Homeಮುಖಪುಟಹೋರಾಟಗಾರ್ತಿ ‘ಸುಧಾ ಭಾರದ್ವಾಜ್‌’ ಅವರಿಗೆ ಜಾಮೀನು

ಹೋರಾಟಗಾರ್ತಿ ‘ಸುಧಾ ಭಾರದ್ವಾಜ್‌’ ಅವರಿಗೆ ಜಾಮೀನು

- Advertisement -
- Advertisement -

ಬಂಧನವಾಗಿ ಮೂರು ವರ್ಷಗಳು ಕಳೆದರೂ ಪೊಲೀಸರು ಯಾವುದೆ ದೋಷಾರೋಪ ಪಟ್ಟಿಯನ್ನು ಸಲ್ಲಿಸದೇ ಇರುವ ಕಾರಣ ಭೀಮಾ ಕೊರೆಗಾಂವ್‌‌‌ – ಎಲ್ಗರ್‌ ಪರಿಷತ್ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಮಾನವ ಹಕ್ಕುಗಳ ಹೋರಾಟಗಾರ್ತಿ, ವಕೀಲೆ ಸುಧಾ ಭಾರದ್ವಾಜ್ ಅವರಿಗೆ ಬಾಂಬೆ ಹೈಕೋರ್ಟ್ ಬುಧವಾರ ಡೀಫಾಲ್ಟ್ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ತನಿಖೆಗಾಗಿ ಒದಗಿಸಲಾದ ಗರಿಷ್ಠ ಅವಧಿ ಮುಗಿದ ನಂತರವೂ ಪೊಲೀಸರು ಯಾವುದೇ ಆರೋಪ ಪಟ್ಟಿಯನ್ನು ಸಲ್ಲಿಸದಿದ್ದರೆ, ಆರೋಪಿಯು ಜಾಮೀನಿನ ಮೇಲೆ ಬಿಡುಗಡೆಯಾಗಲು ಅರ್ಹನಾಗುತ್ತಾರೆ. ಇನ್ನು ಡೀಫಾಲ್ಟ್‌ ಜಾಮೀನು ಎಂದು ಕರೆಯುತ್ತಾರೆ.

ಇದನ್ನೂ ಓದಿ:ಬಡಜನರಿಗೆ ವಕೀಲೆಯಾಗಿದ್ದಕ್ಕೆ ಜೈಲಿಗೆ ಹೋದ ಐಐಟಿ ಪದವೀಧರೆ ಸುಧಾ ಭಾರದ್ವಾಜ್!

ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಎನ್.ಜೆ. ಜಮಾದಾರ್ ಅವರ ಪೀಠವು ಸುಧಾ ಭಾರದ್ವಾಜ್ ಅವರನ್ನು ನಗರದ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯಕ್ಕೆ ಹಾಜರುಪಡಿಸಿ, ಅವರ ಜಾಮೀನಿಗೆ ವಿಧಿಸಬೇಕಾದ ಷರತ್ತುಗಳನ್ನು ನಿರ್ಧರಿಸುತ್ತದೆ. ಇದರ ನಂತರ ಬೈಕುಲ್ಲಾ ಮಹಿಳಾ ಜೈಲಿನಿಂದ ಅವರನ್ನು ಬಿಡುಗಡೆ ಮಾಡಲಾಗುತ್ತದೆ.

2018 ರಲ್ಲಿ ಅವರನ್ನು ಬಂಧಿಸಿದಾಗಿನಿಂದ ಅವರು ಅಂಡರ್ ಟ್ರಯಲ್ ಆಗಿ ಬಂಧನದಲ್ಲಿದ್ದರು. ನ್ಯಾಯಮೂರ್ತಿ ಶಿಂಧೆ ನೇತೃತ್ವದ ಹೈಕೋರ್ಟ್ ಪೀಠ ಈ ವರ್ಷ ಆಗಸ್ಟ್ 4 ರಂದು ಸುಧಾ ಭಾರದ್ವಾಜ್ ಅವರ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿತ್ತು.

ಆದಾಗ್ಯೂ, ಸುಧಾ ಅವರೊಂದಿಗೆ ಸಹ-ಆರೋಪಿಗಳಾಗಿರುವ ಸುಧೀರ್ ಧವಳೆ ಮತ್ತು ಇತರ ಏಳು ಮಂದಿಯ ಡೀಫಾಲ್ಟ್ ಜಾಮೀನು ಅರ್ಜಿಗಳನ್ನು ಹೈಕೋರ್ಟ್ ತಿರಸ್ಕರಿಸಿದೆ.

ಇದನ್ನೂ ಓದಿ:ಭಾರತದಲ್ಲಿ ಸಂವಿಧಾನ ಮತ್ತು ಪ್ರಜಾತಂತ್ರಗಳು ಉಳಿದರೆ ಮಾತ್ರ ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆ ಸಾಧ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ವಿನಾಕಾರಣ ಮೂರು ವರ್ಷ ಜೈಲಿನಲ್ಲಿ ಇದ್ದ ಸುದಾ ಭಾರದ್ವಾಜ್ ಅವರಿಗೆ ಜಾಮೀನು ದೊರಕಿದ್ದು ಸ್ವಾಗತಾರ್ಹ.

  2. ವಿನಾಕಾರಣ ಈ ರೀತಿಯಲ್ಲಿ ಅಮಾಯಕರನ್ನು ನ್ಯಾಯಕ್ಕಾಗಿ ಹೊರದುವವರನ್ನು ಬಂದಿಸಿ ಅವರ ಮೇಲೆ ಈ ರೀತಿ ಇಲ್ಲದ ಆರೋಪಗಳನ್ನು ಹೊರಿಸಿ, ಅವರನ್ನು ಭಯಪಡಿಸಿ ,ತೊಂದರೆ ಕೊಟ್ಟು ಜೈಲಿಗೆ ಕಳುಹಿಸುವ ಮೂಲಕ ಅಹಂಕಾರ ಇರುವ ಸ್ವಾರ್ಥಿಗಳು ಮಾಡುತ್ತಾರೆ.

  3. ವಿನಾಕಾರಣ ಈ ರೀತಿಯಲ್ಲಿ ಅಮಾಯಕರನ್ನು ನ್ಯಾಯಕ್ಕಾಗಿ ಹೊರದುವವರನ್ನು ಬಂದಿಸಿ ಅವರ ಮೇಲೆ ಈ ರೀತಿ ಇಲ್ಲದ ಆರೋಪಗಳನ್ನು ಹೊರಿಸಿ, ಅವರನ್ನು ಭಯಪಡಿಸಿ ,ತೊಂದರೆ ಕೊಟ್ಟು ಜೈಲಿಗೆ ಕಳುಹಿಸುವ ಮೂಲಕ ಅಹಂಕಾರ ಇರುವ ಸ್ವಾರ್ಥಿಗಳು ಮಾಡುತ್ತಾರೆ.

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...