Homeಮುಖಪುಟಮಣಿಪುರದಲ್ಲಿ ಮಾನವೀಯತೆ ಸತ್ತಿದೆ: ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರಕ್ಕೆ ವಿಪಕ್ಷಗಳ ಕಿಡಿ

ಮಣಿಪುರದಲ್ಲಿ ಮಾನವೀಯತೆ ಸತ್ತಿದೆ: ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರಕ್ಕೆ ವಿಪಕ್ಷಗಳ ಕಿಡಿ

ಸರ್ಕಾರ ಕ್ರಮ ತೆಗೆದುಕೊಳ್ಳದಿದ್ದರೆ ನಾವು ಕ್ರಮಕ್ಕೆ ಮುಂದಾಗುತ್ತೇವೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಡಿ.ವೈ ಚಂದ್ರಚೂಡ್ ತಿಳಿಸಿದ್ದಾರೆ.

- Advertisement -
- Advertisement -

ಮಣಿಪುರದಲ್ಲಿ ಮಾನವೀಯತೆ ಸತ್ತಿದೆ. ನರೇಂದ್ರ ಮೋದಿಯವರೆ ನಿಮ್ಮ ಮೌನವನ್ನು ಭಾರತ ಎಂದಿಗೂ ಕ್ಷಮಿಸುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರದ ಅಮಾನುಷ ವಿಡಿಯೋ ವೈರಲ್ ಆದ ಬೆನ್ನಲ್ಲೆ ತೀವ್ರ ಆತಂಕ ವ್ಯಕ್ತಪಡಿಸಿರುವ ಅವರು, “ಮೋದಿ ಸರ್ಕಾರ ಮತ್ತು ಬಿಜೆಪಿ ರಾಜ್ಯದ ಸೂಕ್ಷ್ಮ ಸಾಮಾಜಿಕ ರಚನೆಯನ್ನು ನಾಶಪಡಿಸುವ ಮೂಲಕ ಪ್ರಜಾಪ್ರಭುತ್ವ ಮತ್ತು ಕಾನೂನಿನ ಆಡಳಿತವನ್ನು ಮೊಬೊಕ್ರಸಿಯಾಗಿ ಬದಲಾಯಿಸಿವೆ” ಎಂದಿದ್ದಾರೆ.

ನಿಮ್ಮ ಸರ್ಕಾರದಲ್ಲಿ ಯಾವುದೇ ಆತ್ಮಸಾಕ್ಷಿ ಅಥವಾ ಮರ್ಯಾದೆ ಉಳಿದಿದ್ದರೆ, ನೀವು ಸಂಸತ್ತಿನಲ್ಲಿ ಮಣಿಪುರದ ಬಗ್ಗೆ ಮಾತನಾಡಬೇಕು ಮತ್ತು ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ನಿಮ್ಮ ದ್ವಂದ್ವ ಅಸಮರ್ಥತೆಗೆ ಇತರರನ್ನು ದೂಷಿಸದೆ ಏನಾಯಿತು ಎಂದು ರಾಷ್ಟ್ರಕ್ಕೆ ತಿಳಿಸಬೇಕು ಎಂದು ಮೋದಿಯವರಿಗೆ ಖರ್ಗೆ ತಾಕೀತು ಮಾಡಿದ್ದಾರೆ.

ನೀವು ನಿಮ್ಮ ಸಾಂವಿಧಾನಿಕ ಜವಾಬ್ದಾರಿಯನ್ನು ತ್ಯಜಿಸಿದ್ದೀರಿ. ಈ ಬಿಕ್ಕಟ್ಟಿನ ಸಮಯದಲ್ಲಿ, ನಾವು ಮಣಿಪುರದ ಜನರೊಂದಿಗೆ ಒಟ್ಟಾಗಿ ನಿಲ್ಲುತ್ತೇವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ವೈರಲ್ ವಿಡಿಯೋ ತುಂಬಾ ಆಘಾತ ಉಂಟು ಮಾಡಿದೆ. ಈ ರೀತಿಯ ಘಟನೆಗಳು ಯಾವುದೇ ಕಾರಣಕ್ಕೂ ಸ್ವೀಕಾರಾರ್ಹವಲ್ಲ. ಕೋಮುವಾದಿ ಗಲಭೆಗಳಲ್ಲಿ ಮಹಿಳೆಯರನ್ನು ಆಯುಧವಾಗಿ ಬಳಸಿಕೊಳ್ಳುವುದು ಅತಿ ದೊಡ್ಡ ಸಾಂವಿಧಾನಿಕ ದುರ್ಬಳಕೆಯಾಗಿದೆ. ಸರ್ಕಾರ ಕ್ರಮ ತೆಗೆದುಕೊಳ್ಳದಿದ್ದರೆ ನಾವು ಕ್ರಮಕ್ಕೆ ಮುಂದಾಗುತ್ತೇವೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಡಿ.ವೈ ಚಂದ್ರಚೂಡ್ ತಿಳಿಸಿದ್ದಾರೆ.

ಟಿಎಂಸಿ ಸಂಸದೆ ಮೊಹುವ ಮೊಯಿತ್ರಾ ಟ್ವೀಟ್ ಮಾಡಿ, “ಮಣಿಪುರದಲ್ಲಿ ಅಂತರ್ಯುದ್ಧ ನಡೆಯುತ್ತಿದೆ. ನಾವೆಲ್ಲರೂ ಯುದ್ಧ ಅಪರಾಧಗಳಿಗೆ ಸಾಕ್ಷಿಯಾಗಿದ್ದೇವೆ. ಇದು ನಮ್ಮ ದೇಶದಲ್ಲಿ ನಡೆಯುತ್ತಿದ್ದು, ಬಿಜೆಪಿಯು ಈ ಸ್ಥಿತಿಗೆ ದೇಶವನ್ನು ತಂದೊಡ್ಡಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಟ್ವಿಟ್ ಮಾಡಿ, “ಮಣಿಪುರದಲ್ಲಿ ನಡೆದಿರುವ ಘಟನೆ ಅತ್ಯಂತ ನಾಚಿಕೆಗೇಡು ಮತ್ತು ಖಂಡನೀಯ. ಭಾರತೀಯ ಸಮಾಜದಲ್ಲಿ ಈ ರೀತಿಯ ಹೇಯ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ಮಣಿಪುರದಲ್ಲಿ ಪರಿಸ್ಥಿತಿ ಚಿಂತಾಜನಕವಾಗುತ್ತಿದೆ. ಮಣಿಪುರದ ಪರಿಸ್ಥಿತಿಯ ಬಗ್ಗೆ ಗಮನ ಹರಿಸುವಂತೆ ನಾನು ಪ್ರಧಾನಿಗೆ ಮನವಿ ಮಾಡುತ್ತೇನೆ. ದಯವಿಟ್ಟು ಈ ಘಟನೆಯ ವಿಡಿಯೋದಲ್ಲಿರುವ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ. ಇಂತಹ ಕ್ರಿಮಿನಲ್ ಸ್ವಭಾವದವರಿಗೆ ಭಾರತದಲ್ಲಿ ಜಾಗ ಇರಬಾರದು” ಎಂದು ಆಗ್ರಹಿಸಿದ್ದಾರೆ.

ವಿಡಿಯೋ ಡಿಲೀಟ್ ಮಾಡುವಂತೆ ಟ್ವಿಟರ್ ಮತ್ತು ಇತರ ಸಂಸ್ಥೆಗಳಿಗೆ ಸೂಚನೆ

ಆ ಅಮಾನವೀಯ ವಿಡಿಯೋ ಬುಧವಾರ ವೈರಲ್ ಆಗುತ್ತಿದ್ದಂತೆ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಆ ವೀಡಿಯೊವನ್ನು ತೆಗೆದುಹಾಕುವಂತೆ ಕೇಂದ್ರ ಸರ್ಕಾರವು ಟ್ವಿಟರ್ ಮತ್ತು ಇತರ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ಸೂಚಿಸಿದೆ. ಈ ವಿಷಯವು ತನಿಖೆಯಲ್ಲಿರುತ್ತದೆ ಹಾಗಾಗಿ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಮಾಧ್ಯಮ ವೇದಿಕೆಗಳು ಭಾರತೀಯ ಕಾನೂನುಗಳಿಗೆ ಬದ್ಧವಾಗಿರಬೇಕು ಎಂದು ತಾಕೀತು ಮಾಡಿದೆ.

ಇದನ್ನೂ ಓದಿ: ಮಣಿಪುರದಲ್ಲಿ ಹೇಯ ಕೃತ್ಯ: ಬುಡಕಟ್ಟು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...