Homeಮುಖಪುಟವಾಮಾಚಾರಕ್ಕೆ ಮಹಿಳೆಯರಿಬ್ಬರ ನರಬಲಿ: ಅಘಾತ ವ್ಯಕ್ತಪಡಿಸಿದ ಕೇರಳ ಹೈಕೋರ್ಟ್‌‌

ವಾಮಾಚಾರಕ್ಕೆ ಮಹಿಳೆಯರಿಬ್ಬರ ನರಬಲಿ: ಅಘಾತ ವ್ಯಕ್ತಪಡಿಸಿದ ಕೇರಳ ಹೈಕೋರ್ಟ್‌‌

- Advertisement -
- Advertisement -

ಕೇರಳದ ಕೊಚ್ಚಿಯಲ್ಲಿ ನಾಪತ್ತೆಯಾಗಿದ್ದ ಇಬ್ಬರು ಮಹಿಳೆಯರನ್ನು ವಾಮಾಚಾರಕ್ಕಾಗಿ ನರಬಲಿ ನೀಡಲಾಗಿದೆ ಎಂಬ ವರದಿಗೆ ರಾಜ್ಯದ ಜನರು ಬೆಚ್ಚಿ ಬಿದ್ದಿದ್ದಾರೆ. ಪ್ರಕರಣಗಳ ಬಗ್ಗೆ ಅಘಾತ ವ್ಯಕ್ತಪಡಿಸಿರುವ ಕೇರಳ ಹೈಕೋರ್ಟ್‌ ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಅವರು, ರಾಜ್ಯ ಎಲ್ಲಿಗೆ ಹೋಗುತ್ತಿದೆ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದು, “ರಾಜ್ಯವು ವಿಚಲಿತವಾಗುತ್ತಿದೆ ಮತ್ತು ಜನರು ವಿಚಿತ್ರವಾಗಿ ವರ್ತಿಸಲು ಪ್ರಾರಂಭಿಸಿದ್ದಾರೆ” ಎಂದು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿ ಸೇರಿದಂತೆ ಒಟ್ಟು ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಾಮಾಚಾರಕ್ಕೆ ಬಲಿ ನೀಡಲಾಗಿದ್ದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರ ಅವಶೇಷಗಳನ್ನು ಪತ್ತೆ ಹಚ್ಚಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರೋಪಿಗಳನ್ನು ಮಂತ್ರವಾದಿ ಮೊಹಮ್ಮದ್ ಶಫಿ ಅಲಿಯಾಸ್ ರಶೀದ್‌ ಮತ್ತು ಬಗವಾಲ್ ಸಿಂಗ್ ಹಾಗೂ ಅವನ ಪತ್ನಿ ಲೈಲಾ ಎಂದು ಗುರುತಿಸಲಾಗಿದೆ. ನರಬಲಿಯು ಸಮೃದ್ಧಿಯನ್ನು ತರುತ್ತದೆ ಎಂದು ಮಂತ್ರವಾದಿಯು ದಂಪತಿಗೆ ನಂಬಿಸಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ವಾಮಾಚಾರ ಶಂಕೆ: ಮಂತ್ರವಾದಿಯ ಮಾತು ಕೇಳಿ ಮೂವರು ಮಹಿಳೆಯರ ಗುಂಪು ಹತ್ಯೆ

ಹೀಗಾಗಿ 50 ಮತ್ತು 52 ವರ್ಷ ವಯಸ್ಸಿನ ಇಬ್ಬರು ಮಹಿಳೆಯರನ್ನು ಅಪಹರಿಸಿ, ಕೊಂದು, ಅವರ ದೇಹಗಳನ್ನು ತುಂಡರಿಸಿ ಅದನ್ನು ದಂಪತಿಯ ಮನೆಯ ಆವರಣದಲ್ಲಿ ಹೂತುಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜೂನ್ ಮತ್ತು ಸೆಪ್ಟೆಂಬರ್‌ನಲ್ಲಿ ಕೊಚ್ಚಿಯ ಬೇರೆ ಬೇರೆ ಪ್ರದೇಶಗಳಿಂದ ಇಬ್ಬರು ಮಹಿಳೆಯರು ನಾಪತ್ತೆಯಾಗಿದ್ದರು. ಅವರ ಸಂಬಂಧಿಕರು ನೀಡಿದ ದೂರಿನನ್ವಯ ಪೊಲೀಸರು ತನಿಖೆ ಆರಂಭಿಸಿದ್ದರು. ಈ ತನಿಖೆಯಲ್ಲಿ ಪತ್ತನಂತಿಟ್ಟ ಜಿಲ್ಲೆಯ ಎಳಂತೂರ್‌ನಲ್ಲಿ ದಂಪತಿಗಳು ಹಣಕ್ಕಾಗಿ ವಾಮಾಚಾರದ ಮೂಲಕ ಇಬ್ಬರನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ ಎಂದು ತಿಳಿದು ಬಂದಿದೆ.

ಹತ್ಯೆಯಾದ ಮಹಿಳೆಯಿಬ್ಬರನ್ನು ತ್ರಿಶೂರ್ ಮೂಲದ ರೋಸ್ಲಿ ಮತ್ತು ತಮಿಳುನಾಡಿನ ಧರ್ಮಪುರಿ ಮೂಲದ ಪದ್ಮಮ್‌ ಎಂದು ಗುರುತಿಸಲಾಗಿದೆ. 52 ವರ್ಷದ ರೋಸ್ಲಿ ಜೂನ್‌ನಿಂದ ಕೊಚ್ಚಿ ಸಮೀಪದ ಕಾಲಡಿಯಿಂದ ನಾಪತ್ತೆಯಾಗಿದ್ದರು. ಹಾಗೆಯೇ 50 ವರ್ಷದ ಪದ್ಮಮ್ ಸೆಪ್ಟೆಂಬರ್ 26ರಿಂದ ಕೊಚ್ಚಿಯ ಕಡವಂತರಾದಿಂದ ನಾಪತ್ತೆಯಾಗಿದ್ದರು. ಅವರ ಸಂಬಂಧಿಕರು ಸ್ಥಳೀಯ ಪೊಲೀಸ್‌ ಠಾಣೆಗಳಲ್ಲಿ ದೂರು ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದರು.

ಇದನ್ನೂ ಓದಿ: ಜಾರ್ಖಂಡ್‌: ವಾಮಾಚಾರದ ಆರೋಪ, ಮಹಿಳೆಗೆ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿದ ಗ್ರಾಮಸ್ಥರು

ಪೊಲೀಸ್ ಮೂಲಗಳ ಮಾಹಿತಿಯ ಪ್ರಕಾರ, ಕೊಚ್ಚಿ ಬಳಿಯ ಪೆರುಂಬವೂರ್ ಮೂಲದವನಾದ ಶಫಿ ತನ್ನನ್ನು ಮಾಂತ್ರಿಕನೆಂದು ಪರಿಚಯಿಸಿಕೊಂಡು, ಸಾಮಾಜಿಕ ಜಾಲತಾಣದ ಮೂಲಕ ದಂಪತಿಗಳನ್ನು ಸಂಪರ್ಕಿಸಿದ್ದಾನೆ. ಮಾಟಮಂತ್ರ ಮೂಲಕ ಅವರಿಗೆ ಸುಖ ಸಮೃದ್ಧಿ ದೊರೆಯುತ್ತದೆ ಎಂದು ಅವರಿಗೆ ಭರವಸೆ ನೀಡಿದ್ದನು. ಜೊತೆಗೆ ಹತ್ಯೆಗೀಡಾದ ಇಬ್ಬರು ಮಹಿಳೆಯರಿಗೆ, ಅಶ್ಲೀಲ ಚಿತ್ರದಲ್ಲಿ ನಟಿಸಿದರೆ ಆಕರ್ಷಕ ಸಂಭಾವನೆ ನೀಡುವ ಆಮಿಷವೊಡ್ಡಿ, ಆರ್ಥಿಕವಾಗಿ ದುರ್ಬಲರಾಗಿದ್ದ ಮಹಿಳೆಯರನ್ನು ಪ್ರಭಾವಿಸಿದ್ದನು.

ಆಗಸ್ಟ್‌ನಲ್ಲಿ ರೋಸ್ಲಿಯನ್ನು ದಂಪತಿಯ ಮನೆಗೆ ಕರೆದೊಯ್ದು ಬರ್ಬರವಾಗಿ ಹತ್ಯೆ ಮಾಡಿ, ಅವರ ರಕ್ತವನ್ನು ಮನೆಯ ಆವರಣದಲ್ಲಿ ಚಿಮುಕಿಸಿ ಶವವನ್ನು ಹೂಳಲಾಯಿತು. ನಂತರ, ಸೆಪ್ಟೆಂಬರ್‌ನಲ್ಲಿ ಪದ್ಮಂ ಅವರನ್ನು ಕರೆದೊಯ್ದು ಅದೇ ರೀತಿಯಲ್ಲಿ ಕೊಲೆ ಮಾಡಲಾಗಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...