Homeಮುಖಪುಟಅಸ್ಸಾಂನ ಬಂಧನ ಕೇಂದ್ರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ

ಅಸ್ಸಾಂನ ಬಂಧನ ಕೇಂದ್ರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ

- Advertisement -
- Advertisement -

ಭಾರತದ ಅತಿದೊಡ್ಡ ಬಂಧನ ಕೇಂದ್ರ ಗೋಲ್‌ಪಾರಾ ಜಿಲ್ಲೆಯ ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪಗಳು ಕೇಳಿ ಬಂದಿದ್ದು, ಅಕ್ರಮ ವಲಸಿಗರನ್ನು ಕ್ರಿಮಿನಲ್‌ಗಳ ಜೊತೆ ಒಂದೇ ಸೆಲ್‌ನಲ್ಲಿ ಇರಿಸಲಾಗುತ್ತಿದೆ. ಅಸ್ಸಾಂನಲ್ಲಿ ಪೌರತ್ವ ಬಿಕ್ಕಟ್ಟಿನಿಂದಾಗಿ 2010ರಿಂದ ಬಂಧನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಅಸ್ಸಾಂನ ಬಂಧನ ಕೇಂದ್ರಗಳು ಮಾನವೀಯ ಕಾಳಜಿಯ ಬಗ್ಗೆ ಪ್ರಶ್ನೆಗಳನ್ನು ಹೆಚ್ಚಿಸಿವೆ.

ಅಸ್ಸಾಂನಲ್ಲಿನ ಈ ಬಂಧನ ಕೇಂದ್ರಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಬಯಲು ಮಾಡಲು ಸೆಂಟರ್ ಫಾರ್ ನ್ಯೂ ಎಕನಾಮಿಕ್ಸ್ ಸ್ಟಡೀಸ್‌ನ ಆಜಾದ್ ಆವಾಜ್ ತಂಡವು ಪ್ರಾಥಮಿಕ ಸಂದರ್ಶನಗಳನ್ನು ನಡೆಸಿದೆ. ಈ ವೇಳೆ ಈ ಬಂಧನ ಕೇಂದ್ರಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಮತ್ತು ಅಲ್ಲಿ ಹೇಗೆ ವ್ಯಕ್ತಿಗಳ  ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂಬುವುದನ್ನು ಬಹಿರಂಗಪಡಿಸಿದೆ.

1951ರ ನಿರಾಶ್ರಿತರ ಕನ್ವೆನ್ಸನ್‌ ಪ್ರಕಾರ, ಸದಸ್ಯ ರಾಷ್ಟ್ರಗಳು, ವಲಸಿಗರು ಅನುಮತಿಯಿಲ್ಲದೆ ಪ್ರವೇಶಿಸಿದ್ದರೂ ಸಹ ವಲಸಿಗರನ್ನು ಬಂಧಿಸಲು, ಹೊರಹಾಕಲು ಸಾಧ್ಯವಿಲ್ಲ. ಭಾರತವು ಸದಸ್ಯ ರಾಷ್ಟ್ರವಲ್ಲದ ಕಾರಣ ಈ ನಿಯಮಗಳಿಗೆ ಅದು ಅನ್ವಯವಾಗಲ್ಲ. ಆದ್ದರಿಂದ ಅಕ್ರಮ ವಲಸಿಗರ ಪತ್ತೆ, ಬಂಧನ ಮತ್ತು ಗಡೀಪಾರು ಮಾಡುವುದಕ್ಕೆ ನಿರ್ಬಂಧ ಅನ್ವಯವಾಗುವುದಿಲ್ಲ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ವಿಶೇಷ ಪರಿವೀಕ್ಷಕ ಹರ್ಷ್ ಮಂದರ್ ಅವರು ಶಿಬಿರಗಳಲ್ಲಿನ ಭೀಕರ ಪರಿಸ್ಥಿತಿಯನ್ನು ಬಹಿರಂಗಪಡಿಸಿದ ನಂತರ ಬಂಧಿತರು ಎದುರಿಸುತ್ತಿರುವ ಶೋಚನೀಯ ಪರಿಸ್ಥಿತಿಗಳು ಬೆಳಕಿಗೆ ಬಂದವು. ಇದಲ್ಲದೆ ಸುಮಿ ಗೋಸ್ವಾಮಿ ಪ್ರಕರಣವು ಬಂಧನ ಕೇಂದ್ರದಲ್ಲಿನ ಪರಿಸ್ಥಿತಿಗಳನ್ನು ಬಯಲುಗೊಳಿಸಿದೆ.

ಫಾರಿನರ್ಸ್ ಟ್ರಿಬ್ಯೂನಲ್‌ನ ತಾಂತ್ರಿಕ ದೋಷದ ಕಾರಣ ಸುಮಿ ಗೋಸ್ವಾಮಿ ಅವರನ್ನು ಮಾಟಿಯಾ ಬಂಧನ ಕೇಂದ್ರಕ್ಕೆ ಕಳುಹಿಸಲಾಗಿದೆ. ಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿದ್ದರೂ ಆಕೆಯನ್ನು ಮೂರು ದಿನಗಳ ಕಾಲ ಬಂಧನ ಶಿಬಿರದಲ್ಲಿ ಇರಿಸಲಾಗಿದೆ. ನಂತರ ಅವಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಸುಮಿ ಗೋಸ್ವಾಮಿ ಬಂಧನ ಕೇಂದ್ರದಲ್ಲಿನ ತನ್ನ ನೆನಪನ್ನು ವಿವರಿಸುತ್ತಾ, ನಾನು ಏನು ಅನುಭವಿಸಿದೆ ಎಂದು ಯಾರಿಗೂ ಅರ್ಥವಾಗಲು ಸಾಧ್ಯವಿಲ್ಲ. ನನಗೆ ಮಾತ್ರ ಸಾಧ್ಯ. ನೀವು ಬಂಧನ ಶಿಬಿರಕ್ಕೆ ಹೋಗದಿದ್ದರೆ, ಅಲ್ಲಿ ವಾಸಿಸುವುದು ಹೇಗೆಂದು ನಿಮಗೆ ಅರ್ಥವಾಗುತ್ತಿರಲಿಲ್ಲ. ನಾನು ಇದನ್ನು ಅನುಭವಿಸುತ್ತೇನೆ ಎಂದು ನಾನು ಎಂದಿಗೂ ಯೋಚಿಸಲಿಲ್ಲ ಎಂದು ಹೇಳಿದ್ದಾರೆ.

ಅಲ್ಲಿನ ಜೀವನ ಪರಿಸ್ಥಿತಿಗಳ ಬಗ್ಗೆ ಮಾತನಾಡಿದ ಅವರು, ಒಂದು ಸೆಲ್‌ನಲ್ಲಿ ಸುಮಾರು 14 ರಿಂದ 15 ಜನರಿದ್ದರು. ಒಂದು ಅಟ್ಯಾಚ್ಡ್ ಬಾತ್ರೂಮ್ ಇತ್ತು. ನಾನು ಅಲ್ಲಿಗೆ ಹೋದ ಮೊದಲ ದಿನ, ಸ್ನಾನಗೃಹಗಳ ಬಾಗಿಲುಗಳು ಅರ್ಧ ಮಾತ್ರ ನಿರ್ಮಿಸಲ್ಪಟ್ಟಿರುವುದನ್ನು ಗಮನಿಸಿದಾಗ ನನಗೆ ಆಶ್ಚರ್ಯವಾಯಿತು. ಅಲ್ಲಿ ನಿಮ್ಮ ಮುಖವನ್ನು ಹೊರಗಿನಿಂದ ನೋಡಬಹುದು. ಒಬ್ಬ ಅಧಿಕಾರಿಯನ್ನು ಕೇಳಿದಾಗ, ಕೈದಿಗಳು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನಿರ್ಬಂಧಿಸಲು ಆ ರೀತಿಯಲ್ಲಿ ನಿರ್ಮಿಸಲಾಗಿದೆ ಎಂದು ನಾನು ಅರಿತುಕೊಂಡೆ. ಸ್ನಾನಗೃಹದಲ್ಲಿ ದುರ್ವಾಸನೆ ಬರುತ್ತಿತ್ತು. ಅಲ್ಲಿ ವಾಸಿಸುವುದು ಅಸಹನೀಯವಾಗಿದೆ. ನನಗೆ ಸತತ ಎರಡು ರಾತ್ರಿ ನಿದ್ರೆ ಬರಲಿಲ್ಲ. ನಾನು ಇಡೀ ರಾತ್ರಿ ಕುಳಿತಿದ್ದೆ. ಅವರು ನನಗೆ ಒದಗಿಸಿದ ಹಾಸಿಗೆಯಂತಿರುವ ವಸ್ತುಗಳನ್ನು ನಾನು ನನ್ನ ಜೀವನದಲ್ಲಿ ಎಂದೂ ಬಳಕೆ ಮಾಡಿರಲಿಲ್ಲ. ಅಷ್ಟು ಕಳಪೆಯಾಗಿತ್ತು ಎಂದು ಹೇಳಿದ್ದಾರೆ.

UNHRC ಮಾರ್ಗಸೂಚಿಗಳು ರಾಜ್ಯ ಕಾರಾಗೃಹಗಳನ್ನು ವಲಸಿಗರ ಬಂಧನಕ್ಕೆ ಬಳಸಬಾರದು ಎಂದು ಹೇಳುತ್ತದೆ. ಆದರೆ ವಲಸಿಗರನ್ನು ಶಿಕ್ಷೆಗೊಳಗಾದ ಕೈದಿಗಳೊಂದಿಗೆ ಅದೇ ಸೆಲ್‌ಗಳಲ್ಲಿ ಇರಿಸಲಾಗುತ್ತದೆ. ಸುಮಿ ಗೋಸ್ವಾಮಿ ತನ್ನ ಸೆಲ್‌ನಲ್ಲಿದ್ದವಳನ್ನು ಮಾತನಾಡಿಸಿದಾಗ ಆಕೆ ಜಮೀನಿಗಾಗಿ ಸಹೋದರನಿಗೆ ಕೊಲೆ ಮಾಡಿ ಜೈಲಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ. ಮತ್ತೋರ್ವ ಕೈದಿ ಜೊತೆ ಮಾತನಾಡಿದಾಗ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಜೈಲಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ. ನಿಮ್ಮ ಸುತ್ತಲೂ ಅಪರಾಧಿಗಳಿರುವ ಕೋಣೆಯಲ್ಲಿ ನೀವು ಹೇಗೆ ಶಾಂತಿಯುತವಾಗಿ ಮಲಗಬಹುದು? ಯಾರೋ ಬಂದು ನಿಮ್ಮನ್ನು ಕೊಲ್ಲಬಹುದು. ನಮ್ಮನ್ನು ಅಪರಾಧಿಗಳೊಂದಿಗೆ ಏಕೆ ಇರಿಸಲಾಗಿದೆ? ವಲಸಿಗರು ಮಾಡಿದ ಅಪರಾಧವೇನು? ಎಂದು ಸುಮಿ ಗೋಸ್ವಾಮಿ ಪ್ರಶ್ನಿಸಿದ್ದಾರೆ.

ಅಲ್ಲಿ ಒಬ್ಬಾಕೆ ಹತ್ತು ವರ್ಷಗಳಿಂದ ವಾಸ ಮಾಡುತ್ತಿದ್ದಾಳೆ ಎಂದು ಹೇಳಿದಾಗ ನನಗೆ ಆಘಾತವಾಯಿತು. ನಾನು ಅಲ್ಲಿ ಶಾಶ್ವತವಾಗಿ ವಾಸಿಸಬೇಕಾದರೆ ನಾನು ಜೀವಂತವಾಗಿರಲು ಸಾಧ್ಯವೇ ಇಲ್ಲ. ಎಲ್ಲಾ ಬಂಧಿತರು ಕೆಳದರ್ಜೆಯ ಪರಿಸ್ಥಿತಿಗಳಲ್ಲಿ ಬದುಕುತ್ತಿದ್ದಾರೆ. ಲೈಂಗಿಕ ದೌರ್ಜನ್ಯ ಮತ್ತು ಬಲವಂತದ ಗರ್ಭಪಾತ ಸೇರಿದಂತೆ ಮಹಿಳೆಯರು ಇನ್ನೂ ಕೆಟ್ಟ ಪರಿಸ್ಥಿತಿಗಳನ್ನು ಅನುಭವಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸಂಸದರ ಸಾಮೂಹಿಕ ಅಮಾನತ್ತಿನಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...