Homeಮುಖಪುಟಸ್ಟ್ಯಾನ್‌ ಸ್ವಾಮಿ ನಿಧನಕ್ಕೆ ಕಾರಣರಾದವರನ್ನು ಇತಿಹಾಸ ಕ್ಷಮಿಸುವುದಿಲ್ಲ

ಸ್ಟ್ಯಾನ್‌ ಸ್ವಾಮಿ ನಿಧನಕ್ಕೆ ಕಾರಣರಾದವರನ್ನು ಇತಿಹಾಸ ಕ್ಷಮಿಸುವುದಿಲ್ಲ

ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮತ್ತು ನಾಗರೀಕರಿಗೆ ಸಲ್ಲಬೇಕಾದ ಹೋರಾಟದ ಅವಕಾಶಗಳನ್ನು ಕುಗ್ಗಿಸುವುದು ಭಾರತದ ಪ್ರಜಾಸತ್ತೆಗೆ ಮಾರಕಪ್ರಾಯವಾಗಿದೆ.

- Advertisement -
- Advertisement -

ಭೀಮಾ ಕೊರೆಗಾಂವ್ ಯುದ್ಧ ಭಾರತದ ಇತಿಹಾಸದಲ್ಲಿ ಒಂದು ಮೈಲುಗಲ್ಲಾಗಿದೆ. ಜನವರಿ 01, 1818ರಲ್ಲಿ ಪೇಶ್ವೆ ಬಾಜಿರಾವ್-2 ಮತ್ತು ಈಸ್ಟ್ ಇಂಡಿಯಾ ಕಂಪನಿಯ ಮಹರ್ ಸೇನೆಗಳ ನಡುವೆ ನಡೆದ ಯುದ್ಧದಲ್ಲಿ ಸುಮಾರು 28 ಸಾವಿರ ಸೈನ್ಯಬಲವನ್ನು ಹೊಂದಿದ್ದ ಪ್ರಭುತ್ವವಾದಿ ಪೇಶ್ವೆ ಬಾಜಿರಾವ್ ಸ್ವಾಭಿಮಾನಿ ದಲಿತ ಮಹರ್ ಸೇನೆಯ 800 ವೀರ ಯೋಧರ ಮುಂದೆ ಸೋಲುಂಡಂತಹ ಘಟನೆ ಐತಿಹಾಸಿಕವಾಗಿ ವಿಶೇಷ ಮಹತ್ವ ಹೊಂದಿದೆ. ಮಹಾರಾಷ್ಟ್ರದ ಪುಣೆ ಬಳಿಯ ಕೋರೆಗಾಂವ್ ಎಂಬಲ್ಲಿ ವಿಜಯದ ಸಂಕೇತವಾಗಿ ಯುದ್ಧ ಸ್ಮಾರಕವನ್ನು ಬ್ರಿಟಿಷರು ಅಂದು ನಿರ್ಮಿಸಿದ್ದರು. ಸುಮಾರು 49 ಜನ ವೀರ ಮಹರ್ ಯೋಧರು ಹುತಾತ್ಮರಾಗಿ ಪ್ರಭುತ್ವದ ವಿರುದ್ಧ ತಮ್ಮ ಶೌರ್ಯವನ್ನು ದಾಖಲಿಸಿದ್ದಾರೆ. ಸ್ಮಾರಕದಲ್ಲಿ ಸಿದನಾಯಕ ಸೇರಿದಂತೆ ಸುಮಾರು 22 ವೀರಯೋಧರ ಹೆಸರನ್ನು ಅಭಿಮಾನಪೂರ್ವಕವಾಗಿ ಮಂಡಿಸಲಾಗಿದೆ. ದಲಿತರ ಸಾಮಾಜಿಕ ನ್ಯಾಯಪರ ಹೋರಾಟಕ್ಕೆ ಕೋರೆಗಾಂವ್ ಯುದ್ಧದ ಗೆಲುವು ಸ್ಪೂರ್ತಿಯೆಂದು ಬಾಬಾ ಸಾಹೇಬ್ ಅಂಬೇಡ್ಕರ್ ಬಣ್ಣಿಸಿದ್ದಾರೆ. ಅವರು ಬದುಕಿರುವ ತನಕ ಪ್ರತಿ ವರ್ಷ ಜನವರಿ 01 ರಂದು ಕೋರೆಗಾಂವ್‌ಗೆ ತೆರಳಿ ಸ್ಮಾರಕಕ್ಕೆ ನಮಿಸುತ್ತಿದ್ದರು. ಅಂದಿನಿಂದ ದೇಶದ ಎಲ್ಲೆಡೆ ಸ್ವಾಭಿಮಾನಿ ದಲಿತರು ಕೋರೆಗಾಂವ್ ಗೆಲುವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಅಲ್ಲದೆ ದೇಶದ ಬಹಳಷ್ಟು ಕಡೆ ಕೋರೆಗಾಂವ್ ಯುದ್ಧ ಸ್ಮಾರಕಗಳನ್ನು ಪ್ರೀತಿಪೂರ್ವಕವಾಗಿ ದಲಿತರು ನಿರ್ಮಿಸಿದ್ದಾರೆ. ಐತಿಹಾಸಿಕ ಮೈಸೂರು ನಗರದ ಅಶೋಕಪುರಂನಲ್ಲಿಯೂ ಕೂಡ ಇಂತಹದೇ ಒಂದು ಸ್ಮಾರಕವಿದ್ದು ಪ್ರತಿವರ್ಷ ಜನವರಿ 01ರಂದು ಸಾವಿರಾರು ದಲಿತರು ಕೋರೆಗಾಂವ್ ಗೆಲುವಿನ ರೂವಾರಿಗಳು ಮತ್ತು ಹುತಾತ್ಮರಿಗೆ ನುಡಿನಮನ ಸಲ್ಲಿಸುತ್ತಾರೆ.

ಡಿಸೆಂಬರ್ 31, 2017ರಂದು ಪುಣೆಯಲ್ಲಿ ಭೀಮಾ ಕೋರೆಗಾಂವ್ ಯುದ್ಧದ ಸ್ಮರಣಾರ್ಥವಾಗಿ ಎಲ್ಗಾರ್ ಪರಿಷತ್ ಎಂಬ ಸ್ವಾಭಿಮಾನಿ ದಲಿತರ ವೇದಿಕೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸುಮಾರು 260ಕ್ಕೂ ಹೆಚ್ಚು ಸಂಘಟನೆಗಳು ಭಾಗವಹಿಸಿದ್ದವು. ಲಕ್ಷಾಂತರ ಜನ ಈ ಸಮಾವೇಶದಲ್ಲಿ ಭಾಗವಹಿಸಿದ್ದರು. ಈ ಸಮಾವೇಶದಲ್ಲಿ ಆನಂದ ತೇಲ್‌ತುಂಬ್ಡೆ, ಗೌತಮ್ ನೌಲಖ, ಸ್ಟ್ಯಾನ್‌ಸ್ವಾಮಿ ಮೊದಲಾದ ಸುಮಾರು 15 ಮಂದಿ ಸಮಾನತೆಯ ಹರಿಕಾರರು ಭಾಗವಹಿಸಿ ಬುದ್ಧ, ಫುಲೆ, ಅಂಬೇಡ್ಕರ್, ಪೆರಿಯಾರ್ ಮೊದಲಾದ ಮಹಾತ್ಮರು ಕಂಡ ಪ್ರಬುದ್ಧ ಭಾರತ ಕನಸನ್ನು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನನಸು ಮಾಡಬೇಕೆಂದು ಕರೆ ನೀಡಿದರು. ಇದರಿಂದ ಕುಪಿತಗೊಂಡ ಸಂಘ ಪರಿವಾರಿಗಳು ಕೋರೆಗಾಂವ್ ಯುದ್ಧದ ಐತಿಹಾಸಿಕ ಮಹತ್ವಕ್ಕೆ ಕಳಂಕ ತರಲು ದುರುದ್ದೇಶ ಪೂರ್ವಕವಾಗಿ ಹಿಂಸಾಚಾರ ನಡೆಸಿದರು. ತದನಂತರ ಪ್ರಬಲರು ಮತ್ತು ದಲಿತರ ನಡುವಣ ಸಂಘರ್ಷದಲ್ಲಿ ಅನೇಕ ಜನ ಮುಗ್ಧ ದಲಿತರು ಪ್ರಾಣ ಕಳೆದುಕೊಂಡಿದ್ದರು. ಅಂದು ಕೇಂದ್ರ ಹಾಗೂ ಮಹಾರಾಷ್ಟ್ರಗಳಲ್ಲಿ ಆಡಳಿತ ನಡೆಸುತ್ತಿದ್ದ ಸಂಘ ಪರಿವಾರಿಗಳ ನೇತೃತ್ವದ ಸರ್ಕಾರಗಳು ಬಲಾಢ್ಯರ ಪರವಾಗಿ ನಿಂತು ದಲಿತರನ್ನು ಹೀನಾಯವಾಗಿ ಕಡೆಗಣಿಸಿದರು. ಈ ಘಟನೆ ಅಂತರರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಚರ್ಚೆಗೊಳಗಾಗಿ ಭಾರತವು ಮಾನವ ಹಕ್ಕುಗಳ ಉಲ್ಲಂಘನೆಯ ದೇಶವೆಂಬ ಕಳಂಕ ಹೊಂದಲು ಕಾರಣವಾಯಿತು.

PC : The Print

ಫಾದರ್ ಸ್ಟ್ಯಾನ್‌ಸ್ವಾಮಿ ಆದಿವಾಸಿಗಳ ಮಾನವ ಹಕ್ಕುಗಳ ಅಪ್ರತಿಮ ಹೋರಾಟಗಾರರೆಂದು ಭಾರತದ ಇತಿಹಾಸದಲ್ಲಿ ಗೌರವಿಸಲ್ಪಟ್ಟಿದ್ದಾರೆ. ಆದಿವಾಸಿಗಳ ಭೂಮಿಯ ಹಕ್ಕು, ಶಿಕ್ಷಣ ಹಕ್ಕು, ಆರೋಗ್ಯ ಹಕ್ಕು, ಉದ್ಯೋಗ ಹಕ್ಕು, ಸಾಮಾಜಿಕ ಸುರಕ್ಷತೆ, ಒಳಗೊಳ್ಳುವ ಅಭಿವೃದ್ಧಿ ಮೊದಲಾದ ಮಹತ್ವದ ವಿಷಯಗಳನ್ನು ಕೈಗೊಂಡು ಉತ್ತರ ಭಾರತದಲ್ಲಿ ಇವರು ನಡೆಸಿದ ಹೋರಾಟ ಅಪ್ರತಿಮವಾದುದು. ಇವರು ಬದುಕಿನುದ್ದಕ್ಕೂ ಮಾನವತಾವಾದಿಯಾಗಿ ಆದಿವಾಸಿಗಳ ಹಕ್ಕುಗಳಿಗಾಗಿ ಮಹಾಶ್ವೇತಾದೇವಿಯವರ ಜೊತೆಗೆ ಕೈಜೋಡಿಸಿ ಅಹರ್ನಿಸಿ ದುಡಿದರು. ಇವರ ಬದುಕು, ಹೋರಾಟ ಮತ್ತು ಕೊಡುಗೆಗಳು ತೆರೆದ ಪುಸ್ತಕವೆಂದೇ ನಿರ್ಭಿಡೆಯಿಂದ ಹೇಳಬಹುದು. ಇವರು 2017ರಲ್ಲಿ ಕೋರೆಗಾಂವ್ ಯುದ್ಧದ ಸ್ಮರಣಾರ್ಥ ಎಲ್ಗಾರ್ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ದಲಿತರು, ಆದಿವಾಸಿಗಳು ಮತ್ತು ಶೋಷಿತ ವರ್ಗಗಳಲ್ಲಿ ಜನಜಾಗೃತಿ ಮೂಡಿಸಿದರೇ ಹೊರತಾಗಿ ಯಾವುದೇ ರೀತಿಯ ಹಿಂಸಾಚಾರಕ್ಕೆ ಪ್ರೇರಣೆ ನೀಡಲಿಲ್ಲ. ಆದಿವಾಸಿಗಳು ಇಂದಿಗೂ ಇವರನ್ನು ಮಹಾನ್ ಶಾಂತಿಧೂತ ಮತ್ತು ಮಾನವತಾವಾದಿಯೆಂದು ಗೌರವಿಸುತ್ತಾರೆ.

ಫಾದರ್ ಸ್ಟ್ಯಾನ್‌ಸ್ವಾಮಿ ವಿರುದ್ಧ ಆಗಸ್ಟ್ 22, 2018ರಂದು ಪುಣೆ ಪೊಲೀಸರು ಭಯೋತ್ಪಾದನೆಗೆ ಪ್ರೇರಣೆ ನೀಡಿದರೆಂದು ಎಫ್‌ಐಆರ್ ದಾಖಲಿಸಿದರು. ಅಕ್ಟೋಬರ್ 26, 2018ರಂದು ಮಹಾರಾಷ್ಟ್ರ ಉಚ್ಛನ್ಯಾಯಾಲಯ ಇವರನ್ನು ಬಂಧಿಸಬಾರದೆಂದು ತೀರ್ಪು ನೀಡಿತು. ಅಕ್ಟೋಬರ್ 08, 2020ರಂದು ಭಾರತ ಸರ್ಕಾರದ ಎನ್‌ಐಎ ಬಂಧಿಸಿ ಅವರನ್ನು ತಾಲೋಜ ಕೇಂದ್ರ ಕಾರಾಗೃಹಕ್ಕೆ ಕಳುಹಿಸಿತು. ಅಕ್ಟೋಬರ್ 23, 2020ರಂದು ಎನ್‌ಐಎ ವಿಶೇಷ ನ್ಯಾಯಾಲಯ ಆರೋಗ್ಯ ಕಾರಣದ ಹಿನ್ನೆಲೆಯಲ್ಲಿ ಜಾಮೀನು ನಿರಾಕರಿಸಿತು. ನವೆಂಬರ್ 06, 2020ರಂದು ಅವರು ಮಾನವೀಯ ನೆಲೆಗಟ್ಟಿನಲ್ಲಿ ತನಗೆ ಒಣಹುಲ್ಲಿನ ಹಾಸಿಗೆ ಮತ್ತು ವೈದ್ಯಕೀಯ ಪರಿಕರಗಳನ್ನು ಒದಗಿಸಬೇಕೆಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದರು. ಆದರೆ ನವೆಂಬರ್ 26, 2020ರಂದು ಎನ್‌ಐಎ ತನ್ನ ಬಳಿ ಇಂತಹ ಸೌಲಭ್ಯಗಳಿಲ್ಲವೆಂದು ನಿರಾಕರಿಸಿತು. ಆದಾಗ್ಯೂ ಡಿಸೆಂಬರ್ 04, 2020ರಂದು ಈ ಸೌಲಭ್ಯಗಳು ಪ್ರಜ್ಞಾವಂತರ ಹಸ್ತಕ್ಷೇಪದಿಂದಾಗಿ ಲಭಿಸಿದವು.

ಫಾದರ್ ಸ್ಟ್ಯಾನ್‌ಸ್ವಾಮಿ ಹಲವಾರು ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಮಾರ್ಚ್ 22, 2021ರಂದು ಎನ್‌ಐಎ ನ್ಯಾಯಾಲಯ ಇವರ ಆರೋಗ್ಯ ಕೇಂದ್ರಿತ ಜಾಮೀನು ಮನವಿಯನ್ನು ಸಮರ್ಪಕ ಪರಿಶೀಲನಗೆ ಒಳಪಡಿಸದೇ ತಿರಸ್ಕರಿಸಿತು. ಏಪ್ರಿಲ್ 26, 2021ರಂದು ತಾಲೋಜ ಸೆರೆಮನೆಗೆ ತೆರಳಿದ ನಂತರ ಅವಶ್ಯಕ ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದಾಗಿ ಇವರ ಅನಾರೋಗ್ಯ ಮತ್ತಷ್ಟು ಹೆಚ್ಚಾದ ಕಾರಣ ತಮಗೆ ಜಾಮೀನು ನೀಡಬೇಕೆಂದು ಮುಂಬಯಿ ಉಚ್ಛನ್ಯಾಯಾಲಯಕ್ಕೆ ಮನವಿ ಸಲ್ಲಿಸಿದರು. ಮೇ 21, 2021ರಂದು ಮುಂಬಯಿನ ಜೆಜೆ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಇವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಇವರಿಗೆ ಕಾಲುಗಳು ಸ್ವಾಧೀನವಿಲ್ಲದೆ ನಡುಗುತ್ತವೆ, ಎರಡೂ ಕಿವಿಗಳು ಕೇಳಿಸುವುದಿಲ್ಲ, ದೈಹಿಕವಾಗಿ ಅಶಕ್ತರು, ಆಗಾಗ್ಗೆ ಬೇಧಿ ಉಂಟಾಗುವುದು, ತೀವ್ರ ಬೆನ್ನು ನೋವು ಮೊದಲಾದ ಗಂಭೀರ ಆರೋಗ್ಯ ಸಮಸ್ಯೆಗಳಿರುವುದನ್ನು ವರದಿ ಮಾಡಿತು. ಇವರಿಗೆ ಸೆರೆಮನೆಯಲ್ಲಿ ನಡೆದಾಡಲು ಊರುಗೋಲು, ಸಹಾಯಕರು, ಗಾಲಿಕುರ್ಚಿ ಮೊದಲಾದವುಗಳನ್ನು ಒದಗಿಸಬೇಕೆಂದು ತಿಳಿಸಿತು.

ಮೇ 28, 2021ರಂದು ಮುಂಬಯಿ ಉಚ್ಛನ್ಯಾಯಾಲಯದ ಎಸ್.ಜೆ.ಕಥಾವಲ್ಲ ಮತ್ತು ಎಸ್.ಪಿ.ಥಾವಡೆ ವಿಭಾಗೀಯ ಪೀಠ ಫಾದರ್ ಸ್ಟ್ಯಾನ್‌ಸ್ವಾಮಿಯವರು ದೈಹಿಕವಾಗಿ ತುಂಬಾ ದುರ್ಬಲರು ಮತ್ತು ಕಿವಿಗಳು ಸರಿಯಾಗಿ ಕೇಳಿಸದ ಕಾರಣ ಅವರನ್ನು ಒಂದು ಒಳ್ಳೆಯ ಆಸ್ಪತ್ರೆಗೆ ಸೇರಿಸಬೇಕೆಂದು ಸೂಚಿಸಿತು. ಇವರು ಯಾವುದೋ ಒಂದು ನಾಮ್ ಕೆ ವಾಸ್ತೆ ಆಸ್ಪತ್ರೆಯಲ್ಲಿ ಸಾಯುವುದಕ್ಕಿಂತ ಸೆರೆಮನೆಯಲ್ಲಿ ಸಾಯುವುದೇ ಲೇಸು ಎಂದು ನ್ಯಾಯಾಲಯಕ್ಕೆ ಮಂಡಿಸಿದರು. ಆದಾಗ್ಯೂ ಇವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಉತ್ತಮ ಚಿಕಿತ್ಸೆಗಾಗಿ ಸೇರಿಸಬೇಕೆಂದು ಉಚ್ಛನ್ಯಾಯಾಲಯ ತೀರ್ಮಾನಿಸಿತು. ಮೇ 30, 2021ರಂದು ಇವರು ಕೋವಿಡ್-19 ಸೋಂಕಿಗೆ ಗುರಿಯಾದರು. ಜೂನ್ 17, 2021ರಂದು ಉಚ್ಛನ್ಯಾಯಾಲಯ ಇವರನ್ನು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲೇ ಚಿಕಿತ್ಸೆಗಾಗಿ ಉಳಿಸಬೇಕೆಂಬ ತೀರ್ಪು ನೀಡಿತು. ಜುಲೈ 04, 2021ರಂದು ಇವರಿಗೆ ತೀವ್ರ ಹೃದಯಾಘಾತವಾದ ಕಾರಣ ಇವರನ್ನು ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಸೌಲಭ್ಯದಲ್ಲಿ ಇಡಲಾಯಿತು. ಜುಲೈ 05, 2021ರಂದು ಇವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು. ಈ ಘಟನೆಗಳಿಂದ 84 ವಯಸ್ಸಿನ ವಯೋವೃದ್ಧ ಮತ್ತು ಅಪ್ರತಿಮ ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್‌ಸ್ವಾಮಿ ಜೈಲುವಾಸ, ಅವರು ಜೈಲಿನಲ್ಲಿ ಅನುಭವಿಸಿದ ಯಾತನೆ, ಅವರಿಗೆ ಜಾಮೀನು ನಿರಾಕರಣೆಯಿಂದ ಉಂಟಾದ ಆರೋಗ್ಯ ಸಮಸ್ಯೆ ಮತ್ತು ಅವರು ಲೋಕಕ್ಕೆ ವಿದಾಯ ಹೇಳಿದ ಅಮಾನವೀಯ ಪರಿಸರ ಸ್ಪಷ್ಟವಾಗಿ ತಿಳಿದು ಬರುತ್ತದೆ.

PC : Asia News

ವಿಶ್ವಸಂಸ್ಥೆಯ ಮಾನವಹಕ್ಕುಗಳ ವಿಶೇಷ ಪ್ರತಿನಿಧಿಗಳಾದ ಮೇರಿ ಲಾಲರ್ ಮತ್ತು ಇಮಾನ್ ಗಿಲ್ಮೋರ್ ಎಂಬುವರು ಫಾದರ್ ಸ್ಟ್ಯಾನ್‌ಸ್ವಾಮಿ ಅವರನ್ನು ಭಯೋತ್ಪಾದನೆಯ ಸುಳ್ಳು ಅಪಾದನೆ ಮೇರೆಗೆ ಸ್ಥಾಪಿತ ಹಿತಾಸಕ್ತಿಗಳು ಅಮಾನುಷವಾಗಿ ಸೆರೆಮನೆಗೆ ದಬ್ಬಿದವು ಎಂದು ಸ್ಪಷ್ಟವಾಗಿ ಅಭಿಪ್ರಾಯಪಟ್ಟಿದ್ದಾರೆ. ಭಾರತೀಯ ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅನುಗುಣವಾಗಿ ಮುಕ್ತವಾಗಿ ತಮ್ಮ ಅಭಿಪ್ರಾಯವನ್ನು ಮಂಡಿಸಿ ಇತಿಹಾಸದ ಬಗ್ಗೆ ಜನಜಾಗೃತಿ ಮೂಡಿಸಿದ ವ್ಯಕ್ತಿಗೆ ಇಂತಹ ಸ್ಥಿತಿ ಬರಬಾರದಾಗಿತ್ತು. ಇವರನ್ನು ಅಮಾನುಷವಾಗಿ ನಡೆಸಿಕೊಂಡು ಕೊಂದವರೇ ನಿಜವಾದ ಅರ್ಥದಲ್ಲಿ ಭಯೋತ್ಪಾದಕರು. ಇವರನ್ನು ಇತಿಹಾಸ ಖಂಡಿತ ಕ್ಷಮಿಸುವುದಿಲ್ಲ.

ಫಾದರ್ ಸ್ಟ್ಯಾನ್‌ಸ್ವಾಮಿ ಅಮಾನುಷ ಸಾವಿನ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಮೈಕೆಲ್ ಬ್ಯಾಚೆಲೆಟ್ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಎಲ್ಲ 15 ಮಂದಿ ಪ್ರಗತಿಪರ ಚಿಂತಕರು ಮತ್ತು ಮಾನವ ಹಕ್ಕುಗಳ ಹೋರಾಟಗಾರರನ್ನು ಪೂರ್ವ ವಿಚಾರಣೆಯ ಬಂಧನದಿಂದ ಬಿಡುಗಡೆ ಮಾಡಬೇಕೆಂದು ಭಾರತ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಪ್ರಸ್ತುತ ಸಂದರ್ಭದಲ್ಲಿ ವ್ಯವಸ್ಥೆಯ ಲೋಪದೋಷಗಳು ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಪ್ರವೃತ್ತಿಗಳನ್ನು ವಿಶ್ಲೇಷಿಸುವ ಮತ್ತು ವಿರೋಧಿಸುವ ಪ್ರಜ್ಞಾವಂತರ ವಿರುದ್ಧ ದೇಶದ್ರೋಹ ಕಾಯ್ದೆಯನ್ವಯ ಸುಳ್ಳು ಕೇಸುಗಳನ್ನು ದಾಖಲಿಸಿ ಸೆರೆಮನೆಗೆ ದಬ್ಬುವುದು ಸಾಮಾನ್ಯವಾಗಿದೆ. ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮತ್ತು ನಾಗರೀಕರಿಗೆ ಸಲ್ಲಬೇಕಾದ ಹೋರಾಟದ ಅವಕಾಶಗಳನ್ನು ಕುಗ್ಗಿಸುವುದು ಭಾರತದ ಪ್ರಜಾಸತ್ತೆಗೆ ಮಾರಕಪ್ರಾಯವಾಗಿದೆ. ಇಡೀ ವಿಶ್ವ ಭಾರತದಲ್ಲಿ ಕೋವಿಡ್-19 ಸಂಕಷ್ಟದ ಬೇಜವಾಬ್ದಾರಿಯುತ ನಿರ್ವಹಣೆ, ಲಕ್ಷಾಂತರ ವಲಸೆಗಾರರ ಗೋಳು, ವೈದ್ಯಕೀಯ ಸೌಲಭ್ಯವಿಲ್ಲದೆ ಅಮಾಯಕರ ಸಾವು, ಹಸಿವು ಮತ್ತು ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು, ಹೆಚ್ಚುತ್ತಿರುವ ಬೆಲೆ ಏರಿಕೆ ಮತ್ತು ಶ್ರೀಸಾಮಾನ್ಯರ ಸಂಕಷ್ಟಗಳನ್ನು ಗಂಭೀರವಾಗಿ ಗಮನಿಸುತ್ತಿದೆ. ಮಾನವ ಹಕ್ಕುಗಳಿಗಾಗಿ ಬದುಕಿನುದ್ದಕ್ಕೂ ಹೋರಾಡುವ ಫಾದರ್ ಸ್ಟ್ಯಾನ್‌ಸ್ವಾಮಿ ಅಂಥವರಿಗೆ ಭಾರತದಲ್ಲಿ ಲಭಿಸುತ್ತಿರುವ ಸಾವು-ನೋವು ಭಾರತ ಗಣತಂತ್ರದ ಘನತೆಯನ್ನು ತಗ್ಗಿಸಿದೆ. ಮತ್ತೊಂದು ಅಹಿಂಸಾತ್ಮಕ ಹಾಗೂ ಪ್ರಜಾಸತ್ತಾತ್ಮಕ ಸ್ವಾತಂತ್ರ್ಯ ಸಂಗ್ರಾಮಕ್ಕೆ ಪ್ರಜ್ಞಾವಂತ ಭಾರತೀಯರು ಸಜ್ಜುಗೊಳ್ಳಬೇಕಾಗಿದೆ.

  • ಡಾ.ಬಿ.ಪಿ.ಮಹೇಶ ಚಂದ್ರ ಗುರು

(ಲೇಖಕರು ವಿಶ್ರಾಂತ ಪ್ರಾಧ್ಯಾಪಕರು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಮೈಸೂರು ವಿಶ್ವವಿದ್ಯಾಲಯ. ಅಭಿಪ್ರಾಯಗಳು ಲೇಖಕರವು)


ಇದನ್ನೂ ಓದಿ: ಬಹುಜನ ಭಾರತ; ಸ್ಟ್ಯಾನ್ ಸ್ವಾಮಿಯವರ ಬಲಿ ಪಡೆದದ್ದು ಬಲಪಂಥೀಯ ಸೈದ್ಧಾಂತಿಕ ದ್ವೇಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....