Homeಮುಖಪುಟಅಸ್ಸಾಂನ ಬಂಧನ ಕೇಂದ್ರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ

ಅಸ್ಸಾಂನ ಬಂಧನ ಕೇಂದ್ರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ

- Advertisement -
- Advertisement -

ಭಾರತದ ಅತಿದೊಡ್ಡ ಬಂಧನ ಕೇಂದ್ರ ಗೋಲ್‌ಪಾರಾ ಜಿಲ್ಲೆಯ ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪಗಳು ಕೇಳಿ ಬಂದಿದ್ದು, ಅಕ್ರಮ ವಲಸಿಗರನ್ನು ಕ್ರಿಮಿನಲ್‌ಗಳ ಜೊತೆ ಒಂದೇ ಸೆಲ್‌ನಲ್ಲಿ ಇರಿಸಲಾಗುತ್ತಿದೆ. ಅಸ್ಸಾಂನಲ್ಲಿ ಪೌರತ್ವ ಬಿಕ್ಕಟ್ಟಿನಿಂದಾಗಿ 2010ರಿಂದ ಬಂಧನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಅಸ್ಸಾಂನ ಬಂಧನ ಕೇಂದ್ರಗಳು ಮಾನವೀಯ ಕಾಳಜಿಯ ಬಗ್ಗೆ ಪ್ರಶ್ನೆಗಳನ್ನು ಹೆಚ್ಚಿಸಿವೆ.

ಅಸ್ಸಾಂನಲ್ಲಿನ ಈ ಬಂಧನ ಕೇಂದ್ರಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಬಯಲು ಮಾಡಲು ಸೆಂಟರ್ ಫಾರ್ ನ್ಯೂ ಎಕನಾಮಿಕ್ಸ್ ಸ್ಟಡೀಸ್‌ನ ಆಜಾದ್ ಆವಾಜ್ ತಂಡವು ಪ್ರಾಥಮಿಕ ಸಂದರ್ಶನಗಳನ್ನು ನಡೆಸಿದೆ. ಈ ವೇಳೆ ಈ ಬಂಧನ ಕೇಂದ್ರಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಮತ್ತು ಅಲ್ಲಿ ಹೇಗೆ ವ್ಯಕ್ತಿಗಳ  ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂಬುವುದನ್ನು ಬಹಿರಂಗಪಡಿಸಿದೆ.

1951ರ ನಿರಾಶ್ರಿತರ ಕನ್ವೆನ್ಸನ್‌ ಪ್ರಕಾರ, ಸದಸ್ಯ ರಾಷ್ಟ್ರಗಳು, ವಲಸಿಗರು ಅನುಮತಿಯಿಲ್ಲದೆ ಪ್ರವೇಶಿಸಿದ್ದರೂ ಸಹ ವಲಸಿಗರನ್ನು ಬಂಧಿಸಲು, ಹೊರಹಾಕಲು ಸಾಧ್ಯವಿಲ್ಲ. ಭಾರತವು ಸದಸ್ಯ ರಾಷ್ಟ್ರವಲ್ಲದ ಕಾರಣ ಈ ನಿಯಮಗಳಿಗೆ ಅದು ಅನ್ವಯವಾಗಲ್ಲ. ಆದ್ದರಿಂದ ಅಕ್ರಮ ವಲಸಿಗರ ಪತ್ತೆ, ಬಂಧನ ಮತ್ತು ಗಡೀಪಾರು ಮಾಡುವುದಕ್ಕೆ ನಿರ್ಬಂಧ ಅನ್ವಯವಾಗುವುದಿಲ್ಲ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ವಿಶೇಷ ಪರಿವೀಕ್ಷಕ ಹರ್ಷ್ ಮಂದರ್ ಅವರು ಶಿಬಿರಗಳಲ್ಲಿನ ಭೀಕರ ಪರಿಸ್ಥಿತಿಯನ್ನು ಬಹಿರಂಗಪಡಿಸಿದ ನಂತರ ಬಂಧಿತರು ಎದುರಿಸುತ್ತಿರುವ ಶೋಚನೀಯ ಪರಿಸ್ಥಿತಿಗಳು ಬೆಳಕಿಗೆ ಬಂದವು. ಇದಲ್ಲದೆ ಸುಮಿ ಗೋಸ್ವಾಮಿ ಪ್ರಕರಣವು ಬಂಧನ ಕೇಂದ್ರದಲ್ಲಿನ ಪರಿಸ್ಥಿತಿಗಳನ್ನು ಬಯಲುಗೊಳಿಸಿದೆ.

ಫಾರಿನರ್ಸ್ ಟ್ರಿಬ್ಯೂನಲ್‌ನ ತಾಂತ್ರಿಕ ದೋಷದ ಕಾರಣ ಸುಮಿ ಗೋಸ್ವಾಮಿ ಅವರನ್ನು ಮಾಟಿಯಾ ಬಂಧನ ಕೇಂದ್ರಕ್ಕೆ ಕಳುಹಿಸಲಾಗಿದೆ. ಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿದ್ದರೂ ಆಕೆಯನ್ನು ಮೂರು ದಿನಗಳ ಕಾಲ ಬಂಧನ ಶಿಬಿರದಲ್ಲಿ ಇರಿಸಲಾಗಿದೆ. ನಂತರ ಅವಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಸುಮಿ ಗೋಸ್ವಾಮಿ ಬಂಧನ ಕೇಂದ್ರದಲ್ಲಿನ ತನ್ನ ನೆನಪನ್ನು ವಿವರಿಸುತ್ತಾ, ನಾನು ಏನು ಅನುಭವಿಸಿದೆ ಎಂದು ಯಾರಿಗೂ ಅರ್ಥವಾಗಲು ಸಾಧ್ಯವಿಲ್ಲ. ನನಗೆ ಮಾತ್ರ ಸಾಧ್ಯ. ನೀವು ಬಂಧನ ಶಿಬಿರಕ್ಕೆ ಹೋಗದಿದ್ದರೆ, ಅಲ್ಲಿ ವಾಸಿಸುವುದು ಹೇಗೆಂದು ನಿಮಗೆ ಅರ್ಥವಾಗುತ್ತಿರಲಿಲ್ಲ. ನಾನು ಇದನ್ನು ಅನುಭವಿಸುತ್ತೇನೆ ಎಂದು ನಾನು ಎಂದಿಗೂ ಯೋಚಿಸಲಿಲ್ಲ ಎಂದು ಹೇಳಿದ್ದಾರೆ.

ಅಲ್ಲಿನ ಜೀವನ ಪರಿಸ್ಥಿತಿಗಳ ಬಗ್ಗೆ ಮಾತನಾಡಿದ ಅವರು, ಒಂದು ಸೆಲ್‌ನಲ್ಲಿ ಸುಮಾರು 14 ರಿಂದ 15 ಜನರಿದ್ದರು. ಒಂದು ಅಟ್ಯಾಚ್ಡ್ ಬಾತ್ರೂಮ್ ಇತ್ತು. ನಾನು ಅಲ್ಲಿಗೆ ಹೋದ ಮೊದಲ ದಿನ, ಸ್ನಾನಗೃಹಗಳ ಬಾಗಿಲುಗಳು ಅರ್ಧ ಮಾತ್ರ ನಿರ್ಮಿಸಲ್ಪಟ್ಟಿರುವುದನ್ನು ಗಮನಿಸಿದಾಗ ನನಗೆ ಆಶ್ಚರ್ಯವಾಯಿತು. ಅಲ್ಲಿ ನಿಮ್ಮ ಮುಖವನ್ನು ಹೊರಗಿನಿಂದ ನೋಡಬಹುದು. ಒಬ್ಬ ಅಧಿಕಾರಿಯನ್ನು ಕೇಳಿದಾಗ, ಕೈದಿಗಳು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನಿರ್ಬಂಧಿಸಲು ಆ ರೀತಿಯಲ್ಲಿ ನಿರ್ಮಿಸಲಾಗಿದೆ ಎಂದು ನಾನು ಅರಿತುಕೊಂಡೆ. ಸ್ನಾನಗೃಹದಲ್ಲಿ ದುರ್ವಾಸನೆ ಬರುತ್ತಿತ್ತು. ಅಲ್ಲಿ ವಾಸಿಸುವುದು ಅಸಹನೀಯವಾಗಿದೆ. ನನಗೆ ಸತತ ಎರಡು ರಾತ್ರಿ ನಿದ್ರೆ ಬರಲಿಲ್ಲ. ನಾನು ಇಡೀ ರಾತ್ರಿ ಕುಳಿತಿದ್ದೆ. ಅವರು ನನಗೆ ಒದಗಿಸಿದ ಹಾಸಿಗೆಯಂತಿರುವ ವಸ್ತುಗಳನ್ನು ನಾನು ನನ್ನ ಜೀವನದಲ್ಲಿ ಎಂದೂ ಬಳಕೆ ಮಾಡಿರಲಿಲ್ಲ. ಅಷ್ಟು ಕಳಪೆಯಾಗಿತ್ತು ಎಂದು ಹೇಳಿದ್ದಾರೆ.

UNHRC ಮಾರ್ಗಸೂಚಿಗಳು ರಾಜ್ಯ ಕಾರಾಗೃಹಗಳನ್ನು ವಲಸಿಗರ ಬಂಧನಕ್ಕೆ ಬಳಸಬಾರದು ಎಂದು ಹೇಳುತ್ತದೆ. ಆದರೆ ವಲಸಿಗರನ್ನು ಶಿಕ್ಷೆಗೊಳಗಾದ ಕೈದಿಗಳೊಂದಿಗೆ ಅದೇ ಸೆಲ್‌ಗಳಲ್ಲಿ ಇರಿಸಲಾಗುತ್ತದೆ. ಸುಮಿ ಗೋಸ್ವಾಮಿ ತನ್ನ ಸೆಲ್‌ನಲ್ಲಿದ್ದವಳನ್ನು ಮಾತನಾಡಿಸಿದಾಗ ಆಕೆ ಜಮೀನಿಗಾಗಿ ಸಹೋದರನಿಗೆ ಕೊಲೆ ಮಾಡಿ ಜೈಲಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ. ಮತ್ತೋರ್ವ ಕೈದಿ ಜೊತೆ ಮಾತನಾಡಿದಾಗ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಜೈಲಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ. ನಿಮ್ಮ ಸುತ್ತಲೂ ಅಪರಾಧಿಗಳಿರುವ ಕೋಣೆಯಲ್ಲಿ ನೀವು ಹೇಗೆ ಶಾಂತಿಯುತವಾಗಿ ಮಲಗಬಹುದು? ಯಾರೋ ಬಂದು ನಿಮ್ಮನ್ನು ಕೊಲ್ಲಬಹುದು. ನಮ್ಮನ್ನು ಅಪರಾಧಿಗಳೊಂದಿಗೆ ಏಕೆ ಇರಿಸಲಾಗಿದೆ? ವಲಸಿಗರು ಮಾಡಿದ ಅಪರಾಧವೇನು? ಎಂದು ಸುಮಿ ಗೋಸ್ವಾಮಿ ಪ್ರಶ್ನಿಸಿದ್ದಾರೆ.

ಅಲ್ಲಿ ಒಬ್ಬಾಕೆ ಹತ್ತು ವರ್ಷಗಳಿಂದ ವಾಸ ಮಾಡುತ್ತಿದ್ದಾಳೆ ಎಂದು ಹೇಳಿದಾಗ ನನಗೆ ಆಘಾತವಾಯಿತು. ನಾನು ಅಲ್ಲಿ ಶಾಶ್ವತವಾಗಿ ವಾಸಿಸಬೇಕಾದರೆ ನಾನು ಜೀವಂತವಾಗಿರಲು ಸಾಧ್ಯವೇ ಇಲ್ಲ. ಎಲ್ಲಾ ಬಂಧಿತರು ಕೆಳದರ್ಜೆಯ ಪರಿಸ್ಥಿತಿಗಳಲ್ಲಿ ಬದುಕುತ್ತಿದ್ದಾರೆ. ಲೈಂಗಿಕ ದೌರ್ಜನ್ಯ ಮತ್ತು ಬಲವಂತದ ಗರ್ಭಪಾತ ಸೇರಿದಂತೆ ಮಹಿಳೆಯರು ಇನ್ನೂ ಕೆಟ್ಟ ಪರಿಸ್ಥಿತಿಗಳನ್ನು ಅನುಭವಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸಂಸದರ ಸಾಮೂಹಿಕ ಅಮಾನತ್ತಿನಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...