Homeಕರ್ನಾಟಕಲೈಂಗಿಕ ಅಲ್ಪಸಂಖ್ಯಾತರ ಅವಹೇಳನ: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಿರುದ್ಧ ಪ್ರತಿಭಟನೆ

ಲೈಂಗಿಕ ಅಲ್ಪಸಂಖ್ಯಾತರ ಅವಹೇಳನ: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಿರುದ್ಧ ಪ್ರತಿಭಟನೆ

- Advertisement -
- Advertisement -

ಬಿಜೆಪಿ ಸರ್ಕಾರವನ್ನು ಟೀಕಿಸುವ ಭರದಲ್ಲಿ ಲೈಂಗಿಕ ಅಲ್ಪಸಂಖ್ಯಾತ ಸಮುದಾಯವನ್ನು ಅವಹೇಳ ಮಾಡಿದ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಿರುದ್ಧ ಬುಧವಾರ ಬೆಂಗಳೂರಿನ ಸ್ವಾತಂತ್ಯ್ರ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಯಿತು. ಲೈಂಗಿಕ ಅಲ್ಪಸಂಖ್ಯಾತರ ಸಂಘಟನೆ, ದಲಿತ ಮತ್ತು ಮುಸ್ಲಿಂ ಮೈನಾರಿಟಿ ಸೇನೆ, ಸ್ವಾರಾಜ್ಯ ಇಂಡಿಯಾ, ದಿಲ್ ಫರಾಜ್ ಸಮರ ಸಂಸ್ಥೆ ಹಾಗೂ ಸಂವಾದ ಸಂಸ್ಥೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸಿಎಂ ಇಬ್ರಾಹಿಂ ಅವರು ರಾಜ್ಯದ ಬಿಜೆಪಿ ಸರ್ಕಾರವನ್ನು ಟೀಕಿಸುತ್ತಾ, ‘‘ಕರ್ನಾಟಕ ಸರ್ಕಾರ ಮಂಗಳಮುಖಿ ಸರ್ಕಾರವಾಗಿದ್ದು, ಗಂಡೂ ಅಲ್ಲ, ಹೆಣ್ಣು ಅಲ್ಲ” ಎಂದು ನಾಲಗೆ ಹರಿಬಿಟ್ಟಿದ್ದರು. ಜೆಡಿಎಸ್‌ ರಾಜ್ಯಾಧ್ಯಕ್ಷ ಈ ಹೇಳಿಕೆಗೆ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಮತ್ತು ಮುಸ್ಲಿಂ ಮೈನಾರಿಟಿ ಸೇನೆಯ ರಾಜ್ಯಾಧ್ಯಕ್ಷರು ಎಜೆ ಖಾನ್‌, ‘‘ಸಿಎಂ ಇಬ್ರಾಹಿಂ ಅವರು ದೇವೆಗೌಡರ ಕೃಪೆಯಿಂದ ಕೇಂದ್ರದಲ್ಲಿ ಸಚಿವರಾಗಿದ್ದವರು. ಅವರಿಗೆ ಎಲ್ಲಿ ಅಧಿಕಾರ ಸಿಗಲ್ಲವೋ ಅಲ್ಲಿಂದ ಬಿಟ್ಟು ಬೇರೆ ಕಡೆಗೆ ಹೋಗುತ್ತಾರೆ. ಎರಡು-ಮೂರು ತಿಂಗಳ ಹಿಂದೆ ಅವರ ನಾಟಕವನ್ನು ನಾವು ನೋಡಿದ್ದೇವೆ.

ಇದನ್ನೂ ಓದಿ:ಹಿಜಾಬ್: ಸಮತೋಲನವನ್ನು ಸಾಧಿಸದ, ಸಹಾನುಭೂತಿ ತೋರದ ತೀರ್ಪು 

ಅವರು ಭದ್ರಾವತಿಯಲ್ಲಿ ಠೇವಣಿಯನ್ನು ಕೂಡಾ ಕಳೆದುಕೊಳ್ಳುವಂತಹ ನಾಯಕ. ಬಡ ಮುಸ್ಲಿಮರ ಪರವಾಗಿಯೂ ಮಾತನಾಡದ ಅವರು ಬೇರೆ ಸಮುದಾಯದ ಬಗ್ಗೆ ಮಾತನಾಡಲು ಸಾಧ್ಯವಿದೆಯೆ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯ ಹೋರಾಟಗಾರರು ಸಿಎಂ ಇಬ್ರಾಹಿಂ ಅವರ ಪೋನ್‌ಗೆ, ‘ಫೋನ್ ಕಾಲ್‌ ಅಭಿಯಾನ’ವನ್ನು ಮಾಡಿದ್ದು, 200ಕ್ಕೂ ಹೆಚ್ಚು ಫೋನ್ ಕಾಲ್ ದಾಖಲಾಗಿದೆ. ಈ ವೇಳೆ ಹೋರಾಟಗಾರರ ಕರೆಯನ್ನು ಸ್ವೀಕರಿಸಿದ ಸಿಎಂ ಇಬ್ರಾಹಿಂ ಅವರು, “ನನ್ನ ಹೇಳಿಕೆ ತಪ್ಪಾಗಿದ್ದು, ಈ ಬಗ್ಗೆ ಬೇಷರತ್ತಾಗಿ ಕ್ಷಮೆ ಕೇಳಿ ವಿಡಿಯೊ ಬಿಡುತ್ತೇನೆ. ಲೈಂಗಿಕ ಅಲ್ಪಸಂಖ್ಯಾತರು ನನ್ನ ಸೋದರ-ಸೋದರಿಯರಿದ್ದ ಹಾಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಜಾಭಾರತ ಷೋನಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ ಅಪಹಾಸ್ಯ: ಹೋರಾಟಗಾರ್ತಿ ಆಕ್ಷೇಪ

ಪ್ರತಿಭಟನೆಯಲ್ಲಿ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಕಾರ್ಯಕರ್ತರು, ದಲಿತ ಮತ್ತು ಮುಸ್ಲಿಂ ಮೈನಾರಿಟಿ ಸೇನೆಯ ರಾಜ್ಯಾಧ್ಯಕ್ಷರಾದ ಎಜೆ ಖಾನ್, ಸ್ವಾರಾಜ್ಯ ಇಂಡಿಯಾದ ಆರ್. ಕಲೀಮ್ ಉಲ್ಲಾ, ಸಾಮಾಜಿಕ ಹೋರಾಟಗಾರರಾದ ಜಗನ್, ಸೆಲ್ವರಾಜ್, ಖಲೀಲ್‌ ಉಲ್ಲಾ, ದಲಿತ ಹಕ್ಕುಗಳ ಹೋರಾಟಗಾರ ಹೆಬ್ಬಾಳ ವೆಂಕಟೇಶ್, ದಿಲ್ ಫರಾಜ್ ಸಮರ ಸಂಸ್ಥೆಯ ರುಬಿನ್, ಸಂವಾದ ಸಂಸ್ಥೆಯ ಶಿವಗೌರಿ ಸೇರಿದಂತೆ ಹಲವಾರು ಹೋರಾಟಗಾರರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...