Homeಕರ್ನಾಟಕಮಾಧುಸ್ವಾಮಿ ಹೇಳಿಕೆ ವಿರೋಧಿಸಿ ಕುರುಬ ಸಮುದಾಯ ಕರೆಕೊಟ್ಟ ಹುಳಿಯಾರ್‌ ಬಂ‌ದ್‌ಗೆ ವ್ಯಾಪಕ ಬೆಂಬಲ.. ವಿಡಿಯೋ ನೋಡಿ

ಮಾಧುಸ್ವಾಮಿ ಹೇಳಿಕೆ ವಿರೋಧಿಸಿ ಕುರುಬ ಸಮುದಾಯ ಕರೆಕೊಟ್ಟ ಹುಳಿಯಾರ್‌ ಬಂ‌ದ್‌ಗೆ ವ್ಯಾಪಕ ಬೆಂಬಲ.. ವಿಡಿಯೋ ನೋಡಿ

- Advertisement -
- Advertisement -

ಈಶ್ವರಾನಂದಪುರಿ ಸ್ವಾಮಿಗಳ ಬಗ್ಗೆ ತುಚ್ಚವಾಗಿ ಮಾತನಾಡಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರನ್ನು ಸಂಪುಟದಿಂದ ವಜಾಮಾಡುವಂತೆ ಒತ್ತಾಯಿಸಿ ಕುರುಬ ಸಮುದಾಯದ ಸಂಘಟನೆಗಳು ಕರೆನೀಡಿರುವ ಚಿಕ್ಕನಾಯನಹಳ್ಳಿಯ ಹುಳಿಯಾರ್ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಬಂದ್ ಗೆ ಬೆಂಬಲ ನೀಡಿದ್ದಾರೆ.

ಹುಳಿಯಾರಿನ ಹೊಸದುರ್ಗರಸ್ತೆಯಲ್ಲಿರುವ ವೃತ್ತಕ್ಕೆ ಕನಕದಾಸರ ಹೆಸರನ್ನು ಇಡುವ ವಿಚಾರದಲ್ಲಿ ಸಚಿವ ಮಾಧುಸ್ವಾಮಿ ಕುರುಬ ಸಮುದಾಯದ ಸ್ವಾಮೀಜಿಗೆ ಏಕವಚನದಲ್ಲಿ ಮಾತನಾಡಿದ್ದರು. ಕನಕ ವೃತ್ತವೆಂದು ನಾಮಕರಣ ಮಾಡಲು ಸಚಿವರು ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಆಕ್ರೋಶ ವ್ಯಕ್ತಪಡಿಸಿರುವ ಕುರುಬ ಸಮುದಾಯದ ಸಂಘಟನೆಗಳು ಹಾಲುಮತ ಮಹಾಸಭಾ ನೇತೃತ್ವದಲ್ಲಿ ಹುಳಿಯಾರಿನಲ್ಲಿ ಪ್ರತಿಭಟನೆ ನಡಸಲಾಯಿತು.

ಬಂದ್ ಹಿನ್ನೆಲೆಯಲ್ಲಿ ಬಸ್, ಆಟೋ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿತ್ತು. ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಿದ್ದವು. ಹುಳಿಯಾರಿನ ರಸ್ತೆಗಳು ಜನರ ಓಡಾಟವಿಲ್ಲದೆ ಖಾಲಿ ರಸ್ತೆಗಳು ಕಂಡುಬಂದವು. ಹುಳಿಯಾರು ಹೋಬಳಿ ಕೇಂದ್ರದಲ್ಲಿ ಸಚಿವ ಮಾಧುಸ್ವಾಮಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಚಿವರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಾವು ಹೋರಾಟವನ್ನು ಮುಂದುವರೆಸುತ್ತೇವೆಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಮಾಜಿ ಶಾಸಕ ಮತ್ತು ಕುರುಬ ಸಮುದಾಯದ ಮುಖಂಡ ಸುರೇಶ್ ಬಾಬು ಮಾತನಾಡಿ, ಸಚಿವರು ಶಾಂತಿಸಭೆ ಕರೆದು ಅಶಾಂತಿ ಸೃಷ್ಟಿಸಿದ್ದಾರೆ. ಕಾನೂನು ಪಾಲಿಸಬೇಕಾದ ಕಾನೂನು ಸಚಿವರೇ ಜನರನ್ನು ಪ್ರಚೋದನೆಗೆ ಒಳಪಡಿಸಿದ್ದಾರೆ. ಸಚಿವರ ಉದ್ದಟತನದ ನಡವಳಿಕೆಯಿಂದ ಇಷ್ಟೆಲ್ಲ ಅನಾಹುತ ನಡೆಯಲು ಕಾರಣ. ಶಾಂತಿಸಭೆಯಲ್ಲಿ ಎಲ್ಲರನ್ನೂ ಸಮಾಧಾನ ಮಾಡಿದ್ದರೆ ಸಮಸ್ಯೆ ಉದ್ಭವಿಸುತ್ತಿರಲಿಲ್ಲ. ಗುರುಗಳು ಮತ್ತು ಜನಪ್ರತಿನಿಧಿಗಳನ್ನು ಕೇವಲವಾಗಿ ಕಂಡ ಕಾರಣ ಬೇಸರ ವ್ಯಕ್ತವಾಗಿದೆ. ಸಚಿವ ಜೆ.ಸಿ.ಮಾಧುಸ್ವಾಮಿ ಉದ್ಧಟತನದಿಂದ ಮುಖ್ಯಮಂತ್ರಿಗಳು ಕ್ಷಮೆ ಕೋರುವಂತಾಯಿತು. ನಮಗೆ ಮುಖ್ಯಮಂತ್ರಿಗಳು ಕ್ಷಮೆ ಕೋರುವ ಅವಶ್ಯಕತೆ ಇಲ್ಲ. ಸಚಿವರೇ ಕ್ಷಮೆ ಕೇಳಬೇಕು. ಇಂಥವರು ಸಂಪುಟದಲ್ಲಿದ್ದರೆ ಮುಖ್ಯಮಂತ್ರಿಗಳಿಗೆ ಶೋಭೆ ತರುವುದಿಲ್ಲ. ಹೀಗಾಗಿ ಸಂಪುಟದಿಂದ ತೆಗೆದುಹಾಕಿ ಎಂದು ಆಗ್ರಹಿಸಿದರು.

ಸಮುದಾಯದ ಮುಖಂಡರು ಮಾತನಾಡಿ ಹಿಂದಿನಿಂದಲೂ ಹಿಂದುಳಿದ ವರ್ಗದ ಜನರನ್ನು ಕಂಡರೆ ಅವರಿಗೆ ಆಗುವುದಿಲ್ಲ. ಅದೇ ಉದ್ಧಟ ತನದಿಂದ ನಮ್ಮ ಸಮುದಾಯದ ಸ್ವಾಮಿಗಳ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಕಾನೂನು ಗೌರವಿಸಬೇಕಾದ ಸಚಿವರೇ ಹೀಗೆ ನಡೆದುಕೊಂಡರೆ ಸಾಮಾನ್ಯರ ಪಾಡೇನು? ಸಂವಿಧಾನಬದ್ಧವಾಗಿ ಪ್ರಮಾಣವಚನ ಸ್ವೀಕರಿಸಿ ಈಗ ಒಂದು ಸಮುದಾಯದ ಸಚಿವರಂತೆ ವರ್ತಿಸುತ್ತಿರುವುದು ನಾಚಿಕೆಗೇಡಿನ ಸಂಗತಿ. ಸಮ್ಮ ಸಮುದಾಯದ ಸ್ವಾಮೀಜಿಗೆ ಅವಮಾನ ಮಾಡಿದ್ದು ಕೂಡಲೇ ಅವರನ್ನು ವಜಾ ಮಾಢಬೇಕು. ಮಾಧುಸ್ವಾಮಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಬಸವಣ್ಣ ಮತ್ತು ಕನಕದಾಸರು ಅನಿಷ್ಠ ಜಾತಿಪದ್ದತಿಯನ್ನು ಕಿತ್ತೊಗೆಯಬೇಕು. ಅದರಿಂದ ಹೊರಬರಬೇಕು ಎಂದು ಹೇಳಿದ್ದಾರೆ. ಆದರೆ ಸಚಿವರು ಜಾತಿಗೆ ಅಂಟಿಕೊಂಡು ಕುಳಿತಿದ್ದಾರೆ. ಸಚಿವರ ಬದಲಿಗೆ ಮುಖ್ಯಮಂತ್ರಿಗಳು ಕ್ಷಮೆ ಕೋರಿರುವುದು ಶ್ಲಾಘನೀಯ. 2010ರಲ್ಲೇ ಕನಕ ವೃತ್ತ ಎಂದು ಗ್ರಾಮ ಪಂಚಾಯಿತಿ ಸಭೆಯಲ್ಲೇ ತೀರ್ಮಾನ ಮಾಡಲಾಗಿದೆ. ಆದರೆ ಹೀಗೆ ಸಚಿವರು ಅದನ್ನು ಉಲ್ಲಂಘಿಸಲು ಹೊರಟಿರುವು ಕಿಡಿಗೇಡಿತನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಂದ್ ಗೆ 18ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದವು. ಬಂದ್ ಪ್ರತಿಭಟನೆಯಲ್ಲಿ ಕುರುಬರ ಮುಖಂಡರಾದ ಶಿವಮೂರ್ತಿ, ಮಹಾಲಿಂಗಯ್ಯ ಮೊದಲಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...