Homeಮುಖಪುಟಅಸ್ಸಾಂನ ಬಂಧನ ಕೇಂದ್ರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ

ಅಸ್ಸಾಂನ ಬಂಧನ ಕೇಂದ್ರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ

- Advertisement -
- Advertisement -

ಭಾರತದ ಅತಿದೊಡ್ಡ ಬಂಧನ ಕೇಂದ್ರ ಗೋಲ್‌ಪಾರಾ ಜಿಲ್ಲೆಯ ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪಗಳು ಕೇಳಿ ಬಂದಿದ್ದು, ಅಕ್ರಮ ವಲಸಿಗರನ್ನು ಕ್ರಿಮಿನಲ್‌ಗಳ ಜೊತೆ ಒಂದೇ ಸೆಲ್‌ನಲ್ಲಿ ಇರಿಸಲಾಗುತ್ತಿದೆ. ಅಸ್ಸಾಂನಲ್ಲಿ ಪೌರತ್ವ ಬಿಕ್ಕಟ್ಟಿನಿಂದಾಗಿ 2010ರಿಂದ ಬಂಧನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಅಸ್ಸಾಂನ ಬಂಧನ ಕೇಂದ್ರಗಳು ಮಾನವೀಯ ಕಾಳಜಿಯ ಬಗ್ಗೆ ಪ್ರಶ್ನೆಗಳನ್ನು ಹೆಚ್ಚಿಸಿವೆ.

ಅಸ್ಸಾಂನಲ್ಲಿನ ಈ ಬಂಧನ ಕೇಂದ್ರಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಬಯಲು ಮಾಡಲು ಸೆಂಟರ್ ಫಾರ್ ನ್ಯೂ ಎಕನಾಮಿಕ್ಸ್ ಸ್ಟಡೀಸ್‌ನ ಆಜಾದ್ ಆವಾಜ್ ತಂಡವು ಪ್ರಾಥಮಿಕ ಸಂದರ್ಶನಗಳನ್ನು ನಡೆಸಿದೆ. ಈ ವೇಳೆ ಈ ಬಂಧನ ಕೇಂದ್ರಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಮತ್ತು ಅಲ್ಲಿ ಹೇಗೆ ವ್ಯಕ್ತಿಗಳ  ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂಬುವುದನ್ನು ಬಹಿರಂಗಪಡಿಸಿದೆ.

1951ರ ನಿರಾಶ್ರಿತರ ಕನ್ವೆನ್ಸನ್‌ ಪ್ರಕಾರ, ಸದಸ್ಯ ರಾಷ್ಟ್ರಗಳು, ವಲಸಿಗರು ಅನುಮತಿಯಿಲ್ಲದೆ ಪ್ರವೇಶಿಸಿದ್ದರೂ ಸಹ ವಲಸಿಗರನ್ನು ಬಂಧಿಸಲು, ಹೊರಹಾಕಲು ಸಾಧ್ಯವಿಲ್ಲ. ಭಾರತವು ಸದಸ್ಯ ರಾಷ್ಟ್ರವಲ್ಲದ ಕಾರಣ ಈ ನಿಯಮಗಳಿಗೆ ಅದು ಅನ್ವಯವಾಗಲ್ಲ. ಆದ್ದರಿಂದ ಅಕ್ರಮ ವಲಸಿಗರ ಪತ್ತೆ, ಬಂಧನ ಮತ್ತು ಗಡೀಪಾರು ಮಾಡುವುದಕ್ಕೆ ನಿರ್ಬಂಧ ಅನ್ವಯವಾಗುವುದಿಲ್ಲ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ವಿಶೇಷ ಪರಿವೀಕ್ಷಕ ಹರ್ಷ್ ಮಂದರ್ ಅವರು ಶಿಬಿರಗಳಲ್ಲಿನ ಭೀಕರ ಪರಿಸ್ಥಿತಿಯನ್ನು ಬಹಿರಂಗಪಡಿಸಿದ ನಂತರ ಬಂಧಿತರು ಎದುರಿಸುತ್ತಿರುವ ಶೋಚನೀಯ ಪರಿಸ್ಥಿತಿಗಳು ಬೆಳಕಿಗೆ ಬಂದವು. ಇದಲ್ಲದೆ ಸುಮಿ ಗೋಸ್ವಾಮಿ ಪ್ರಕರಣವು ಬಂಧನ ಕೇಂದ್ರದಲ್ಲಿನ ಪರಿಸ್ಥಿತಿಗಳನ್ನು ಬಯಲುಗೊಳಿಸಿದೆ.

ಫಾರಿನರ್ಸ್ ಟ್ರಿಬ್ಯೂನಲ್‌ನ ತಾಂತ್ರಿಕ ದೋಷದ ಕಾರಣ ಸುಮಿ ಗೋಸ್ವಾಮಿ ಅವರನ್ನು ಮಾಟಿಯಾ ಬಂಧನ ಕೇಂದ್ರಕ್ಕೆ ಕಳುಹಿಸಲಾಗಿದೆ. ಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿದ್ದರೂ ಆಕೆಯನ್ನು ಮೂರು ದಿನಗಳ ಕಾಲ ಬಂಧನ ಶಿಬಿರದಲ್ಲಿ ಇರಿಸಲಾಗಿದೆ. ನಂತರ ಅವಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಸುಮಿ ಗೋಸ್ವಾಮಿ ಬಂಧನ ಕೇಂದ್ರದಲ್ಲಿನ ತನ್ನ ನೆನಪನ್ನು ವಿವರಿಸುತ್ತಾ, ನಾನು ಏನು ಅನುಭವಿಸಿದೆ ಎಂದು ಯಾರಿಗೂ ಅರ್ಥವಾಗಲು ಸಾಧ್ಯವಿಲ್ಲ. ನನಗೆ ಮಾತ್ರ ಸಾಧ್ಯ. ನೀವು ಬಂಧನ ಶಿಬಿರಕ್ಕೆ ಹೋಗದಿದ್ದರೆ, ಅಲ್ಲಿ ವಾಸಿಸುವುದು ಹೇಗೆಂದು ನಿಮಗೆ ಅರ್ಥವಾಗುತ್ತಿರಲಿಲ್ಲ. ನಾನು ಇದನ್ನು ಅನುಭವಿಸುತ್ತೇನೆ ಎಂದು ನಾನು ಎಂದಿಗೂ ಯೋಚಿಸಲಿಲ್ಲ ಎಂದು ಹೇಳಿದ್ದಾರೆ.

ಅಲ್ಲಿನ ಜೀವನ ಪರಿಸ್ಥಿತಿಗಳ ಬಗ್ಗೆ ಮಾತನಾಡಿದ ಅವರು, ಒಂದು ಸೆಲ್‌ನಲ್ಲಿ ಸುಮಾರು 14 ರಿಂದ 15 ಜನರಿದ್ದರು. ಒಂದು ಅಟ್ಯಾಚ್ಡ್ ಬಾತ್ರೂಮ್ ಇತ್ತು. ನಾನು ಅಲ್ಲಿಗೆ ಹೋದ ಮೊದಲ ದಿನ, ಸ್ನಾನಗೃಹಗಳ ಬಾಗಿಲುಗಳು ಅರ್ಧ ಮಾತ್ರ ನಿರ್ಮಿಸಲ್ಪಟ್ಟಿರುವುದನ್ನು ಗಮನಿಸಿದಾಗ ನನಗೆ ಆಶ್ಚರ್ಯವಾಯಿತು. ಅಲ್ಲಿ ನಿಮ್ಮ ಮುಖವನ್ನು ಹೊರಗಿನಿಂದ ನೋಡಬಹುದು. ಒಬ್ಬ ಅಧಿಕಾರಿಯನ್ನು ಕೇಳಿದಾಗ, ಕೈದಿಗಳು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನಿರ್ಬಂಧಿಸಲು ಆ ರೀತಿಯಲ್ಲಿ ನಿರ್ಮಿಸಲಾಗಿದೆ ಎಂದು ನಾನು ಅರಿತುಕೊಂಡೆ. ಸ್ನಾನಗೃಹದಲ್ಲಿ ದುರ್ವಾಸನೆ ಬರುತ್ತಿತ್ತು. ಅಲ್ಲಿ ವಾಸಿಸುವುದು ಅಸಹನೀಯವಾಗಿದೆ. ನನಗೆ ಸತತ ಎರಡು ರಾತ್ರಿ ನಿದ್ರೆ ಬರಲಿಲ್ಲ. ನಾನು ಇಡೀ ರಾತ್ರಿ ಕುಳಿತಿದ್ದೆ. ಅವರು ನನಗೆ ಒದಗಿಸಿದ ಹಾಸಿಗೆಯಂತಿರುವ ವಸ್ತುಗಳನ್ನು ನಾನು ನನ್ನ ಜೀವನದಲ್ಲಿ ಎಂದೂ ಬಳಕೆ ಮಾಡಿರಲಿಲ್ಲ. ಅಷ್ಟು ಕಳಪೆಯಾಗಿತ್ತು ಎಂದು ಹೇಳಿದ್ದಾರೆ.

UNHRC ಮಾರ್ಗಸೂಚಿಗಳು ರಾಜ್ಯ ಕಾರಾಗೃಹಗಳನ್ನು ವಲಸಿಗರ ಬಂಧನಕ್ಕೆ ಬಳಸಬಾರದು ಎಂದು ಹೇಳುತ್ತದೆ. ಆದರೆ ವಲಸಿಗರನ್ನು ಶಿಕ್ಷೆಗೊಳಗಾದ ಕೈದಿಗಳೊಂದಿಗೆ ಅದೇ ಸೆಲ್‌ಗಳಲ್ಲಿ ಇರಿಸಲಾಗುತ್ತದೆ. ಸುಮಿ ಗೋಸ್ವಾಮಿ ತನ್ನ ಸೆಲ್‌ನಲ್ಲಿದ್ದವಳನ್ನು ಮಾತನಾಡಿಸಿದಾಗ ಆಕೆ ಜಮೀನಿಗಾಗಿ ಸಹೋದರನಿಗೆ ಕೊಲೆ ಮಾಡಿ ಜೈಲಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ. ಮತ್ತೋರ್ವ ಕೈದಿ ಜೊತೆ ಮಾತನಾಡಿದಾಗ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಜೈಲಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ. ನಿಮ್ಮ ಸುತ್ತಲೂ ಅಪರಾಧಿಗಳಿರುವ ಕೋಣೆಯಲ್ಲಿ ನೀವು ಹೇಗೆ ಶಾಂತಿಯುತವಾಗಿ ಮಲಗಬಹುದು? ಯಾರೋ ಬಂದು ನಿಮ್ಮನ್ನು ಕೊಲ್ಲಬಹುದು. ನಮ್ಮನ್ನು ಅಪರಾಧಿಗಳೊಂದಿಗೆ ಏಕೆ ಇರಿಸಲಾಗಿದೆ? ವಲಸಿಗರು ಮಾಡಿದ ಅಪರಾಧವೇನು? ಎಂದು ಸುಮಿ ಗೋಸ್ವಾಮಿ ಪ್ರಶ್ನಿಸಿದ್ದಾರೆ.

ಅಲ್ಲಿ ಒಬ್ಬಾಕೆ ಹತ್ತು ವರ್ಷಗಳಿಂದ ವಾಸ ಮಾಡುತ್ತಿದ್ದಾಳೆ ಎಂದು ಹೇಳಿದಾಗ ನನಗೆ ಆಘಾತವಾಯಿತು. ನಾನು ಅಲ್ಲಿ ಶಾಶ್ವತವಾಗಿ ವಾಸಿಸಬೇಕಾದರೆ ನಾನು ಜೀವಂತವಾಗಿರಲು ಸಾಧ್ಯವೇ ಇಲ್ಲ. ಎಲ್ಲಾ ಬಂಧಿತರು ಕೆಳದರ್ಜೆಯ ಪರಿಸ್ಥಿತಿಗಳಲ್ಲಿ ಬದುಕುತ್ತಿದ್ದಾರೆ. ಲೈಂಗಿಕ ದೌರ್ಜನ್ಯ ಮತ್ತು ಬಲವಂತದ ಗರ್ಭಪಾತ ಸೇರಿದಂತೆ ಮಹಿಳೆಯರು ಇನ್ನೂ ಕೆಟ್ಟ ಪರಿಸ್ಥಿತಿಗಳನ್ನು ಅನುಭವಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸಂಸದರ ಸಾಮೂಹಿಕ ಅಮಾನತ್ತಿನಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...