Homeಮುಖಪುಟಮಾನವ ಹಕ್ಕು ಹೋರಾಟಗಾರರಾದ ಪ್ರೊ. ಜಿ. ಎನ್. ಸಾಯಿಬಾಬಾ ದೋಷಮುಕ್ತ: ಕೂಡಲೇ ಬಿಡುಗಡೆಗೆ ಕೋರ್ಟ್ ಆದೇಶ

ಮಾನವ ಹಕ್ಕು ಹೋರಾಟಗಾರರಾದ ಪ್ರೊ. ಜಿ. ಎನ್. ಸಾಯಿಬಾಬಾ ದೋಷಮುಕ್ತ: ಕೂಡಲೇ ಬಿಡುಗಡೆಗೆ ಕೋರ್ಟ್ ಆದೇಶ

- Advertisement -
- Advertisement -

ಮಾವೋವಾದಿಗಳೊಂದಿಗೆ ಸಂಬಂಧದ ಆರೋಪದ ಮೇಲೆ ಶಿಕ್ಷೆಗೊಳಗಾಗಿದ್ದ ಮಾನವ ಹಕ್ಕು ಹೋರಾಟಗಾರ ಪ್ರೊ. ಜಿ. ಎನ್. ಸಾಯಿಬಾಬಾ ದೋಷಮುಕ್ತರಾಗಿದ್ದಾರೆ. ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ಅವರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆದೇಶಿಸಿದೆ.

ಶೇ.90 ರಷ್ಟು ದೈಹಿಕ ನ್ಯೂನತೆ ಹೊಂದಿರುವ ಮತ್ತು ಹಲವು ರೋಗಗಳಿಗೆ ತುತ್ತಾಗಿರುವ 47 ವರ್ಷ ಪ್ರಾಯದ ಡಾ. ಜಿ.ಎನ್. ಸಾಯಿಬಾಬಾ ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ 2017ರಲ್ಲಿ ಗಡ್‌ಚಿರೋಲಿ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೊಳಗಾಗಿದ್ದಾರೆ. ಅವರಿಗೆ ಕೊರೊನಾ ವೈರಸ್ ಸಾಂಕ್ರಾಮಿಕ ಕಾಲದಲ್ಲಿಯೂ ಸಹ ಮೆಡಿಕಲ್ ಪೆರೋಲ್ ಸಿಕ್ಕಿರಲಿಲ್ಲ.

2017ರ ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಜಿ.ಎನ್ ಸಾಯಿಬಾಬಾ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ರೋಹಿತ್ ಡಿಯೊ ಮತ್ತು ಅನಿಲ್ ಪನ್ಸಾರೆ ಅವರ ವಿಭಾಗೀಯ ಪೀಠವು ಪುರಸ್ಕರಿಸಿ ಆದೇಶ ನೀಡಿದೆ.

ಪ್ರಕರಣದ ಇತರ ಐವರು ಆರೋಪಿಗಳನ್ನು ಸಹ ಪೀಠ ಖುಲಾಸೆಗೊಳಿಸಿದೆ. ಆದರೆ ಅವರಲ್ಲಿ ಒಬ್ಬರು ಜೈಲಿನಲ್ಲಿಯೇ ಮೃತಪಟ್ಟಿದ್ದರು. ಉಳಿದವರು ಬೇರೆ ಯಾವುದೇ ಪ್ರಕರಣದಲ್ಲಿ ಆರೋಪಿಗಳಾಗಿರದಿದ್ದರೆ ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ಪೀಠವು ಸೂಚಿಸಿದೆ.

ನಾಗ್ಪುರದ ಕೇಂದ್ರ ಕಾರಾಗೃಹದಲ್ಲಿ ಪಾಶ್ವವಾಯು ಪೀಡಿತರಾಗಿ ಗಾಲಿಕುರ್ಚಿಯಲ್ಲೇ ಇರುವ ಸಾಯಿಬಾಬಾರವರು ನಡೆಸಿದ ಧೀರ್ಘ ಕಾನೂನು ಹೋರಾಟಕ್ಕೆ ಕೊನೆಗೂ ಜಯ ಸಂದಿದೆ.

ದಿಲ್ಲಿ ವಿಶ್ವವಿದ್ಯಾಲಯದ ರಾಮ್‌ಲಾಲ್ ಆನಂದ್ ಕಾಲೇಜಿನ ಪ್ರಾಧ್ಯಾಪಕರಾದ 47 ವರ್ಷ ಪ್ರಾಯದ ಡಾ. ಜಿ.ಎನ್. ಸಾಯಿಬಾಬಾ ಅವರು ಆಂಧ್ರಪ್ರದೇಶ ಕರಾವಳಿಯ ಚಿಕ್ಕ ಜಿಲ್ಲೆಯಿಂದ ಬಂದವರು. ನಿತ್ಯ ಜೀವನ ನಡೆಸಲೂ ಕಷ್ಟವಾಗುವ ಚಿಕ್ಕ ಜಮೀನು ಹೊಂದಿದ್ದ ಬಡ ಕುಟುಂಬವೊಂದರಲ್ಲಿ ಅವರು ಜನಿಸಿದ್ದು. ಹೀಗೆ ಜೀವನ ನಡೆಸಲೇ ಕಷ್ಟವಾಗುತ್ತಿರುವಾಗ ಮತ್ತು ಇದ್ದ ಚಿಕ್ಕ ಜಮೀನೂ ಕರಗುತ್ತಿರುವಾಗ ಐದು ವರ್ಷಗಳ ಬಾಲಕನಾಗಿದ್ದ ಸಾಯಿಬಾಬ ಅವರಿಗೆ ಪೋಲಿಯೋಗೆ ತುತ್ತಾಗಿ ಅವರು ಕಾಲುಗಳನ್ನು ಬಳಸಲು ಸಾಧ್ಯವಾಗದಂತಹ ಸ್ಥಿತಿಗೆ ತಲುಪಿದರು.

ಈ ದೈಹಿಕ ಅಡೆತಡೆಗಳ ಹೊರತಾಗಿಯೂ ಅದಮ್ಯ ಚೈತನ್ಯದಿಂದ ಮತ್ತು ಉದಾರ ಮನೋಭಾವದ ಕೆಲವು ಶಿಕ್ಷಕರ ಸಹಾಯದಿಂದ ಅವರೊಂದು ಶಾಲೆಯನ್ನು ಕಂಡುಕೊಂಡರು. ಅಲ್ಲಿ ಅವರ ಮನಸ್ಸು ವಿಕಸಿತಗೊಳ್ಳುತ್ತಾ ಹೋಯಿತು. ಮತ್ತೆ ಪೂರ್ವ ಗೋದಾವರಿಯ ಅಮಲಾಪುರಂ ಜಿಲ್ಲಾ ಪದವಿ ಕಾಲೇಜಿನಲ್ಲಿ ಕಲಿಯುತ್ತಿದ್ದಾಗ ಅವರ ಬುದ್ಧಿಮತ್ತೆ ಮತ್ತಷ್ಟು ವಿಕಸನಗೊಂಡು ಸಾಹಿತ್ಯದ ಕುರಿತು ಅವರಿಗಿದ್ದ ಒಲವು ಅರಳಿತು. ಸಾಹಿತ್ಯ ಅವರ ತೀವ್ರ ಆಸಕ್ತಿಯ ವಿಷಯವಾಗಿತ್ತು.

ತೊಂಬತ್ತರ ದಶಕದ ಆರಂಭದಲ್ಲಿ ತನ್ನ ಕಾಲೇಜು ದಿನಗಳಲ್ಲಿ ವರ್ಷವರ್ಷಗಳಿಂದ ನಡೆದುಕೊಂಡುಬರುತ್ತಿದ್ದ ಸಂಪ್ರದಾಯ ಮತ್ತು ಶೋಷಣೆಯ ಸಾಧನಗಳ ವಿರುದ್ಧ ಜನರು ನಡೆಸುತ್ತಿದ್ದ ಹೋರಾಟದ ವಾತಾವರಣದ ಕುರಿತು ಹೆಚ್ಚುಹೆಚ್ಚು ಅರಿವು ಅವರಿಗೆ ಉಂಟಾಯಿತು. ಕ್ರಾಂತಿಗೀತೆಗಳ ಲಾವಣಿಕಾರ ಜನ ನಾಟ್ಯ ಮಂಡಳಿಯ ಗದ್ದರ್ ಅವರು ಕವಿಗಳು, ಬುದ್ಧಿಜೀವಿಗಳು, ರಾಜಕೀಯ ಕಾರ್ಯಕರ್ತರನ್ನು ಒಳಗೊಂಡು ಸಾವಿರಾರು ಯುವಕರನ್ನು ಪ್ರೇರೇಪಿಸುತ್ತಿದ್ದ ಸಂದರ್ಭದಲ್ಲಿಯೇ ಅವರು ಆಲ್ ಇಂಡಿಯಾ ಪೀಪಲ್ಸ್ ರೆಸಿಸ್ಟೆನ್ಸ್ ಫೋರಂ (ಎಐಪಿಓಆರ್‌ಇ – ಅಖಿಲ ಭಾರತ ಜನಪ್ರತಿರೋಧ ವೇದಿಕೆ) ಸಂಘಟನೆಯನ್ನು ಸೇರಿದರು.

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಕಲಿಯುತ್ತಿದ್ದಾಗಲೇ, 1992ರಲ್ಲಿ ಅವರು ಅದರ ಆಂಧ್ರಪ್ರದೇಶ ರಾಜ್ಯ ಕಾರ್ಯದರ್ಶಿಯಾದರು. 1995ರ ಹೊತ್ತಿಗೆ ಅವರು ಅದರ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅವರು ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಇಂಗ್ಲಿಷ್ ಎಂಡ್ ಫಾರಿನ್ ಲ್ಯಾಂಗ್ವೇಜಸ್ (ಸಿಐಇಎಫ್‌ಎಲ್) (ಈಗ ಇಎಫ್‌ಎಲ್‌ಯು ಎಂದು ಕರೆಯಲ್ಪಡುತ್ತಿದೆ)ನಲ್ಲಿಯೂ ಅಧ್ಯಯನ ಮಾಡುತ್ತಿದ್ದು, ತನ್ನ ಜೀವನ ಸಂಗಾತಿ ಮತ್ತು ಗೆಳೆಯರಾದ ವಸಂತಾ ಮತ್ತು ಮಗಳು ಮಂಜೀರಾ ಅವರನ್ನು ಹೈದರಾಬಾದಿನಲ್ಲಿಯೇ ಬಿಟ್ಟು ದಿಲ್ಲಿಗೆ ಹೋಗಬೇಕಾಯಿತು.

ಡಾ. ಸಾಯಿಬಾಬಾ ಅವರು ಸಾಮ್ರಾಜ್ಯಶಾಹಿ ಜಾಗತೀಕರಣದ ವಿರುದ್ಧ ರಾಷ್ಟ್ರೀಯವಾದಿ ಹೋರಾಟಗಳ ಪರವಾಗಿ ಬರೆಯುತ್ತಾ, ಉಪನ್ಯಾಸಗಳನ್ನು ನೀಡುತ್ತಾ, ಪ್ರತಿಭಟನಾ ಸಭೆಗಳನ್ನು ಆಯೋಜಿಸುತ್ತಾ ಇದ್ದರು. ಅವರು ದಲಿತರು ಮತ್ತು ಆದಿವಾಸಿಗಳ ಸಮಸ್ಯೆಗಳನ್ನು ಮುನ್ನೆಲೆಗೆ ತರುತ್ತಲೇ ಇದ್ದರು. 1997 ಹೊತ್ತಿಗೆ ಅವರು ರಾಷ್ಟ್ರೀಯತೆಯ ಪ್ರಶ್ನೆ ಮತ್ತು ಪ್ರತ್ಯೇಕತೆಯ ಹಕ್ಕು ಸೇರಿದಂತೆ ಜನರ ಸ್ವಾಯತ್ತತೆಯ ಕುರಿತು ಅಂತಾರಾಷ್ಟ್ರೀಯ ಸಮಾವೇಶವೊಂದನ್ನು ಆಯೋಜಿಸಿದರು. ಅವರು ರೈತಾಪಿ ವರ್ಗ, ಕಾರ್ಮಿಕರು ಹಾಗೂ ಇತರ ದಮನಿತ ವರ್ಗಗಳನ್ನು ಜೊತೆಸೇರಿಸಿ, 2001ರಲ್ಲಿ ಫೋರಂ ಎಗೇನ್ಸ್ಟ್ ಇಂಪೀರಿಯಲಿಸ್ಟ್ ಗ್ಲೋಬಲಿಸೈಸೇಶನ್ (ಎಫ್‌ಎಐಜಿ – ಸಾಮ್ರಾಜ್ಯಶಾಹಿ ಜಾಗತೀಕರಣ ವಿರೋಧಿ ವೇದಿಕೆ) ಎಂಬ ಸಂಘಟನೆಯನ್ನು ಕಟ್ಟಲೂ ನೆರವಾದರು.

ಇದನ್ನೂ ಓದಿ; ಕ್ರಾಂತಿಕಾರಿ ರಾಜಕೀಯವನ್ನು ಜೀವನದ ಭಾಗವಾಗಿಸಿಕೊಂಡ ಡಾ.ಜಿ.ಎನ್. ಸಾಯಿಬಾಬಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....