Homeಮುಖಪುಟಅಸ್ಸಾಂನ ಬಂಧನ ಕೇಂದ್ರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ

ಅಸ್ಸಾಂನ ಬಂಧನ ಕೇಂದ್ರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ

- Advertisement -
- Advertisement -

ಭಾರತದ ಅತಿದೊಡ್ಡ ಬಂಧನ ಕೇಂದ್ರ ಗೋಲ್‌ಪಾರಾ ಜಿಲ್ಲೆಯ ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪಗಳು ಕೇಳಿ ಬಂದಿದ್ದು, ಅಕ್ರಮ ವಲಸಿಗರನ್ನು ಕ್ರಿಮಿನಲ್‌ಗಳ ಜೊತೆ ಒಂದೇ ಸೆಲ್‌ನಲ್ಲಿ ಇರಿಸಲಾಗುತ್ತಿದೆ. ಅಸ್ಸಾಂನಲ್ಲಿ ಪೌರತ್ವ ಬಿಕ್ಕಟ್ಟಿನಿಂದಾಗಿ 2010ರಿಂದ ಬಂಧನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಅಸ್ಸಾಂನ ಬಂಧನ ಕೇಂದ್ರಗಳು ಮಾನವೀಯ ಕಾಳಜಿಯ ಬಗ್ಗೆ ಪ್ರಶ್ನೆಗಳನ್ನು ಹೆಚ್ಚಿಸಿವೆ.

ಅಸ್ಸಾಂನಲ್ಲಿನ ಈ ಬಂಧನ ಕೇಂದ್ರಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಬಯಲು ಮಾಡಲು ಸೆಂಟರ್ ಫಾರ್ ನ್ಯೂ ಎಕನಾಮಿಕ್ಸ್ ಸ್ಟಡೀಸ್‌ನ ಆಜಾದ್ ಆವಾಜ್ ತಂಡವು ಪ್ರಾಥಮಿಕ ಸಂದರ್ಶನಗಳನ್ನು ನಡೆಸಿದೆ. ಈ ವೇಳೆ ಈ ಬಂಧನ ಕೇಂದ್ರಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಮತ್ತು ಅಲ್ಲಿ ಹೇಗೆ ವ್ಯಕ್ತಿಗಳ  ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂಬುವುದನ್ನು ಬಹಿರಂಗಪಡಿಸಿದೆ.

1951ರ ನಿರಾಶ್ರಿತರ ಕನ್ವೆನ್ಸನ್‌ ಪ್ರಕಾರ, ಸದಸ್ಯ ರಾಷ್ಟ್ರಗಳು, ವಲಸಿಗರು ಅನುಮತಿಯಿಲ್ಲದೆ ಪ್ರವೇಶಿಸಿದ್ದರೂ ಸಹ ವಲಸಿಗರನ್ನು ಬಂಧಿಸಲು, ಹೊರಹಾಕಲು ಸಾಧ್ಯವಿಲ್ಲ. ಭಾರತವು ಸದಸ್ಯ ರಾಷ್ಟ್ರವಲ್ಲದ ಕಾರಣ ಈ ನಿಯಮಗಳಿಗೆ ಅದು ಅನ್ವಯವಾಗಲ್ಲ. ಆದ್ದರಿಂದ ಅಕ್ರಮ ವಲಸಿಗರ ಪತ್ತೆ, ಬಂಧನ ಮತ್ತು ಗಡೀಪಾರು ಮಾಡುವುದಕ್ಕೆ ನಿರ್ಬಂಧ ಅನ್ವಯವಾಗುವುದಿಲ್ಲ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ವಿಶೇಷ ಪರಿವೀಕ್ಷಕ ಹರ್ಷ್ ಮಂದರ್ ಅವರು ಶಿಬಿರಗಳಲ್ಲಿನ ಭೀಕರ ಪರಿಸ್ಥಿತಿಯನ್ನು ಬಹಿರಂಗಪಡಿಸಿದ ನಂತರ ಬಂಧಿತರು ಎದುರಿಸುತ್ತಿರುವ ಶೋಚನೀಯ ಪರಿಸ್ಥಿತಿಗಳು ಬೆಳಕಿಗೆ ಬಂದವು. ಇದಲ್ಲದೆ ಸುಮಿ ಗೋಸ್ವಾಮಿ ಪ್ರಕರಣವು ಬಂಧನ ಕೇಂದ್ರದಲ್ಲಿನ ಪರಿಸ್ಥಿತಿಗಳನ್ನು ಬಯಲುಗೊಳಿಸಿದೆ.

ಫಾರಿನರ್ಸ್ ಟ್ರಿಬ್ಯೂನಲ್‌ನ ತಾಂತ್ರಿಕ ದೋಷದ ಕಾರಣ ಸುಮಿ ಗೋಸ್ವಾಮಿ ಅವರನ್ನು ಮಾಟಿಯಾ ಬಂಧನ ಕೇಂದ್ರಕ್ಕೆ ಕಳುಹಿಸಲಾಗಿದೆ. ಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿದ್ದರೂ ಆಕೆಯನ್ನು ಮೂರು ದಿನಗಳ ಕಾಲ ಬಂಧನ ಶಿಬಿರದಲ್ಲಿ ಇರಿಸಲಾಗಿದೆ. ನಂತರ ಅವಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಸುಮಿ ಗೋಸ್ವಾಮಿ ಬಂಧನ ಕೇಂದ್ರದಲ್ಲಿನ ತನ್ನ ನೆನಪನ್ನು ವಿವರಿಸುತ್ತಾ, ನಾನು ಏನು ಅನುಭವಿಸಿದೆ ಎಂದು ಯಾರಿಗೂ ಅರ್ಥವಾಗಲು ಸಾಧ್ಯವಿಲ್ಲ. ನನಗೆ ಮಾತ್ರ ಸಾಧ್ಯ. ನೀವು ಬಂಧನ ಶಿಬಿರಕ್ಕೆ ಹೋಗದಿದ್ದರೆ, ಅಲ್ಲಿ ವಾಸಿಸುವುದು ಹೇಗೆಂದು ನಿಮಗೆ ಅರ್ಥವಾಗುತ್ತಿರಲಿಲ್ಲ. ನಾನು ಇದನ್ನು ಅನುಭವಿಸುತ್ತೇನೆ ಎಂದು ನಾನು ಎಂದಿಗೂ ಯೋಚಿಸಲಿಲ್ಲ ಎಂದು ಹೇಳಿದ್ದಾರೆ.

ಅಲ್ಲಿನ ಜೀವನ ಪರಿಸ್ಥಿತಿಗಳ ಬಗ್ಗೆ ಮಾತನಾಡಿದ ಅವರು, ಒಂದು ಸೆಲ್‌ನಲ್ಲಿ ಸುಮಾರು 14 ರಿಂದ 15 ಜನರಿದ್ದರು. ಒಂದು ಅಟ್ಯಾಚ್ಡ್ ಬಾತ್ರೂಮ್ ಇತ್ತು. ನಾನು ಅಲ್ಲಿಗೆ ಹೋದ ಮೊದಲ ದಿನ, ಸ್ನಾನಗೃಹಗಳ ಬಾಗಿಲುಗಳು ಅರ್ಧ ಮಾತ್ರ ನಿರ್ಮಿಸಲ್ಪಟ್ಟಿರುವುದನ್ನು ಗಮನಿಸಿದಾಗ ನನಗೆ ಆಶ್ಚರ್ಯವಾಯಿತು. ಅಲ್ಲಿ ನಿಮ್ಮ ಮುಖವನ್ನು ಹೊರಗಿನಿಂದ ನೋಡಬಹುದು. ಒಬ್ಬ ಅಧಿಕಾರಿಯನ್ನು ಕೇಳಿದಾಗ, ಕೈದಿಗಳು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನಿರ್ಬಂಧಿಸಲು ಆ ರೀತಿಯಲ್ಲಿ ನಿರ್ಮಿಸಲಾಗಿದೆ ಎಂದು ನಾನು ಅರಿತುಕೊಂಡೆ. ಸ್ನಾನಗೃಹದಲ್ಲಿ ದುರ್ವಾಸನೆ ಬರುತ್ತಿತ್ತು. ಅಲ್ಲಿ ವಾಸಿಸುವುದು ಅಸಹನೀಯವಾಗಿದೆ. ನನಗೆ ಸತತ ಎರಡು ರಾತ್ರಿ ನಿದ್ರೆ ಬರಲಿಲ್ಲ. ನಾನು ಇಡೀ ರಾತ್ರಿ ಕುಳಿತಿದ್ದೆ. ಅವರು ನನಗೆ ಒದಗಿಸಿದ ಹಾಸಿಗೆಯಂತಿರುವ ವಸ್ತುಗಳನ್ನು ನಾನು ನನ್ನ ಜೀವನದಲ್ಲಿ ಎಂದೂ ಬಳಕೆ ಮಾಡಿರಲಿಲ್ಲ. ಅಷ್ಟು ಕಳಪೆಯಾಗಿತ್ತು ಎಂದು ಹೇಳಿದ್ದಾರೆ.

UNHRC ಮಾರ್ಗಸೂಚಿಗಳು ರಾಜ್ಯ ಕಾರಾಗೃಹಗಳನ್ನು ವಲಸಿಗರ ಬಂಧನಕ್ಕೆ ಬಳಸಬಾರದು ಎಂದು ಹೇಳುತ್ತದೆ. ಆದರೆ ವಲಸಿಗರನ್ನು ಶಿಕ್ಷೆಗೊಳಗಾದ ಕೈದಿಗಳೊಂದಿಗೆ ಅದೇ ಸೆಲ್‌ಗಳಲ್ಲಿ ಇರಿಸಲಾಗುತ್ತದೆ. ಸುಮಿ ಗೋಸ್ವಾಮಿ ತನ್ನ ಸೆಲ್‌ನಲ್ಲಿದ್ದವಳನ್ನು ಮಾತನಾಡಿಸಿದಾಗ ಆಕೆ ಜಮೀನಿಗಾಗಿ ಸಹೋದರನಿಗೆ ಕೊಲೆ ಮಾಡಿ ಜೈಲಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ. ಮತ್ತೋರ್ವ ಕೈದಿ ಜೊತೆ ಮಾತನಾಡಿದಾಗ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಜೈಲಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ. ನಿಮ್ಮ ಸುತ್ತಲೂ ಅಪರಾಧಿಗಳಿರುವ ಕೋಣೆಯಲ್ಲಿ ನೀವು ಹೇಗೆ ಶಾಂತಿಯುತವಾಗಿ ಮಲಗಬಹುದು? ಯಾರೋ ಬಂದು ನಿಮ್ಮನ್ನು ಕೊಲ್ಲಬಹುದು. ನಮ್ಮನ್ನು ಅಪರಾಧಿಗಳೊಂದಿಗೆ ಏಕೆ ಇರಿಸಲಾಗಿದೆ? ವಲಸಿಗರು ಮಾಡಿದ ಅಪರಾಧವೇನು? ಎಂದು ಸುಮಿ ಗೋಸ್ವಾಮಿ ಪ್ರಶ್ನಿಸಿದ್ದಾರೆ.

ಅಲ್ಲಿ ಒಬ್ಬಾಕೆ ಹತ್ತು ವರ್ಷಗಳಿಂದ ವಾಸ ಮಾಡುತ್ತಿದ್ದಾಳೆ ಎಂದು ಹೇಳಿದಾಗ ನನಗೆ ಆಘಾತವಾಯಿತು. ನಾನು ಅಲ್ಲಿ ಶಾಶ್ವತವಾಗಿ ವಾಸಿಸಬೇಕಾದರೆ ನಾನು ಜೀವಂತವಾಗಿರಲು ಸಾಧ್ಯವೇ ಇಲ್ಲ. ಎಲ್ಲಾ ಬಂಧಿತರು ಕೆಳದರ್ಜೆಯ ಪರಿಸ್ಥಿತಿಗಳಲ್ಲಿ ಬದುಕುತ್ತಿದ್ದಾರೆ. ಲೈಂಗಿಕ ದೌರ್ಜನ್ಯ ಮತ್ತು ಬಲವಂತದ ಗರ್ಭಪಾತ ಸೇರಿದಂತೆ ಮಹಿಳೆಯರು ಇನ್ನೂ ಕೆಟ್ಟ ಪರಿಸ್ಥಿತಿಗಳನ್ನು ಅನುಭವಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸಂಸದರ ಸಾಮೂಹಿಕ ಅಮಾನತ್ತಿನಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...