Homeಕರ್ನಾಟಕಮಾಧುಸ್ವಾಮಿ ಹೇಳಿಕೆ ವಿರೋಧಿಸಿ ಕುರುಬ ಸಮುದಾಯ ಕರೆಕೊಟ್ಟ ಹುಳಿಯಾರ್‌ ಬಂ‌ದ್‌ಗೆ ವ್ಯಾಪಕ ಬೆಂಬಲ.. ವಿಡಿಯೋ ನೋಡಿ

ಮಾಧುಸ್ವಾಮಿ ಹೇಳಿಕೆ ವಿರೋಧಿಸಿ ಕುರುಬ ಸಮುದಾಯ ಕರೆಕೊಟ್ಟ ಹುಳಿಯಾರ್‌ ಬಂ‌ದ್‌ಗೆ ವ್ಯಾಪಕ ಬೆಂಬಲ.. ವಿಡಿಯೋ ನೋಡಿ

- Advertisement -
- Advertisement -

ಈಶ್ವರಾನಂದಪುರಿ ಸ್ವಾಮಿಗಳ ಬಗ್ಗೆ ತುಚ್ಚವಾಗಿ ಮಾತನಾಡಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರನ್ನು ಸಂಪುಟದಿಂದ ವಜಾಮಾಡುವಂತೆ ಒತ್ತಾಯಿಸಿ ಕುರುಬ ಸಮುದಾಯದ ಸಂಘಟನೆಗಳು ಕರೆನೀಡಿರುವ ಚಿಕ್ಕನಾಯನಹಳ್ಳಿಯ ಹುಳಿಯಾರ್ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಬಂದ್ ಗೆ ಬೆಂಬಲ ನೀಡಿದ್ದಾರೆ.

ಹುಳಿಯಾರಿನ ಹೊಸದುರ್ಗರಸ್ತೆಯಲ್ಲಿರುವ ವೃತ್ತಕ್ಕೆ ಕನಕದಾಸರ ಹೆಸರನ್ನು ಇಡುವ ವಿಚಾರದಲ್ಲಿ ಸಚಿವ ಮಾಧುಸ್ವಾಮಿ ಕುರುಬ ಸಮುದಾಯದ ಸ್ವಾಮೀಜಿಗೆ ಏಕವಚನದಲ್ಲಿ ಮಾತನಾಡಿದ್ದರು. ಕನಕ ವೃತ್ತವೆಂದು ನಾಮಕರಣ ಮಾಡಲು ಸಚಿವರು ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಆಕ್ರೋಶ ವ್ಯಕ್ತಪಡಿಸಿರುವ ಕುರುಬ ಸಮುದಾಯದ ಸಂಘಟನೆಗಳು ಹಾಲುಮತ ಮಹಾಸಭಾ ನೇತೃತ್ವದಲ್ಲಿ ಹುಳಿಯಾರಿನಲ್ಲಿ ಪ್ರತಿಭಟನೆ ನಡಸಲಾಯಿತು.

ಬಂದ್ ಹಿನ್ನೆಲೆಯಲ್ಲಿ ಬಸ್, ಆಟೋ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿತ್ತು. ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಿದ್ದವು. ಹುಳಿಯಾರಿನ ರಸ್ತೆಗಳು ಜನರ ಓಡಾಟವಿಲ್ಲದೆ ಖಾಲಿ ರಸ್ತೆಗಳು ಕಂಡುಬಂದವು. ಹುಳಿಯಾರು ಹೋಬಳಿ ಕೇಂದ್ರದಲ್ಲಿ ಸಚಿವ ಮಾಧುಸ್ವಾಮಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಚಿವರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಾವು ಹೋರಾಟವನ್ನು ಮುಂದುವರೆಸುತ್ತೇವೆಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಮಾಜಿ ಶಾಸಕ ಮತ್ತು ಕುರುಬ ಸಮುದಾಯದ ಮುಖಂಡ ಸುರೇಶ್ ಬಾಬು ಮಾತನಾಡಿ, ಸಚಿವರು ಶಾಂತಿಸಭೆ ಕರೆದು ಅಶಾಂತಿ ಸೃಷ್ಟಿಸಿದ್ದಾರೆ. ಕಾನೂನು ಪಾಲಿಸಬೇಕಾದ ಕಾನೂನು ಸಚಿವರೇ ಜನರನ್ನು ಪ್ರಚೋದನೆಗೆ ಒಳಪಡಿಸಿದ್ದಾರೆ. ಸಚಿವರ ಉದ್ದಟತನದ ನಡವಳಿಕೆಯಿಂದ ಇಷ್ಟೆಲ್ಲ ಅನಾಹುತ ನಡೆಯಲು ಕಾರಣ. ಶಾಂತಿಸಭೆಯಲ್ಲಿ ಎಲ್ಲರನ್ನೂ ಸಮಾಧಾನ ಮಾಡಿದ್ದರೆ ಸಮಸ್ಯೆ ಉದ್ಭವಿಸುತ್ತಿರಲಿಲ್ಲ. ಗುರುಗಳು ಮತ್ತು ಜನಪ್ರತಿನಿಧಿಗಳನ್ನು ಕೇವಲವಾಗಿ ಕಂಡ ಕಾರಣ ಬೇಸರ ವ್ಯಕ್ತವಾಗಿದೆ. ಸಚಿವ ಜೆ.ಸಿ.ಮಾಧುಸ್ವಾಮಿ ಉದ್ಧಟತನದಿಂದ ಮುಖ್ಯಮಂತ್ರಿಗಳು ಕ್ಷಮೆ ಕೋರುವಂತಾಯಿತು. ನಮಗೆ ಮುಖ್ಯಮಂತ್ರಿಗಳು ಕ್ಷಮೆ ಕೋರುವ ಅವಶ್ಯಕತೆ ಇಲ್ಲ. ಸಚಿವರೇ ಕ್ಷಮೆ ಕೇಳಬೇಕು. ಇಂಥವರು ಸಂಪುಟದಲ್ಲಿದ್ದರೆ ಮುಖ್ಯಮಂತ್ರಿಗಳಿಗೆ ಶೋಭೆ ತರುವುದಿಲ್ಲ. ಹೀಗಾಗಿ ಸಂಪುಟದಿಂದ ತೆಗೆದುಹಾಕಿ ಎಂದು ಆಗ್ರಹಿಸಿದರು.

ಸಮುದಾಯದ ಮುಖಂಡರು ಮಾತನಾಡಿ ಹಿಂದಿನಿಂದಲೂ ಹಿಂದುಳಿದ ವರ್ಗದ ಜನರನ್ನು ಕಂಡರೆ ಅವರಿಗೆ ಆಗುವುದಿಲ್ಲ. ಅದೇ ಉದ್ಧಟ ತನದಿಂದ ನಮ್ಮ ಸಮುದಾಯದ ಸ್ವಾಮಿಗಳ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಕಾನೂನು ಗೌರವಿಸಬೇಕಾದ ಸಚಿವರೇ ಹೀಗೆ ನಡೆದುಕೊಂಡರೆ ಸಾಮಾನ್ಯರ ಪಾಡೇನು? ಸಂವಿಧಾನಬದ್ಧವಾಗಿ ಪ್ರಮಾಣವಚನ ಸ್ವೀಕರಿಸಿ ಈಗ ಒಂದು ಸಮುದಾಯದ ಸಚಿವರಂತೆ ವರ್ತಿಸುತ್ತಿರುವುದು ನಾಚಿಕೆಗೇಡಿನ ಸಂಗತಿ. ಸಮ್ಮ ಸಮುದಾಯದ ಸ್ವಾಮೀಜಿಗೆ ಅವಮಾನ ಮಾಡಿದ್ದು ಕೂಡಲೇ ಅವರನ್ನು ವಜಾ ಮಾಢಬೇಕು. ಮಾಧುಸ್ವಾಮಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಬಸವಣ್ಣ ಮತ್ತು ಕನಕದಾಸರು ಅನಿಷ್ಠ ಜಾತಿಪದ್ದತಿಯನ್ನು ಕಿತ್ತೊಗೆಯಬೇಕು. ಅದರಿಂದ ಹೊರಬರಬೇಕು ಎಂದು ಹೇಳಿದ್ದಾರೆ. ಆದರೆ ಸಚಿವರು ಜಾತಿಗೆ ಅಂಟಿಕೊಂಡು ಕುಳಿತಿದ್ದಾರೆ. ಸಚಿವರ ಬದಲಿಗೆ ಮುಖ್ಯಮಂತ್ರಿಗಳು ಕ್ಷಮೆ ಕೋರಿರುವುದು ಶ್ಲಾಘನೀಯ. 2010ರಲ್ಲೇ ಕನಕ ವೃತ್ತ ಎಂದು ಗ್ರಾಮ ಪಂಚಾಯಿತಿ ಸಭೆಯಲ್ಲೇ ತೀರ್ಮಾನ ಮಾಡಲಾಗಿದೆ. ಆದರೆ ಹೀಗೆ ಸಚಿವರು ಅದನ್ನು ಉಲ್ಲಂಘಿಸಲು ಹೊರಟಿರುವು ಕಿಡಿಗೇಡಿತನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಂದ್ ಗೆ 18ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದವು. ಬಂದ್ ಪ್ರತಿಭಟನೆಯಲ್ಲಿ ಕುರುಬರ ಮುಖಂಡರಾದ ಶಿವಮೂರ್ತಿ, ಮಹಾಲಿಂಗಯ್ಯ ಮೊದಲಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...