Homeಅಂತರಾಷ್ಟ್ರೀಯಮಾನವ ಕಳ್ಳಸಾಗಣೆ ವ್ಯವಸ್ಥೆಯ ವಿರುದ್ಧ ಹೋರಾಡಬೇಕು - ಅಮೆರಿಕದಲ್ಲಿ ಮೋದಿ ಹೇಳಿಕೆ

ಮಾನವ ಕಳ್ಳಸಾಗಣೆ ವ್ಯವಸ್ಥೆಯ ವಿರುದ್ಧ ಹೋರಾಡಬೇಕು – ಅಮೆರಿಕದಲ್ಲಿ ಮೋದಿ ಹೇಳಿಕೆ

- Advertisement -
- Advertisement -

ಸಾಮಾನ್ಯ ಕುಟುಂಬಗಳ ಜನರನ್ನು ದೊಡ್ಡ ಕನಸುಗಳು ಮತ್ತು ಭರವಸೆಗಳೊಂದಿಗೆ ಅಕ್ರಮ ವಲಸಿಗರನ್ನಾಗಿ ಮಾಡಿ ಇತರ ದೇಶಗಳಿಗೆ ಕರೆತರುವ ಮಾನವ ಕಳ್ಳಸಾಗಣೆ ಎಂಬ “ವ್ಯವಸ್ಥೆ”ಯ ವಿರುದ್ಧ ಹೋರಾಡುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ಇದು ಕೇವಲ ಭಾರತದ ಸಮಸ್ಯೆಯಲ್ಲ, ಜಾಗತಿಕ ಸಮಸ್ಯೆಯಾಗಿದೆ ಎಂದು ಗುರುವಾರ ಮೋದಿ ಹೇಳಿದ್ದಾರೆ. ಮಾನವ ಕಳ್ಳಸಾಗಣೆ ವ್ಯವಸ್ಥೆಯ

“ಯಾರಾದರೂ ಅಕ್ರಮವಾಗಿ ಬೇರೆ ದೇಶಕ್ಕೆ ಪ್ರವೇಶಿಸಿ ವಾಸಿಸುತ್ತಿದ್ದರೆ, ಅವರಿಗೆ ಆ ದೇಶದಲ್ಲಿ ವಾಸಿಸಲು ಯಾವುದೇ ಕಾನೂನುಬದ್ಧ ಹಕ್ಕು ಅಥವಾ ಅಧಿಕಾರವಿಲ್ಲ ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ” ಎಂದು ಅವರು ಹೇಳಿದ್ದಾರೆ. ಭಾರತ ಮತ್ತು ಅಮೆರಿಕಕ್ಕೆ ಸಂಬಂಧಿಸಿದಂತೆ ಪರಿಶೀಲಿಸಲಾದ ಭಾರತೀಯ ನಾಗರಿಕರು ಮತ್ತು ಅಮೆರಿಕದಲ್ಲಿ ಅಕ್ರಮವಾಗಿ ವಾಸಿಸುತ್ತಿರುವವರನ್ನು ಭಾರತವು ಮರಳಿ ಸ್ವೀಕರಿಸಲು ಸಿದ್ಧವಾಗಿದೆ ಎಂದು ನಾವು ಯಾವಾಗಲೂ ಹೇಳಿದ್ದೇವೆ ಎಂದು ಮೋದಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಆದಾಗ್ಯೂ, ಈ ವಿಚಾರ ಅಲ್ಲಿಗೆ ಕೊನೆಯಗುವುದಿಲ್ಲ. ಈ ಅಕ್ರಮ ವಲಸೆಗಾರರು ತುಂಬಾ ಸಾಮಾನ್ಯ ಕುಟುಂಬಗಳ ಮಕ್ಕಳು. ಅವರಿಗೆ ದೊಡ್ಡ ಕನಸುಗಳು ಮತ್ತು ಭರವಸೆಗಳನ್ನು ನೀಡಿ ಆಕರ್ಷಿಸಲಾಗುತ್ತದೆ. ಅವರಲ್ಲಿ ಅನೇಕರನ್ನು ಮಾನವ ಕಳ್ಳಸಾಗಣೆದಾರರು ದಾರಿ ತಪ್ಪಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ. ಮಾನವ ಕಳ್ಳಸಾಗಣೆ ವ್ಯವಸ್ಥೆಯ

“ಅದಕ್ಕಾಗಿಯೇ ನಾವು ಇಡೀ ಮಾನವ ಕಳ್ಳಸಾಗಣೆ ವ್ಯವಸ್ಥೆಯ ವಿರುದ್ಧ ಹೋರಾಡಬೇಕು. ಅಮೆರಿಕ ಮತ್ತು ಭಾರತ ಎರಡೂ ದೇಶಗಳು ಒಟ್ಟಾಗಿ ಈ ಇಡೀ ವ್ಯವಸ್ಥೆಯನ್ನು ಬೇರುಸಹಿತ ಕಿತ್ತು ನಾಶಪಡಿಸಬೇಕು. ಹಲವು ಕನಸುಗಳನ್ನು ಕಟ್ಟಿ ಅಕ್ರಮ ವಲಸೆ ಹೋಗುವ ಬಡ ಜನರು ಎಲ್ಲವನ್ನೂ ಮಾರಾಟ ಮಾಡುತ್ತಾರೆ. ಅವರಿಗೆ ಅನ್ಯಾಯವಾಗುತ್ತಿದೆ” ಎಂದು ಮೋದಿ ಹೇಳಿದ್ದಾರೆ.

“ನಾವು ಮಾಡುತ್ತಿರುವ ಈ ಬೃಹತ್ ಹೋರಾಟ ಈ ವ್ಯವಸ್ಥೆಯ ವಿರುದ್ಧವಾಗಿದೆ. ಅಧ್ಯಕ್ಷ ಟ್ರಂಪ್ ಕೂಡ ಈ ವ್ಯವಸ್ಥೆಯನ್ನು ಕೊನೆಗೊಳಿಸುವಲ್ಲಿ ಭಾರತವನ್ನು ಸಂಪೂರ್ಣವಾಗಿ ಬೆಂಬಲಿಸುತ್ತಾರೆ ಎಂದು ನನಗೆ ವಿಶ್ವಾಸವಿದೆ” ಎಂದು ಮೋದಿ ಹೇಳಿದ್ದಾರೆ.

ಅಮೆರಿಕದಿಂದ ಅಕ್ರಮ ವಲಸಿಗರನ್ನು ಗಡೀಪಾರು ಮಾಡುವ ಬಗ್ಗೆ ಮತ್ತು ಅವರನ್ನು ಮಿಲಿಟರಿ ವಿಮಾನದಲ್ಲಿ ಭಾರತಕ್ಕೆ ಮರಳಿ ಕರೆತರುವಾಗ ಸಂಕೋಲೆ ಹಾಕಿದ ಬಗ್ಗೆ ಮೋದಿ ಟ್ರಂಪ್ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ ಪ್ರಸ್ತಾಪಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, “ಹೌದು, ಅದು (ಅಕ್ರಮ ವಲಸೆಯ ವಿಷಯ) ಇಂದಿನ ಚರ್ಚೆಯ ಸಮಯದಲ್ಲಿ ಪ್ರಸ್ತಾಪವಾಯಿತು” ಎಂದು ಹೇಳಿದ್ದಾರೆ.

ಇದನ್ನೂಓದಿ:  ತೀವ್ರ ಪ್ರತಿಭಟನೆ ಹಿನ್ನಲೆ | ಶ್ರೀಲಂಕಾ ವಿದ್ಯುತ್ ಯೋಜನೆ ಹಿಂಪಡೆದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಅದಾನಿ

ತೀವ್ರ ಪ್ರತಿಭಟನೆ ಹಿನ್ನಲೆ | ಶ್ರೀಲಂಕಾ ವಿದ್ಯುತ್ ಯೋಜನೆ ಹಿಂಪಡೆದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಅದಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...