Homeಮುಖಪುಟ‘ಹಮ್ ಕಾಗಜ್ ನಹಿ ದಿಖಾಯೇಂಗೆ’: ‘ಸ್ವರಾ ಭಾಸ್ಕರ್‌- ಫಹಾದ್‌’ ಪ್ರೇಮಕತೆ ಬಿಚ್ಚಿಟ್ಟ ವಿನೂತನ ವೆಡ್ಡಿಂಗ್‌ ಕಾರ್ಡ್

‘ಹಮ್ ಕಾಗಜ್ ನಹಿ ದಿಖಾಯೇಂಗೆ’: ‘ಸ್ವರಾ ಭಾಸ್ಕರ್‌- ಫಹಾದ್‌’ ಪ್ರೇಮಕತೆ ಬಿಚ್ಚಿಟ್ಟ ವಿನೂತನ ವೆಡ್ಡಿಂಗ್‌ ಕಾರ್ಡ್

- Advertisement -
- Advertisement -

ಬಾಲಿವುಡ್ ನಟಿ ಸ್ವರಾ ಭಾಸ್ಕರ್‌ ಮತ್ತು ಸಮಾಜವಾದಿ ಪಕ್ಷದ ಯುವ ನಾಯಕ ಫಹಾದ್ ಅಹಮದ್ ಅವರು ಇತ್ತೀಚೆಗೆ ಸರಳವಾಗಿ ವಿವಾಹವಾಗಿದ್ದರು. ಅವರ ವಿವಾಹ ಆಹ್ವಾನ ಪತ್ರಿಕೆಯು ಈಗ ವೈರಲ್‌ ಆಗಿದ್ದು, ಸ್ವಾರಸ್ಯಕರ ಸಂಗತಿಗಳೊಂದಿಗೆ ಗಮನ ಸೆಳೆಯುತ್ತಿದೆ.

ಬಾಲಿವುಡ್‌ ನಟಿ, ನಟರ ವಿವಾಹವೆಂದರೆ ಅದ್ಧೂರಿ, ದುಂದುವೆಚ್ಚವೇ ಮನೆಮಾಡಿರುತ್ತದೆ. ರಾಜಕಾರಣದ ಹಿನ್ನೆಲೆಯುಳ್ಳವರ ಮದುವೆಗಳೂ ಈ ಆಡಂಬರಕ್ಕೆ ಹೊರತಲ್ಲ. ಜನಪರ ಚಳವಳಿಗಳ ಪರವಾಗಿ ದನಿ ಎತ್ತುತ್ತ ಬಂದಿರುವ ಸ್ವರಾ ಭಾಸ್ಕರ್‌ ಮತ್ತು ಸಮಾಜವಾದಿ ಪಕ್ಷದ ಫಹಾದ್‌ ಅಹಮದ್‌ ವಿವಾಹ ಭಿನ್ನವಾಗಿತ್ತು. ಸರಳವಾಗಿ ರಿಜಿಸ್ಟರ್‌ ಮ್ಯಾರೇಜ್‌ ಆಗಿದ್ದರು. ಇದರ ಜೊತೆಗೆ ಇವರ ವಿವಾಹ ಆಮಂತ್ರಣ ಪತ್ರಿಕೆ ಹೊರಬಿದ್ದಿದ್ದು ‘ಸ್ವರಾ ಮತ್ತು ಫಹಾದ್‌’ ಅವರ ಲವ್‌ಸ್ಟೋರಿಯನ್ನು ವಿನೂತನವಾಗಿ ಹೇಳುತ್ತಿದೆ.

ಮದುವೆಯ ಆಮಂತ್ರಣ ಪತ್ರಿಕೆಯ ವಿನ್ಯಾಸ ಮಾಡಿರುವ ಕಲಾವಿದ ಪ್ರತೀಕ್ ಕುಮಾರ್‌ ತಮ್ಮ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಮೂರು ಪುಟದ ಆಮಂತ್ರಣ ಪತ್ರಿಕೆಯನ್ನು ಹಂಚಿಕೊಂಡಿದ್ದು, ಸ್ವರಾ ಮತ್ತು ಫಹಾದ್ ಅವರ ಪ್ರೇಮಕಥೆಯನ್ನು ಪರಿಚಯಿಸಿದ್ದಾರೆ.

 

View this post on Instagram

 

A post shared by Prateeq Kumar (@prateeq)

ಕೆಂಪು ಲೆಹೆಂಗಾ ಧಿರಿಸಿನಲ್ಲಿ ವಧು ಮತ್ತು ಬೀಜ್ ಶೇರ್ವಾನಿ ಧಿರಿಸಿನಲ್ಲಿ ವರ ಇರುವುದನ್ನು ಈ ಕಾರ್ಡ್‌ನಲ್ಲಿ ನೋಡಬಹುದು. ಪ್ರತಿಭಟನೆ ನಡೆಯುತ್ತಿರುವುದನ್ನು ಈ ಇಬ್ಬರೂ ಕಿಟಕಿಯ ಮೂಲಕ ನೋಡುತ್ತಿರುವ ಕಲಾಕೃತಿ ಇಲ್ಲಿದೆ.

‘ಹಮ್ ಸಬ್ ಏಕ್ ಹೈ’ (ನಾವು ಒಂದು), ‘ಹಮ್ ಕಾಗಜ್ ನಹಿ ದಿಖಾಯೇಂಗೆ’ (‘ನಮ್ಮ ಕಾಗದಗಳನ್ನು ನಾವು ತೋರಿಸುವುದಿಲ್ಲ’ – ಸಿಎಎ ಚಳವಳಿಯ ವೇಳೆ ಹೊಮ್ಮಿದ ಘೋಷಣೆ) ಮತ್ತು ‘ಪ್ರೀತಿಯೇ ಅತಿದೊಡ್ಡ ಕ್ರಾಂತಿ’, ‘ನಾವು ಭಾರತೀಯರು’ ‘ಇನ್‌ಕ್ವಿಲಾಬ್‌ ಜಿಂದಾಬಾದ್‌’, ‘ಜಾತ್ಯತೀತತೆ’, ‘ದ್ವೇಷದ ವಿರುದ್ಧ ಭಾರತ’, ‘ಹಮ್‌ ದೇಖೇಂಗೆ’ (ನಾವು ನೋಡುತ್ತೇವೆ) ಎಂಬ ಘೋಷಣೆಗಳಿರುವ ಫಲಕಗಳನ್ನು ಪ್ರತಿಭಟನೆ ಮಾಡುತ್ತಿರುವ ಜನರು ಪ್ರದರ್ಶಿಸುತ್ತಿರುವುದನ್ನು ಇಲ್ಲಿ ಕಾಣಬಹುದು. ಭಾರತದ ರಾಷ್ಟ್ರಧ್ವಜ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಬಹುತ್ವವನ್ನು ಸಾರುವ ಜನ ಸಮೂಹ ಸೇರಿದಂತೆ ವಿವಿಧ ಚಿತ್ರಣಗಳನ್ನು ಇಲ್ಲಿ ನೋಡಬಹುದು.

ಪೋಸ್ಟ್‌ ಮಾಡಿರುವ ಕಲಾವಿದರು, “ಧೈರ್ಯವಂತ ಮತ್ತು ಅಸಾಧಾರಣ ವ್ಯಕ್ತಿಗಳಾದ ಸ್ವರಾ ಭಾಸ್ಕರ್‌- ಫಹಾದ್ ಅವರ ವಿವಾಹ ಆಮಂತ್ರಣ ರೂಪಿಸಲು ನಮಗೆ ಅವಕಾಶ ಸಿಕ್ಕಿದೆ” ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿರಿ: ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ಮುಂದುವರಿದು, “ಜನರ ಪ್ರತಿಭಟನೆಯ ವೇಳೆ ತಾವಿಬ್ಬರು ಭೇಟಿಯಾಗಿದ್ದು ಹೇಗೆ, ಪರಸ್ಪರ ಇಷ್ಟಪಟ್ಟಿದ್ದು ಹೇಗೆ, ಮುಂಬೈ ಮತ್ತು ಮರೀನ್‌ಡ್ರೈವ್‌ನ ನೆನಪುಗಳು, ಸಿನಿಮಾ ಮೇಲಿನ ಇಬ್ಬರ ಪ್ರೀತಿ ಮತ್ತು ಅವರ ಸುಂದರವಾದ ಬೆಕ್ಕು ಗಾಲಿಬ್‌‌ ಕುರಿತು ಕಲಾಕೃತಿ ರಚಿಸಲು ಈ ಇಬ್ಬರೂ ಆಹ್ವಾನಿಸಿದ್ದರು” ಎಂದು ಬರೆದುಕೊಳ್ಳಲಾಗಿದೆ.

ಇನ್‌ಸ್ಟಾದಲ್ಲಿ ಹಂಚಿಕೊಳ್ಳಲಾಗಿರುವ ಈ ವಿನ್ಯಾಸವನ್ನು ನೋಡಿರುವ ಫೇಜ್‌ನ ಫಾಲೋಯರ್‌ಗಳು ಮನಸೋತಿದ್ದಾರೆ. “ಇದು ತುಂಬಾ ಅದ್ಭುತವಾಗಿದೆ .. ವಾವ್‌… ನಿರ್ಭೀತ, ಶಕ್ತಿಯುತ… ಪ್ರೀತಿ” ಎಂದೆಲ್ಲ ಕಮೆಂಟ್ ಮಾಡಿದ್ದಾರೆ.

ಕಾಮೆಂಟ್‌ ವಿಭಾಗದಲ್ಲಿ ಮತ್ತೊಬ್ಬರು, “ನೀವು ಅದ್ಭುತ ಕೆಲಸ ಮಾಡಿದ್ದೀರಿ! ತುಂಬಾ ಧನ್ಯವಾದಗಳು” ಎಂದು ಶ್ಲಾಘಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...