Homeಮುಖಪುಟ‘ಹಮ್ ಕಾಗಜ್ ನಹಿ ದಿಖಾಯೇಂಗೆ’: ‘ಸ್ವರಾ ಭಾಸ್ಕರ್‌- ಫಹಾದ್‌’ ಪ್ರೇಮಕತೆ ಬಿಚ್ಚಿಟ್ಟ ವಿನೂತನ ವೆಡ್ಡಿಂಗ್‌ ಕಾರ್ಡ್

‘ಹಮ್ ಕಾಗಜ್ ನಹಿ ದಿಖಾಯೇಂಗೆ’: ‘ಸ್ವರಾ ಭಾಸ್ಕರ್‌- ಫಹಾದ್‌’ ಪ್ರೇಮಕತೆ ಬಿಚ್ಚಿಟ್ಟ ವಿನೂತನ ವೆಡ್ಡಿಂಗ್‌ ಕಾರ್ಡ್

- Advertisement -
- Advertisement -

ಬಾಲಿವುಡ್ ನಟಿ ಸ್ವರಾ ಭಾಸ್ಕರ್‌ ಮತ್ತು ಸಮಾಜವಾದಿ ಪಕ್ಷದ ಯುವ ನಾಯಕ ಫಹಾದ್ ಅಹಮದ್ ಅವರು ಇತ್ತೀಚೆಗೆ ಸರಳವಾಗಿ ವಿವಾಹವಾಗಿದ್ದರು. ಅವರ ವಿವಾಹ ಆಹ್ವಾನ ಪತ್ರಿಕೆಯು ಈಗ ವೈರಲ್‌ ಆಗಿದ್ದು, ಸ್ವಾರಸ್ಯಕರ ಸಂಗತಿಗಳೊಂದಿಗೆ ಗಮನ ಸೆಳೆಯುತ್ತಿದೆ.

ಬಾಲಿವುಡ್‌ ನಟಿ, ನಟರ ವಿವಾಹವೆಂದರೆ ಅದ್ಧೂರಿ, ದುಂದುವೆಚ್ಚವೇ ಮನೆಮಾಡಿರುತ್ತದೆ. ರಾಜಕಾರಣದ ಹಿನ್ನೆಲೆಯುಳ್ಳವರ ಮದುವೆಗಳೂ ಈ ಆಡಂಬರಕ್ಕೆ ಹೊರತಲ್ಲ. ಜನಪರ ಚಳವಳಿಗಳ ಪರವಾಗಿ ದನಿ ಎತ್ತುತ್ತ ಬಂದಿರುವ ಸ್ವರಾ ಭಾಸ್ಕರ್‌ ಮತ್ತು ಸಮಾಜವಾದಿ ಪಕ್ಷದ ಫಹಾದ್‌ ಅಹಮದ್‌ ವಿವಾಹ ಭಿನ್ನವಾಗಿತ್ತು. ಸರಳವಾಗಿ ರಿಜಿಸ್ಟರ್‌ ಮ್ಯಾರೇಜ್‌ ಆಗಿದ್ದರು. ಇದರ ಜೊತೆಗೆ ಇವರ ವಿವಾಹ ಆಮಂತ್ರಣ ಪತ್ರಿಕೆ ಹೊರಬಿದ್ದಿದ್ದು ‘ಸ್ವರಾ ಮತ್ತು ಫಹಾದ್‌’ ಅವರ ಲವ್‌ಸ್ಟೋರಿಯನ್ನು ವಿನೂತನವಾಗಿ ಹೇಳುತ್ತಿದೆ.

ಮದುವೆಯ ಆಮಂತ್ರಣ ಪತ್ರಿಕೆಯ ವಿನ್ಯಾಸ ಮಾಡಿರುವ ಕಲಾವಿದ ಪ್ರತೀಕ್ ಕುಮಾರ್‌ ತಮ್ಮ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಮೂರು ಪುಟದ ಆಮಂತ್ರಣ ಪತ್ರಿಕೆಯನ್ನು ಹಂಚಿಕೊಂಡಿದ್ದು, ಸ್ವರಾ ಮತ್ತು ಫಹಾದ್ ಅವರ ಪ್ರೇಮಕಥೆಯನ್ನು ಪರಿಚಯಿಸಿದ್ದಾರೆ.

 

View this post on Instagram

 

A post shared by Prateeq Kumar (@prateeq)

ಕೆಂಪು ಲೆಹೆಂಗಾ ಧಿರಿಸಿನಲ್ಲಿ ವಧು ಮತ್ತು ಬೀಜ್ ಶೇರ್ವಾನಿ ಧಿರಿಸಿನಲ್ಲಿ ವರ ಇರುವುದನ್ನು ಈ ಕಾರ್ಡ್‌ನಲ್ಲಿ ನೋಡಬಹುದು. ಪ್ರತಿಭಟನೆ ನಡೆಯುತ್ತಿರುವುದನ್ನು ಈ ಇಬ್ಬರೂ ಕಿಟಕಿಯ ಮೂಲಕ ನೋಡುತ್ತಿರುವ ಕಲಾಕೃತಿ ಇಲ್ಲಿದೆ.

‘ಹಮ್ ಸಬ್ ಏಕ್ ಹೈ’ (ನಾವು ಒಂದು), ‘ಹಮ್ ಕಾಗಜ್ ನಹಿ ದಿಖಾಯೇಂಗೆ’ (‘ನಮ್ಮ ಕಾಗದಗಳನ್ನು ನಾವು ತೋರಿಸುವುದಿಲ್ಲ’ – ಸಿಎಎ ಚಳವಳಿಯ ವೇಳೆ ಹೊಮ್ಮಿದ ಘೋಷಣೆ) ಮತ್ತು ‘ಪ್ರೀತಿಯೇ ಅತಿದೊಡ್ಡ ಕ್ರಾಂತಿ’, ‘ನಾವು ಭಾರತೀಯರು’ ‘ಇನ್‌ಕ್ವಿಲಾಬ್‌ ಜಿಂದಾಬಾದ್‌’, ‘ಜಾತ್ಯತೀತತೆ’, ‘ದ್ವೇಷದ ವಿರುದ್ಧ ಭಾರತ’, ‘ಹಮ್‌ ದೇಖೇಂಗೆ’ (ನಾವು ನೋಡುತ್ತೇವೆ) ಎಂಬ ಘೋಷಣೆಗಳಿರುವ ಫಲಕಗಳನ್ನು ಪ್ರತಿಭಟನೆ ಮಾಡುತ್ತಿರುವ ಜನರು ಪ್ರದರ್ಶಿಸುತ್ತಿರುವುದನ್ನು ಇಲ್ಲಿ ಕಾಣಬಹುದು. ಭಾರತದ ರಾಷ್ಟ್ರಧ್ವಜ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಬಹುತ್ವವನ್ನು ಸಾರುವ ಜನ ಸಮೂಹ ಸೇರಿದಂತೆ ವಿವಿಧ ಚಿತ್ರಣಗಳನ್ನು ಇಲ್ಲಿ ನೋಡಬಹುದು.

ಪೋಸ್ಟ್‌ ಮಾಡಿರುವ ಕಲಾವಿದರು, “ಧೈರ್ಯವಂತ ಮತ್ತು ಅಸಾಧಾರಣ ವ್ಯಕ್ತಿಗಳಾದ ಸ್ವರಾ ಭಾಸ್ಕರ್‌- ಫಹಾದ್ ಅವರ ವಿವಾಹ ಆಮಂತ್ರಣ ರೂಪಿಸಲು ನಮಗೆ ಅವಕಾಶ ಸಿಕ್ಕಿದೆ” ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿರಿ: ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ಮುಂದುವರಿದು, “ಜನರ ಪ್ರತಿಭಟನೆಯ ವೇಳೆ ತಾವಿಬ್ಬರು ಭೇಟಿಯಾಗಿದ್ದು ಹೇಗೆ, ಪರಸ್ಪರ ಇಷ್ಟಪಟ್ಟಿದ್ದು ಹೇಗೆ, ಮುಂಬೈ ಮತ್ತು ಮರೀನ್‌ಡ್ರೈವ್‌ನ ನೆನಪುಗಳು, ಸಿನಿಮಾ ಮೇಲಿನ ಇಬ್ಬರ ಪ್ರೀತಿ ಮತ್ತು ಅವರ ಸುಂದರವಾದ ಬೆಕ್ಕು ಗಾಲಿಬ್‌‌ ಕುರಿತು ಕಲಾಕೃತಿ ರಚಿಸಲು ಈ ಇಬ್ಬರೂ ಆಹ್ವಾನಿಸಿದ್ದರು” ಎಂದು ಬರೆದುಕೊಳ್ಳಲಾಗಿದೆ.

ಇನ್‌ಸ್ಟಾದಲ್ಲಿ ಹಂಚಿಕೊಳ್ಳಲಾಗಿರುವ ಈ ವಿನ್ಯಾಸವನ್ನು ನೋಡಿರುವ ಫೇಜ್‌ನ ಫಾಲೋಯರ್‌ಗಳು ಮನಸೋತಿದ್ದಾರೆ. “ಇದು ತುಂಬಾ ಅದ್ಭುತವಾಗಿದೆ .. ವಾವ್‌… ನಿರ್ಭೀತ, ಶಕ್ತಿಯುತ… ಪ್ರೀತಿ” ಎಂದೆಲ್ಲ ಕಮೆಂಟ್ ಮಾಡಿದ್ದಾರೆ.

ಕಾಮೆಂಟ್‌ ವಿಭಾಗದಲ್ಲಿ ಮತ್ತೊಬ್ಬರು, “ನೀವು ಅದ್ಭುತ ಕೆಲಸ ಮಾಡಿದ್ದೀರಿ! ತುಂಬಾ ಧನ್ಯವಾದಗಳು” ಎಂದು ಶ್ಲಾಘಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...