Homeಮುಖಪುಟ‘ಹಮ್ ಕಾಗಜ್ ನಹಿ ದಿಖಾಯೇಂಗೆ’: ‘ಸ್ವರಾ ಭಾಸ್ಕರ್‌- ಫಹಾದ್‌’ ಪ್ರೇಮಕತೆ ಬಿಚ್ಚಿಟ್ಟ ವಿನೂತನ ವೆಡ್ಡಿಂಗ್‌ ಕಾರ್ಡ್

‘ಹಮ್ ಕಾಗಜ್ ನಹಿ ದಿಖಾಯೇಂಗೆ’: ‘ಸ್ವರಾ ಭಾಸ್ಕರ್‌- ಫಹಾದ್‌’ ಪ್ರೇಮಕತೆ ಬಿಚ್ಚಿಟ್ಟ ವಿನೂತನ ವೆಡ್ಡಿಂಗ್‌ ಕಾರ್ಡ್

- Advertisement -
- Advertisement -

ಬಾಲಿವುಡ್ ನಟಿ ಸ್ವರಾ ಭಾಸ್ಕರ್‌ ಮತ್ತು ಸಮಾಜವಾದಿ ಪಕ್ಷದ ಯುವ ನಾಯಕ ಫಹಾದ್ ಅಹಮದ್ ಅವರು ಇತ್ತೀಚೆಗೆ ಸರಳವಾಗಿ ವಿವಾಹವಾಗಿದ್ದರು. ಅವರ ವಿವಾಹ ಆಹ್ವಾನ ಪತ್ರಿಕೆಯು ಈಗ ವೈರಲ್‌ ಆಗಿದ್ದು, ಸ್ವಾರಸ್ಯಕರ ಸಂಗತಿಗಳೊಂದಿಗೆ ಗಮನ ಸೆಳೆಯುತ್ತಿದೆ.

ಬಾಲಿವುಡ್‌ ನಟಿ, ನಟರ ವಿವಾಹವೆಂದರೆ ಅದ್ಧೂರಿ, ದುಂದುವೆಚ್ಚವೇ ಮನೆಮಾಡಿರುತ್ತದೆ. ರಾಜಕಾರಣದ ಹಿನ್ನೆಲೆಯುಳ್ಳವರ ಮದುವೆಗಳೂ ಈ ಆಡಂಬರಕ್ಕೆ ಹೊರತಲ್ಲ. ಜನಪರ ಚಳವಳಿಗಳ ಪರವಾಗಿ ದನಿ ಎತ್ತುತ್ತ ಬಂದಿರುವ ಸ್ವರಾ ಭಾಸ್ಕರ್‌ ಮತ್ತು ಸಮಾಜವಾದಿ ಪಕ್ಷದ ಫಹಾದ್‌ ಅಹಮದ್‌ ವಿವಾಹ ಭಿನ್ನವಾಗಿತ್ತು. ಸರಳವಾಗಿ ರಿಜಿಸ್ಟರ್‌ ಮ್ಯಾರೇಜ್‌ ಆಗಿದ್ದರು. ಇದರ ಜೊತೆಗೆ ಇವರ ವಿವಾಹ ಆಮಂತ್ರಣ ಪತ್ರಿಕೆ ಹೊರಬಿದ್ದಿದ್ದು ‘ಸ್ವರಾ ಮತ್ತು ಫಹಾದ್‌’ ಅವರ ಲವ್‌ಸ್ಟೋರಿಯನ್ನು ವಿನೂತನವಾಗಿ ಹೇಳುತ್ತಿದೆ.

ಮದುವೆಯ ಆಮಂತ್ರಣ ಪತ್ರಿಕೆಯ ವಿನ್ಯಾಸ ಮಾಡಿರುವ ಕಲಾವಿದ ಪ್ರತೀಕ್ ಕುಮಾರ್‌ ತಮ್ಮ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಮೂರು ಪುಟದ ಆಮಂತ್ರಣ ಪತ್ರಿಕೆಯನ್ನು ಹಂಚಿಕೊಂಡಿದ್ದು, ಸ್ವರಾ ಮತ್ತು ಫಹಾದ್ ಅವರ ಪ್ರೇಮಕಥೆಯನ್ನು ಪರಿಚಯಿಸಿದ್ದಾರೆ.

 

View this post on Instagram

 

A post shared by Prateeq Kumar (@prateeq)

ಕೆಂಪು ಲೆಹೆಂಗಾ ಧಿರಿಸಿನಲ್ಲಿ ವಧು ಮತ್ತು ಬೀಜ್ ಶೇರ್ವಾನಿ ಧಿರಿಸಿನಲ್ಲಿ ವರ ಇರುವುದನ್ನು ಈ ಕಾರ್ಡ್‌ನಲ್ಲಿ ನೋಡಬಹುದು. ಪ್ರತಿಭಟನೆ ನಡೆಯುತ್ತಿರುವುದನ್ನು ಈ ಇಬ್ಬರೂ ಕಿಟಕಿಯ ಮೂಲಕ ನೋಡುತ್ತಿರುವ ಕಲಾಕೃತಿ ಇಲ್ಲಿದೆ.

‘ಹಮ್ ಸಬ್ ಏಕ್ ಹೈ’ (ನಾವು ಒಂದು), ‘ಹಮ್ ಕಾಗಜ್ ನಹಿ ದಿಖಾಯೇಂಗೆ’ (‘ನಮ್ಮ ಕಾಗದಗಳನ್ನು ನಾವು ತೋರಿಸುವುದಿಲ್ಲ’ – ಸಿಎಎ ಚಳವಳಿಯ ವೇಳೆ ಹೊಮ್ಮಿದ ಘೋಷಣೆ) ಮತ್ತು ‘ಪ್ರೀತಿಯೇ ಅತಿದೊಡ್ಡ ಕ್ರಾಂತಿ’, ‘ನಾವು ಭಾರತೀಯರು’ ‘ಇನ್‌ಕ್ವಿಲಾಬ್‌ ಜಿಂದಾಬಾದ್‌’, ‘ಜಾತ್ಯತೀತತೆ’, ‘ದ್ವೇಷದ ವಿರುದ್ಧ ಭಾರತ’, ‘ಹಮ್‌ ದೇಖೇಂಗೆ’ (ನಾವು ನೋಡುತ್ತೇವೆ) ಎಂಬ ಘೋಷಣೆಗಳಿರುವ ಫಲಕಗಳನ್ನು ಪ್ರತಿಭಟನೆ ಮಾಡುತ್ತಿರುವ ಜನರು ಪ್ರದರ್ಶಿಸುತ್ತಿರುವುದನ್ನು ಇಲ್ಲಿ ಕಾಣಬಹುದು. ಭಾರತದ ರಾಷ್ಟ್ರಧ್ವಜ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಬಹುತ್ವವನ್ನು ಸಾರುವ ಜನ ಸಮೂಹ ಸೇರಿದಂತೆ ವಿವಿಧ ಚಿತ್ರಣಗಳನ್ನು ಇಲ್ಲಿ ನೋಡಬಹುದು.

ಪೋಸ್ಟ್‌ ಮಾಡಿರುವ ಕಲಾವಿದರು, “ಧೈರ್ಯವಂತ ಮತ್ತು ಅಸಾಧಾರಣ ವ್ಯಕ್ತಿಗಳಾದ ಸ್ವರಾ ಭಾಸ್ಕರ್‌- ಫಹಾದ್ ಅವರ ವಿವಾಹ ಆಮಂತ್ರಣ ರೂಪಿಸಲು ನಮಗೆ ಅವಕಾಶ ಸಿಕ್ಕಿದೆ” ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿರಿ: ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ಮುಂದುವರಿದು, “ಜನರ ಪ್ರತಿಭಟನೆಯ ವೇಳೆ ತಾವಿಬ್ಬರು ಭೇಟಿಯಾಗಿದ್ದು ಹೇಗೆ, ಪರಸ್ಪರ ಇಷ್ಟಪಟ್ಟಿದ್ದು ಹೇಗೆ, ಮುಂಬೈ ಮತ್ತು ಮರೀನ್‌ಡ್ರೈವ್‌ನ ನೆನಪುಗಳು, ಸಿನಿಮಾ ಮೇಲಿನ ಇಬ್ಬರ ಪ್ರೀತಿ ಮತ್ತು ಅವರ ಸುಂದರವಾದ ಬೆಕ್ಕು ಗಾಲಿಬ್‌‌ ಕುರಿತು ಕಲಾಕೃತಿ ರಚಿಸಲು ಈ ಇಬ್ಬರೂ ಆಹ್ವಾನಿಸಿದ್ದರು” ಎಂದು ಬರೆದುಕೊಳ್ಳಲಾಗಿದೆ.

ಇನ್‌ಸ್ಟಾದಲ್ಲಿ ಹಂಚಿಕೊಳ್ಳಲಾಗಿರುವ ಈ ವಿನ್ಯಾಸವನ್ನು ನೋಡಿರುವ ಫೇಜ್‌ನ ಫಾಲೋಯರ್‌ಗಳು ಮನಸೋತಿದ್ದಾರೆ. “ಇದು ತುಂಬಾ ಅದ್ಭುತವಾಗಿದೆ .. ವಾವ್‌… ನಿರ್ಭೀತ, ಶಕ್ತಿಯುತ… ಪ್ರೀತಿ” ಎಂದೆಲ್ಲ ಕಮೆಂಟ್ ಮಾಡಿದ್ದಾರೆ.

ಕಾಮೆಂಟ್‌ ವಿಭಾಗದಲ್ಲಿ ಮತ್ತೊಬ್ಬರು, “ನೀವು ಅದ್ಭುತ ಕೆಲಸ ಮಾಡಿದ್ದೀರಿ! ತುಂಬಾ ಧನ್ಯವಾದಗಳು” ಎಂದು ಶ್ಲಾಘಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...