Homeಕರ್ನಾಟಕಲೈಂಗಿಕ ಅಲ್ಪಸಂಖ್ಯಾತರ ಅವಹೇಳನ: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಿರುದ್ಧ ಪ್ರತಿಭಟನೆ

ಲೈಂಗಿಕ ಅಲ್ಪಸಂಖ್ಯಾತರ ಅವಹೇಳನ: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಿರುದ್ಧ ಪ್ರತಿಭಟನೆ

- Advertisement -
- Advertisement -

ಬಿಜೆಪಿ ಸರ್ಕಾರವನ್ನು ಟೀಕಿಸುವ ಭರದಲ್ಲಿ ಲೈಂಗಿಕ ಅಲ್ಪಸಂಖ್ಯಾತ ಸಮುದಾಯವನ್ನು ಅವಹೇಳ ಮಾಡಿದ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಿರುದ್ಧ ಬುಧವಾರ ಬೆಂಗಳೂರಿನ ಸ್ವಾತಂತ್ಯ್ರ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಯಿತು. ಲೈಂಗಿಕ ಅಲ್ಪಸಂಖ್ಯಾತರ ಸಂಘಟನೆ, ದಲಿತ ಮತ್ತು ಮುಸ್ಲಿಂ ಮೈನಾರಿಟಿ ಸೇನೆ, ಸ್ವಾರಾಜ್ಯ ಇಂಡಿಯಾ, ದಿಲ್ ಫರಾಜ್ ಸಮರ ಸಂಸ್ಥೆ ಹಾಗೂ ಸಂವಾದ ಸಂಸ್ಥೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸಿಎಂ ಇಬ್ರಾಹಿಂ ಅವರು ರಾಜ್ಯದ ಬಿಜೆಪಿ ಸರ್ಕಾರವನ್ನು ಟೀಕಿಸುತ್ತಾ, ‘‘ಕರ್ನಾಟಕ ಸರ್ಕಾರ ಮಂಗಳಮುಖಿ ಸರ್ಕಾರವಾಗಿದ್ದು, ಗಂಡೂ ಅಲ್ಲ, ಹೆಣ್ಣು ಅಲ್ಲ” ಎಂದು ನಾಲಗೆ ಹರಿಬಿಟ್ಟಿದ್ದರು. ಜೆಡಿಎಸ್‌ ರಾಜ್ಯಾಧ್ಯಕ್ಷ ಈ ಹೇಳಿಕೆಗೆ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಮತ್ತು ಮುಸ್ಲಿಂ ಮೈನಾರಿಟಿ ಸೇನೆಯ ರಾಜ್ಯಾಧ್ಯಕ್ಷರು ಎಜೆ ಖಾನ್‌, ‘‘ಸಿಎಂ ಇಬ್ರಾಹಿಂ ಅವರು ದೇವೆಗೌಡರ ಕೃಪೆಯಿಂದ ಕೇಂದ್ರದಲ್ಲಿ ಸಚಿವರಾಗಿದ್ದವರು. ಅವರಿಗೆ ಎಲ್ಲಿ ಅಧಿಕಾರ ಸಿಗಲ್ಲವೋ ಅಲ್ಲಿಂದ ಬಿಟ್ಟು ಬೇರೆ ಕಡೆಗೆ ಹೋಗುತ್ತಾರೆ. ಎರಡು-ಮೂರು ತಿಂಗಳ ಹಿಂದೆ ಅವರ ನಾಟಕವನ್ನು ನಾವು ನೋಡಿದ್ದೇವೆ.

ಇದನ್ನೂ ಓದಿ:ಹಿಜಾಬ್: ಸಮತೋಲನವನ್ನು ಸಾಧಿಸದ, ಸಹಾನುಭೂತಿ ತೋರದ ತೀರ್ಪು 

ಅವರು ಭದ್ರಾವತಿಯಲ್ಲಿ ಠೇವಣಿಯನ್ನು ಕೂಡಾ ಕಳೆದುಕೊಳ್ಳುವಂತಹ ನಾಯಕ. ಬಡ ಮುಸ್ಲಿಮರ ಪರವಾಗಿಯೂ ಮಾತನಾಡದ ಅವರು ಬೇರೆ ಸಮುದಾಯದ ಬಗ್ಗೆ ಮಾತನಾಡಲು ಸಾಧ್ಯವಿದೆಯೆ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯ ಹೋರಾಟಗಾರರು ಸಿಎಂ ಇಬ್ರಾಹಿಂ ಅವರ ಪೋನ್‌ಗೆ, ‘ಫೋನ್ ಕಾಲ್‌ ಅಭಿಯಾನ’ವನ್ನು ಮಾಡಿದ್ದು, 200ಕ್ಕೂ ಹೆಚ್ಚು ಫೋನ್ ಕಾಲ್ ದಾಖಲಾಗಿದೆ. ಈ ವೇಳೆ ಹೋರಾಟಗಾರರ ಕರೆಯನ್ನು ಸ್ವೀಕರಿಸಿದ ಸಿಎಂ ಇಬ್ರಾಹಿಂ ಅವರು, “ನನ್ನ ಹೇಳಿಕೆ ತಪ್ಪಾಗಿದ್ದು, ಈ ಬಗ್ಗೆ ಬೇಷರತ್ತಾಗಿ ಕ್ಷಮೆ ಕೇಳಿ ವಿಡಿಯೊ ಬಿಡುತ್ತೇನೆ. ಲೈಂಗಿಕ ಅಲ್ಪಸಂಖ್ಯಾತರು ನನ್ನ ಸೋದರ-ಸೋದರಿಯರಿದ್ದ ಹಾಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಜಾಭಾರತ ಷೋನಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ ಅಪಹಾಸ್ಯ: ಹೋರಾಟಗಾರ್ತಿ ಆಕ್ಷೇಪ

ಪ್ರತಿಭಟನೆಯಲ್ಲಿ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಕಾರ್ಯಕರ್ತರು, ದಲಿತ ಮತ್ತು ಮುಸ್ಲಿಂ ಮೈನಾರಿಟಿ ಸೇನೆಯ ರಾಜ್ಯಾಧ್ಯಕ್ಷರಾದ ಎಜೆ ಖಾನ್, ಸ್ವಾರಾಜ್ಯ ಇಂಡಿಯಾದ ಆರ್. ಕಲೀಮ್ ಉಲ್ಲಾ, ಸಾಮಾಜಿಕ ಹೋರಾಟಗಾರರಾದ ಜಗನ್, ಸೆಲ್ವರಾಜ್, ಖಲೀಲ್‌ ಉಲ್ಲಾ, ದಲಿತ ಹಕ್ಕುಗಳ ಹೋರಾಟಗಾರ ಹೆಬ್ಬಾಳ ವೆಂಕಟೇಶ್, ದಿಲ್ ಫರಾಜ್ ಸಮರ ಸಂಸ್ಥೆಯ ರುಬಿನ್, ಸಂವಾದ ಸಂಸ್ಥೆಯ ಶಿವಗೌರಿ ಸೇರಿದಂತೆ ಹಲವಾರು ಹೋರಾಟಗಾರರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...