Homeಮುಖಪುಟಮುಸ್ಲಿಂ ಮಹಿಳೆಯರ ಅವಹೇಳನ: ಕಲ್ಲಡ್ಕ ಭಟ್‌ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್‌

ಮುಸ್ಲಿಂ ಮಹಿಳೆಯರ ಅವಹೇಳನ: ಕಲ್ಲಡ್ಕ ಭಟ್‌ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್‌

- Advertisement -
- Advertisement -

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಗುರಿಯಾಗಿರುವ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಅವರ ಜಾಮೀನು ಅರ್ಜಿಯ ಆದೇಶವನ್ನು ಶ್ರೀರಂಗಪಟ್ಟಣ ನ್ಯಾಯಾಲಯ ಜನವರಿ 17ಕ್ಕೆ ಕಾಯ್ದಿರಿಸಿದೆ.

ಪ್ರಭಾಕರ್‌ ಭಟ್‌ ಜಾಮೀನು ಅರ್ಜಿಯ ವಿಚಾರಣೆಯನ್ನು ಶ್ರೀರಂಗಪಟ್ಟಣದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಗೋಪಾಲ ಕೃಷ್ಣ ರೈ ಟಿ ಅವರು ಬುಧವಾರ ನಡೆಸಿದರು.

ದೂರುದಾರೆ ನಜ್ಮಾ ನಝೀರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎಸ್‌. ಬಾಲನ್‌ ಅವರು, “ಪ್ರಕರಣದ ವಾಸ್ತವಿಕ ಅಂಶಗಳನ್ನು ಪರಿಗಣಿಸಿದರೆ ಮೇಲ್ನೋಟಕ್ಕೆ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ (ಯುಎಪಿಎ) ಸೆಕ್ಷನ್‌ 13 ಮತ್ತು ಕೋಕಾ ಕಾಯ್ದೆಯ ನಿಬಂಧನೆಗಳು ಅನ್ವಯಿಸುತ್ತವೆ. ಯಾವುದೇ ಕೋನದಿಂದ ನೋಡಿದರೂ, ಅರ್ಜಿದಾರ ಭಟ್‌ ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆಗೆ ಒಳಪಡಿಸಬೇಕಿದೆ. ಅಲ್ಲದೇ, ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆ ಮಾಡುವ ವಸ್ತುಗಳನ್ನು ಅವರಿಂದ ವಶಕ್ಕೆ ಪಡೆಯಬೇಕಿದೆ. ಮೇಲ್ನೋಟಕ್ಕೆ ಮಧ್ಯಂತರ ಜಾಮೀನು ಪಡೆಯಲು ಅವರು ಅರ್ಹರಲ್ಲ” ಎಂದು ಜಾಮೀನಿಗೆ ವಿರೋಧ ದಾಖಲಿಸಿದರು.

ಪ್ರಸ್ತುತ ಇಸ್ಲಾಮೋಫೋಬಿಕ್ ವಾತಾವರಣದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷದ ಆಧಾರದ ಮೇಲೆ ರಾಷ್ಟ್ರೀಯ ಅಭಿಪ್ರಾಯ ರೂಪಿಸಲು ಅರ್ಜಿದಾರರು ಬಯಸಿದ್ದಾರೆ. ಮುಸ್ಲಿಮರನ್ನು ಅತಿಮಾನುಷವಾಗಿ ಬಿಂಬಿಸುವ ಉದ್ದೇಶವನ್ನು ಹೊಂದಿದ್ದಾರೆ. ಭಟ್‌ ಅವರ ಭಾಷಣವು ಮುಸ್ಲಿಂ ಸಮುದಾಯವನ್ನು ನಿಂದಿಸುವ ಅವರ ಪ್ರಾಥಮಿಕ ಉದ್ದೇಶವನ್ನು ಸೂಚಿಸುತ್ತದೆ ಎಂದು ಆಕ್ಷೇಪಿಸಿದರು.

ಪ್ರಭಾಕರ್‌ ಭಟ್‌ ಪರವಾಗಿ ವಾದಿಸಿದ ವಕೀಲ ಚಂದ್ರೇಗೌಡ ಅವರು, “ತಮ್ಮ ಕಕ್ಷಿದಾರರ ವಿರುದ್ಧ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿರುವ ಸೆಕ್ಷನ್‌ಗಳು ಅನ್ವಯಿಸುವುದಿಲ್ಲ. ದೂರುದಾರೆಯು ನೊಂದ ಮಹಿಳೆಯಲ್ಲ. ಭಟ್‌ ಅವರಿಗೆ 82 ವರ್ಷ ವಯಸ್ಸಾಗಿದ್ದು, ಹೃದಯ ಶಸ್ತ್ರಚಿಕಿತ್ಸೆಯಾಗಿದೆ. ಭಟ್‌ ಅವರು ಸಮಾಜದಲ್ಲಿ ಗಣ್ಯ ವ್ಯಕ್ತಿಯಾಗಿದ್ದು, ಅವರ ವಿರುದ್ಧ ದೂರು ನೀಡಿದರೆ ಪ್ರಚಾರ ಪಡೆಯಬಹುದು ಎಂಬ ದುರುದ್ದೇಶವಿದೆ. ಭಟ್‌ ಅವರ ಭಾಷಣದಲ್ಲಿ ಕೋಮು ದ್ವೇಷ ಹರಡುವ ಅಥವಾ ಸೃಷ್ಟಿಸುವ ಉದ್ದೇಶವಿಲ್ಲ. ಘಟನೆ ನಡೆದ ಹಲವು ದಿನಗಳ ಬಳಿಕ ದೂರು ನೀಡಲಾಗಿದೆ ಎಂದು ಸಮರ್ಥಿಸಿದರು.

ಶ್ರೀರಂಗಪಟ್ಟ ಪೊಲೀಸರ ಪರವಾಗಿ ವಾದಿಸಿದ ಸರ್ಕಾರಿ ಅಭಿಯೋಜಕರು, ಆರೋಪಿಯ ವಿರುದ್ಧ ಅನ್ವಯಿಸಿರುವ ಸೆಕ್ಷನ್‌ಗಳು ಗಂಭೀರ ಸ್ವರೂಪದ್ದಾಗಿವೆ. ಜಾಮೀನು ಪಡೆಯಲು ಅವರು ಅರ್ಹರಲ್ಲ ಎಂದು ವಾದಿಸಿದರು.

ಮೂರು ಕಡೆಯ ವಾದ ಆಲಿಸಿದ ನ್ಯಾಯಾಲಯ ಪ್ರಭಾಕರ್ ಭಟ್ ಜಾಮೀನು ಅರ್ಜಿಯ ತೀರ್ಪನ್ನು ಜನವರಿ 17ಕ್ಕೆ ಕಾಯ್ದಿರಿಸಿದೆ.

ಪ್ರಕರಣದ ಹಿನ್ನೆಲೆ :

ಡಿಸೆಂಬರ್ 24,2023ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್, “ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ” ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದರ ವಿರುದ್ದ ನಜ್ಮಾ ದೂರು ನೀಡಿದ್ದು, ಪ್ರಭಾಕರ್ ಭಟ್‌ ವಿರುದ್ಧ ರೌಡಿ ಶೀಟ್ ತೆರೆಯುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ‘ಸ್ವಲ್ಪ ಯಾಮಾರಿದ್ದರೂ ನನ್ನ ಜೀವವನ್ನೇ ತೆಗೆಯುತ್ತಿದ್ದರು…’: ಗೊಲ್ಲರಿಂದ ಹಲ್ಲೆಗೊಳಗಾದ ಮಾರುತಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...