Homeಮುಖಪುಟಅಸ್ಸಾಂನ ಬಂಧನ ಕೇಂದ್ರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ

ಅಸ್ಸಾಂನ ಬಂಧನ ಕೇಂದ್ರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ

- Advertisement -
- Advertisement -

ಭಾರತದ ಅತಿದೊಡ್ಡ ಬಂಧನ ಕೇಂದ್ರ ಗೋಲ್‌ಪಾರಾ ಜಿಲ್ಲೆಯ ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪಗಳು ಕೇಳಿ ಬಂದಿದ್ದು, ಅಕ್ರಮ ವಲಸಿಗರನ್ನು ಕ್ರಿಮಿನಲ್‌ಗಳ ಜೊತೆ ಒಂದೇ ಸೆಲ್‌ನಲ್ಲಿ ಇರಿಸಲಾಗುತ್ತಿದೆ. ಅಸ್ಸಾಂನಲ್ಲಿ ಪೌರತ್ವ ಬಿಕ್ಕಟ್ಟಿನಿಂದಾಗಿ 2010ರಿಂದ ಬಂಧನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಅಸ್ಸಾಂನ ಬಂಧನ ಕೇಂದ್ರಗಳು ಮಾನವೀಯ ಕಾಳಜಿಯ ಬಗ್ಗೆ ಪ್ರಶ್ನೆಗಳನ್ನು ಹೆಚ್ಚಿಸಿವೆ.

ಅಸ್ಸಾಂನಲ್ಲಿನ ಈ ಬಂಧನ ಕೇಂದ್ರಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಬಯಲು ಮಾಡಲು ಸೆಂಟರ್ ಫಾರ್ ನ್ಯೂ ಎಕನಾಮಿಕ್ಸ್ ಸ್ಟಡೀಸ್‌ನ ಆಜಾದ್ ಆವಾಜ್ ತಂಡವು ಪ್ರಾಥಮಿಕ ಸಂದರ್ಶನಗಳನ್ನು ನಡೆಸಿದೆ. ಈ ವೇಳೆ ಈ ಬಂಧನ ಕೇಂದ್ರಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಮತ್ತು ಅಲ್ಲಿ ಹೇಗೆ ವ್ಯಕ್ತಿಗಳ  ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂಬುವುದನ್ನು ಬಹಿರಂಗಪಡಿಸಿದೆ.

1951ರ ನಿರಾಶ್ರಿತರ ಕನ್ವೆನ್ಸನ್‌ ಪ್ರಕಾರ, ಸದಸ್ಯ ರಾಷ್ಟ್ರಗಳು, ವಲಸಿಗರು ಅನುಮತಿಯಿಲ್ಲದೆ ಪ್ರವೇಶಿಸಿದ್ದರೂ ಸಹ ವಲಸಿಗರನ್ನು ಬಂಧಿಸಲು, ಹೊರಹಾಕಲು ಸಾಧ್ಯವಿಲ್ಲ. ಭಾರತವು ಸದಸ್ಯ ರಾಷ್ಟ್ರವಲ್ಲದ ಕಾರಣ ಈ ನಿಯಮಗಳಿಗೆ ಅದು ಅನ್ವಯವಾಗಲ್ಲ. ಆದ್ದರಿಂದ ಅಕ್ರಮ ವಲಸಿಗರ ಪತ್ತೆ, ಬಂಧನ ಮತ್ತು ಗಡೀಪಾರು ಮಾಡುವುದಕ್ಕೆ ನಿರ್ಬಂಧ ಅನ್ವಯವಾಗುವುದಿಲ್ಲ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ವಿಶೇಷ ಪರಿವೀಕ್ಷಕ ಹರ್ಷ್ ಮಂದರ್ ಅವರು ಶಿಬಿರಗಳಲ್ಲಿನ ಭೀಕರ ಪರಿಸ್ಥಿತಿಯನ್ನು ಬಹಿರಂಗಪಡಿಸಿದ ನಂತರ ಬಂಧಿತರು ಎದುರಿಸುತ್ತಿರುವ ಶೋಚನೀಯ ಪರಿಸ್ಥಿತಿಗಳು ಬೆಳಕಿಗೆ ಬಂದವು. ಇದಲ್ಲದೆ ಸುಮಿ ಗೋಸ್ವಾಮಿ ಪ್ರಕರಣವು ಬಂಧನ ಕೇಂದ್ರದಲ್ಲಿನ ಪರಿಸ್ಥಿತಿಗಳನ್ನು ಬಯಲುಗೊಳಿಸಿದೆ.

ಫಾರಿನರ್ಸ್ ಟ್ರಿಬ್ಯೂನಲ್‌ನ ತಾಂತ್ರಿಕ ದೋಷದ ಕಾರಣ ಸುಮಿ ಗೋಸ್ವಾಮಿ ಅವರನ್ನು ಮಾಟಿಯಾ ಬಂಧನ ಕೇಂದ್ರಕ್ಕೆ ಕಳುಹಿಸಲಾಗಿದೆ. ಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿದ್ದರೂ ಆಕೆಯನ್ನು ಮೂರು ದಿನಗಳ ಕಾಲ ಬಂಧನ ಶಿಬಿರದಲ್ಲಿ ಇರಿಸಲಾಗಿದೆ. ನಂತರ ಅವಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಸುಮಿ ಗೋಸ್ವಾಮಿ ಬಂಧನ ಕೇಂದ್ರದಲ್ಲಿನ ತನ್ನ ನೆನಪನ್ನು ವಿವರಿಸುತ್ತಾ, ನಾನು ಏನು ಅನುಭವಿಸಿದೆ ಎಂದು ಯಾರಿಗೂ ಅರ್ಥವಾಗಲು ಸಾಧ್ಯವಿಲ್ಲ. ನನಗೆ ಮಾತ್ರ ಸಾಧ್ಯ. ನೀವು ಬಂಧನ ಶಿಬಿರಕ್ಕೆ ಹೋಗದಿದ್ದರೆ, ಅಲ್ಲಿ ವಾಸಿಸುವುದು ಹೇಗೆಂದು ನಿಮಗೆ ಅರ್ಥವಾಗುತ್ತಿರಲಿಲ್ಲ. ನಾನು ಇದನ್ನು ಅನುಭವಿಸುತ್ತೇನೆ ಎಂದು ನಾನು ಎಂದಿಗೂ ಯೋಚಿಸಲಿಲ್ಲ ಎಂದು ಹೇಳಿದ್ದಾರೆ.

ಅಲ್ಲಿನ ಜೀವನ ಪರಿಸ್ಥಿತಿಗಳ ಬಗ್ಗೆ ಮಾತನಾಡಿದ ಅವರು, ಒಂದು ಸೆಲ್‌ನಲ್ಲಿ ಸುಮಾರು 14 ರಿಂದ 15 ಜನರಿದ್ದರು. ಒಂದು ಅಟ್ಯಾಚ್ಡ್ ಬಾತ್ರೂಮ್ ಇತ್ತು. ನಾನು ಅಲ್ಲಿಗೆ ಹೋದ ಮೊದಲ ದಿನ, ಸ್ನಾನಗೃಹಗಳ ಬಾಗಿಲುಗಳು ಅರ್ಧ ಮಾತ್ರ ನಿರ್ಮಿಸಲ್ಪಟ್ಟಿರುವುದನ್ನು ಗಮನಿಸಿದಾಗ ನನಗೆ ಆಶ್ಚರ್ಯವಾಯಿತು. ಅಲ್ಲಿ ನಿಮ್ಮ ಮುಖವನ್ನು ಹೊರಗಿನಿಂದ ನೋಡಬಹುದು. ಒಬ್ಬ ಅಧಿಕಾರಿಯನ್ನು ಕೇಳಿದಾಗ, ಕೈದಿಗಳು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನಿರ್ಬಂಧಿಸಲು ಆ ರೀತಿಯಲ್ಲಿ ನಿರ್ಮಿಸಲಾಗಿದೆ ಎಂದು ನಾನು ಅರಿತುಕೊಂಡೆ. ಸ್ನಾನಗೃಹದಲ್ಲಿ ದುರ್ವಾಸನೆ ಬರುತ್ತಿತ್ತು. ಅಲ್ಲಿ ವಾಸಿಸುವುದು ಅಸಹನೀಯವಾಗಿದೆ. ನನಗೆ ಸತತ ಎರಡು ರಾತ್ರಿ ನಿದ್ರೆ ಬರಲಿಲ್ಲ. ನಾನು ಇಡೀ ರಾತ್ರಿ ಕುಳಿತಿದ್ದೆ. ಅವರು ನನಗೆ ಒದಗಿಸಿದ ಹಾಸಿಗೆಯಂತಿರುವ ವಸ್ತುಗಳನ್ನು ನಾನು ನನ್ನ ಜೀವನದಲ್ಲಿ ಎಂದೂ ಬಳಕೆ ಮಾಡಿರಲಿಲ್ಲ. ಅಷ್ಟು ಕಳಪೆಯಾಗಿತ್ತು ಎಂದು ಹೇಳಿದ್ದಾರೆ.

UNHRC ಮಾರ್ಗಸೂಚಿಗಳು ರಾಜ್ಯ ಕಾರಾಗೃಹಗಳನ್ನು ವಲಸಿಗರ ಬಂಧನಕ್ಕೆ ಬಳಸಬಾರದು ಎಂದು ಹೇಳುತ್ತದೆ. ಆದರೆ ವಲಸಿಗರನ್ನು ಶಿಕ್ಷೆಗೊಳಗಾದ ಕೈದಿಗಳೊಂದಿಗೆ ಅದೇ ಸೆಲ್‌ಗಳಲ್ಲಿ ಇರಿಸಲಾಗುತ್ತದೆ. ಸುಮಿ ಗೋಸ್ವಾಮಿ ತನ್ನ ಸೆಲ್‌ನಲ್ಲಿದ್ದವಳನ್ನು ಮಾತನಾಡಿಸಿದಾಗ ಆಕೆ ಜಮೀನಿಗಾಗಿ ಸಹೋದರನಿಗೆ ಕೊಲೆ ಮಾಡಿ ಜೈಲಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ. ಮತ್ತೋರ್ವ ಕೈದಿ ಜೊತೆ ಮಾತನಾಡಿದಾಗ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಜೈಲಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ. ನಿಮ್ಮ ಸುತ್ತಲೂ ಅಪರಾಧಿಗಳಿರುವ ಕೋಣೆಯಲ್ಲಿ ನೀವು ಹೇಗೆ ಶಾಂತಿಯುತವಾಗಿ ಮಲಗಬಹುದು? ಯಾರೋ ಬಂದು ನಿಮ್ಮನ್ನು ಕೊಲ್ಲಬಹುದು. ನಮ್ಮನ್ನು ಅಪರಾಧಿಗಳೊಂದಿಗೆ ಏಕೆ ಇರಿಸಲಾಗಿದೆ? ವಲಸಿಗರು ಮಾಡಿದ ಅಪರಾಧವೇನು? ಎಂದು ಸುಮಿ ಗೋಸ್ವಾಮಿ ಪ್ರಶ್ನಿಸಿದ್ದಾರೆ.

ಅಲ್ಲಿ ಒಬ್ಬಾಕೆ ಹತ್ತು ವರ್ಷಗಳಿಂದ ವಾಸ ಮಾಡುತ್ತಿದ್ದಾಳೆ ಎಂದು ಹೇಳಿದಾಗ ನನಗೆ ಆಘಾತವಾಯಿತು. ನಾನು ಅಲ್ಲಿ ಶಾಶ್ವತವಾಗಿ ವಾಸಿಸಬೇಕಾದರೆ ನಾನು ಜೀವಂತವಾಗಿರಲು ಸಾಧ್ಯವೇ ಇಲ್ಲ. ಎಲ್ಲಾ ಬಂಧಿತರು ಕೆಳದರ್ಜೆಯ ಪರಿಸ್ಥಿತಿಗಳಲ್ಲಿ ಬದುಕುತ್ತಿದ್ದಾರೆ. ಲೈಂಗಿಕ ದೌರ್ಜನ್ಯ ಮತ್ತು ಬಲವಂತದ ಗರ್ಭಪಾತ ಸೇರಿದಂತೆ ಮಹಿಳೆಯರು ಇನ್ನೂ ಕೆಟ್ಟ ಪರಿಸ್ಥಿತಿಗಳನ್ನು ಅನುಭವಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸಂಸದರ ಸಾಮೂಹಿಕ ಅಮಾನತ್ತಿನಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...