Homeಮುಖಪುಟಅಸ್ಸಾಂನ ಬಂಧನ ಕೇಂದ್ರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ

ಅಸ್ಸಾಂನ ಬಂಧನ ಕೇಂದ್ರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ

- Advertisement -
- Advertisement -

ಭಾರತದ ಅತಿದೊಡ್ಡ ಬಂಧನ ಕೇಂದ್ರ ಗೋಲ್‌ಪಾರಾ ಜಿಲ್ಲೆಯ ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪಗಳು ಕೇಳಿ ಬಂದಿದ್ದು, ಅಕ್ರಮ ವಲಸಿಗರನ್ನು ಕ್ರಿಮಿನಲ್‌ಗಳ ಜೊತೆ ಒಂದೇ ಸೆಲ್‌ನಲ್ಲಿ ಇರಿಸಲಾಗುತ್ತಿದೆ. ಅಸ್ಸಾಂನಲ್ಲಿ ಪೌರತ್ವ ಬಿಕ್ಕಟ್ಟಿನಿಂದಾಗಿ 2010ರಿಂದ ಬಂಧನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಅಸ್ಸಾಂನ ಬಂಧನ ಕೇಂದ್ರಗಳು ಮಾನವೀಯ ಕಾಳಜಿಯ ಬಗ್ಗೆ ಪ್ರಶ್ನೆಗಳನ್ನು ಹೆಚ್ಚಿಸಿವೆ.

ಅಸ್ಸಾಂನಲ್ಲಿನ ಈ ಬಂಧನ ಕೇಂದ್ರಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಬಯಲು ಮಾಡಲು ಸೆಂಟರ್ ಫಾರ್ ನ್ಯೂ ಎಕನಾಮಿಕ್ಸ್ ಸ್ಟಡೀಸ್‌ನ ಆಜಾದ್ ಆವಾಜ್ ತಂಡವು ಪ್ರಾಥಮಿಕ ಸಂದರ್ಶನಗಳನ್ನು ನಡೆಸಿದೆ. ಈ ವೇಳೆ ಈ ಬಂಧನ ಕೇಂದ್ರಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಮತ್ತು ಅಲ್ಲಿ ಹೇಗೆ ವ್ಯಕ್ತಿಗಳ  ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂಬುವುದನ್ನು ಬಹಿರಂಗಪಡಿಸಿದೆ.

1951ರ ನಿರಾಶ್ರಿತರ ಕನ್ವೆನ್ಸನ್‌ ಪ್ರಕಾರ, ಸದಸ್ಯ ರಾಷ್ಟ್ರಗಳು, ವಲಸಿಗರು ಅನುಮತಿಯಿಲ್ಲದೆ ಪ್ರವೇಶಿಸಿದ್ದರೂ ಸಹ ವಲಸಿಗರನ್ನು ಬಂಧಿಸಲು, ಹೊರಹಾಕಲು ಸಾಧ್ಯವಿಲ್ಲ. ಭಾರತವು ಸದಸ್ಯ ರಾಷ್ಟ್ರವಲ್ಲದ ಕಾರಣ ಈ ನಿಯಮಗಳಿಗೆ ಅದು ಅನ್ವಯವಾಗಲ್ಲ. ಆದ್ದರಿಂದ ಅಕ್ರಮ ವಲಸಿಗರ ಪತ್ತೆ, ಬಂಧನ ಮತ್ತು ಗಡೀಪಾರು ಮಾಡುವುದಕ್ಕೆ ನಿರ್ಬಂಧ ಅನ್ವಯವಾಗುವುದಿಲ್ಲ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ವಿಶೇಷ ಪರಿವೀಕ್ಷಕ ಹರ್ಷ್ ಮಂದರ್ ಅವರು ಶಿಬಿರಗಳಲ್ಲಿನ ಭೀಕರ ಪರಿಸ್ಥಿತಿಯನ್ನು ಬಹಿರಂಗಪಡಿಸಿದ ನಂತರ ಬಂಧಿತರು ಎದುರಿಸುತ್ತಿರುವ ಶೋಚನೀಯ ಪರಿಸ್ಥಿತಿಗಳು ಬೆಳಕಿಗೆ ಬಂದವು. ಇದಲ್ಲದೆ ಸುಮಿ ಗೋಸ್ವಾಮಿ ಪ್ರಕರಣವು ಬಂಧನ ಕೇಂದ್ರದಲ್ಲಿನ ಪರಿಸ್ಥಿತಿಗಳನ್ನು ಬಯಲುಗೊಳಿಸಿದೆ.

ಫಾರಿನರ್ಸ್ ಟ್ರಿಬ್ಯೂನಲ್‌ನ ತಾಂತ್ರಿಕ ದೋಷದ ಕಾರಣ ಸುಮಿ ಗೋಸ್ವಾಮಿ ಅವರನ್ನು ಮಾಟಿಯಾ ಬಂಧನ ಕೇಂದ್ರಕ್ಕೆ ಕಳುಹಿಸಲಾಗಿದೆ. ಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿದ್ದರೂ ಆಕೆಯನ್ನು ಮೂರು ದಿನಗಳ ಕಾಲ ಬಂಧನ ಶಿಬಿರದಲ್ಲಿ ಇರಿಸಲಾಗಿದೆ. ನಂತರ ಅವಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಸುಮಿ ಗೋಸ್ವಾಮಿ ಬಂಧನ ಕೇಂದ್ರದಲ್ಲಿನ ತನ್ನ ನೆನಪನ್ನು ವಿವರಿಸುತ್ತಾ, ನಾನು ಏನು ಅನುಭವಿಸಿದೆ ಎಂದು ಯಾರಿಗೂ ಅರ್ಥವಾಗಲು ಸಾಧ್ಯವಿಲ್ಲ. ನನಗೆ ಮಾತ್ರ ಸಾಧ್ಯ. ನೀವು ಬಂಧನ ಶಿಬಿರಕ್ಕೆ ಹೋಗದಿದ್ದರೆ, ಅಲ್ಲಿ ವಾಸಿಸುವುದು ಹೇಗೆಂದು ನಿಮಗೆ ಅರ್ಥವಾಗುತ್ತಿರಲಿಲ್ಲ. ನಾನು ಇದನ್ನು ಅನುಭವಿಸುತ್ತೇನೆ ಎಂದು ನಾನು ಎಂದಿಗೂ ಯೋಚಿಸಲಿಲ್ಲ ಎಂದು ಹೇಳಿದ್ದಾರೆ.

ಅಲ್ಲಿನ ಜೀವನ ಪರಿಸ್ಥಿತಿಗಳ ಬಗ್ಗೆ ಮಾತನಾಡಿದ ಅವರು, ಒಂದು ಸೆಲ್‌ನಲ್ಲಿ ಸುಮಾರು 14 ರಿಂದ 15 ಜನರಿದ್ದರು. ಒಂದು ಅಟ್ಯಾಚ್ಡ್ ಬಾತ್ರೂಮ್ ಇತ್ತು. ನಾನು ಅಲ್ಲಿಗೆ ಹೋದ ಮೊದಲ ದಿನ, ಸ್ನಾನಗೃಹಗಳ ಬಾಗಿಲುಗಳು ಅರ್ಧ ಮಾತ್ರ ನಿರ್ಮಿಸಲ್ಪಟ್ಟಿರುವುದನ್ನು ಗಮನಿಸಿದಾಗ ನನಗೆ ಆಶ್ಚರ್ಯವಾಯಿತು. ಅಲ್ಲಿ ನಿಮ್ಮ ಮುಖವನ್ನು ಹೊರಗಿನಿಂದ ನೋಡಬಹುದು. ಒಬ್ಬ ಅಧಿಕಾರಿಯನ್ನು ಕೇಳಿದಾಗ, ಕೈದಿಗಳು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನಿರ್ಬಂಧಿಸಲು ಆ ರೀತಿಯಲ್ಲಿ ನಿರ್ಮಿಸಲಾಗಿದೆ ಎಂದು ನಾನು ಅರಿತುಕೊಂಡೆ. ಸ್ನಾನಗೃಹದಲ್ಲಿ ದುರ್ವಾಸನೆ ಬರುತ್ತಿತ್ತು. ಅಲ್ಲಿ ವಾಸಿಸುವುದು ಅಸಹನೀಯವಾಗಿದೆ. ನನಗೆ ಸತತ ಎರಡು ರಾತ್ರಿ ನಿದ್ರೆ ಬರಲಿಲ್ಲ. ನಾನು ಇಡೀ ರಾತ್ರಿ ಕುಳಿತಿದ್ದೆ. ಅವರು ನನಗೆ ಒದಗಿಸಿದ ಹಾಸಿಗೆಯಂತಿರುವ ವಸ್ತುಗಳನ್ನು ನಾನು ನನ್ನ ಜೀವನದಲ್ಲಿ ಎಂದೂ ಬಳಕೆ ಮಾಡಿರಲಿಲ್ಲ. ಅಷ್ಟು ಕಳಪೆಯಾಗಿತ್ತು ಎಂದು ಹೇಳಿದ್ದಾರೆ.

UNHRC ಮಾರ್ಗಸೂಚಿಗಳು ರಾಜ್ಯ ಕಾರಾಗೃಹಗಳನ್ನು ವಲಸಿಗರ ಬಂಧನಕ್ಕೆ ಬಳಸಬಾರದು ಎಂದು ಹೇಳುತ್ತದೆ. ಆದರೆ ವಲಸಿಗರನ್ನು ಶಿಕ್ಷೆಗೊಳಗಾದ ಕೈದಿಗಳೊಂದಿಗೆ ಅದೇ ಸೆಲ್‌ಗಳಲ್ಲಿ ಇರಿಸಲಾಗುತ್ತದೆ. ಸುಮಿ ಗೋಸ್ವಾಮಿ ತನ್ನ ಸೆಲ್‌ನಲ್ಲಿದ್ದವಳನ್ನು ಮಾತನಾಡಿಸಿದಾಗ ಆಕೆ ಜಮೀನಿಗಾಗಿ ಸಹೋದರನಿಗೆ ಕೊಲೆ ಮಾಡಿ ಜೈಲಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ. ಮತ್ತೋರ್ವ ಕೈದಿ ಜೊತೆ ಮಾತನಾಡಿದಾಗ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಜೈಲಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ. ನಿಮ್ಮ ಸುತ್ತಲೂ ಅಪರಾಧಿಗಳಿರುವ ಕೋಣೆಯಲ್ಲಿ ನೀವು ಹೇಗೆ ಶಾಂತಿಯುತವಾಗಿ ಮಲಗಬಹುದು? ಯಾರೋ ಬಂದು ನಿಮ್ಮನ್ನು ಕೊಲ್ಲಬಹುದು. ನಮ್ಮನ್ನು ಅಪರಾಧಿಗಳೊಂದಿಗೆ ಏಕೆ ಇರಿಸಲಾಗಿದೆ? ವಲಸಿಗರು ಮಾಡಿದ ಅಪರಾಧವೇನು? ಎಂದು ಸುಮಿ ಗೋಸ್ವಾಮಿ ಪ್ರಶ್ನಿಸಿದ್ದಾರೆ.

ಅಲ್ಲಿ ಒಬ್ಬಾಕೆ ಹತ್ತು ವರ್ಷಗಳಿಂದ ವಾಸ ಮಾಡುತ್ತಿದ್ದಾಳೆ ಎಂದು ಹೇಳಿದಾಗ ನನಗೆ ಆಘಾತವಾಯಿತು. ನಾನು ಅಲ್ಲಿ ಶಾಶ್ವತವಾಗಿ ವಾಸಿಸಬೇಕಾದರೆ ನಾನು ಜೀವಂತವಾಗಿರಲು ಸಾಧ್ಯವೇ ಇಲ್ಲ. ಎಲ್ಲಾ ಬಂಧಿತರು ಕೆಳದರ್ಜೆಯ ಪರಿಸ್ಥಿತಿಗಳಲ್ಲಿ ಬದುಕುತ್ತಿದ್ದಾರೆ. ಲೈಂಗಿಕ ದೌರ್ಜನ್ಯ ಮತ್ತು ಬಲವಂತದ ಗರ್ಭಪಾತ ಸೇರಿದಂತೆ ಮಹಿಳೆಯರು ಇನ್ನೂ ಕೆಟ್ಟ ಪರಿಸ್ಥಿತಿಗಳನ್ನು ಅನುಭವಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸಂಸದರ ಸಾಮೂಹಿಕ ಅಮಾನತ್ತಿನಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...