Homeಮುಖಪುಟಮಾನವ ಹಕ್ಕು ಹೋರಾಟಗಾರರಾದ ಪ್ರೊ. ಜಿ. ಎನ್. ಸಾಯಿಬಾಬಾ ದೋಷಮುಕ್ತ: ಕೂಡಲೇ ಬಿಡುಗಡೆಗೆ ಕೋರ್ಟ್ ಆದೇಶ

ಮಾನವ ಹಕ್ಕು ಹೋರಾಟಗಾರರಾದ ಪ್ರೊ. ಜಿ. ಎನ್. ಸಾಯಿಬಾಬಾ ದೋಷಮುಕ್ತ: ಕೂಡಲೇ ಬಿಡುಗಡೆಗೆ ಕೋರ್ಟ್ ಆದೇಶ

- Advertisement -
- Advertisement -

ಮಾವೋವಾದಿಗಳೊಂದಿಗೆ ಸಂಬಂಧದ ಆರೋಪದ ಮೇಲೆ ಶಿಕ್ಷೆಗೊಳಗಾಗಿದ್ದ ಮಾನವ ಹಕ್ಕು ಹೋರಾಟಗಾರ ಪ್ರೊ. ಜಿ. ಎನ್. ಸಾಯಿಬಾಬಾ ದೋಷಮುಕ್ತರಾಗಿದ್ದಾರೆ. ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ಅವರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆದೇಶಿಸಿದೆ.

ಶೇ.90 ರಷ್ಟು ದೈಹಿಕ ನ್ಯೂನತೆ ಹೊಂದಿರುವ ಮತ್ತು ಹಲವು ರೋಗಗಳಿಗೆ ತುತ್ತಾಗಿರುವ 47 ವರ್ಷ ಪ್ರಾಯದ ಡಾ. ಜಿ.ಎನ್. ಸಾಯಿಬಾಬಾ ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ 2017ರಲ್ಲಿ ಗಡ್‌ಚಿರೋಲಿ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೊಳಗಾಗಿದ್ದಾರೆ. ಅವರಿಗೆ ಕೊರೊನಾ ವೈರಸ್ ಸಾಂಕ್ರಾಮಿಕ ಕಾಲದಲ್ಲಿಯೂ ಸಹ ಮೆಡಿಕಲ್ ಪೆರೋಲ್ ಸಿಕ್ಕಿರಲಿಲ್ಲ.

2017ರ ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಜಿ.ಎನ್ ಸಾಯಿಬಾಬಾ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ರೋಹಿತ್ ಡಿಯೊ ಮತ್ತು ಅನಿಲ್ ಪನ್ಸಾರೆ ಅವರ ವಿಭಾಗೀಯ ಪೀಠವು ಪುರಸ್ಕರಿಸಿ ಆದೇಶ ನೀಡಿದೆ.

ಪ್ರಕರಣದ ಇತರ ಐವರು ಆರೋಪಿಗಳನ್ನು ಸಹ ಪೀಠ ಖುಲಾಸೆಗೊಳಿಸಿದೆ. ಆದರೆ ಅವರಲ್ಲಿ ಒಬ್ಬರು ಜೈಲಿನಲ್ಲಿಯೇ ಮೃತಪಟ್ಟಿದ್ದರು. ಉಳಿದವರು ಬೇರೆ ಯಾವುದೇ ಪ್ರಕರಣದಲ್ಲಿ ಆರೋಪಿಗಳಾಗಿರದಿದ್ದರೆ ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ಪೀಠವು ಸೂಚಿಸಿದೆ.

ನಾಗ್ಪುರದ ಕೇಂದ್ರ ಕಾರಾಗೃಹದಲ್ಲಿ ಪಾಶ್ವವಾಯು ಪೀಡಿತರಾಗಿ ಗಾಲಿಕುರ್ಚಿಯಲ್ಲೇ ಇರುವ ಸಾಯಿಬಾಬಾರವರು ನಡೆಸಿದ ಧೀರ್ಘ ಕಾನೂನು ಹೋರಾಟಕ್ಕೆ ಕೊನೆಗೂ ಜಯ ಸಂದಿದೆ.

ದಿಲ್ಲಿ ವಿಶ್ವವಿದ್ಯಾಲಯದ ರಾಮ್‌ಲಾಲ್ ಆನಂದ್ ಕಾಲೇಜಿನ ಪ್ರಾಧ್ಯಾಪಕರಾದ 47 ವರ್ಷ ಪ್ರಾಯದ ಡಾ. ಜಿ.ಎನ್. ಸಾಯಿಬಾಬಾ ಅವರು ಆಂಧ್ರಪ್ರದೇಶ ಕರಾವಳಿಯ ಚಿಕ್ಕ ಜಿಲ್ಲೆಯಿಂದ ಬಂದವರು. ನಿತ್ಯ ಜೀವನ ನಡೆಸಲೂ ಕಷ್ಟವಾಗುವ ಚಿಕ್ಕ ಜಮೀನು ಹೊಂದಿದ್ದ ಬಡ ಕುಟುಂಬವೊಂದರಲ್ಲಿ ಅವರು ಜನಿಸಿದ್ದು. ಹೀಗೆ ಜೀವನ ನಡೆಸಲೇ ಕಷ್ಟವಾಗುತ್ತಿರುವಾಗ ಮತ್ತು ಇದ್ದ ಚಿಕ್ಕ ಜಮೀನೂ ಕರಗುತ್ತಿರುವಾಗ ಐದು ವರ್ಷಗಳ ಬಾಲಕನಾಗಿದ್ದ ಸಾಯಿಬಾಬ ಅವರಿಗೆ ಪೋಲಿಯೋಗೆ ತುತ್ತಾಗಿ ಅವರು ಕಾಲುಗಳನ್ನು ಬಳಸಲು ಸಾಧ್ಯವಾಗದಂತಹ ಸ್ಥಿತಿಗೆ ತಲುಪಿದರು.

ಈ ದೈಹಿಕ ಅಡೆತಡೆಗಳ ಹೊರತಾಗಿಯೂ ಅದಮ್ಯ ಚೈತನ್ಯದಿಂದ ಮತ್ತು ಉದಾರ ಮನೋಭಾವದ ಕೆಲವು ಶಿಕ್ಷಕರ ಸಹಾಯದಿಂದ ಅವರೊಂದು ಶಾಲೆಯನ್ನು ಕಂಡುಕೊಂಡರು. ಅಲ್ಲಿ ಅವರ ಮನಸ್ಸು ವಿಕಸಿತಗೊಳ್ಳುತ್ತಾ ಹೋಯಿತು. ಮತ್ತೆ ಪೂರ್ವ ಗೋದಾವರಿಯ ಅಮಲಾಪುರಂ ಜಿಲ್ಲಾ ಪದವಿ ಕಾಲೇಜಿನಲ್ಲಿ ಕಲಿಯುತ್ತಿದ್ದಾಗ ಅವರ ಬುದ್ಧಿಮತ್ತೆ ಮತ್ತಷ್ಟು ವಿಕಸನಗೊಂಡು ಸಾಹಿತ್ಯದ ಕುರಿತು ಅವರಿಗಿದ್ದ ಒಲವು ಅರಳಿತು. ಸಾಹಿತ್ಯ ಅವರ ತೀವ್ರ ಆಸಕ್ತಿಯ ವಿಷಯವಾಗಿತ್ತು.

ತೊಂಬತ್ತರ ದಶಕದ ಆರಂಭದಲ್ಲಿ ತನ್ನ ಕಾಲೇಜು ದಿನಗಳಲ್ಲಿ ವರ್ಷವರ್ಷಗಳಿಂದ ನಡೆದುಕೊಂಡುಬರುತ್ತಿದ್ದ ಸಂಪ್ರದಾಯ ಮತ್ತು ಶೋಷಣೆಯ ಸಾಧನಗಳ ವಿರುದ್ಧ ಜನರು ನಡೆಸುತ್ತಿದ್ದ ಹೋರಾಟದ ವಾತಾವರಣದ ಕುರಿತು ಹೆಚ್ಚುಹೆಚ್ಚು ಅರಿವು ಅವರಿಗೆ ಉಂಟಾಯಿತು. ಕ್ರಾಂತಿಗೀತೆಗಳ ಲಾವಣಿಕಾರ ಜನ ನಾಟ್ಯ ಮಂಡಳಿಯ ಗದ್ದರ್ ಅವರು ಕವಿಗಳು, ಬುದ್ಧಿಜೀವಿಗಳು, ರಾಜಕೀಯ ಕಾರ್ಯಕರ್ತರನ್ನು ಒಳಗೊಂಡು ಸಾವಿರಾರು ಯುವಕರನ್ನು ಪ್ರೇರೇಪಿಸುತ್ತಿದ್ದ ಸಂದರ್ಭದಲ್ಲಿಯೇ ಅವರು ಆಲ್ ಇಂಡಿಯಾ ಪೀಪಲ್ಸ್ ರೆಸಿಸ್ಟೆನ್ಸ್ ಫೋರಂ (ಎಐಪಿಓಆರ್‌ಇ – ಅಖಿಲ ಭಾರತ ಜನಪ್ರತಿರೋಧ ವೇದಿಕೆ) ಸಂಘಟನೆಯನ್ನು ಸೇರಿದರು.

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಕಲಿಯುತ್ತಿದ್ದಾಗಲೇ, 1992ರಲ್ಲಿ ಅವರು ಅದರ ಆಂಧ್ರಪ್ರದೇಶ ರಾಜ್ಯ ಕಾರ್ಯದರ್ಶಿಯಾದರು. 1995ರ ಹೊತ್ತಿಗೆ ಅವರು ಅದರ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅವರು ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಇಂಗ್ಲಿಷ್ ಎಂಡ್ ಫಾರಿನ್ ಲ್ಯಾಂಗ್ವೇಜಸ್ (ಸಿಐಇಎಫ್‌ಎಲ್) (ಈಗ ಇಎಫ್‌ಎಲ್‌ಯು ಎಂದು ಕರೆಯಲ್ಪಡುತ್ತಿದೆ)ನಲ್ಲಿಯೂ ಅಧ್ಯಯನ ಮಾಡುತ್ತಿದ್ದು, ತನ್ನ ಜೀವನ ಸಂಗಾತಿ ಮತ್ತು ಗೆಳೆಯರಾದ ವಸಂತಾ ಮತ್ತು ಮಗಳು ಮಂಜೀರಾ ಅವರನ್ನು ಹೈದರಾಬಾದಿನಲ್ಲಿಯೇ ಬಿಟ್ಟು ದಿಲ್ಲಿಗೆ ಹೋಗಬೇಕಾಯಿತು.

ಡಾ. ಸಾಯಿಬಾಬಾ ಅವರು ಸಾಮ್ರಾಜ್ಯಶಾಹಿ ಜಾಗತೀಕರಣದ ವಿರುದ್ಧ ರಾಷ್ಟ್ರೀಯವಾದಿ ಹೋರಾಟಗಳ ಪರವಾಗಿ ಬರೆಯುತ್ತಾ, ಉಪನ್ಯಾಸಗಳನ್ನು ನೀಡುತ್ತಾ, ಪ್ರತಿಭಟನಾ ಸಭೆಗಳನ್ನು ಆಯೋಜಿಸುತ್ತಾ ಇದ್ದರು. ಅವರು ದಲಿತರು ಮತ್ತು ಆದಿವಾಸಿಗಳ ಸಮಸ್ಯೆಗಳನ್ನು ಮುನ್ನೆಲೆಗೆ ತರುತ್ತಲೇ ಇದ್ದರು. 1997 ಹೊತ್ತಿಗೆ ಅವರು ರಾಷ್ಟ್ರೀಯತೆಯ ಪ್ರಶ್ನೆ ಮತ್ತು ಪ್ರತ್ಯೇಕತೆಯ ಹಕ್ಕು ಸೇರಿದಂತೆ ಜನರ ಸ್ವಾಯತ್ತತೆಯ ಕುರಿತು ಅಂತಾರಾಷ್ಟ್ರೀಯ ಸಮಾವೇಶವೊಂದನ್ನು ಆಯೋಜಿಸಿದರು. ಅವರು ರೈತಾಪಿ ವರ್ಗ, ಕಾರ್ಮಿಕರು ಹಾಗೂ ಇತರ ದಮನಿತ ವರ್ಗಗಳನ್ನು ಜೊತೆಸೇರಿಸಿ, 2001ರಲ್ಲಿ ಫೋರಂ ಎಗೇನ್ಸ್ಟ್ ಇಂಪೀರಿಯಲಿಸ್ಟ್ ಗ್ಲೋಬಲಿಸೈಸೇಶನ್ (ಎಫ್‌ಎಐಜಿ – ಸಾಮ್ರಾಜ್ಯಶಾಹಿ ಜಾಗತೀಕರಣ ವಿರೋಧಿ ವೇದಿಕೆ) ಎಂಬ ಸಂಘಟನೆಯನ್ನು ಕಟ್ಟಲೂ ನೆರವಾದರು.

ಇದನ್ನೂ ಓದಿ; ಕ್ರಾಂತಿಕಾರಿ ರಾಜಕೀಯವನ್ನು ಜೀವನದ ಭಾಗವಾಗಿಸಿಕೊಂಡ ಡಾ.ಜಿ.ಎನ್. ಸಾಯಿಬಾಬಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...