Homeಅಂತರಾಷ್ಟ್ರೀಯಮಾನವ ಕಳ್ಳಸಾಗಣೆ ವ್ಯವಸ್ಥೆಯ ವಿರುದ್ಧ ಹೋರಾಡಬೇಕು - ಅಮೆರಿಕದಲ್ಲಿ ಮೋದಿ ಹೇಳಿಕೆ

ಮಾನವ ಕಳ್ಳಸಾಗಣೆ ವ್ಯವಸ್ಥೆಯ ವಿರುದ್ಧ ಹೋರಾಡಬೇಕು – ಅಮೆರಿಕದಲ್ಲಿ ಮೋದಿ ಹೇಳಿಕೆ

- Advertisement -
- Advertisement -

ಸಾಮಾನ್ಯ ಕುಟುಂಬಗಳ ಜನರನ್ನು ದೊಡ್ಡ ಕನಸುಗಳು ಮತ್ತು ಭರವಸೆಗಳೊಂದಿಗೆ ಅಕ್ರಮ ವಲಸಿಗರನ್ನಾಗಿ ಮಾಡಿ ಇತರ ದೇಶಗಳಿಗೆ ಕರೆತರುವ ಮಾನವ ಕಳ್ಳಸಾಗಣೆ ಎಂಬ “ವ್ಯವಸ್ಥೆ”ಯ ವಿರುದ್ಧ ಹೋರಾಡುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ಇದು ಕೇವಲ ಭಾರತದ ಸಮಸ್ಯೆಯಲ್ಲ, ಜಾಗತಿಕ ಸಮಸ್ಯೆಯಾಗಿದೆ ಎಂದು ಗುರುವಾರ ಮೋದಿ ಹೇಳಿದ್ದಾರೆ. ಮಾನವ ಕಳ್ಳಸಾಗಣೆ ವ್ಯವಸ್ಥೆಯ

“ಯಾರಾದರೂ ಅಕ್ರಮವಾಗಿ ಬೇರೆ ದೇಶಕ್ಕೆ ಪ್ರವೇಶಿಸಿ ವಾಸಿಸುತ್ತಿದ್ದರೆ, ಅವರಿಗೆ ಆ ದೇಶದಲ್ಲಿ ವಾಸಿಸಲು ಯಾವುದೇ ಕಾನೂನುಬದ್ಧ ಹಕ್ಕು ಅಥವಾ ಅಧಿಕಾರವಿಲ್ಲ ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ” ಎಂದು ಅವರು ಹೇಳಿದ್ದಾರೆ. ಭಾರತ ಮತ್ತು ಅಮೆರಿಕಕ್ಕೆ ಸಂಬಂಧಿಸಿದಂತೆ ಪರಿಶೀಲಿಸಲಾದ ಭಾರತೀಯ ನಾಗರಿಕರು ಮತ್ತು ಅಮೆರಿಕದಲ್ಲಿ ಅಕ್ರಮವಾಗಿ ವಾಸಿಸುತ್ತಿರುವವರನ್ನು ಭಾರತವು ಮರಳಿ ಸ್ವೀಕರಿಸಲು ಸಿದ್ಧವಾಗಿದೆ ಎಂದು ನಾವು ಯಾವಾಗಲೂ ಹೇಳಿದ್ದೇವೆ ಎಂದು ಮೋದಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಆದಾಗ್ಯೂ, ಈ ವಿಚಾರ ಅಲ್ಲಿಗೆ ಕೊನೆಯಗುವುದಿಲ್ಲ. ಈ ಅಕ್ರಮ ವಲಸೆಗಾರರು ತುಂಬಾ ಸಾಮಾನ್ಯ ಕುಟುಂಬಗಳ ಮಕ್ಕಳು. ಅವರಿಗೆ ದೊಡ್ಡ ಕನಸುಗಳು ಮತ್ತು ಭರವಸೆಗಳನ್ನು ನೀಡಿ ಆಕರ್ಷಿಸಲಾಗುತ್ತದೆ. ಅವರಲ್ಲಿ ಅನೇಕರನ್ನು ಮಾನವ ಕಳ್ಳಸಾಗಣೆದಾರರು ದಾರಿ ತಪ್ಪಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ. ಮಾನವ ಕಳ್ಳಸಾಗಣೆ ವ್ಯವಸ್ಥೆಯ

“ಅದಕ್ಕಾಗಿಯೇ ನಾವು ಇಡೀ ಮಾನವ ಕಳ್ಳಸಾಗಣೆ ವ್ಯವಸ್ಥೆಯ ವಿರುದ್ಧ ಹೋರಾಡಬೇಕು. ಅಮೆರಿಕ ಮತ್ತು ಭಾರತ ಎರಡೂ ದೇಶಗಳು ಒಟ್ಟಾಗಿ ಈ ಇಡೀ ವ್ಯವಸ್ಥೆಯನ್ನು ಬೇರುಸಹಿತ ಕಿತ್ತು ನಾಶಪಡಿಸಬೇಕು. ಹಲವು ಕನಸುಗಳನ್ನು ಕಟ್ಟಿ ಅಕ್ರಮ ವಲಸೆ ಹೋಗುವ ಬಡ ಜನರು ಎಲ್ಲವನ್ನೂ ಮಾರಾಟ ಮಾಡುತ್ತಾರೆ. ಅವರಿಗೆ ಅನ್ಯಾಯವಾಗುತ್ತಿದೆ” ಎಂದು ಮೋದಿ ಹೇಳಿದ್ದಾರೆ.

“ನಾವು ಮಾಡುತ್ತಿರುವ ಈ ಬೃಹತ್ ಹೋರಾಟ ಈ ವ್ಯವಸ್ಥೆಯ ವಿರುದ್ಧವಾಗಿದೆ. ಅಧ್ಯಕ್ಷ ಟ್ರಂಪ್ ಕೂಡ ಈ ವ್ಯವಸ್ಥೆಯನ್ನು ಕೊನೆಗೊಳಿಸುವಲ್ಲಿ ಭಾರತವನ್ನು ಸಂಪೂರ್ಣವಾಗಿ ಬೆಂಬಲಿಸುತ್ತಾರೆ ಎಂದು ನನಗೆ ವಿಶ್ವಾಸವಿದೆ” ಎಂದು ಮೋದಿ ಹೇಳಿದ್ದಾರೆ.

ಅಮೆರಿಕದಿಂದ ಅಕ್ರಮ ವಲಸಿಗರನ್ನು ಗಡೀಪಾರು ಮಾಡುವ ಬಗ್ಗೆ ಮತ್ತು ಅವರನ್ನು ಮಿಲಿಟರಿ ವಿಮಾನದಲ್ಲಿ ಭಾರತಕ್ಕೆ ಮರಳಿ ಕರೆತರುವಾಗ ಸಂಕೋಲೆ ಹಾಕಿದ ಬಗ್ಗೆ ಮೋದಿ ಟ್ರಂಪ್ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ ಪ್ರಸ್ತಾಪಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, “ಹೌದು, ಅದು (ಅಕ್ರಮ ವಲಸೆಯ ವಿಷಯ) ಇಂದಿನ ಚರ್ಚೆಯ ಸಮಯದಲ್ಲಿ ಪ್ರಸ್ತಾಪವಾಯಿತು” ಎಂದು ಹೇಳಿದ್ದಾರೆ.

ಇದನ್ನೂಓದಿ:  ತೀವ್ರ ಪ್ರತಿಭಟನೆ ಹಿನ್ನಲೆ | ಶ್ರೀಲಂಕಾ ವಿದ್ಯುತ್ ಯೋಜನೆ ಹಿಂಪಡೆದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಅದಾನಿ

ತೀವ್ರ ಪ್ರತಿಭಟನೆ ಹಿನ್ನಲೆ | ಶ್ರೀಲಂಕಾ ವಿದ್ಯುತ್ ಯೋಜನೆ ಹಿಂಪಡೆದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಅದಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...