Homeಅಂತರಾಷ್ಟ್ರೀಯಮಾನವ ಕಳ್ಳಸಾಗಣೆ ವ್ಯವಸ್ಥೆಯ ವಿರುದ್ಧ ಹೋರಾಡಬೇಕು - ಅಮೆರಿಕದಲ್ಲಿ ಮೋದಿ ಹೇಳಿಕೆ

ಮಾನವ ಕಳ್ಳಸಾಗಣೆ ವ್ಯವಸ್ಥೆಯ ವಿರುದ್ಧ ಹೋರಾಡಬೇಕು – ಅಮೆರಿಕದಲ್ಲಿ ಮೋದಿ ಹೇಳಿಕೆ

- Advertisement -
- Advertisement -

ಸಾಮಾನ್ಯ ಕುಟುಂಬಗಳ ಜನರನ್ನು ದೊಡ್ಡ ಕನಸುಗಳು ಮತ್ತು ಭರವಸೆಗಳೊಂದಿಗೆ ಅಕ್ರಮ ವಲಸಿಗರನ್ನಾಗಿ ಮಾಡಿ ಇತರ ದೇಶಗಳಿಗೆ ಕರೆತರುವ ಮಾನವ ಕಳ್ಳಸಾಗಣೆ ಎಂಬ “ವ್ಯವಸ್ಥೆ”ಯ ವಿರುದ್ಧ ಹೋರಾಡುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ಇದು ಕೇವಲ ಭಾರತದ ಸಮಸ್ಯೆಯಲ್ಲ, ಜಾಗತಿಕ ಸಮಸ್ಯೆಯಾಗಿದೆ ಎಂದು ಗುರುವಾರ ಮೋದಿ ಹೇಳಿದ್ದಾರೆ. ಮಾನವ ಕಳ್ಳಸಾಗಣೆ ವ್ಯವಸ್ಥೆಯ

“ಯಾರಾದರೂ ಅಕ್ರಮವಾಗಿ ಬೇರೆ ದೇಶಕ್ಕೆ ಪ್ರವೇಶಿಸಿ ವಾಸಿಸುತ್ತಿದ್ದರೆ, ಅವರಿಗೆ ಆ ದೇಶದಲ್ಲಿ ವಾಸಿಸಲು ಯಾವುದೇ ಕಾನೂನುಬದ್ಧ ಹಕ್ಕು ಅಥವಾ ಅಧಿಕಾರವಿಲ್ಲ ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ” ಎಂದು ಅವರು ಹೇಳಿದ್ದಾರೆ. ಭಾರತ ಮತ್ತು ಅಮೆರಿಕಕ್ಕೆ ಸಂಬಂಧಿಸಿದಂತೆ ಪರಿಶೀಲಿಸಲಾದ ಭಾರತೀಯ ನಾಗರಿಕರು ಮತ್ತು ಅಮೆರಿಕದಲ್ಲಿ ಅಕ್ರಮವಾಗಿ ವಾಸಿಸುತ್ತಿರುವವರನ್ನು ಭಾರತವು ಮರಳಿ ಸ್ವೀಕರಿಸಲು ಸಿದ್ಧವಾಗಿದೆ ಎಂದು ನಾವು ಯಾವಾಗಲೂ ಹೇಳಿದ್ದೇವೆ ಎಂದು ಮೋದಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಆದಾಗ್ಯೂ, ಈ ವಿಚಾರ ಅಲ್ಲಿಗೆ ಕೊನೆಯಗುವುದಿಲ್ಲ. ಈ ಅಕ್ರಮ ವಲಸೆಗಾರರು ತುಂಬಾ ಸಾಮಾನ್ಯ ಕುಟುಂಬಗಳ ಮಕ್ಕಳು. ಅವರಿಗೆ ದೊಡ್ಡ ಕನಸುಗಳು ಮತ್ತು ಭರವಸೆಗಳನ್ನು ನೀಡಿ ಆಕರ್ಷಿಸಲಾಗುತ್ತದೆ. ಅವರಲ್ಲಿ ಅನೇಕರನ್ನು ಮಾನವ ಕಳ್ಳಸಾಗಣೆದಾರರು ದಾರಿ ತಪ್ಪಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ. ಮಾನವ ಕಳ್ಳಸಾಗಣೆ ವ್ಯವಸ್ಥೆಯ

“ಅದಕ್ಕಾಗಿಯೇ ನಾವು ಇಡೀ ಮಾನವ ಕಳ್ಳಸಾಗಣೆ ವ್ಯವಸ್ಥೆಯ ವಿರುದ್ಧ ಹೋರಾಡಬೇಕು. ಅಮೆರಿಕ ಮತ್ತು ಭಾರತ ಎರಡೂ ದೇಶಗಳು ಒಟ್ಟಾಗಿ ಈ ಇಡೀ ವ್ಯವಸ್ಥೆಯನ್ನು ಬೇರುಸಹಿತ ಕಿತ್ತು ನಾಶಪಡಿಸಬೇಕು. ಹಲವು ಕನಸುಗಳನ್ನು ಕಟ್ಟಿ ಅಕ್ರಮ ವಲಸೆ ಹೋಗುವ ಬಡ ಜನರು ಎಲ್ಲವನ್ನೂ ಮಾರಾಟ ಮಾಡುತ್ತಾರೆ. ಅವರಿಗೆ ಅನ್ಯಾಯವಾಗುತ್ತಿದೆ” ಎಂದು ಮೋದಿ ಹೇಳಿದ್ದಾರೆ.

“ನಾವು ಮಾಡುತ್ತಿರುವ ಈ ಬೃಹತ್ ಹೋರಾಟ ಈ ವ್ಯವಸ್ಥೆಯ ವಿರುದ್ಧವಾಗಿದೆ. ಅಧ್ಯಕ್ಷ ಟ್ರಂಪ್ ಕೂಡ ಈ ವ್ಯವಸ್ಥೆಯನ್ನು ಕೊನೆಗೊಳಿಸುವಲ್ಲಿ ಭಾರತವನ್ನು ಸಂಪೂರ್ಣವಾಗಿ ಬೆಂಬಲಿಸುತ್ತಾರೆ ಎಂದು ನನಗೆ ವಿಶ್ವಾಸವಿದೆ” ಎಂದು ಮೋದಿ ಹೇಳಿದ್ದಾರೆ.

ಅಮೆರಿಕದಿಂದ ಅಕ್ರಮ ವಲಸಿಗರನ್ನು ಗಡೀಪಾರು ಮಾಡುವ ಬಗ್ಗೆ ಮತ್ತು ಅವರನ್ನು ಮಿಲಿಟರಿ ವಿಮಾನದಲ್ಲಿ ಭಾರತಕ್ಕೆ ಮರಳಿ ಕರೆತರುವಾಗ ಸಂಕೋಲೆ ಹಾಕಿದ ಬಗ್ಗೆ ಮೋದಿ ಟ್ರಂಪ್ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ ಪ್ರಸ್ತಾಪಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, “ಹೌದು, ಅದು (ಅಕ್ರಮ ವಲಸೆಯ ವಿಷಯ) ಇಂದಿನ ಚರ್ಚೆಯ ಸಮಯದಲ್ಲಿ ಪ್ರಸ್ತಾಪವಾಯಿತು” ಎಂದು ಹೇಳಿದ್ದಾರೆ.

ಇದನ್ನೂಓದಿ:  ತೀವ್ರ ಪ್ರತಿಭಟನೆ ಹಿನ್ನಲೆ | ಶ್ರೀಲಂಕಾ ವಿದ್ಯುತ್ ಯೋಜನೆ ಹಿಂಪಡೆದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಅದಾನಿ

ತೀವ್ರ ಪ್ರತಿಭಟನೆ ಹಿನ್ನಲೆ | ಶ್ರೀಲಂಕಾ ವಿದ್ಯುತ್ ಯೋಜನೆ ಹಿಂಪಡೆದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಅದಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...