Homeಮುಖಪುಟಮಾನವ ಹಕ್ಕುಗಳ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಮಾನವ ಹಕ್ಕುಗಳ ಆಯೋಗ: ತೀವ್ರ ಖಂಡನೆ

ಮಾನವ ಹಕ್ಕುಗಳ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಮಾನವ ಹಕ್ಕುಗಳ ಆಯೋಗ: ತೀವ್ರ ಖಂಡನೆ

NHRCಯು ಭಯೋತ್ಪಾದನೆ ಮತ್ತು ನಕ್ಸಲಿಸಂನಂತಹ ದುಷ್ಟರ ವಿರುದ್ಧ ಹೋರಾಡಲು ಮಾನವ ಹಕ್ಕುಗಳು ತಡೆಗೋಡೆಯಾಗಿವೆಯೇ? ಎಂಬ ವಿಷಯದ ಕುರಿತು ಚರ್ಚಾಸ್ಪರ್ಧೆ ಹಮ್ಮಿಕೊಂಡಿದೆ.

- Advertisement -
- Advertisement -

ಕಳೆದ ವರ್ಷ ಸಾರ್ವಜನಿಕ ವೇದಿಕೆಯೊಂದರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿದ್ದ ಅರುಣ್ ಮಿಶ್ರಾರವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಅತಿಯಾಗಿ ಹೊಗಳಿ ತೀವ್ರ ಟೀಕೆಗೆ ಗುರಿಯಾಗಿದ್ದು ನಿಮಗೆಲ್ಲ ನೆನಪಿರಬಹುದು. ಅದೇ ಅರುಣ್ ಮಿಶ್ರಾರವರು ಸುಪ್ರೀಂ ಕೋರ್ಟ್ ನ್ಯಾಯಾಧೀಶ ಸ್ಥಾನದಿಂದ ನಿವೃತ್ತರಾದ ಕೂಡಲೇ ಅವರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರನ್ನಾಗಿ ಮೋದಿ ಸರ್ಕಾರ ನೇಮಿಸಿತ್ತು. ಅವರೀಗ ಮಾನವ ಹಕ್ಕುಗಳ ವಿರುದ್ಧವಾಗಿರುವ ಕಾರ್ಯಕ್ರಮವೊಂದನ್ನು ಆಯೋಜಿಸಿ ಮತ್ತೆ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

ಇಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು “ಭಯೋತ್ಪಾದನೆ ಮತ್ತು ನಕ್ಸಲಿಸಂನಂತಹ ದುಷ್ಟರ ವಿರುದ್ಧ ಹೋರಾಡಲು ಮಾನವ ಹಕ್ಕುಗಳು ತಡೆಗೋಡೆಯಾಗಿವೆಯೇ? ಎಂಬ ವಿಷಯದ ಕುರಿತು ಚರ್ಚಾಸ್ಪರ್ಧೆಯನ್ನು ಹಮ್ಮಿಕೊಳ್ಳುವ ಮೂಲಕ ವಿವಾದ ಹುಟ್ಟು ಹಾಕಿದೆ. ಇಂದು ಆಯೋಗದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಈ ಶೀರ್ಷಿಕೆಯನ್ನು ಘೋಷಿಸಿದ ಕೂಡಲೇ ಹಲವಾರು ವಲಯಗಳಿಂದ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ.

ಆರ್‌ಟಿಐ ಕಾರ್ಯಕರ್ತರಾಗಿದ್ದು ಇತ್ತೀಚಿಗೆ ಟಿಎಂಸಿ ಸೇರಿರುವ ಸಾಕೇತ್ ಗೋಖಲೆಯವರು “ನಾವು ಎಷ್ಟು ಕೆಳಮಟ್ಟಕ್ಕೆ ಇಳಿದಿದ್ದೇವೆ. ಭಾರತದ ‘ಮಾನವ ಹಕ್ಕುಗಳನ್ನು ರಕ್ಷಿಸುವ ಸ್ವತಂತ್ರ ಸಂಸ್ಥೆ’ ಎಂದು ಹೇಳಲಾಗುವ ಆಯೋಗವು ‘ಚಿತ್ರಹಿಂಸೆ ಮತ್ತು ಹೆಚ್ಚುವರಿ ನ್ಯಾಯಾಂಗ ಹತ್ಯೆಗಳಿಗೆ ಮಾನವ ಹಕ್ಕುಗಳು ತಡೆಗೋಡೆಯಾಗಿದವೆ’ ಎಂದು ಚರ್ಚಿಸುತ್ತಿದೆ. ನಿಮ್ಮ ಬಗ್ಗೆ ನಾಚಿಕೆಯೆನಿಸುತ್ತಿದೆ. NHRC ನೀವು ಏನೇನೂ ಅಲ್ಲ” ಎಂದು ಕಿಡಿಕಾರಿದ್ದಾರೆ.

ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ ಸಂಸ್ಥೆಯ ಭಾರತದ ಮಾಜಿ ಮುಖ್ಯಸ್ಥರಾಗಿದ್ದ ಆಕಾರ್ ಪಟೇಲ್‌ರವರು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದು, “ಹೌದು ನಾವು ಸಂಪೂರ್ಣವಾಗಿ ಮಾನವ ಹಕ್ಕುಗಳನ್ನು ನಾಶ ಮಾಡಬೇಕು” ಎಂದು ಬರೆದಿದ್ದಾರೆ.

ಮಾನವ ಹಕ್ಕುಗಳು ಮತ್ತು ಘನತೆ ಬಹಳ ಪವಿತ್ರವಾದವು. ಆದರೆ ಭಾರತದಲ್ಲಿ ಪೊಲೀಸ್‌ ಠಾಣೆಗಳಲ್ಲೇ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿವೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಎನ್ ವಿ ರಮಣ ಕಳೆದ ಆಗಸ್ಟ್‌ನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ. ನಕ್ಸಲಿಸಂ, ಭಯೋತ್ಪಾದನೆಯ ಹೆಸರಿನಲ್ಲಿಯೇ ಅತಿ ಹೆಚ್ಚು ಮಾನವ ಹಕ್ಕುಗಳು ಉಲ್ಲಂಘನೆಯಾಗುತ್ತಿವೆ ಎಂದು ದಾಖಲೆಗಳು ಹೇಳುತ್ತವೆ. ಇಂತಹ ಸಂದರ್ಭದಲ್ಲಿ ಮಾನವ ಹಕ್ಕುಗಳನ್ನು ಕಾಪಾಡಲು ವ್ಯಾಪಕವಾಗಿ ಕೆಲಸ ಮಾಡಲೇಂದು ಇರುವ ಸಂಸ್ಥೆಯೊಂದು ಮಾನವ ಹಕ್ಕುಗಳು ತಡೆಗೋಡೆಯಾಗಿವೆ ಎಂದು ಚರ್ಚಾಸ್ಪರ್ಧೆ ಇಟ್ಟಿರುವುದು ದುರಂತ ಎಂದು ಹಲವರು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಪೊಲೀಸ್‌ ಠಾಣೆಗಳಲ್ಲೇ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆ: CJI ರಮಣ ಆತಂಕ


ಆಗಸ್ಟ್‌ನಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು ದೆಹಲಿಯ ವಿಜ್ಞಾನ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭವೊಂದರಲ್ಲಿ ಮಾತನಾಡಿದ ಸಿಜೆಐ ರಮಣರವರು, “ಕಸ್ಟಡಿ ಚಿತ್ರಹಿಂಸೆ ಮತ್ತು ಇತರ ಪೊಲೀಸ್ ದೌರ್ಜನ್ಯಗಳು ನಮ್ಮ ಸಮಾಜದಲ್ಲಿ ಇನ್ನೂ ಚಾಲ್ತಿಯಲ್ಲಿರುವ ಸಮಸ್ಯೆಗಳು. ಇತ್ತೀಚಿನ ವರದಿಗಳ ಪ್ರಕಾರ, ಸೌಲಭ್ಯವುಳ್ಳ ವರ್ಗ ಸಹ ಪೊಲೀಸರ ಥರ್ಡ್ ಗ್ರೇಡ್ ಚಿಕಿತ್ಸೆಯಿಂದ (ಪೊಲೀಸರಿಂದ ಹಲ್ಲೆ, ಕಿರುಕುಳ) ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ಹೇಳಿಕೆ ನೀಡಿ ಮಾನವ ಹಕ್ಕುಗಳ ಉಲ್ಲಂಘನೆ ಬಗ್ಗೆ ಗಮನ ಸೆಳೆದಿದ್ದರು. ಆದರೆ ಅದಕ್ಕೆ ವಿರುದ್ಧವಾಗಿ ಪೊಲೀಸ್ ಮತ್ತು ಸೇನೆಗೆ ಹೆಚ್ಚಿನ ಅಧಿಕಾರ ಸಿಗಬೇಕು, ಮಾನವ ಹಕ್ಕುಗಳ ಬಗ್ಗೆ ಗಮನ ಕೊಡಬಾರದು ಎಂದು NHRC ವಾದಿಸುತ್ತಿದೆ.

NHRC ಯ ಅಧ್ಯಕ್ಷರಾಗಿರುವ ಇದೇ ಅರುಣ್ ಮಿಶ್ರಾರವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿದ್ದಾಗ 2020ರ ಫೆಬ್ರವರಿ 22 ರಂದು ಅಂತಾರಾಷ್ಟ್ರೀಯ ನ್ಯಾಯಾಂಗ ಸಮ್ಮೇಳನದ ಉದ್ಘಾಟನಾ ಸಮಾರಂಭದ ವಂದಾನಾರ್ಪಣೆ ಭಾಷಣದಲ್ಲಿ “ಅಂತರರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಪಡೆದ ದೂರದೃಷ್ಟಿಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಉಸ್ತುವಾರಿ ಅಡಿಯಲ್ಲಿ ಭಾರತವು ಅಂತರರಾಷ್ಟ್ರೀಯ ಸಮುದಾಯದ ಜವಾಬ್ದಾರಿಯುತ ಮತ್ತು ಅತ್ಯಂತ ಸ್ನೇಹಪರ ಸದಸ್ಯ ರಾಷ್ಟ್ರವಾಗಿದೆ. ಮೋದಿ ಜಾಗತಿಕವಾಗಿ ಯೋಚಿಸುವ ಮತ್ತು ಸ್ಥಳೀಯವಾಗಿ ಕಾರ್ಯನಿರ್ವಹಿಸುವ ಬಹುಮುಖ ಪ್ರತಿಭೆ” ಎಂದು ಬಣ್ಣಿಸಿದ್ದರು.

ಆಗ ಇಂತಹ ಹೇಳಿಕೆಗಳು ನ್ಯಾಯಾಂಗದ ಸ್ವಾತಂತ್ರ್ಯದ ಬಗ್ಗೆ ತಪ್ಪು ಅಭಿಪ್ರಾಯಗಳು ಮೂಡುವಂತಾಗಲು ಕಾರಣವಾಗುತ್ತವೆ ಎಂದು ಹಲವರು ವಿರೋಧ ವ್ಯಕ್ತಪಡಿಸಿದ್ದರು. ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಈ ಹೇಳಿಕೆಯ ವಿರುದ್ಧ ನಿರ್ಣಯ ಅಂಗೀಕರಿಸಿತ್ತು.


ಇದನ್ನೂ ಓದಿ: ಪ್ರಧಾನಿ ಮೋದಿ ಹೊಗಳಿದ ನ್ಯಾಯಮೂರ್ತಿ ಅರುಣ್ ಮಿಶ್ರಾ ವರ್ತನೆಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​ಖಂಡನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...