Homeಮುಖಪುಟಮಣಿಪುರದಲ್ಲಿ ಮಾನವೀಯತೆ ಸತ್ತಿದೆ: ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರಕ್ಕೆ ವಿಪಕ್ಷಗಳ ಕಿಡಿ

ಮಣಿಪುರದಲ್ಲಿ ಮಾನವೀಯತೆ ಸತ್ತಿದೆ: ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರಕ್ಕೆ ವಿಪಕ್ಷಗಳ ಕಿಡಿ

ಸರ್ಕಾರ ಕ್ರಮ ತೆಗೆದುಕೊಳ್ಳದಿದ್ದರೆ ನಾವು ಕ್ರಮಕ್ಕೆ ಮುಂದಾಗುತ್ತೇವೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಡಿ.ವೈ ಚಂದ್ರಚೂಡ್ ತಿಳಿಸಿದ್ದಾರೆ.

- Advertisement -
- Advertisement -

ಮಣಿಪುರದಲ್ಲಿ ಮಾನವೀಯತೆ ಸತ್ತಿದೆ. ನರೇಂದ್ರ ಮೋದಿಯವರೆ ನಿಮ್ಮ ಮೌನವನ್ನು ಭಾರತ ಎಂದಿಗೂ ಕ್ಷಮಿಸುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರದ ಅಮಾನುಷ ವಿಡಿಯೋ ವೈರಲ್ ಆದ ಬೆನ್ನಲ್ಲೆ ತೀವ್ರ ಆತಂಕ ವ್ಯಕ್ತಪಡಿಸಿರುವ ಅವರು, “ಮೋದಿ ಸರ್ಕಾರ ಮತ್ತು ಬಿಜೆಪಿ ರಾಜ್ಯದ ಸೂಕ್ಷ್ಮ ಸಾಮಾಜಿಕ ರಚನೆಯನ್ನು ನಾಶಪಡಿಸುವ ಮೂಲಕ ಪ್ರಜಾಪ್ರಭುತ್ವ ಮತ್ತು ಕಾನೂನಿನ ಆಡಳಿತವನ್ನು ಮೊಬೊಕ್ರಸಿಯಾಗಿ ಬದಲಾಯಿಸಿವೆ” ಎಂದಿದ್ದಾರೆ.

ನಿಮ್ಮ ಸರ್ಕಾರದಲ್ಲಿ ಯಾವುದೇ ಆತ್ಮಸಾಕ್ಷಿ ಅಥವಾ ಮರ್ಯಾದೆ ಉಳಿದಿದ್ದರೆ, ನೀವು ಸಂಸತ್ತಿನಲ್ಲಿ ಮಣಿಪುರದ ಬಗ್ಗೆ ಮಾತನಾಡಬೇಕು ಮತ್ತು ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ನಿಮ್ಮ ದ್ವಂದ್ವ ಅಸಮರ್ಥತೆಗೆ ಇತರರನ್ನು ದೂಷಿಸದೆ ಏನಾಯಿತು ಎಂದು ರಾಷ್ಟ್ರಕ್ಕೆ ತಿಳಿಸಬೇಕು ಎಂದು ಮೋದಿಯವರಿಗೆ ಖರ್ಗೆ ತಾಕೀತು ಮಾಡಿದ್ದಾರೆ.

ನೀವು ನಿಮ್ಮ ಸಾಂವಿಧಾನಿಕ ಜವಾಬ್ದಾರಿಯನ್ನು ತ್ಯಜಿಸಿದ್ದೀರಿ. ಈ ಬಿಕ್ಕಟ್ಟಿನ ಸಮಯದಲ್ಲಿ, ನಾವು ಮಣಿಪುರದ ಜನರೊಂದಿಗೆ ಒಟ್ಟಾಗಿ ನಿಲ್ಲುತ್ತೇವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ವೈರಲ್ ವಿಡಿಯೋ ತುಂಬಾ ಆಘಾತ ಉಂಟು ಮಾಡಿದೆ. ಈ ರೀತಿಯ ಘಟನೆಗಳು ಯಾವುದೇ ಕಾರಣಕ್ಕೂ ಸ್ವೀಕಾರಾರ್ಹವಲ್ಲ. ಕೋಮುವಾದಿ ಗಲಭೆಗಳಲ್ಲಿ ಮಹಿಳೆಯರನ್ನು ಆಯುಧವಾಗಿ ಬಳಸಿಕೊಳ್ಳುವುದು ಅತಿ ದೊಡ್ಡ ಸಾಂವಿಧಾನಿಕ ದುರ್ಬಳಕೆಯಾಗಿದೆ. ಸರ್ಕಾರ ಕ್ರಮ ತೆಗೆದುಕೊಳ್ಳದಿದ್ದರೆ ನಾವು ಕ್ರಮಕ್ಕೆ ಮುಂದಾಗುತ್ತೇವೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಡಿ.ವೈ ಚಂದ್ರಚೂಡ್ ತಿಳಿಸಿದ್ದಾರೆ.

ಟಿಎಂಸಿ ಸಂಸದೆ ಮೊಹುವ ಮೊಯಿತ್ರಾ ಟ್ವೀಟ್ ಮಾಡಿ, “ಮಣಿಪುರದಲ್ಲಿ ಅಂತರ್ಯುದ್ಧ ನಡೆಯುತ್ತಿದೆ. ನಾವೆಲ್ಲರೂ ಯುದ್ಧ ಅಪರಾಧಗಳಿಗೆ ಸಾಕ್ಷಿಯಾಗಿದ್ದೇವೆ. ಇದು ನಮ್ಮ ದೇಶದಲ್ಲಿ ನಡೆಯುತ್ತಿದ್ದು, ಬಿಜೆಪಿಯು ಈ ಸ್ಥಿತಿಗೆ ದೇಶವನ್ನು ತಂದೊಡ್ಡಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಟ್ವಿಟ್ ಮಾಡಿ, “ಮಣಿಪುರದಲ್ಲಿ ನಡೆದಿರುವ ಘಟನೆ ಅತ್ಯಂತ ನಾಚಿಕೆಗೇಡು ಮತ್ತು ಖಂಡನೀಯ. ಭಾರತೀಯ ಸಮಾಜದಲ್ಲಿ ಈ ರೀತಿಯ ಹೇಯ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ಮಣಿಪುರದಲ್ಲಿ ಪರಿಸ್ಥಿತಿ ಚಿಂತಾಜನಕವಾಗುತ್ತಿದೆ. ಮಣಿಪುರದ ಪರಿಸ್ಥಿತಿಯ ಬಗ್ಗೆ ಗಮನ ಹರಿಸುವಂತೆ ನಾನು ಪ್ರಧಾನಿಗೆ ಮನವಿ ಮಾಡುತ್ತೇನೆ. ದಯವಿಟ್ಟು ಈ ಘಟನೆಯ ವಿಡಿಯೋದಲ್ಲಿರುವ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ. ಇಂತಹ ಕ್ರಿಮಿನಲ್ ಸ್ವಭಾವದವರಿಗೆ ಭಾರತದಲ್ಲಿ ಜಾಗ ಇರಬಾರದು” ಎಂದು ಆಗ್ರಹಿಸಿದ್ದಾರೆ.

ವಿಡಿಯೋ ಡಿಲೀಟ್ ಮಾಡುವಂತೆ ಟ್ವಿಟರ್ ಮತ್ತು ಇತರ ಸಂಸ್ಥೆಗಳಿಗೆ ಸೂಚನೆ

ಆ ಅಮಾನವೀಯ ವಿಡಿಯೋ ಬುಧವಾರ ವೈರಲ್ ಆಗುತ್ತಿದ್ದಂತೆ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಆ ವೀಡಿಯೊವನ್ನು ತೆಗೆದುಹಾಕುವಂತೆ ಕೇಂದ್ರ ಸರ್ಕಾರವು ಟ್ವಿಟರ್ ಮತ್ತು ಇತರ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ಸೂಚಿಸಿದೆ. ಈ ವಿಷಯವು ತನಿಖೆಯಲ್ಲಿರುತ್ತದೆ ಹಾಗಾಗಿ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಮಾಧ್ಯಮ ವೇದಿಕೆಗಳು ಭಾರತೀಯ ಕಾನೂನುಗಳಿಗೆ ಬದ್ಧವಾಗಿರಬೇಕು ಎಂದು ತಾಕೀತು ಮಾಡಿದೆ.

ಇದನ್ನೂ ಓದಿ: ಮಣಿಪುರದಲ್ಲಿ ಹೇಯ ಕೃತ್ಯ: ಬುಡಕಟ್ಟು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...