಮೆ ಕೋರುವ ಅವಶ್ಯಕತೆ ಇಲ್ಲ. ಸಚಿವರೇ ಕ್ಷಮೆ ಕೇಳಬೇಕು. ಇಂಥವರು ಸಂಪುಟದಲ್ಲಿದ್ದರೆ ಮುಖ್ಯಮಂತ್ರಿಗಳಿಗೆ ಶೋಭೆ ತರುವುದಿಲ್ಲ. ಹೀಗಾಗಿ ಸಂಪುಟದಿಂದ ತೆಗೆದುಹಾಕಿ ಎಂದು ಆಗ್ರಹಿಸಿದರು.

ಸಮುದಾಯದ ಮುಖಂಡರು ಮಾತನಾಡಿ ಹಿಂದಿನಿಂದಲೂ ಹಿಂದುಳಿದ ವರ್ಗದ ಜನರನ್ನು ಕಂಡರೆ ಅವರಿಗೆ ಆಗುವುದಿಲ್ಲ. ಅದೇ ಉದ್ಧಟ ತನದಿಂದ ನಮ್ಮ ಸಮುದಾಯದ ಸ್ವಾಮಿಗಳ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಕಾನೂನು ಗೌರವಿಸಬೇಕಾದ ಸಚಿವರೇ ಹೀಗೆ ನಡೆದುಕೊಂಡರೆ ಸಾಮಾನ್ಯರ ಪಾಡೇನು? ಸಂವಿಧಾನಬದ್ಧವಾಗಿ ಪ್ರಮಾಣವಚನ ಸ್ವೀಕರಿಸಿ ಈಗ ಒಂದು ಸಮುದಾಯದ ಸಚಿವರಂತೆ ವರ್ತಿಸುತ್ತಿರುವುದು ನಾಚಿಕೆಗೇಡಿನ ಸಂಗತಿ. ಸಮ್ಮ ಸಮುದಾಯದ ಸ್ವಾಮೀಜಿಗೆ ಅವಮಾನ ಮಾಡಿದ್ದು ಕೂಡಲೇ ಅವರನ್ನು ವಜಾ ಮಾಢಬೇಕು. ಮಾಧುಸ್ವಾಮಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಬಸವಣ್ಣ ಮತ್ತು ಕನಕದಾಸರು ಅನಿಷ್ಠ ಜಾತಿಪದ್ದತಿಯನ್ನು ಕಿತ್ತೊಗೆಯಬೇಕು. ಅದರಿಂದ ಹೊರಬರಬೇಕು ಎಂದು ಹೇಳಿದ್ದಾರೆ. ಆದರೆ ಸಚಿವರು ಜಾತಿಗೆ ಅಂಟಿಕೊಂಡು ಕುಳಿತಿದ್ದಾರೆ. ಸಚಿವರ ಬದಲಿಗೆ ಮುಖ್ಯಮಂತ್ರಿಗಳು ಕ್ಷಮೆ ಕೋರಿರುವುದು ಶ್ಲಾಘನೀಯ. 2010ರಲ್ಲೇ ಕನಕ ವೃತ್ತ ಎಂದು ಗ್ರಾಮ ಪಂಚಾಯಿತಿ ಸಭೆಯಲ್ಲೇ ತೀರ್ಮಾನ ಮಾಡಲಾಗಿದೆ. ಆದರೆ ಹೀಗೆ ಸಚಿವರು ಅದನ್ನು ಉಲ್ಲಂಘಿಸಲು ಹೊರಟಿರುವು ಕಿಡಿಗೇಡಿತನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಂದ್ ಗೆ 18ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದವು. ಬಂದ್ ಪ್ರತಿಭಟನೆಯಲ್ಲಿ ಕುರುಬರ ಮುಖಂಡರಾದ ಶಿವಮೂರ್ತಿ, ಮಹಾಲಿಂಗಯ್ಯ ಮೊದಲಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...