Homeಮುಖಪುಟ‘ಹಮ್ ಕಾಗಜ್ ನಹಿ ದಿಖಾಯೇಂಗೆ’: ‘ಸ್ವರಾ ಭಾಸ್ಕರ್‌- ಫಹಾದ್‌’ ಪ್ರೇಮಕತೆ ಬಿಚ್ಚಿಟ್ಟ ವಿನೂತನ ವೆಡ್ಡಿಂಗ್‌ ಕಾರ್ಡ್

‘ಹಮ್ ಕಾಗಜ್ ನಹಿ ದಿಖಾಯೇಂಗೆ’: ‘ಸ್ವರಾ ಭಾಸ್ಕರ್‌- ಫಹಾದ್‌’ ಪ್ರೇಮಕತೆ ಬಿಚ್ಚಿಟ್ಟ ವಿನೂತನ ವೆಡ್ಡಿಂಗ್‌ ಕಾರ್ಡ್

- Advertisement -
- Advertisement -

ಬಾಲಿವುಡ್ ನಟಿ ಸ್ವರಾ ಭಾಸ್ಕರ್‌ ಮತ್ತು ಸಮಾಜವಾದಿ ಪಕ್ಷದ ಯುವ ನಾಯಕ ಫಹಾದ್ ಅಹಮದ್ ಅವರು ಇತ್ತೀಚೆಗೆ ಸರಳವಾಗಿ ವಿವಾಹವಾಗಿದ್ದರು. ಅವರ ವಿವಾಹ ಆಹ್ವಾನ ಪತ್ರಿಕೆಯು ಈಗ ವೈರಲ್‌ ಆಗಿದ್ದು, ಸ್ವಾರಸ್ಯಕರ ಸಂಗತಿಗಳೊಂದಿಗೆ ಗಮನ ಸೆಳೆಯುತ್ತಿದೆ.

ಬಾಲಿವುಡ್‌ ನಟಿ, ನಟರ ವಿವಾಹವೆಂದರೆ ಅದ್ಧೂರಿ, ದುಂದುವೆಚ್ಚವೇ ಮನೆಮಾಡಿರುತ್ತದೆ. ರಾಜಕಾರಣದ ಹಿನ್ನೆಲೆಯುಳ್ಳವರ ಮದುವೆಗಳೂ ಈ ಆಡಂಬರಕ್ಕೆ ಹೊರತಲ್ಲ. ಜನಪರ ಚಳವಳಿಗಳ ಪರವಾಗಿ ದನಿ ಎತ್ತುತ್ತ ಬಂದಿರುವ ಸ್ವರಾ ಭಾಸ್ಕರ್‌ ಮತ್ತು ಸಮಾಜವಾದಿ ಪಕ್ಷದ ಫಹಾದ್‌ ಅಹಮದ್‌ ವಿವಾಹ ಭಿನ್ನವಾಗಿತ್ತು. ಸರಳವಾಗಿ ರಿಜಿಸ್ಟರ್‌ ಮ್ಯಾರೇಜ್‌ ಆಗಿದ್ದರು. ಇದರ ಜೊತೆಗೆ ಇವರ ವಿವಾಹ ಆಮಂತ್ರಣ ಪತ್ರಿಕೆ ಹೊರಬಿದ್ದಿದ್ದು ‘ಸ್ವರಾ ಮತ್ತು ಫಹಾದ್‌’ ಅವರ ಲವ್‌ಸ್ಟೋರಿಯನ್ನು ವಿನೂತನವಾಗಿ ಹೇಳುತ್ತಿದೆ.

ಮದುವೆಯ ಆಮಂತ್ರಣ ಪತ್ರಿಕೆಯ ವಿನ್ಯಾಸ ಮಾಡಿರುವ ಕಲಾವಿದ ಪ್ರತೀಕ್ ಕುಮಾರ್‌ ತಮ್ಮ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಮೂರು ಪುಟದ ಆಮಂತ್ರಣ ಪತ್ರಿಕೆಯನ್ನು ಹಂಚಿಕೊಂಡಿದ್ದು, ಸ್ವರಾ ಮತ್ತು ಫಹಾದ್ ಅವರ ಪ್ರೇಮಕಥೆಯನ್ನು ಪರಿಚಯಿಸಿದ್ದಾರೆ.

 

View this post on Instagram

 

A post shared by Prateeq Kumar (@prateeq)

ಕೆಂಪು ಲೆಹೆಂಗಾ ಧಿರಿಸಿನಲ್ಲಿ ವಧು ಮತ್ತು ಬೀಜ್ ಶೇರ್ವಾನಿ ಧಿರಿಸಿನಲ್ಲಿ ವರ ಇರುವುದನ್ನು ಈ ಕಾರ್ಡ್‌ನಲ್ಲಿ ನೋಡಬಹುದು. ಪ್ರತಿಭಟನೆ ನಡೆಯುತ್ತಿರುವುದನ್ನು ಈ ಇಬ್ಬರೂ ಕಿಟಕಿಯ ಮೂಲಕ ನೋಡುತ್ತಿರುವ ಕಲಾಕೃತಿ ಇಲ್ಲಿದೆ.

‘ಹಮ್ ಸಬ್ ಏಕ್ ಹೈ’ (ನಾವು ಒಂದು), ‘ಹಮ್ ಕಾಗಜ್ ನಹಿ ದಿಖಾಯೇಂಗೆ’ (‘ನಮ್ಮ ಕಾಗದಗಳನ್ನು ನಾವು ತೋರಿಸುವುದಿಲ್ಲ’ – ಸಿಎಎ ಚಳವಳಿಯ ವೇಳೆ ಹೊಮ್ಮಿದ ಘೋಷಣೆ) ಮತ್ತು ‘ಪ್ರೀತಿಯೇ ಅತಿದೊಡ್ಡ ಕ್ರಾಂತಿ’, ‘ನಾವು ಭಾರತೀಯರು’ ‘ಇನ್‌ಕ್ವಿಲಾಬ್‌ ಜಿಂದಾಬಾದ್‌’, ‘ಜಾತ್ಯತೀತತೆ’, ‘ದ್ವೇಷದ ವಿರುದ್ಧ ಭಾರತ’, ‘ಹಮ್‌ ದೇಖೇಂಗೆ’ (ನಾವು ನೋಡುತ್ತೇವೆ) ಎಂಬ ಘೋಷಣೆಗಳಿರುವ ಫಲಕಗಳನ್ನು ಪ್ರತಿಭಟನೆ ಮಾಡುತ್ತಿರುವ ಜನರು ಪ್ರದರ್ಶಿಸುತ್ತಿರುವುದನ್ನು ಇಲ್ಲಿ ಕಾಣಬಹುದು. ಭಾರತದ ರಾಷ್ಟ್ರಧ್ವಜ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಬಹುತ್ವವನ್ನು ಸಾರುವ ಜನ ಸಮೂಹ ಸೇರಿದಂತೆ ವಿವಿಧ ಚಿತ್ರಣಗಳನ್ನು ಇಲ್ಲಿ ನೋಡಬಹುದು.

ಪೋಸ್ಟ್‌ ಮಾಡಿರುವ ಕಲಾವಿದರು, “ಧೈರ್ಯವಂತ ಮತ್ತು ಅಸಾಧಾರಣ ವ್ಯಕ್ತಿಗಳಾದ ಸ್ವರಾ ಭಾಸ್ಕರ್‌- ಫಹಾದ್ ಅವರ ವಿವಾಹ ಆಮಂತ್ರಣ ರೂಪಿಸಲು ನಮಗೆ ಅವಕಾಶ ಸಿಕ್ಕಿದೆ” ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿರಿ: ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ಮುಂದುವರಿದು, “ಜನರ ಪ್ರತಿಭಟನೆಯ ವೇಳೆ ತಾವಿಬ್ಬರು ಭೇಟಿಯಾಗಿದ್ದು ಹೇಗೆ, ಪರಸ್ಪರ ಇಷ್ಟಪಟ್ಟಿದ್ದು ಹೇಗೆ, ಮುಂಬೈ ಮತ್ತು ಮರೀನ್‌ಡ್ರೈವ್‌ನ ನೆನಪುಗಳು, ಸಿನಿಮಾ ಮೇಲಿನ ಇಬ್ಬರ ಪ್ರೀತಿ ಮತ್ತು ಅವರ ಸುಂದರವಾದ ಬೆಕ್ಕು ಗಾಲಿಬ್‌‌ ಕುರಿತು ಕಲಾಕೃತಿ ರಚಿಸಲು ಈ ಇಬ್ಬರೂ ಆಹ್ವಾನಿಸಿದ್ದರು” ಎಂದು ಬರೆದುಕೊಳ್ಳಲಾಗಿದೆ.

ಇನ್‌ಸ್ಟಾದಲ್ಲಿ ಹಂಚಿಕೊಳ್ಳಲಾಗಿರುವ ಈ ವಿನ್ಯಾಸವನ್ನು ನೋಡಿರುವ ಫೇಜ್‌ನ ಫಾಲೋಯರ್‌ಗಳು ಮನಸೋತಿದ್ದಾರೆ. “ಇದು ತುಂಬಾ ಅದ್ಭುತವಾಗಿದೆ .. ವಾವ್‌… ನಿರ್ಭೀತ, ಶಕ್ತಿಯುತ… ಪ್ರೀತಿ” ಎಂದೆಲ್ಲ ಕಮೆಂಟ್ ಮಾಡಿದ್ದಾರೆ.

ಕಾಮೆಂಟ್‌ ವಿಭಾಗದಲ್ಲಿ ಮತ್ತೊಬ್ಬರು, “ನೀವು ಅದ್ಭುತ ಕೆಲಸ ಮಾಡಿದ್ದೀರಿ! ತುಂಬಾ ಧನ್ಯವಾದಗಳು” ಎಂದು ಶ್ಲಾಘಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...