Homeಕರ್ನಾಟಕಮಾಧುಸ್ವಾಮಿ ಹೇಳಿಕೆ ವಿರೋಧಿಸಿ ಕುರುಬ ಸಮುದಾಯ ಕರೆಕೊಟ್ಟ ಹುಳಿಯಾರ್‌ ಬಂ‌ದ್‌ಗೆ ವ್ಯಾಪಕ ಬೆಂಬಲ.. ವಿಡಿಯೋ ನೋಡಿ

ಮಾಧುಸ್ವಾಮಿ ಹೇಳಿಕೆ ವಿರೋಧಿಸಿ ಕುರುಬ ಸಮುದಾಯ ಕರೆಕೊಟ್ಟ ಹುಳಿಯಾರ್‌ ಬಂ‌ದ್‌ಗೆ ವ್ಯಾಪಕ ಬೆಂಬಲ.. ವಿಡಿಯೋ ನೋಡಿ

- Advertisement -
- Advertisement -

ಈಶ್ವರಾನಂದಪುರಿ ಸ್ವಾಮಿಗಳ ಬಗ್ಗೆ ತುಚ್ಚವಾಗಿ ಮಾತನಾಡಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರನ್ನು ಸಂಪುಟದಿಂದ ವಜಾಮಾಡುವಂತೆ ಒತ್ತಾಯಿಸಿ ಕುರುಬ ಸಮುದಾಯದ ಸಂಘಟನೆಗಳು ಕರೆನೀಡಿರುವ ಚಿಕ್ಕನಾಯನಹಳ್ಳಿಯ ಹುಳಿಯಾರ್ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಬಂದ್ ಗೆ ಬೆಂಬಲ ನೀಡಿದ್ದಾರೆ.

ಹುಳಿಯಾರಿನ ಹೊಸದುರ್ಗರಸ್ತೆಯಲ್ಲಿರುವ ವೃತ್ತಕ್ಕೆ ಕನಕದಾಸರ ಹೆಸರನ್ನು ಇಡುವ ವಿಚಾರದಲ್ಲಿ ಸಚಿವ ಮಾಧುಸ್ವಾಮಿ ಕುರುಬ ಸಮುದಾಯದ ಸ್ವಾಮೀಜಿಗೆ ಏಕವಚನದಲ್ಲಿ ಮಾತನಾಡಿದ್ದರು. ಕನಕ ವೃತ್ತವೆಂದು ನಾಮಕರಣ ಮಾಡಲು ಸಚಿವರು ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಆಕ್ರೋಶ ವ್ಯಕ್ತಪಡಿಸಿರುವ ಕುರುಬ ಸಮುದಾಯದ ಸಂಘಟನೆಗಳು ಹಾಲುಮತ ಮಹಾಸಭಾ ನೇತೃತ್ವದಲ್ಲಿ ಹುಳಿಯಾರಿನಲ್ಲಿ ಪ್ರತಿಭಟನೆ ನಡಸಲಾಯಿತು.

ಬಂದ್ ಹಿನ್ನೆಲೆಯಲ್ಲಿ ಬಸ್, ಆಟೋ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿತ್ತು. ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಿದ್ದವು. ಹುಳಿಯಾರಿನ ರಸ್ತೆಗಳು ಜನರ ಓಡಾಟವಿಲ್ಲದೆ ಖಾಲಿ ರಸ್ತೆಗಳು ಕಂಡುಬಂದವು. ಹುಳಿಯಾರು ಹೋಬಳಿ ಕೇಂದ್ರದಲ್ಲಿ ಸಚಿವ ಮಾಧುಸ್ವಾಮಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಚಿವರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಾವು ಹೋರಾಟವನ್ನು ಮುಂದುವರೆಸುತ್ತೇವೆಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಮಾಜಿ ಶಾಸಕ ಮತ್ತು ಕುರುಬ ಸಮುದಾಯದ ಮುಖಂಡ ಸುರೇಶ್ ಬಾಬು ಮಾತನಾಡಿ, ಸಚಿವರು ಶಾಂತಿಸಭೆ ಕರೆದು ಅಶಾಂತಿ ಸೃಷ್ಟಿಸಿದ್ದಾರೆ. ಕಾನೂನು ಪಾಲಿಸಬೇಕಾದ ಕಾನೂನು ಸಚಿವರೇ ಜನರನ್ನು ಪ್ರಚೋದನೆಗೆ ಒಳಪಡಿಸಿದ್ದಾರೆ. ಸಚಿವರ ಉದ್ದಟತನದ ನಡವಳಿಕೆಯಿಂದ ಇಷ್ಟೆಲ್ಲ ಅನಾಹುತ ನಡೆಯಲು ಕಾರಣ. ಶಾಂತಿಸಭೆಯಲ್ಲಿ ಎಲ್ಲರನ್ನೂ ಸಮಾಧಾನ ಮಾಡಿದ್ದರೆ ಸಮಸ್ಯೆ ಉದ್ಭವಿಸುತ್ತಿರಲಿಲ್ಲ. ಗುರುಗಳು ಮತ್ತು ಜನಪ್ರತಿನಿಧಿಗಳನ್ನು ಕೇವಲವಾಗಿ ಕಂಡ ಕಾರಣ ಬೇಸರ ವ್ಯಕ್ತವಾಗಿದೆ. ಸಚಿವ ಜೆ.ಸಿ.ಮಾಧುಸ್ವಾಮಿ ಉದ್ಧಟತನದಿಂದ ಮುಖ್ಯಮಂತ್ರಿಗಳು ಕ್ಷಮೆ ಕೋರುವಂತಾಯಿತು. ನಮಗೆ ಮುಖ್ಯಮಂತ್ರಿಗಳು ಕ್ಷಮೆ ಕೋರುವ ಅವಶ್ಯಕತೆ ಇಲ್ಲ. ಸಚಿವರೇ ಕ್ಷಮೆ ಕೇಳಬೇಕು. ಇಂಥವರು ಸಂಪುಟದಲ್ಲಿದ್ದರೆ ಮುಖ್ಯಮಂತ್ರಿಗಳಿಗೆ ಶೋಭೆ ತರುವುದಿಲ್ಲ. ಹೀಗಾಗಿ ಸಂಪುಟದಿಂದ ತೆಗೆದುಹಾಕಿ ಎಂದು ಆಗ್ರಹಿಸಿದರು.

ಸಮುದಾಯದ ಮುಖಂಡರು ಮಾತನಾಡಿ ಹಿಂದಿನಿಂದಲೂ ಹಿಂದುಳಿದ ವರ್ಗದ ಜನರನ್ನು ಕಂಡರೆ ಅವರಿಗೆ ಆಗುವುದಿಲ್ಲ. ಅದೇ ಉದ್ಧಟ ತನದಿಂದ ನಮ್ಮ ಸಮುದಾಯದ ಸ್ವಾಮಿಗಳ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಕಾನೂನು ಗೌರವಿಸಬೇಕಾದ ಸಚಿವರೇ ಹೀಗೆ ನಡೆದುಕೊಂಡರೆ ಸಾಮಾನ್ಯರ ಪಾಡೇನು? ಸಂವಿಧಾನಬದ್ಧವಾಗಿ ಪ್ರಮಾಣವಚನ ಸ್ವೀಕರಿಸಿ ಈಗ ಒಂದು ಸಮುದಾಯದ ಸಚಿವರಂತೆ ವರ್ತಿಸುತ್ತಿರುವುದು ನಾಚಿಕೆಗೇಡಿನ ಸಂಗತಿ. ಸಮ್ಮ ಸಮುದಾಯದ ಸ್ವಾಮೀಜಿಗೆ ಅವಮಾನ ಮಾಡಿದ್ದು ಕೂಡಲೇ ಅವರನ್ನು ವಜಾ ಮಾಢಬೇಕು. ಮಾಧುಸ್ವಾಮಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಬಸವಣ್ಣ ಮತ್ತು ಕನಕದಾಸರು ಅನಿಷ್ಠ ಜಾತಿಪದ್ದತಿಯನ್ನು ಕಿತ್ತೊಗೆಯಬೇಕು. ಅದರಿಂದ ಹೊರಬರಬೇಕು ಎಂದು ಹೇಳಿದ್ದಾರೆ. ಆದರೆ ಸಚಿವರು ಜಾತಿಗೆ ಅಂಟಿಕೊಂಡು ಕುಳಿತಿದ್ದಾರೆ. ಸಚಿವರ ಬದಲಿಗೆ ಮುಖ್ಯಮಂತ್ರಿಗಳು ಕ್ಷಮೆ ಕೋರಿರುವುದು ಶ್ಲಾಘನೀಯ. 2010ರಲ್ಲೇ ಕನಕ ವೃತ್ತ ಎಂದು ಗ್ರಾಮ ಪಂಚಾಯಿತಿ ಸಭೆಯಲ್ಲೇ ತೀರ್ಮಾನ ಮಾಡಲಾಗಿದೆ. ಆದರೆ ಹೀಗೆ ಸಚಿವರು ಅದನ್ನು ಉಲ್ಲಂಘಿಸಲು ಹೊರಟಿರುವು ಕಿಡಿಗೇಡಿತನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಂದ್ ಗೆ 18ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದವು. ಬಂದ್ ಪ್ರತಿಭಟನೆಯಲ್ಲಿ ಕುರುಬರ ಮುಖಂಡರಾದ ಶಿವಮೂರ್ತಿ, ಮಹಾಲಿಂಗಯ್ಯ ಮೊದಲಾದವರು ಉಪಸ್ಥಿತರಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...