Homeಕರ್ನಾಟಕಲೈಂಗಿಕ ಅಲ್ಪಸಂಖ್ಯಾತರ ಅವಹೇಳನ: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಿರುದ್ಧ ಪ್ರತಿಭಟನೆ

ಲೈಂಗಿಕ ಅಲ್ಪಸಂಖ್ಯಾತರ ಅವಹೇಳನ: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಿರುದ್ಧ ಪ್ರತಿಭಟನೆ

- Advertisement -
- Advertisement -

ಬಿಜೆಪಿ ಸರ್ಕಾರವನ್ನು ಟೀಕಿಸುವ ಭರದಲ್ಲಿ ಲೈಂಗಿಕ ಅಲ್ಪಸಂಖ್ಯಾತ ಸಮುದಾಯವನ್ನು ಅವಹೇಳ ಮಾಡಿದ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಿರುದ್ಧ ಬುಧವಾರ ಬೆಂಗಳೂರಿನ ಸ್ವಾತಂತ್ಯ್ರ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಯಿತು. ಲೈಂಗಿಕ ಅಲ್ಪಸಂಖ್ಯಾತರ ಸಂಘಟನೆ, ದಲಿತ ಮತ್ತು ಮುಸ್ಲಿಂ ಮೈನಾರಿಟಿ ಸೇನೆ, ಸ್ವಾರಾಜ್ಯ ಇಂಡಿಯಾ, ದಿಲ್ ಫರಾಜ್ ಸಮರ ಸಂಸ್ಥೆ ಹಾಗೂ ಸಂವಾದ ಸಂಸ್ಥೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸಿಎಂ ಇಬ್ರಾಹಿಂ ಅವರು ರಾಜ್ಯದ ಬಿಜೆಪಿ ಸರ್ಕಾರವನ್ನು ಟೀಕಿಸುತ್ತಾ, ‘‘ಕರ್ನಾಟಕ ಸರ್ಕಾರ ಮಂಗಳಮುಖಿ ಸರ್ಕಾರವಾಗಿದ್ದು, ಗಂಡೂ ಅಲ್ಲ, ಹೆಣ್ಣು ಅಲ್ಲ” ಎಂದು ನಾಲಗೆ ಹರಿಬಿಟ್ಟಿದ್ದರು. ಜೆಡಿಎಸ್‌ ರಾಜ್ಯಾಧ್ಯಕ್ಷ ಈ ಹೇಳಿಕೆಗೆ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಮತ್ತು ಮುಸ್ಲಿಂ ಮೈನಾರಿಟಿ ಸೇನೆಯ ರಾಜ್ಯಾಧ್ಯಕ್ಷರು ಎಜೆ ಖಾನ್‌, ‘‘ಸಿಎಂ ಇಬ್ರಾಹಿಂ ಅವರು ದೇವೆಗೌಡರ ಕೃಪೆಯಿಂದ ಕೇಂದ್ರದಲ್ಲಿ ಸಚಿವರಾಗಿದ್ದವರು. ಅವರಿಗೆ ಎಲ್ಲಿ ಅಧಿಕಾರ ಸಿಗಲ್ಲವೋ ಅಲ್ಲಿಂದ ಬಿಟ್ಟು ಬೇರೆ ಕಡೆಗೆ ಹೋಗುತ್ತಾರೆ. ಎರಡು-ಮೂರು ತಿಂಗಳ ಹಿಂದೆ ಅವರ ನಾಟಕವನ್ನು ನಾವು ನೋಡಿದ್ದೇವೆ.

ಇದನ್ನೂ ಓದಿ:ಹಿಜಾಬ್: ಸಮತೋಲನವನ್ನು ಸಾಧಿಸದ, ಸಹಾನುಭೂತಿ ತೋರದ ತೀರ್ಪು 

ಅವರು ಭದ್ರಾವತಿಯಲ್ಲಿ ಠೇವಣಿಯನ್ನು ಕೂಡಾ ಕಳೆದುಕೊಳ್ಳುವಂತಹ ನಾಯಕ. ಬಡ ಮುಸ್ಲಿಮರ ಪರವಾಗಿಯೂ ಮಾತನಾಡದ ಅವರು ಬೇರೆ ಸಮುದಾಯದ ಬಗ್ಗೆ ಮಾತನಾಡಲು ಸಾಧ್ಯವಿದೆಯೆ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯ ಹೋರಾಟಗಾರರು ಸಿಎಂ ಇಬ್ರಾಹಿಂ ಅವರ ಪೋನ್‌ಗೆ, ‘ಫೋನ್ ಕಾಲ್‌ ಅಭಿಯಾನ’ವನ್ನು ಮಾಡಿದ್ದು, 200ಕ್ಕೂ ಹೆಚ್ಚು ಫೋನ್ ಕಾಲ್ ದಾಖಲಾಗಿದೆ. ಈ ವೇಳೆ ಹೋರಾಟಗಾರರ ಕರೆಯನ್ನು ಸ್ವೀಕರಿಸಿದ ಸಿಎಂ ಇಬ್ರಾಹಿಂ ಅವರು, “ನನ್ನ ಹೇಳಿಕೆ ತಪ್ಪಾಗಿದ್ದು, ಈ ಬಗ್ಗೆ ಬೇಷರತ್ತಾಗಿ ಕ್ಷಮೆ ಕೇಳಿ ವಿಡಿಯೊ ಬಿಡುತ್ತೇನೆ. ಲೈಂಗಿಕ ಅಲ್ಪಸಂಖ್ಯಾತರು ನನ್ನ ಸೋದರ-ಸೋದರಿಯರಿದ್ದ ಹಾಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಜಾಭಾರತ ಷೋನಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ ಅಪಹಾಸ್ಯ: ಹೋರಾಟಗಾರ್ತಿ ಆಕ್ಷೇಪ

ಪ್ರತಿಭಟನೆಯಲ್ಲಿ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಕಾರ್ಯಕರ್ತರು, ದಲಿತ ಮತ್ತು ಮುಸ್ಲಿಂ ಮೈನಾರಿಟಿ ಸೇನೆಯ ರಾಜ್ಯಾಧ್ಯಕ್ಷರಾದ ಎಜೆ ಖಾನ್, ಸ್ವಾರಾಜ್ಯ ಇಂಡಿಯಾದ ಆರ್. ಕಲೀಮ್ ಉಲ್ಲಾ, ಸಾಮಾಜಿಕ ಹೋರಾಟಗಾರರಾದ ಜಗನ್, ಸೆಲ್ವರಾಜ್, ಖಲೀಲ್‌ ಉಲ್ಲಾ, ದಲಿತ ಹಕ್ಕುಗಳ ಹೋರಾಟಗಾರ ಹೆಬ್ಬಾಳ ವೆಂಕಟೇಶ್, ದಿಲ್ ಫರಾಜ್ ಸಮರ ಸಂಸ್ಥೆಯ ರುಬಿನ್, ಸಂವಾದ ಸಂಸ್ಥೆಯ ಶಿವಗೌರಿ ಸೇರಿದಂತೆ ಹಲವಾರು ಹೋರಾಟಗಾರರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...