Homeಕರ್ನಾಟಕಗಣರಾಜ್ಯೋತ್ಸವ ದಿನದಂದು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್‌ ಮಂದರ್‌ ಮಂಗಳೂರಿಗೆ

ಗಣರಾಜ್ಯೋತ್ಸವ ದಿನದಂದು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್‌ ಮಂದರ್‌ ಮಂಗಳೂರಿಗೆ

‘EWS 10% ಮಹಾವಂಚನೆ’ ಪುಸ್ತಕ ಬಿಡುಗಡೆ ಶನಿವಾರ ಬೆಂಗಳೂರಿನಲ್ಲಿ ನಡೆಯಲಿದೆ

- Advertisement -
- Advertisement -

ನಿವೃತ್ತ ಐಎಎಸ್‌ ಅಧಿಕಾರಿ, ದೇಶದ ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ ಹರ್ಷ್‌ ಮಂದರ್‌ ಅವರು ಗಣರಾಜ್ಯೋತ್ಸವ ದಿನವಾದ ಗುರುವಾರದಂದು ಮಂಗಳೂರಿನಲ್ಲಿ ನಡೆಯುವ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಲಿದ್ದಾರೆ.

ಹಿರಿಯ ಪತ್ರಕರ್ತ ನವೀನ್ ಸೂರಿಂಜೆ ಅವರ ಹೊಸ ಪುಸ್ತಕ ‘ಕುತ್ಲೂರು ಕಥನ’ವನ್ನು ಹರ್ಷ್ ಮಂದರ್‌ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮವು ಮಂಗಳೂರಿನ ನಂತೂರು ಬಳಿಯ ಶಾಂತಿ ಕಿರಣದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, ಹಿರಿಯ ವಕೀಲರಾದ ದಿನೇಶ್‌ ಹೆಗ್ದೆ ಉಳೆಪಾಡಿ ಹಾಗೂ ಪತ್ರಕರ್ತ ವಿಠಲ ಮಲೆಕುಡಿಯ ಅವರು ಆಗಮಿಸಲಿದ್ದಾರೆ. ಅಹರ್ನಿಶಿ ಪ್ರಕಾಶನದ ಅಕ್ಷತಾ ಹುಂಚದಕಟ್ಟೆ ಹಾಗೂ ಪುಸ್ತಕದ ಲೇಖಕ ನವೀನ್ ಸೂರಿಂಜೆ ಕೂಡಾ ಕಾರ್ಯಕ್ರಮದಲ್ಲಿ ಇರಲಿದ್ದಾರೆ.

ಜನವರಿ 28ರ ಶನಿವಾರ ಬೆಂಗಳೂರಿನಲ್ಲಿ,EWS 10% ಮಹಾವಂಚನೆಪುಸ್ತಕ ಬಿಡುಗಡೆ

ದಲಿತ ಹಕ್ಕುಗಳ ಖ್ಯಾತ ಹೋರಾಟಗಾರ ಮಾವಳ್ಳಿ ಶಂಕರ್‌‌, ಚಿಂತಕ ಬಿ. ಶ್ರೀಪಾದ ಭಟ್‌, ಲೇಖಕ ವಿಕಾಸ್ ಆರ್‌. ಮೌರ್ಯ ಅವರು ಸಂಪಾದಿಸಿರುವ ‘EWS 10% ಮಹಾವಂಚನೆ’ ಪುಸ್ತಕ ಬಿಡುಗಡೆ ಜನವರಿ 28ರ ಶನಿವಾರದಂದು ಬೆಂಗಳೂರಿನ ನ್ಯಾಷನಲ್‌ ಕಾಲೇಜಿನ ಎಚ್‌.ಎನ್‌. ಮಲ್ಟಿಮೀಡಿಯಾ ಸಭಾಂಗಣದಲ್ಲಿ ನಡೆಯಲಿದೆ.

ಮಾವಳ್ಳಿ ಶಂಕರ್‌ ಅವರ ಅಧ್ಯಕ್ಷೆತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಉದ್ಘಾಟನೆ ಮತ್ತು ಪುಸ್ತಕ ಬಿಡುಗಡೆಯನ್ನು ಹಿರಿಯ ನ್ಯಾಯವಾದಿಗಳಾದ ಪ್ರೊ. ರವಿವರ್ಮ ಕುಮಾರ್‌ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರೊ. ಬಾಬು ಮ್ಯಾಥ್ಯೂ, ಸಂಶೋಧಕರಾದ ಅಶ್ವಿನಿ ಓಬುಳೇಶ್, ಹಿರಿಯ ಪತ್ರಕರ್ತರಾದ ಡಿ. ಉಮಾಪತಿ ಅವರು ಭಾಗವಹಿಸಲಿದ್ದಾರೆ. ಪ್ರಾಧ್ಯಾಪಕರಾದ ರವಿಕುಮಾರ್‌ ಬಾಗಿ ಅವರು ಕಾರ್ಯಕ್ರಮದ ನಿರ್ವಹಣೆ ನಡೆಸಿಕೊಡಲಿದ್ದಾರೆ.

 

ಇದನ್ನೂ ಓದಿ: ನಜತ್ ಓಝ್ಕಾಯಾನ ಆರು ಪದ್ಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...