Homeಮುಖಪುಟಮಾನವ ಹಕ್ಕು ಹೋರಾಟಗಾರರಾದ ಪ್ರೊ. ಜಿ. ಎನ್. ಸಾಯಿಬಾಬಾ ದೋಷಮುಕ್ತ: ಕೂಡಲೇ ಬಿಡುಗಡೆಗೆ ಕೋರ್ಟ್ ಆದೇಶ

ಮಾನವ ಹಕ್ಕು ಹೋರಾಟಗಾರರಾದ ಪ್ರೊ. ಜಿ. ಎನ್. ಸಾಯಿಬಾಬಾ ದೋಷಮುಕ್ತ: ಕೂಡಲೇ ಬಿಡುಗಡೆಗೆ ಕೋರ್ಟ್ ಆದೇಶ

- Advertisement -
- Advertisement -

ಮಾವೋವಾದಿಗಳೊಂದಿಗೆ ಸಂಬಂಧದ ಆರೋಪದ ಮೇಲೆ ಶಿಕ್ಷೆಗೊಳಗಾಗಿದ್ದ ಮಾನವ ಹಕ್ಕು ಹೋರಾಟಗಾರ ಪ್ರೊ. ಜಿ. ಎನ್. ಸಾಯಿಬಾಬಾ ದೋಷಮುಕ್ತರಾಗಿದ್ದಾರೆ. ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ಅವರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆದೇಶಿಸಿದೆ.

ಶೇ.90 ರಷ್ಟು ದೈಹಿಕ ನ್ಯೂನತೆ ಹೊಂದಿರುವ ಮತ್ತು ಹಲವು ರೋಗಗಳಿಗೆ ತುತ್ತಾಗಿರುವ 47 ವರ್ಷ ಪ್ರಾಯದ ಡಾ. ಜಿ.ಎನ್. ಸಾಯಿಬಾಬಾ ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ 2017ರಲ್ಲಿ ಗಡ್‌ಚಿರೋಲಿ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೊಳಗಾಗಿದ್ದಾರೆ. ಅವರಿಗೆ ಕೊರೊನಾ ವೈರಸ್ ಸಾಂಕ್ರಾಮಿಕ ಕಾಲದಲ್ಲಿಯೂ ಸಹ ಮೆಡಿಕಲ್ ಪೆರೋಲ್ ಸಿಕ್ಕಿರಲಿಲ್ಲ.

2017ರ ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಜಿ.ಎನ್ ಸಾಯಿಬಾಬಾ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ರೋಹಿತ್ ಡಿಯೊ ಮತ್ತು ಅನಿಲ್ ಪನ್ಸಾರೆ ಅವರ ವಿಭಾಗೀಯ ಪೀಠವು ಪುರಸ್ಕರಿಸಿ ಆದೇಶ ನೀಡಿದೆ.

ಪ್ರಕರಣದ ಇತರ ಐವರು ಆರೋಪಿಗಳನ್ನು ಸಹ ಪೀಠ ಖುಲಾಸೆಗೊಳಿಸಿದೆ. ಆದರೆ ಅವರಲ್ಲಿ ಒಬ್ಬರು ಜೈಲಿನಲ್ಲಿಯೇ ಮೃತಪಟ್ಟಿದ್ದರು. ಉಳಿದವರು ಬೇರೆ ಯಾವುದೇ ಪ್ರಕರಣದಲ್ಲಿ ಆರೋಪಿಗಳಾಗಿರದಿದ್ದರೆ ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ಪೀಠವು ಸೂಚಿಸಿದೆ.

ನಾಗ್ಪುರದ ಕೇಂದ್ರ ಕಾರಾಗೃಹದಲ್ಲಿ ಪಾಶ್ವವಾಯು ಪೀಡಿತರಾಗಿ ಗಾಲಿಕುರ್ಚಿಯಲ್ಲೇ ಇರುವ ಸಾಯಿಬಾಬಾರವರು ನಡೆಸಿದ ಧೀರ್ಘ ಕಾನೂನು ಹೋರಾಟಕ್ಕೆ ಕೊನೆಗೂ ಜಯ ಸಂದಿದೆ.

ದಿಲ್ಲಿ ವಿಶ್ವವಿದ್ಯಾಲಯದ ರಾಮ್‌ಲಾಲ್ ಆನಂದ್ ಕಾಲೇಜಿನ ಪ್ರಾಧ್ಯಾಪಕರಾದ 47 ವರ್ಷ ಪ್ರಾಯದ ಡಾ. ಜಿ.ಎನ್. ಸಾಯಿಬಾಬಾ ಅವರು ಆಂಧ್ರಪ್ರದೇಶ ಕರಾವಳಿಯ ಚಿಕ್ಕ ಜಿಲ್ಲೆಯಿಂದ ಬಂದವರು. ನಿತ್ಯ ಜೀವನ ನಡೆಸಲೂ ಕಷ್ಟವಾಗುವ ಚಿಕ್ಕ ಜಮೀನು ಹೊಂದಿದ್ದ ಬಡ ಕುಟುಂಬವೊಂದರಲ್ಲಿ ಅವರು ಜನಿಸಿದ್ದು. ಹೀಗೆ ಜೀವನ ನಡೆಸಲೇ ಕಷ್ಟವಾಗುತ್ತಿರುವಾಗ ಮತ್ತು ಇದ್ದ ಚಿಕ್ಕ ಜಮೀನೂ ಕರಗುತ್ತಿರುವಾಗ ಐದು ವರ್ಷಗಳ ಬಾಲಕನಾಗಿದ್ದ ಸಾಯಿಬಾಬ ಅವರಿಗೆ ಪೋಲಿಯೋಗೆ ತುತ್ತಾಗಿ ಅವರು ಕಾಲುಗಳನ್ನು ಬಳಸಲು ಸಾಧ್ಯವಾಗದಂತಹ ಸ್ಥಿತಿಗೆ ತಲುಪಿದರು.

ಈ ದೈಹಿಕ ಅಡೆತಡೆಗಳ ಹೊರತಾಗಿಯೂ ಅದಮ್ಯ ಚೈತನ್ಯದಿಂದ ಮತ್ತು ಉದಾರ ಮನೋಭಾವದ ಕೆಲವು ಶಿಕ್ಷಕರ ಸಹಾಯದಿಂದ ಅವರೊಂದು ಶಾಲೆಯನ್ನು ಕಂಡುಕೊಂಡರು. ಅಲ್ಲಿ ಅವರ ಮನಸ್ಸು ವಿಕಸಿತಗೊಳ್ಳುತ್ತಾ ಹೋಯಿತು. ಮತ್ತೆ ಪೂರ್ವ ಗೋದಾವರಿಯ ಅಮಲಾಪುರಂ ಜಿಲ್ಲಾ ಪದವಿ ಕಾಲೇಜಿನಲ್ಲಿ ಕಲಿಯುತ್ತಿದ್ದಾಗ ಅವರ ಬುದ್ಧಿಮತ್ತೆ ಮತ್ತಷ್ಟು ವಿಕಸನಗೊಂಡು ಸಾಹಿತ್ಯದ ಕುರಿತು ಅವರಿಗಿದ್ದ ಒಲವು ಅರಳಿತು. ಸಾಹಿತ್ಯ ಅವರ ತೀವ್ರ ಆಸಕ್ತಿಯ ವಿಷಯವಾಗಿತ್ತು.

ತೊಂಬತ್ತರ ದಶಕದ ಆರಂಭದಲ್ಲಿ ತನ್ನ ಕಾಲೇಜು ದಿನಗಳಲ್ಲಿ ವರ್ಷವರ್ಷಗಳಿಂದ ನಡೆದುಕೊಂಡುಬರುತ್ತಿದ್ದ ಸಂಪ್ರದಾಯ ಮತ್ತು ಶೋಷಣೆಯ ಸಾಧನಗಳ ವಿರುದ್ಧ ಜನರು ನಡೆಸುತ್ತಿದ್ದ ಹೋರಾಟದ ವಾತಾವರಣದ ಕುರಿತು ಹೆಚ್ಚುಹೆಚ್ಚು ಅರಿವು ಅವರಿಗೆ ಉಂಟಾಯಿತು. ಕ್ರಾಂತಿಗೀತೆಗಳ ಲಾವಣಿಕಾರ ಜನ ನಾಟ್ಯ ಮಂಡಳಿಯ ಗದ್ದರ್ ಅವರು ಕವಿಗಳು, ಬುದ್ಧಿಜೀವಿಗಳು, ರಾಜಕೀಯ ಕಾರ್ಯಕರ್ತರನ್ನು ಒಳಗೊಂಡು ಸಾವಿರಾರು ಯುವಕರನ್ನು ಪ್ರೇರೇಪಿಸುತ್ತಿದ್ದ ಸಂದರ್ಭದಲ್ಲಿಯೇ ಅವರು ಆಲ್ ಇಂಡಿಯಾ ಪೀಪಲ್ಸ್ ರೆಸಿಸ್ಟೆನ್ಸ್ ಫೋರಂ (ಎಐಪಿಓಆರ್‌ಇ – ಅಖಿಲ ಭಾರತ ಜನಪ್ರತಿರೋಧ ವೇದಿಕೆ) ಸಂಘಟನೆಯನ್ನು ಸೇರಿದರು.

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಕಲಿಯುತ್ತಿದ್ದಾಗಲೇ, 1992ರಲ್ಲಿ ಅವರು ಅದರ ಆಂಧ್ರಪ್ರದೇಶ ರಾಜ್ಯ ಕಾರ್ಯದರ್ಶಿಯಾದರು. 1995ರ ಹೊತ್ತಿಗೆ ಅವರು ಅದರ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅವರು ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಇಂಗ್ಲಿಷ್ ಎಂಡ್ ಫಾರಿನ್ ಲ್ಯಾಂಗ್ವೇಜಸ್ (ಸಿಐಇಎಫ್‌ಎಲ್) (ಈಗ ಇಎಫ್‌ಎಲ್‌ಯು ಎಂದು ಕರೆಯಲ್ಪಡುತ್ತಿದೆ)ನಲ್ಲಿಯೂ ಅಧ್ಯಯನ ಮಾಡುತ್ತಿದ್ದು, ತನ್ನ ಜೀವನ ಸಂಗಾತಿ ಮತ್ತು ಗೆಳೆಯರಾದ ವಸಂತಾ ಮತ್ತು ಮಗಳು ಮಂಜೀರಾ ಅವರನ್ನು ಹೈದರಾಬಾದಿನಲ್ಲಿಯೇ ಬಿಟ್ಟು ದಿಲ್ಲಿಗೆ ಹೋಗಬೇಕಾಯಿತು.

ಡಾ. ಸಾಯಿಬಾಬಾ ಅವರು ಸಾಮ್ರಾಜ್ಯಶಾಹಿ ಜಾಗತೀಕರಣದ ವಿರುದ್ಧ ರಾಷ್ಟ್ರೀಯವಾದಿ ಹೋರಾಟಗಳ ಪರವಾಗಿ ಬರೆಯುತ್ತಾ, ಉಪನ್ಯಾಸಗಳನ್ನು ನೀಡುತ್ತಾ, ಪ್ರತಿಭಟನಾ ಸಭೆಗಳನ್ನು ಆಯೋಜಿಸುತ್ತಾ ಇದ್ದರು. ಅವರು ದಲಿತರು ಮತ್ತು ಆದಿವಾಸಿಗಳ ಸಮಸ್ಯೆಗಳನ್ನು ಮುನ್ನೆಲೆಗೆ ತರುತ್ತಲೇ ಇದ್ದರು. 1997 ಹೊತ್ತಿಗೆ ಅವರು ರಾಷ್ಟ್ರೀಯತೆಯ ಪ್ರಶ್ನೆ ಮತ್ತು ಪ್ರತ್ಯೇಕತೆಯ ಹಕ್ಕು ಸೇರಿದಂತೆ ಜನರ ಸ್ವಾಯತ್ತತೆಯ ಕುರಿತು ಅಂತಾರಾಷ್ಟ್ರೀಯ ಸಮಾವೇಶವೊಂದನ್ನು ಆಯೋಜಿಸಿದರು. ಅವರು ರೈತಾಪಿ ವರ್ಗ, ಕಾರ್ಮಿಕರು ಹಾಗೂ ಇತರ ದಮನಿತ ವರ್ಗಗಳನ್ನು ಜೊತೆಸೇರಿಸಿ, 2001ರಲ್ಲಿ ಫೋರಂ ಎಗೇನ್ಸ್ಟ್ ಇಂಪೀರಿಯಲಿಸ್ಟ್ ಗ್ಲೋಬಲಿಸೈಸೇಶನ್ (ಎಫ್‌ಎಐಜಿ – ಸಾಮ್ರಾಜ್ಯಶಾಹಿ ಜಾಗತೀಕರಣ ವಿರೋಧಿ ವೇದಿಕೆ) ಎಂಬ ಸಂಘಟನೆಯನ್ನು ಕಟ್ಟಲೂ ನೆರವಾದರು.

ಇದನ್ನೂ ಓದಿ; ಕ್ರಾಂತಿಕಾರಿ ರಾಜಕೀಯವನ್ನು ಜೀವನದ ಭಾಗವಾಗಿಸಿಕೊಂಡ ಡಾ.ಜಿ.ಎನ್. ಸಾಯಿಬಾಬಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....