Homeಮುಖಪುಟ‘ಹಮ್ ಕಾಗಜ್ ನಹಿ ದಿಖಾಯೇಂಗೆ’: ‘ಸ್ವರಾ ಭಾಸ್ಕರ್‌- ಫಹಾದ್‌’ ಪ್ರೇಮಕತೆ ಬಿಚ್ಚಿಟ್ಟ ವಿನೂತನ ವೆಡ್ಡಿಂಗ್‌ ಕಾರ್ಡ್

‘ಹಮ್ ಕಾಗಜ್ ನಹಿ ದಿಖಾಯೇಂಗೆ’: ‘ಸ್ವರಾ ಭಾಸ್ಕರ್‌- ಫಹಾದ್‌’ ಪ್ರೇಮಕತೆ ಬಿಚ್ಚಿಟ್ಟ ವಿನೂತನ ವೆಡ್ಡಿಂಗ್‌ ಕಾರ್ಡ್

- Advertisement -
- Advertisement -

ಬಾಲಿವುಡ್ ನಟಿ ಸ್ವರಾ ಭಾಸ್ಕರ್‌ ಮತ್ತು ಸಮಾಜವಾದಿ ಪಕ್ಷದ ಯುವ ನಾಯಕ ಫಹಾದ್ ಅಹಮದ್ ಅವರು ಇತ್ತೀಚೆಗೆ ಸರಳವಾಗಿ ವಿವಾಹವಾಗಿದ್ದರು. ಅವರ ವಿವಾಹ ಆಹ್ವಾನ ಪತ್ರಿಕೆಯು ಈಗ ವೈರಲ್‌ ಆಗಿದ್ದು, ಸ್ವಾರಸ್ಯಕರ ಸಂಗತಿಗಳೊಂದಿಗೆ ಗಮನ ಸೆಳೆಯುತ್ತಿದೆ.

ಬಾಲಿವುಡ್‌ ನಟಿ, ನಟರ ವಿವಾಹವೆಂದರೆ ಅದ್ಧೂರಿ, ದುಂದುವೆಚ್ಚವೇ ಮನೆಮಾಡಿರುತ್ತದೆ. ರಾಜಕಾರಣದ ಹಿನ್ನೆಲೆಯುಳ್ಳವರ ಮದುವೆಗಳೂ ಈ ಆಡಂಬರಕ್ಕೆ ಹೊರತಲ್ಲ. ಜನಪರ ಚಳವಳಿಗಳ ಪರವಾಗಿ ದನಿ ಎತ್ತುತ್ತ ಬಂದಿರುವ ಸ್ವರಾ ಭಾಸ್ಕರ್‌ ಮತ್ತು ಸಮಾಜವಾದಿ ಪಕ್ಷದ ಫಹಾದ್‌ ಅಹಮದ್‌ ವಿವಾಹ ಭಿನ್ನವಾಗಿತ್ತು. ಸರಳವಾಗಿ ರಿಜಿಸ್ಟರ್‌ ಮ್ಯಾರೇಜ್‌ ಆಗಿದ್ದರು. ಇದರ ಜೊತೆಗೆ ಇವರ ವಿವಾಹ ಆಮಂತ್ರಣ ಪತ್ರಿಕೆ ಹೊರಬಿದ್ದಿದ್ದು ‘ಸ್ವರಾ ಮತ್ತು ಫಹಾದ್‌’ ಅವರ ಲವ್‌ಸ್ಟೋರಿಯನ್ನು ವಿನೂತನವಾಗಿ ಹೇಳುತ್ತಿದೆ.

ಮದುವೆಯ ಆಮಂತ್ರಣ ಪತ್ರಿಕೆಯ ವಿನ್ಯಾಸ ಮಾಡಿರುವ ಕಲಾವಿದ ಪ್ರತೀಕ್ ಕುಮಾರ್‌ ತಮ್ಮ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಮೂರು ಪುಟದ ಆಮಂತ್ರಣ ಪತ್ರಿಕೆಯನ್ನು ಹಂಚಿಕೊಂಡಿದ್ದು, ಸ್ವರಾ ಮತ್ತು ಫಹಾದ್ ಅವರ ಪ್ರೇಮಕಥೆಯನ್ನು ಪರಿಚಯಿಸಿದ್ದಾರೆ.

 

View this post on Instagram

 

A post shared by Prateeq Kumar (@prateeq)

ಕೆಂಪು ಲೆಹೆಂಗಾ ಧಿರಿಸಿನಲ್ಲಿ ವಧು ಮತ್ತು ಬೀಜ್ ಶೇರ್ವಾನಿ ಧಿರಿಸಿನಲ್ಲಿ ವರ ಇರುವುದನ್ನು ಈ ಕಾರ್ಡ್‌ನಲ್ಲಿ ನೋಡಬಹುದು. ಪ್ರತಿಭಟನೆ ನಡೆಯುತ್ತಿರುವುದನ್ನು ಈ ಇಬ್ಬರೂ ಕಿಟಕಿಯ ಮೂಲಕ ನೋಡುತ್ತಿರುವ ಕಲಾಕೃತಿ ಇಲ್ಲಿದೆ.

‘ಹಮ್ ಸಬ್ ಏಕ್ ಹೈ’ (ನಾವು ಒಂದು), ‘ಹಮ್ ಕಾಗಜ್ ನಹಿ ದಿಖಾಯೇಂಗೆ’ (‘ನಮ್ಮ ಕಾಗದಗಳನ್ನು ನಾವು ತೋರಿಸುವುದಿಲ್ಲ’ – ಸಿಎಎ ಚಳವಳಿಯ ವೇಳೆ ಹೊಮ್ಮಿದ ಘೋಷಣೆ) ಮತ್ತು ‘ಪ್ರೀತಿಯೇ ಅತಿದೊಡ್ಡ ಕ್ರಾಂತಿ’, ‘ನಾವು ಭಾರತೀಯರು’ ‘ಇನ್‌ಕ್ವಿಲಾಬ್‌ ಜಿಂದಾಬಾದ್‌’, ‘ಜಾತ್ಯತೀತತೆ’, ‘ದ್ವೇಷದ ವಿರುದ್ಧ ಭಾರತ’, ‘ಹಮ್‌ ದೇಖೇಂಗೆ’ (ನಾವು ನೋಡುತ್ತೇವೆ) ಎಂಬ ಘೋಷಣೆಗಳಿರುವ ಫಲಕಗಳನ್ನು ಪ್ರತಿಭಟನೆ ಮಾಡುತ್ತಿರುವ ಜನರು ಪ್ರದರ್ಶಿಸುತ್ತಿರುವುದನ್ನು ಇಲ್ಲಿ ಕಾಣಬಹುದು. ಭಾರತದ ರಾಷ್ಟ್ರಧ್ವಜ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಬಹುತ್ವವನ್ನು ಸಾರುವ ಜನ ಸಮೂಹ ಸೇರಿದಂತೆ ವಿವಿಧ ಚಿತ್ರಣಗಳನ್ನು ಇಲ್ಲಿ ನೋಡಬಹುದು.

ಪೋಸ್ಟ್‌ ಮಾಡಿರುವ ಕಲಾವಿದರು, “ಧೈರ್ಯವಂತ ಮತ್ತು ಅಸಾಧಾರಣ ವ್ಯಕ್ತಿಗಳಾದ ಸ್ವರಾ ಭಾಸ್ಕರ್‌- ಫಹಾದ್ ಅವರ ವಿವಾಹ ಆಮಂತ್ರಣ ರೂಪಿಸಲು ನಮಗೆ ಅವಕಾಶ ಸಿಕ್ಕಿದೆ” ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿರಿ: ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ಮುಂದುವರಿದು, “ಜನರ ಪ್ರತಿಭಟನೆಯ ವೇಳೆ ತಾವಿಬ್ಬರು ಭೇಟಿಯಾಗಿದ್ದು ಹೇಗೆ, ಪರಸ್ಪರ ಇಷ್ಟಪಟ್ಟಿದ್ದು ಹೇಗೆ, ಮುಂಬೈ ಮತ್ತು ಮರೀನ್‌ಡ್ರೈವ್‌ನ ನೆನಪುಗಳು, ಸಿನಿಮಾ ಮೇಲಿನ ಇಬ್ಬರ ಪ್ರೀತಿ ಮತ್ತು ಅವರ ಸುಂದರವಾದ ಬೆಕ್ಕು ಗಾಲಿಬ್‌‌ ಕುರಿತು ಕಲಾಕೃತಿ ರಚಿಸಲು ಈ ಇಬ್ಬರೂ ಆಹ್ವಾನಿಸಿದ್ದರು” ಎಂದು ಬರೆದುಕೊಳ್ಳಲಾಗಿದೆ.

ಇನ್‌ಸ್ಟಾದಲ್ಲಿ ಹಂಚಿಕೊಳ್ಳಲಾಗಿರುವ ಈ ವಿನ್ಯಾಸವನ್ನು ನೋಡಿರುವ ಫೇಜ್‌ನ ಫಾಲೋಯರ್‌ಗಳು ಮನಸೋತಿದ್ದಾರೆ. “ಇದು ತುಂಬಾ ಅದ್ಭುತವಾಗಿದೆ .. ವಾವ್‌… ನಿರ್ಭೀತ, ಶಕ್ತಿಯುತ… ಪ್ರೀತಿ” ಎಂದೆಲ್ಲ ಕಮೆಂಟ್ ಮಾಡಿದ್ದಾರೆ.

ಕಾಮೆಂಟ್‌ ವಿಭಾಗದಲ್ಲಿ ಮತ್ತೊಬ್ಬರು, “ನೀವು ಅದ್ಭುತ ಕೆಲಸ ಮಾಡಿದ್ದೀರಿ! ತುಂಬಾ ಧನ್ಯವಾದಗಳು” ಎಂದು ಶ್ಲಾಘಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...