Homeಮುಖಪುಟಮಾನವ ಹಕ್ಕು ಹೋರಾಟಗಾರರಾದ ಪ್ರೊ. ಜಿ. ಎನ್. ಸಾಯಿಬಾಬಾ ದೋಷಮುಕ್ತ: ಕೂಡಲೇ ಬಿಡುಗಡೆಗೆ ಕೋರ್ಟ್ ಆದೇಶ

ಮಾನವ ಹಕ್ಕು ಹೋರಾಟಗಾರರಾದ ಪ್ರೊ. ಜಿ. ಎನ್. ಸಾಯಿಬಾಬಾ ದೋಷಮುಕ್ತ: ಕೂಡಲೇ ಬಿಡುಗಡೆಗೆ ಕೋರ್ಟ್ ಆದೇಶ

- Advertisement -
- Advertisement -

ಮಾವೋವಾದಿಗಳೊಂದಿಗೆ ಸಂಬಂಧದ ಆರೋಪದ ಮೇಲೆ ಶಿಕ್ಷೆಗೊಳಗಾಗಿದ್ದ ಮಾನವ ಹಕ್ಕು ಹೋರಾಟಗಾರ ಪ್ರೊ. ಜಿ. ಎನ್. ಸಾಯಿಬಾಬಾ ದೋಷಮುಕ್ತರಾಗಿದ್ದಾರೆ. ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ಅವರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆದೇಶಿಸಿದೆ.

ಶೇ.90 ರಷ್ಟು ದೈಹಿಕ ನ್ಯೂನತೆ ಹೊಂದಿರುವ ಮತ್ತು ಹಲವು ರೋಗಗಳಿಗೆ ತುತ್ತಾಗಿರುವ 47 ವರ್ಷ ಪ್ರಾಯದ ಡಾ. ಜಿ.ಎನ್. ಸಾಯಿಬಾಬಾ ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ 2017ರಲ್ಲಿ ಗಡ್‌ಚಿರೋಲಿ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೊಳಗಾಗಿದ್ದಾರೆ. ಅವರಿಗೆ ಕೊರೊನಾ ವೈರಸ್ ಸಾಂಕ್ರಾಮಿಕ ಕಾಲದಲ್ಲಿಯೂ ಸಹ ಮೆಡಿಕಲ್ ಪೆರೋಲ್ ಸಿಕ್ಕಿರಲಿಲ್ಲ.

2017ರ ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಜಿ.ಎನ್ ಸಾಯಿಬಾಬಾ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ರೋಹಿತ್ ಡಿಯೊ ಮತ್ತು ಅನಿಲ್ ಪನ್ಸಾರೆ ಅವರ ವಿಭಾಗೀಯ ಪೀಠವು ಪುರಸ್ಕರಿಸಿ ಆದೇಶ ನೀಡಿದೆ.

ಪ್ರಕರಣದ ಇತರ ಐವರು ಆರೋಪಿಗಳನ್ನು ಸಹ ಪೀಠ ಖುಲಾಸೆಗೊಳಿಸಿದೆ. ಆದರೆ ಅವರಲ್ಲಿ ಒಬ್ಬರು ಜೈಲಿನಲ್ಲಿಯೇ ಮೃತಪಟ್ಟಿದ್ದರು. ಉಳಿದವರು ಬೇರೆ ಯಾವುದೇ ಪ್ರಕರಣದಲ್ಲಿ ಆರೋಪಿಗಳಾಗಿರದಿದ್ದರೆ ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ಪೀಠವು ಸೂಚಿಸಿದೆ.

ನಾಗ್ಪುರದ ಕೇಂದ್ರ ಕಾರಾಗೃಹದಲ್ಲಿ ಪಾಶ್ವವಾಯು ಪೀಡಿತರಾಗಿ ಗಾಲಿಕುರ್ಚಿಯಲ್ಲೇ ಇರುವ ಸಾಯಿಬಾಬಾರವರು ನಡೆಸಿದ ಧೀರ್ಘ ಕಾನೂನು ಹೋರಾಟಕ್ಕೆ ಕೊನೆಗೂ ಜಯ ಸಂದಿದೆ.

ದಿಲ್ಲಿ ವಿಶ್ವವಿದ್ಯಾಲಯದ ರಾಮ್‌ಲಾಲ್ ಆನಂದ್ ಕಾಲೇಜಿನ ಪ್ರಾಧ್ಯಾಪಕರಾದ 47 ವರ್ಷ ಪ್ರಾಯದ ಡಾ. ಜಿ.ಎನ್. ಸಾಯಿಬಾಬಾ ಅವರು ಆಂಧ್ರಪ್ರದೇಶ ಕರಾವಳಿಯ ಚಿಕ್ಕ ಜಿಲ್ಲೆಯಿಂದ ಬಂದವರು. ನಿತ್ಯ ಜೀವನ ನಡೆಸಲೂ ಕಷ್ಟವಾಗುವ ಚಿಕ್ಕ ಜಮೀನು ಹೊಂದಿದ್ದ ಬಡ ಕುಟುಂಬವೊಂದರಲ್ಲಿ ಅವರು ಜನಿಸಿದ್ದು. ಹೀಗೆ ಜೀವನ ನಡೆಸಲೇ ಕಷ್ಟವಾಗುತ್ತಿರುವಾಗ ಮತ್ತು ಇದ್ದ ಚಿಕ್ಕ ಜಮೀನೂ ಕರಗುತ್ತಿರುವಾಗ ಐದು ವರ್ಷಗಳ ಬಾಲಕನಾಗಿದ್ದ ಸಾಯಿಬಾಬ ಅವರಿಗೆ ಪೋಲಿಯೋಗೆ ತುತ್ತಾಗಿ ಅವರು ಕಾಲುಗಳನ್ನು ಬಳಸಲು ಸಾಧ್ಯವಾಗದಂತಹ ಸ್ಥಿತಿಗೆ ತಲುಪಿದರು.

ಈ ದೈಹಿಕ ಅಡೆತಡೆಗಳ ಹೊರತಾಗಿಯೂ ಅದಮ್ಯ ಚೈತನ್ಯದಿಂದ ಮತ್ತು ಉದಾರ ಮನೋಭಾವದ ಕೆಲವು ಶಿಕ್ಷಕರ ಸಹಾಯದಿಂದ ಅವರೊಂದು ಶಾಲೆಯನ್ನು ಕಂಡುಕೊಂಡರು. ಅಲ್ಲಿ ಅವರ ಮನಸ್ಸು ವಿಕಸಿತಗೊಳ್ಳುತ್ತಾ ಹೋಯಿತು. ಮತ್ತೆ ಪೂರ್ವ ಗೋದಾವರಿಯ ಅಮಲಾಪುರಂ ಜಿಲ್ಲಾ ಪದವಿ ಕಾಲೇಜಿನಲ್ಲಿ ಕಲಿಯುತ್ತಿದ್ದಾಗ ಅವರ ಬುದ್ಧಿಮತ್ತೆ ಮತ್ತಷ್ಟು ವಿಕಸನಗೊಂಡು ಸಾಹಿತ್ಯದ ಕುರಿತು ಅವರಿಗಿದ್ದ ಒಲವು ಅರಳಿತು. ಸಾಹಿತ್ಯ ಅವರ ತೀವ್ರ ಆಸಕ್ತಿಯ ವಿಷಯವಾಗಿತ್ತು.

ತೊಂಬತ್ತರ ದಶಕದ ಆರಂಭದಲ್ಲಿ ತನ್ನ ಕಾಲೇಜು ದಿನಗಳಲ್ಲಿ ವರ್ಷವರ್ಷಗಳಿಂದ ನಡೆದುಕೊಂಡುಬರುತ್ತಿದ್ದ ಸಂಪ್ರದಾಯ ಮತ್ತು ಶೋಷಣೆಯ ಸಾಧನಗಳ ವಿರುದ್ಧ ಜನರು ನಡೆಸುತ್ತಿದ್ದ ಹೋರಾಟದ ವಾತಾವರಣದ ಕುರಿತು ಹೆಚ್ಚುಹೆಚ್ಚು ಅರಿವು ಅವರಿಗೆ ಉಂಟಾಯಿತು. ಕ್ರಾಂತಿಗೀತೆಗಳ ಲಾವಣಿಕಾರ ಜನ ನಾಟ್ಯ ಮಂಡಳಿಯ ಗದ್ದರ್ ಅವರು ಕವಿಗಳು, ಬುದ್ಧಿಜೀವಿಗಳು, ರಾಜಕೀಯ ಕಾರ್ಯಕರ್ತರನ್ನು ಒಳಗೊಂಡು ಸಾವಿರಾರು ಯುವಕರನ್ನು ಪ್ರೇರೇಪಿಸುತ್ತಿದ್ದ ಸಂದರ್ಭದಲ್ಲಿಯೇ ಅವರು ಆಲ್ ಇಂಡಿಯಾ ಪೀಪಲ್ಸ್ ರೆಸಿಸ್ಟೆನ್ಸ್ ಫೋರಂ (ಎಐಪಿಓಆರ್‌ಇ – ಅಖಿಲ ಭಾರತ ಜನಪ್ರತಿರೋಧ ವೇದಿಕೆ) ಸಂಘಟನೆಯನ್ನು ಸೇರಿದರು.

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಕಲಿಯುತ್ತಿದ್ದಾಗಲೇ, 1992ರಲ್ಲಿ ಅವರು ಅದರ ಆಂಧ್ರಪ್ರದೇಶ ರಾಜ್ಯ ಕಾರ್ಯದರ್ಶಿಯಾದರು. 1995ರ ಹೊತ್ತಿಗೆ ಅವರು ಅದರ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅವರು ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಇಂಗ್ಲಿಷ್ ಎಂಡ್ ಫಾರಿನ್ ಲ್ಯಾಂಗ್ವೇಜಸ್ (ಸಿಐಇಎಫ್‌ಎಲ್) (ಈಗ ಇಎಫ್‌ಎಲ್‌ಯು ಎಂದು ಕರೆಯಲ್ಪಡುತ್ತಿದೆ)ನಲ್ಲಿಯೂ ಅಧ್ಯಯನ ಮಾಡುತ್ತಿದ್ದು, ತನ್ನ ಜೀವನ ಸಂಗಾತಿ ಮತ್ತು ಗೆಳೆಯರಾದ ವಸಂತಾ ಮತ್ತು ಮಗಳು ಮಂಜೀರಾ ಅವರನ್ನು ಹೈದರಾಬಾದಿನಲ್ಲಿಯೇ ಬಿಟ್ಟು ದಿಲ್ಲಿಗೆ ಹೋಗಬೇಕಾಯಿತು.

ಡಾ. ಸಾಯಿಬಾಬಾ ಅವರು ಸಾಮ್ರಾಜ್ಯಶಾಹಿ ಜಾಗತೀಕರಣದ ವಿರುದ್ಧ ರಾಷ್ಟ್ರೀಯವಾದಿ ಹೋರಾಟಗಳ ಪರವಾಗಿ ಬರೆಯುತ್ತಾ, ಉಪನ್ಯಾಸಗಳನ್ನು ನೀಡುತ್ತಾ, ಪ್ರತಿಭಟನಾ ಸಭೆಗಳನ್ನು ಆಯೋಜಿಸುತ್ತಾ ಇದ್ದರು. ಅವರು ದಲಿತರು ಮತ್ತು ಆದಿವಾಸಿಗಳ ಸಮಸ್ಯೆಗಳನ್ನು ಮುನ್ನೆಲೆಗೆ ತರುತ್ತಲೇ ಇದ್ದರು. 1997 ಹೊತ್ತಿಗೆ ಅವರು ರಾಷ್ಟ್ರೀಯತೆಯ ಪ್ರಶ್ನೆ ಮತ್ತು ಪ್ರತ್ಯೇಕತೆಯ ಹಕ್ಕು ಸೇರಿದಂತೆ ಜನರ ಸ್ವಾಯತ್ತತೆಯ ಕುರಿತು ಅಂತಾರಾಷ್ಟ್ರೀಯ ಸಮಾವೇಶವೊಂದನ್ನು ಆಯೋಜಿಸಿದರು. ಅವರು ರೈತಾಪಿ ವರ್ಗ, ಕಾರ್ಮಿಕರು ಹಾಗೂ ಇತರ ದಮನಿತ ವರ್ಗಗಳನ್ನು ಜೊತೆಸೇರಿಸಿ, 2001ರಲ್ಲಿ ಫೋರಂ ಎಗೇನ್ಸ್ಟ್ ಇಂಪೀರಿಯಲಿಸ್ಟ್ ಗ್ಲೋಬಲಿಸೈಸೇಶನ್ (ಎಫ್‌ಎಐಜಿ – ಸಾಮ್ರಾಜ್ಯಶಾಹಿ ಜಾಗತೀಕರಣ ವಿರೋಧಿ ವೇದಿಕೆ) ಎಂಬ ಸಂಘಟನೆಯನ್ನು ಕಟ್ಟಲೂ ನೆರವಾದರು.

ಇದನ್ನೂ ಓದಿ; ಕ್ರಾಂತಿಕಾರಿ ರಾಜಕೀಯವನ್ನು ಜೀವನದ ಭಾಗವಾಗಿಸಿಕೊಂಡ ಡಾ.ಜಿ.ಎನ್. ಸಾಯಿಬಾಬಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...