Homeಮುಖಪುಟ‘ಹಮ್ ಕಾಗಜ್ ನಹಿ ದಿಖಾಯೇಂಗೆ’: ‘ಸ್ವರಾ ಭಾಸ್ಕರ್‌- ಫಹಾದ್‌’ ಪ್ರೇಮಕತೆ ಬಿಚ್ಚಿಟ್ಟ ವಿನೂತನ ವೆಡ್ಡಿಂಗ್‌ ಕಾರ್ಡ್

‘ಹಮ್ ಕಾಗಜ್ ನಹಿ ದಿಖಾಯೇಂಗೆ’: ‘ಸ್ವರಾ ಭಾಸ್ಕರ್‌- ಫಹಾದ್‌’ ಪ್ರೇಮಕತೆ ಬಿಚ್ಚಿಟ್ಟ ವಿನೂತನ ವೆಡ್ಡಿಂಗ್‌ ಕಾರ್ಡ್

- Advertisement -
- Advertisement -

ಬಾಲಿವುಡ್ ನಟಿ ಸ್ವರಾ ಭಾಸ್ಕರ್‌ ಮತ್ತು ಸಮಾಜವಾದಿ ಪಕ್ಷದ ಯುವ ನಾಯಕ ಫಹಾದ್ ಅಹಮದ್ ಅವರು ಇತ್ತೀಚೆಗೆ ಸರಳವಾಗಿ ವಿವಾಹವಾಗಿದ್ದರು. ಅವರ ವಿವಾಹ ಆಹ್ವಾನ ಪತ್ರಿಕೆಯು ಈಗ ವೈರಲ್‌ ಆಗಿದ್ದು, ಸ್ವಾರಸ್ಯಕರ ಸಂಗತಿಗಳೊಂದಿಗೆ ಗಮನ ಸೆಳೆಯುತ್ತಿದೆ.

ಬಾಲಿವುಡ್‌ ನಟಿ, ನಟರ ವಿವಾಹವೆಂದರೆ ಅದ್ಧೂರಿ, ದುಂದುವೆಚ್ಚವೇ ಮನೆಮಾಡಿರುತ್ತದೆ. ರಾಜಕಾರಣದ ಹಿನ್ನೆಲೆಯುಳ್ಳವರ ಮದುವೆಗಳೂ ಈ ಆಡಂಬರಕ್ಕೆ ಹೊರತಲ್ಲ. ಜನಪರ ಚಳವಳಿಗಳ ಪರವಾಗಿ ದನಿ ಎತ್ತುತ್ತ ಬಂದಿರುವ ಸ್ವರಾ ಭಾಸ್ಕರ್‌ ಮತ್ತು ಸಮಾಜವಾದಿ ಪಕ್ಷದ ಫಹಾದ್‌ ಅಹಮದ್‌ ವಿವಾಹ ಭಿನ್ನವಾಗಿತ್ತು. ಸರಳವಾಗಿ ರಿಜಿಸ್ಟರ್‌ ಮ್ಯಾರೇಜ್‌ ಆಗಿದ್ದರು. ಇದರ ಜೊತೆಗೆ ಇವರ ವಿವಾಹ ಆಮಂತ್ರಣ ಪತ್ರಿಕೆ ಹೊರಬಿದ್ದಿದ್ದು ‘ಸ್ವರಾ ಮತ್ತು ಫಹಾದ್‌’ ಅವರ ಲವ್‌ಸ್ಟೋರಿಯನ್ನು ವಿನೂತನವಾಗಿ ಹೇಳುತ್ತಿದೆ.

ಮದುವೆಯ ಆಮಂತ್ರಣ ಪತ್ರಿಕೆಯ ವಿನ್ಯಾಸ ಮಾಡಿರುವ ಕಲಾವಿದ ಪ್ರತೀಕ್ ಕುಮಾರ್‌ ತಮ್ಮ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಮೂರು ಪುಟದ ಆಮಂತ್ರಣ ಪತ್ರಿಕೆಯನ್ನು ಹಂಚಿಕೊಂಡಿದ್ದು, ಸ್ವರಾ ಮತ್ತು ಫಹಾದ್ ಅವರ ಪ್ರೇಮಕಥೆಯನ್ನು ಪರಿಚಯಿಸಿದ್ದಾರೆ.

 

View this post on Instagram

 

A post shared by Prateeq Kumar (@prateeq)

ಕೆಂಪು ಲೆಹೆಂಗಾ ಧಿರಿಸಿನಲ್ಲಿ ವಧು ಮತ್ತು ಬೀಜ್ ಶೇರ್ವಾನಿ ಧಿರಿಸಿನಲ್ಲಿ ವರ ಇರುವುದನ್ನು ಈ ಕಾರ್ಡ್‌ನಲ್ಲಿ ನೋಡಬಹುದು. ಪ್ರತಿಭಟನೆ ನಡೆಯುತ್ತಿರುವುದನ್ನು ಈ ಇಬ್ಬರೂ ಕಿಟಕಿಯ ಮೂಲಕ ನೋಡುತ್ತಿರುವ ಕಲಾಕೃತಿ ಇಲ್ಲಿದೆ.

‘ಹಮ್ ಸಬ್ ಏಕ್ ಹೈ’ (ನಾವು ಒಂದು), ‘ಹಮ್ ಕಾಗಜ್ ನಹಿ ದಿಖಾಯೇಂಗೆ’ (‘ನಮ್ಮ ಕಾಗದಗಳನ್ನು ನಾವು ತೋರಿಸುವುದಿಲ್ಲ’ – ಸಿಎಎ ಚಳವಳಿಯ ವೇಳೆ ಹೊಮ್ಮಿದ ಘೋಷಣೆ) ಮತ್ತು ‘ಪ್ರೀತಿಯೇ ಅತಿದೊಡ್ಡ ಕ್ರಾಂತಿ’, ‘ನಾವು ಭಾರತೀಯರು’ ‘ಇನ್‌ಕ್ವಿಲಾಬ್‌ ಜಿಂದಾಬಾದ್‌’, ‘ಜಾತ್ಯತೀತತೆ’, ‘ದ್ವೇಷದ ವಿರುದ್ಧ ಭಾರತ’, ‘ಹಮ್‌ ದೇಖೇಂಗೆ’ (ನಾವು ನೋಡುತ್ತೇವೆ) ಎಂಬ ಘೋಷಣೆಗಳಿರುವ ಫಲಕಗಳನ್ನು ಪ್ರತಿಭಟನೆ ಮಾಡುತ್ತಿರುವ ಜನರು ಪ್ರದರ್ಶಿಸುತ್ತಿರುವುದನ್ನು ಇಲ್ಲಿ ಕಾಣಬಹುದು. ಭಾರತದ ರಾಷ್ಟ್ರಧ್ವಜ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಬಹುತ್ವವನ್ನು ಸಾರುವ ಜನ ಸಮೂಹ ಸೇರಿದಂತೆ ವಿವಿಧ ಚಿತ್ರಣಗಳನ್ನು ಇಲ್ಲಿ ನೋಡಬಹುದು.

ಪೋಸ್ಟ್‌ ಮಾಡಿರುವ ಕಲಾವಿದರು, “ಧೈರ್ಯವಂತ ಮತ್ತು ಅಸಾಧಾರಣ ವ್ಯಕ್ತಿಗಳಾದ ಸ್ವರಾ ಭಾಸ್ಕರ್‌- ಫಹಾದ್ ಅವರ ವಿವಾಹ ಆಮಂತ್ರಣ ರೂಪಿಸಲು ನಮಗೆ ಅವಕಾಶ ಸಿಕ್ಕಿದೆ” ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿರಿ: ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ಮುಂದುವರಿದು, “ಜನರ ಪ್ರತಿಭಟನೆಯ ವೇಳೆ ತಾವಿಬ್ಬರು ಭೇಟಿಯಾಗಿದ್ದು ಹೇಗೆ, ಪರಸ್ಪರ ಇಷ್ಟಪಟ್ಟಿದ್ದು ಹೇಗೆ, ಮುಂಬೈ ಮತ್ತು ಮರೀನ್‌ಡ್ರೈವ್‌ನ ನೆನಪುಗಳು, ಸಿನಿಮಾ ಮೇಲಿನ ಇಬ್ಬರ ಪ್ರೀತಿ ಮತ್ತು ಅವರ ಸುಂದರವಾದ ಬೆಕ್ಕು ಗಾಲಿಬ್‌‌ ಕುರಿತು ಕಲಾಕೃತಿ ರಚಿಸಲು ಈ ಇಬ್ಬರೂ ಆಹ್ವಾನಿಸಿದ್ದರು” ಎಂದು ಬರೆದುಕೊಳ್ಳಲಾಗಿದೆ.

ಇನ್‌ಸ್ಟಾದಲ್ಲಿ ಹಂಚಿಕೊಳ್ಳಲಾಗಿರುವ ಈ ವಿನ್ಯಾಸವನ್ನು ನೋಡಿರುವ ಫೇಜ್‌ನ ಫಾಲೋಯರ್‌ಗಳು ಮನಸೋತಿದ್ದಾರೆ. “ಇದು ತುಂಬಾ ಅದ್ಭುತವಾಗಿದೆ .. ವಾವ್‌… ನಿರ್ಭೀತ, ಶಕ್ತಿಯುತ… ಪ್ರೀತಿ” ಎಂದೆಲ್ಲ ಕಮೆಂಟ್ ಮಾಡಿದ್ದಾರೆ.

ಕಾಮೆಂಟ್‌ ವಿಭಾಗದಲ್ಲಿ ಮತ್ತೊಬ್ಬರು, “ನೀವು ಅದ್ಭುತ ಕೆಲಸ ಮಾಡಿದ್ದೀರಿ! ತುಂಬಾ ಧನ್ಯವಾದಗಳು” ಎಂದು ಶ್ಲಾಘಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...