Homeಮುಖಪುಟಅಸ್ಸಾಂನ ಬಂಧನ ಕೇಂದ್ರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ

ಅಸ್ಸಾಂನ ಬಂಧನ ಕೇಂದ್ರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ

- Advertisement -
- Advertisement -

ಭಾರತದ ಅತಿದೊಡ್ಡ ಬಂಧನ ಕೇಂದ್ರ ಗೋಲ್‌ಪಾರಾ ಜಿಲ್ಲೆಯ ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪಗಳು ಕೇಳಿ ಬಂದಿದ್ದು, ಅಕ್ರಮ ವಲಸಿಗರನ್ನು ಕ್ರಿಮಿನಲ್‌ಗಳ ಜೊತೆ ಒಂದೇ ಸೆಲ್‌ನಲ್ಲಿ ಇರಿಸಲಾಗುತ್ತಿದೆ. ಅಸ್ಸಾಂನಲ್ಲಿ ಪೌರತ್ವ ಬಿಕ್ಕಟ್ಟಿನಿಂದಾಗಿ 2010ರಿಂದ ಬಂಧನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಅಸ್ಸಾಂನ ಬಂಧನ ಕೇಂದ್ರಗಳು ಮಾನವೀಯ ಕಾಳಜಿಯ ಬಗ್ಗೆ ಪ್ರಶ್ನೆಗಳನ್ನು ಹೆಚ್ಚಿಸಿವೆ.

ಅಸ್ಸಾಂನಲ್ಲಿನ ಈ ಬಂಧನ ಕೇಂದ್ರಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಬಯಲು ಮಾಡಲು ಸೆಂಟರ್ ಫಾರ್ ನ್ಯೂ ಎಕನಾಮಿಕ್ಸ್ ಸ್ಟಡೀಸ್‌ನ ಆಜಾದ್ ಆವಾಜ್ ತಂಡವು ಪ್ರಾಥಮಿಕ ಸಂದರ್ಶನಗಳನ್ನು ನಡೆಸಿದೆ. ಈ ವೇಳೆ ಈ ಬಂಧನ ಕೇಂದ್ರಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಮತ್ತು ಅಲ್ಲಿ ಹೇಗೆ ವ್ಯಕ್ತಿಗಳ  ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂಬುವುದನ್ನು ಬಹಿರಂಗಪಡಿಸಿದೆ.

1951ರ ನಿರಾಶ್ರಿತರ ಕನ್ವೆನ್ಸನ್‌ ಪ್ರಕಾರ, ಸದಸ್ಯ ರಾಷ್ಟ್ರಗಳು, ವಲಸಿಗರು ಅನುಮತಿಯಿಲ್ಲದೆ ಪ್ರವೇಶಿಸಿದ್ದರೂ ಸಹ ವಲಸಿಗರನ್ನು ಬಂಧಿಸಲು, ಹೊರಹಾಕಲು ಸಾಧ್ಯವಿಲ್ಲ. ಭಾರತವು ಸದಸ್ಯ ರಾಷ್ಟ್ರವಲ್ಲದ ಕಾರಣ ಈ ನಿಯಮಗಳಿಗೆ ಅದು ಅನ್ವಯವಾಗಲ್ಲ. ಆದ್ದರಿಂದ ಅಕ್ರಮ ವಲಸಿಗರ ಪತ್ತೆ, ಬಂಧನ ಮತ್ತು ಗಡೀಪಾರು ಮಾಡುವುದಕ್ಕೆ ನಿರ್ಬಂಧ ಅನ್ವಯವಾಗುವುದಿಲ್ಲ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ವಿಶೇಷ ಪರಿವೀಕ್ಷಕ ಹರ್ಷ್ ಮಂದರ್ ಅವರು ಶಿಬಿರಗಳಲ್ಲಿನ ಭೀಕರ ಪರಿಸ್ಥಿತಿಯನ್ನು ಬಹಿರಂಗಪಡಿಸಿದ ನಂತರ ಬಂಧಿತರು ಎದುರಿಸುತ್ತಿರುವ ಶೋಚನೀಯ ಪರಿಸ್ಥಿತಿಗಳು ಬೆಳಕಿಗೆ ಬಂದವು. ಇದಲ್ಲದೆ ಸುಮಿ ಗೋಸ್ವಾಮಿ ಪ್ರಕರಣವು ಬಂಧನ ಕೇಂದ್ರದಲ್ಲಿನ ಪರಿಸ್ಥಿತಿಗಳನ್ನು ಬಯಲುಗೊಳಿಸಿದೆ.

ಫಾರಿನರ್ಸ್ ಟ್ರಿಬ್ಯೂನಲ್‌ನ ತಾಂತ್ರಿಕ ದೋಷದ ಕಾರಣ ಸುಮಿ ಗೋಸ್ವಾಮಿ ಅವರನ್ನು ಮಾಟಿಯಾ ಬಂಧನ ಕೇಂದ್ರಕ್ಕೆ ಕಳುಹಿಸಲಾಗಿದೆ. ಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿದ್ದರೂ ಆಕೆಯನ್ನು ಮೂರು ದಿನಗಳ ಕಾಲ ಬಂಧನ ಶಿಬಿರದಲ್ಲಿ ಇರಿಸಲಾಗಿದೆ. ನಂತರ ಅವಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಸುಮಿ ಗೋಸ್ವಾಮಿ ಬಂಧನ ಕೇಂದ್ರದಲ್ಲಿನ ತನ್ನ ನೆನಪನ್ನು ವಿವರಿಸುತ್ತಾ, ನಾನು ಏನು ಅನುಭವಿಸಿದೆ ಎಂದು ಯಾರಿಗೂ ಅರ್ಥವಾಗಲು ಸಾಧ್ಯವಿಲ್ಲ. ನನಗೆ ಮಾತ್ರ ಸಾಧ್ಯ. ನೀವು ಬಂಧನ ಶಿಬಿರಕ್ಕೆ ಹೋಗದಿದ್ದರೆ, ಅಲ್ಲಿ ವಾಸಿಸುವುದು ಹೇಗೆಂದು ನಿಮಗೆ ಅರ್ಥವಾಗುತ್ತಿರಲಿಲ್ಲ. ನಾನು ಇದನ್ನು ಅನುಭವಿಸುತ್ತೇನೆ ಎಂದು ನಾನು ಎಂದಿಗೂ ಯೋಚಿಸಲಿಲ್ಲ ಎಂದು ಹೇಳಿದ್ದಾರೆ.

ಅಲ್ಲಿನ ಜೀವನ ಪರಿಸ್ಥಿತಿಗಳ ಬಗ್ಗೆ ಮಾತನಾಡಿದ ಅವರು, ಒಂದು ಸೆಲ್‌ನಲ್ಲಿ ಸುಮಾರು 14 ರಿಂದ 15 ಜನರಿದ್ದರು. ಒಂದು ಅಟ್ಯಾಚ್ಡ್ ಬಾತ್ರೂಮ್ ಇತ್ತು. ನಾನು ಅಲ್ಲಿಗೆ ಹೋದ ಮೊದಲ ದಿನ, ಸ್ನಾನಗೃಹಗಳ ಬಾಗಿಲುಗಳು ಅರ್ಧ ಮಾತ್ರ ನಿರ್ಮಿಸಲ್ಪಟ್ಟಿರುವುದನ್ನು ಗಮನಿಸಿದಾಗ ನನಗೆ ಆಶ್ಚರ್ಯವಾಯಿತು. ಅಲ್ಲಿ ನಿಮ್ಮ ಮುಖವನ್ನು ಹೊರಗಿನಿಂದ ನೋಡಬಹುದು. ಒಬ್ಬ ಅಧಿಕಾರಿಯನ್ನು ಕೇಳಿದಾಗ, ಕೈದಿಗಳು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನಿರ್ಬಂಧಿಸಲು ಆ ರೀತಿಯಲ್ಲಿ ನಿರ್ಮಿಸಲಾಗಿದೆ ಎಂದು ನಾನು ಅರಿತುಕೊಂಡೆ. ಸ್ನಾನಗೃಹದಲ್ಲಿ ದುರ್ವಾಸನೆ ಬರುತ್ತಿತ್ತು. ಅಲ್ಲಿ ವಾಸಿಸುವುದು ಅಸಹನೀಯವಾಗಿದೆ. ನನಗೆ ಸತತ ಎರಡು ರಾತ್ರಿ ನಿದ್ರೆ ಬರಲಿಲ್ಲ. ನಾನು ಇಡೀ ರಾತ್ರಿ ಕುಳಿತಿದ್ದೆ. ಅವರು ನನಗೆ ಒದಗಿಸಿದ ಹಾಸಿಗೆಯಂತಿರುವ ವಸ್ತುಗಳನ್ನು ನಾನು ನನ್ನ ಜೀವನದಲ್ಲಿ ಎಂದೂ ಬಳಕೆ ಮಾಡಿರಲಿಲ್ಲ. ಅಷ್ಟು ಕಳಪೆಯಾಗಿತ್ತು ಎಂದು ಹೇಳಿದ್ದಾರೆ.

UNHRC ಮಾರ್ಗಸೂಚಿಗಳು ರಾಜ್ಯ ಕಾರಾಗೃಹಗಳನ್ನು ವಲಸಿಗರ ಬಂಧನಕ್ಕೆ ಬಳಸಬಾರದು ಎಂದು ಹೇಳುತ್ತದೆ. ಆದರೆ ವಲಸಿಗರನ್ನು ಶಿಕ್ಷೆಗೊಳಗಾದ ಕೈದಿಗಳೊಂದಿಗೆ ಅದೇ ಸೆಲ್‌ಗಳಲ್ಲಿ ಇರಿಸಲಾಗುತ್ತದೆ. ಸುಮಿ ಗೋಸ್ವಾಮಿ ತನ್ನ ಸೆಲ್‌ನಲ್ಲಿದ್ದವಳನ್ನು ಮಾತನಾಡಿಸಿದಾಗ ಆಕೆ ಜಮೀನಿಗಾಗಿ ಸಹೋದರನಿಗೆ ಕೊಲೆ ಮಾಡಿ ಜೈಲಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ. ಮತ್ತೋರ್ವ ಕೈದಿ ಜೊತೆ ಮಾತನಾಡಿದಾಗ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಜೈಲಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ. ನಿಮ್ಮ ಸುತ್ತಲೂ ಅಪರಾಧಿಗಳಿರುವ ಕೋಣೆಯಲ್ಲಿ ನೀವು ಹೇಗೆ ಶಾಂತಿಯುತವಾಗಿ ಮಲಗಬಹುದು? ಯಾರೋ ಬಂದು ನಿಮ್ಮನ್ನು ಕೊಲ್ಲಬಹುದು. ನಮ್ಮನ್ನು ಅಪರಾಧಿಗಳೊಂದಿಗೆ ಏಕೆ ಇರಿಸಲಾಗಿದೆ? ವಲಸಿಗರು ಮಾಡಿದ ಅಪರಾಧವೇನು? ಎಂದು ಸುಮಿ ಗೋಸ್ವಾಮಿ ಪ್ರಶ್ನಿಸಿದ್ದಾರೆ.

ಅಲ್ಲಿ ಒಬ್ಬಾಕೆ ಹತ್ತು ವರ್ಷಗಳಿಂದ ವಾಸ ಮಾಡುತ್ತಿದ್ದಾಳೆ ಎಂದು ಹೇಳಿದಾಗ ನನಗೆ ಆಘಾತವಾಯಿತು. ನಾನು ಅಲ್ಲಿ ಶಾಶ್ವತವಾಗಿ ವಾಸಿಸಬೇಕಾದರೆ ನಾನು ಜೀವಂತವಾಗಿರಲು ಸಾಧ್ಯವೇ ಇಲ್ಲ. ಎಲ್ಲಾ ಬಂಧಿತರು ಕೆಳದರ್ಜೆಯ ಪರಿಸ್ಥಿತಿಗಳಲ್ಲಿ ಬದುಕುತ್ತಿದ್ದಾರೆ. ಲೈಂಗಿಕ ದೌರ್ಜನ್ಯ ಮತ್ತು ಬಲವಂತದ ಗರ್ಭಪಾತ ಸೇರಿದಂತೆ ಮಹಿಳೆಯರು ಇನ್ನೂ ಕೆಟ್ಟ ಪರಿಸ್ಥಿತಿಗಳನ್ನು ಅನುಭವಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸಂಸದರ ಸಾಮೂಹಿಕ ಅಮಾನತ್ತಿನಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...