Homeಮುಖಪುಟಮಾನವ ಹಕ್ಕುಗಳ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಮಾನವ ಹಕ್ಕುಗಳ ಆಯೋಗ: ತೀವ್ರ ಖಂಡನೆ

ಮಾನವ ಹಕ್ಕುಗಳ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಮಾನವ ಹಕ್ಕುಗಳ ಆಯೋಗ: ತೀವ್ರ ಖಂಡನೆ

NHRCಯು ಭಯೋತ್ಪಾದನೆ ಮತ್ತು ನಕ್ಸಲಿಸಂನಂತಹ ದುಷ್ಟರ ವಿರುದ್ಧ ಹೋರಾಡಲು ಮಾನವ ಹಕ್ಕುಗಳು ತಡೆಗೋಡೆಯಾಗಿವೆಯೇ? ಎಂಬ ವಿಷಯದ ಕುರಿತು ಚರ್ಚಾಸ್ಪರ್ಧೆ ಹಮ್ಮಿಕೊಂಡಿದೆ.

- Advertisement -
- Advertisement -

ಕಳೆದ ವರ್ಷ ಸಾರ್ವಜನಿಕ ವೇದಿಕೆಯೊಂದರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿದ್ದ ಅರುಣ್ ಮಿಶ್ರಾರವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಅತಿಯಾಗಿ ಹೊಗಳಿ ತೀವ್ರ ಟೀಕೆಗೆ ಗುರಿಯಾಗಿದ್ದು ನಿಮಗೆಲ್ಲ ನೆನಪಿರಬಹುದು. ಅದೇ ಅರುಣ್ ಮಿಶ್ರಾರವರು ಸುಪ್ರೀಂ ಕೋರ್ಟ್ ನ್ಯಾಯಾಧೀಶ ಸ್ಥಾನದಿಂದ ನಿವೃತ್ತರಾದ ಕೂಡಲೇ ಅವರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರನ್ನಾಗಿ ಮೋದಿ ಸರ್ಕಾರ ನೇಮಿಸಿತ್ತು. ಅವರೀಗ ಮಾನವ ಹಕ್ಕುಗಳ ವಿರುದ್ಧವಾಗಿರುವ ಕಾರ್ಯಕ್ರಮವೊಂದನ್ನು ಆಯೋಜಿಸಿ ಮತ್ತೆ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

ಇಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು “ಭಯೋತ್ಪಾದನೆ ಮತ್ತು ನಕ್ಸಲಿಸಂನಂತಹ ದುಷ್ಟರ ವಿರುದ್ಧ ಹೋರಾಡಲು ಮಾನವ ಹಕ್ಕುಗಳು ತಡೆಗೋಡೆಯಾಗಿವೆಯೇ? ಎಂಬ ವಿಷಯದ ಕುರಿತು ಚರ್ಚಾಸ್ಪರ್ಧೆಯನ್ನು ಹಮ್ಮಿಕೊಳ್ಳುವ ಮೂಲಕ ವಿವಾದ ಹುಟ್ಟು ಹಾಕಿದೆ. ಇಂದು ಆಯೋಗದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಈ ಶೀರ್ಷಿಕೆಯನ್ನು ಘೋಷಿಸಿದ ಕೂಡಲೇ ಹಲವಾರು ವಲಯಗಳಿಂದ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ.

ಆರ್‌ಟಿಐ ಕಾರ್ಯಕರ್ತರಾಗಿದ್ದು ಇತ್ತೀಚಿಗೆ ಟಿಎಂಸಿ ಸೇರಿರುವ ಸಾಕೇತ್ ಗೋಖಲೆಯವರು “ನಾವು ಎಷ್ಟು ಕೆಳಮಟ್ಟಕ್ಕೆ ಇಳಿದಿದ್ದೇವೆ. ಭಾರತದ ‘ಮಾನವ ಹಕ್ಕುಗಳನ್ನು ರಕ್ಷಿಸುವ ಸ್ವತಂತ್ರ ಸಂಸ್ಥೆ’ ಎಂದು ಹೇಳಲಾಗುವ ಆಯೋಗವು ‘ಚಿತ್ರಹಿಂಸೆ ಮತ್ತು ಹೆಚ್ಚುವರಿ ನ್ಯಾಯಾಂಗ ಹತ್ಯೆಗಳಿಗೆ ಮಾನವ ಹಕ್ಕುಗಳು ತಡೆಗೋಡೆಯಾಗಿದವೆ’ ಎಂದು ಚರ್ಚಿಸುತ್ತಿದೆ. ನಿಮ್ಮ ಬಗ್ಗೆ ನಾಚಿಕೆಯೆನಿಸುತ್ತಿದೆ. NHRC ನೀವು ಏನೇನೂ ಅಲ್ಲ” ಎಂದು ಕಿಡಿಕಾರಿದ್ದಾರೆ.

ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ ಸಂಸ್ಥೆಯ ಭಾರತದ ಮಾಜಿ ಮುಖ್ಯಸ್ಥರಾಗಿದ್ದ ಆಕಾರ್ ಪಟೇಲ್‌ರವರು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದು, “ಹೌದು ನಾವು ಸಂಪೂರ್ಣವಾಗಿ ಮಾನವ ಹಕ್ಕುಗಳನ್ನು ನಾಶ ಮಾಡಬೇಕು” ಎಂದು ಬರೆದಿದ್ದಾರೆ.

ಮಾನವ ಹಕ್ಕುಗಳು ಮತ್ತು ಘನತೆ ಬಹಳ ಪವಿತ್ರವಾದವು. ಆದರೆ ಭಾರತದಲ್ಲಿ ಪೊಲೀಸ್‌ ಠಾಣೆಗಳಲ್ಲೇ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿವೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಎನ್ ವಿ ರಮಣ ಕಳೆದ ಆಗಸ್ಟ್‌ನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ. ನಕ್ಸಲಿಸಂ, ಭಯೋತ್ಪಾದನೆಯ ಹೆಸರಿನಲ್ಲಿಯೇ ಅತಿ ಹೆಚ್ಚು ಮಾನವ ಹಕ್ಕುಗಳು ಉಲ್ಲಂಘನೆಯಾಗುತ್ತಿವೆ ಎಂದು ದಾಖಲೆಗಳು ಹೇಳುತ್ತವೆ. ಇಂತಹ ಸಂದರ್ಭದಲ್ಲಿ ಮಾನವ ಹಕ್ಕುಗಳನ್ನು ಕಾಪಾಡಲು ವ್ಯಾಪಕವಾಗಿ ಕೆಲಸ ಮಾಡಲೇಂದು ಇರುವ ಸಂಸ್ಥೆಯೊಂದು ಮಾನವ ಹಕ್ಕುಗಳು ತಡೆಗೋಡೆಯಾಗಿವೆ ಎಂದು ಚರ್ಚಾಸ್ಪರ್ಧೆ ಇಟ್ಟಿರುವುದು ದುರಂತ ಎಂದು ಹಲವರು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಪೊಲೀಸ್‌ ಠಾಣೆಗಳಲ್ಲೇ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆ: CJI ರಮಣ ಆತಂಕ


ಆಗಸ್ಟ್‌ನಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು ದೆಹಲಿಯ ವಿಜ್ಞಾನ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭವೊಂದರಲ್ಲಿ ಮಾತನಾಡಿದ ಸಿಜೆಐ ರಮಣರವರು, “ಕಸ್ಟಡಿ ಚಿತ್ರಹಿಂಸೆ ಮತ್ತು ಇತರ ಪೊಲೀಸ್ ದೌರ್ಜನ್ಯಗಳು ನಮ್ಮ ಸಮಾಜದಲ್ಲಿ ಇನ್ನೂ ಚಾಲ್ತಿಯಲ್ಲಿರುವ ಸಮಸ್ಯೆಗಳು. ಇತ್ತೀಚಿನ ವರದಿಗಳ ಪ್ರಕಾರ, ಸೌಲಭ್ಯವುಳ್ಳ ವರ್ಗ ಸಹ ಪೊಲೀಸರ ಥರ್ಡ್ ಗ್ರೇಡ್ ಚಿಕಿತ್ಸೆಯಿಂದ (ಪೊಲೀಸರಿಂದ ಹಲ್ಲೆ, ಕಿರುಕುಳ) ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ಹೇಳಿಕೆ ನೀಡಿ ಮಾನವ ಹಕ್ಕುಗಳ ಉಲ್ಲಂಘನೆ ಬಗ್ಗೆ ಗಮನ ಸೆಳೆದಿದ್ದರು. ಆದರೆ ಅದಕ್ಕೆ ವಿರುದ್ಧವಾಗಿ ಪೊಲೀಸ್ ಮತ್ತು ಸೇನೆಗೆ ಹೆಚ್ಚಿನ ಅಧಿಕಾರ ಸಿಗಬೇಕು, ಮಾನವ ಹಕ್ಕುಗಳ ಬಗ್ಗೆ ಗಮನ ಕೊಡಬಾರದು ಎಂದು NHRC ವಾದಿಸುತ್ತಿದೆ.

NHRC ಯ ಅಧ್ಯಕ್ಷರಾಗಿರುವ ಇದೇ ಅರುಣ್ ಮಿಶ್ರಾರವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿದ್ದಾಗ 2020ರ ಫೆಬ್ರವರಿ 22 ರಂದು ಅಂತಾರಾಷ್ಟ್ರೀಯ ನ್ಯಾಯಾಂಗ ಸಮ್ಮೇಳನದ ಉದ್ಘಾಟನಾ ಸಮಾರಂಭದ ವಂದಾನಾರ್ಪಣೆ ಭಾಷಣದಲ್ಲಿ “ಅಂತರರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಪಡೆದ ದೂರದೃಷ್ಟಿಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಉಸ್ತುವಾರಿ ಅಡಿಯಲ್ಲಿ ಭಾರತವು ಅಂತರರಾಷ್ಟ್ರೀಯ ಸಮುದಾಯದ ಜವಾಬ್ದಾರಿಯುತ ಮತ್ತು ಅತ್ಯಂತ ಸ್ನೇಹಪರ ಸದಸ್ಯ ರಾಷ್ಟ್ರವಾಗಿದೆ. ಮೋದಿ ಜಾಗತಿಕವಾಗಿ ಯೋಚಿಸುವ ಮತ್ತು ಸ್ಥಳೀಯವಾಗಿ ಕಾರ್ಯನಿರ್ವಹಿಸುವ ಬಹುಮುಖ ಪ್ರತಿಭೆ” ಎಂದು ಬಣ್ಣಿಸಿದ್ದರು.

ಆಗ ಇಂತಹ ಹೇಳಿಕೆಗಳು ನ್ಯಾಯಾಂಗದ ಸ್ವಾತಂತ್ರ್ಯದ ಬಗ್ಗೆ ತಪ್ಪು ಅಭಿಪ್ರಾಯಗಳು ಮೂಡುವಂತಾಗಲು ಕಾರಣವಾಗುತ್ತವೆ ಎಂದು ಹಲವರು ವಿರೋಧ ವ್ಯಕ್ತಪಡಿಸಿದ್ದರು. ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಈ ಹೇಳಿಕೆಯ ವಿರುದ್ಧ ನಿರ್ಣಯ ಅಂಗೀಕರಿಸಿತ್ತು.


ಇದನ್ನೂ ಓದಿ: ಪ್ರಧಾನಿ ಮೋದಿ ಹೊಗಳಿದ ನ್ಯಾಯಮೂರ್ತಿ ಅರುಣ್ ಮಿಶ್ರಾ ವರ್ತನೆಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​ಖಂಡನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...