Homeಮುಖಪುಟಒಂದೇ ವೆಂಟಿಲೇಟರ್‌ ಫೋಟೊ ಹಂಚಿಕೊಂಡ ನೂರಾರು ಬಿಜೆಪಿ ಮುಖಂಡರು: ಪಬ್ಲಿಸಿಟಿ ಗಿಮ್ಮಿಕ್ ಎಂದ ನೆಟ್ಟಿಗರು!

ಒಂದೇ ವೆಂಟಿಲೇಟರ್‌ ಫೋಟೊ ಹಂಚಿಕೊಂಡ ನೂರಾರು ಬಿಜೆಪಿ ಮುಖಂಡರು: ಪಬ್ಲಿಸಿಟಿ ಗಿಮ್ಮಿಕ್ ಎಂದ ನೆಟ್ಟಿಗರು!

ಕೆಲವರು ’ಒನ್‌ ನೇಷನ್‌, ಒನ್‌ ವೆಂಟಿಲೇಟರ್‌’ ಎಂದು ಬಿಜೆಪಿ ಮುಖಂಡರನ್ನು ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ಇಂದು ಬೆಳಿಗ್ಗೆ ಟ್ವಿಟ್ಟರ್‌ನಲ್ಲಿ ಹಲವಾರು ಬಿಜೆಪಿ ಮುಖಂಡರು ಒಂದು ವೆಂಟಿಲೇಟರ್‌ ಫೋಟೊವನ್ನು ಹಂಚಿಕೊಂಡಿದ್ದರು. ಅದರ ಜೊತೆಗೆ “ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿಯವರನ್ನು ಪಿಎಂ ಕೇರ್ಸ್‌ ಲೆಕ್ಕ ಕೇಳುವವರಿಗೆ ಉತ್ತರ ಇಲ್ಲಿದೆ. ಸ್ವಾತಂತ್ರ್ಯಾ ನಂತರದಲ್ಲಿ ಆಸ್ಪತ್ರೆಗಳಲ್ಲಿ ಇಷ್ಟೊಂದು ಸಂಖ್ಯೆಯ ವೆಂಟಿಲೇಟರ್ ಗಳು ಹೆಚ್ಚಾಗಿರಲಿಲ್ಲ. ನಾವೆಲ್ಲ ಕಷ್ಟಪಟ್ಟು ಸಂಪಾದಿಸಿ ಪಿಎಂ ಕೇರ್ಸ್‌ಗೆ ನೀಡಿದ ಒಂದೊಂದು ರೂಪಾಯಿಯೂ ಜನರ ಸೇವೆಗೆ ಅರ್ಪಿತವಾಗುತ್ತಿದೆ” ಎಂದು ಬರೆಯಲಾಗಿತ್ತು.

ಅದೇ ಇಂಗ್ಲಿಷ್‌ನಲ್ಲಿಯೂ ಸಹ ಅದೇ ಅರ್ಥಬರುವ ವಾಕ್ಯವೊಂದನ್ನು ಬರೆದು ಅದೇ ವೆಂಟಿಲೇಟರ್‌ ಚಿತ್ರವನ್ನು ಪೋಸ್ಟ್‌ ಮಾಡಲಾಗಿತ್ತು. ಕರ್ನಾಟಕದ ಬಿ.ಶ್ರೀರಾಮುಲು, ಸಿ.ಟಿ ರವಿ ಮತ್ತು ಬಿ.ಎಲ್‌ ಸಂತೋಷ್‌ರವರು ಟ್ವೀಟ್‌ ಮಾಡಿದ್ದು, ಒಂದೇ ವೆಂಟಿಲೇಟರ್‌ ಚಿತ್ರವನ್ನು ಬಳಸಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಈಗಾಗಲೇ ನಿಧಿ ಸಂಗ್ರಹಕ್ಕಾಗಿ ಪ್ರಧಾನ ಮಂತ್ರಿ ಪರಿಹಾರ ನಿಧಿ ಇದ್ದರೂ ಕೂಡ ಇನ್ನೊದು PM CARES ನಿಧಿ ಏಕೆ ಬೇಕಿತ್ತು ಎಂಬ ಪ್ರಶ್ನೆ ದೊಡ್ಡ ಮಟ್ಟದಲ್ಲಿ ಕೇಳಿಬರುತ್ತಿದೆ.

ಇದೇ ಸಂದರ್ಭದಲ್ಲಿ ಈ PM CARES ನಿಧಿಯ ಆಡಿಟ್‌ನ್ನು ದೇಶದ ಪ್ರಖ್ಯಾತ CAG (Comptroller and Auditor General of India) ಮಾಡಲು ಬರುವುದಿಲ್ಲ. ಬದಲಿಗೆ ಪ್ರಧಾನ ಮಂತ್ರಿ ಸೇರಿದಂತೆ ಅದರ ಟ್ರಸ್ಟಿಗಳು ನೇಮಿಸಿದ ಸ್ವತಂತ್ರ ಲೆಕ್ಕಪರಿಶೋಧಕರಿಂದ ಆಡಿಟ್‌ ಮಾಡಲಾಗುವುದು ಎಂಬ ಅಂಶ ಬೆಳಕಿಗೆ ಬಂದಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಈ ಪಿಎಂ ಕೇರ್ಸ್‌‌ಗೆ ಎಷ್ಟು ಹಣ ಬಂದಿದೆ. ಅದರಲ್ಲಿ ಯಾವುದಕ್ಕೆ ಎಷ್ಟು ಹಣ ಖರ್ಚಾಗಿದೆ, ಎಷ್ಟು ಉಳಿದಿದೆ ಎಂಬ ನಂಬಿಕಾರ್ಹ ಮಾಹಿತಿ ಇದರಿಂದ ದೊರೆಯುವುದಿಲ್ಲ, ಆರ್‌ಟಿಐ ಅಡಿಯಲ್ಲಿಯೂ ಇದು ಬರುವುದಿಲ್ಲ ಎಂಬ ಆರೋಪ ಕೇಳಿಬಂದಿತ್ತು.

ಇಂಡಿಯಾ ಸ್ಪೆಂಡ್‌ನ ಇತ್ತೀಚಿನ ವಿಶ್ಲೇಷಣೆಯ ಪ್ರಕಾರ ಇದುವರೆಗೆ ಪಿಎಂ ಕೇರ್ಸ್ ನಿಧಿಯಲ್ಲಿ ಕನಿಷ್ಠ 9,677.90 ಕೋಟಿ ರೂ ಇದೆ. ಈ ಪೈಕಿ 4,308 ಕೋಟಿ ರೂ.ಗಳನ್ನು ಸರ್ಕಾರಿ ಸಂಸ್ಥೆಗಳು ಮತ್ತು ಸಿಬ್ಬಂದಿ ದೇಣಿಗೆ ನೀಡಿದ್ದಾರೆ. ಇನ್ನೂ, ನಿಧಿಯ ಬಳಕೆಯ ಬಗ್ಗೆ ಇಲ್ಲಿಯವರೆಗೆ ಮಾಡಿದ ಏಕೈಕ ಪ್ರಕಟಣೆ ಮೇ 13 ರಂದು ಮಾಡಲಾಗಿದೆ. ಅದರಲ್ಲಿ 2,000 ಕೋಟಿ ರೂ ವೆಚ್ಚದಲ್ಲಿ ಅಹ್ಮದಾಬಾದ್‌ನ ಅತಿದೊಡ್ಡ COVID-19 ಆಸ್ಪತ್ರೆಗೆ ವೆಂಟಿಲೇಟರ್‌ಗಳನ್ನು ಸರಬರಾಜು ಮಾಡಿದ ರಾಜ್‌ಕೋಟ್ ಮೂಲದ ಸಂಸ್ಥೆಯಿಂದ ಕೇಂದ್ರ ಸರ್ಕಾರವು 5,000 ವೆಂಟಿಲೇಟರ್‌ಗಳನ್ನು ಖರೀದಿಸುತ್ತಿದೆ. ಆದರೆ ಈ ಯಂತ್ರಗಳು ಅಸಮರ್ಪಕವೆಂದು ಈಗಾಗಲೇ ಸಾಬೀತಾಗಿದೆ.


ಇದನ್ನೂ ಓದಿ: ಮೋದಿಗೆ ದುಬಾರಿ ಸೂಟ್‌ ನೀಡಿದ್ದ ಕಂಪನಿಯ ಫೇಕ್‌ ವೆಂಟಿಲೇಟರ್‌ ಹಗರಣ..


ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿ ಮುಖಂಡರು ಒಂದೇ ವೆಂಟಿಲೇಟರ್‌ ಫೋಟೊ ಹಾಕಿ ಪಿಎಂ ಕೇರ್ಸ್‌ ಹಣ ಪ್ರಾಮಾಣಿಕವಾಗಿ ಬಳಸಿದ್ದೇವೆ ಎಂಬ ಪ್ರಚಾರ ಪಡೆಯಲು ಮುಂದಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿವಾದವೆದ್ದಿದೆ.

ಪ್ರಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಈ ಬಗ್ಗೆ ಪ್ರಶ್ನೆ ಮಾಡಿದ್ದು, ಒಂದು ವೆಂಟಿಲೇಟರ್‌, ನೂರಾರು ಪ್ರಚಾರ ಎಂದು ಟೀಕಿಸಿದ್ದಾರೆ. ಅದರಲ್ಲಿ ಒಂದೇ ವೆಂಟಿಲೇಟರ್ ಅನ್ನು ನೂರಾರು ಬಿಜೆಪಿ ನಾಯಕರು ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ಗಳನ್ನು ಪೋಸ್ಟ್‌ ಮಾಡಲಾಗಿದೆ.

1 Ventilator 100 Publicity

Posted by Dhruv Rathee on Monday, June 15, 2020

ಇನ್ನು ಕೆಲವರು ’ಒನ್‌ ನೇಷನ್‌, ಒನ್‌ ವೆಂಟಿಲೇಟರ್‌’ ಎಂದು ಬಿಜೆಪಿ ಮುಖಂಡರನ್ನು ವ್ಯಂಗ್ಯವಾಡಿದ್ದಾರೆ. ಬಿಜೆಪಿ ಐಟಿ ಸೆಲ್‌ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ಕೆಲವರು ವಿವರಣೆ ನೀಡಿದ್ದು, ಬಿಜೆಪಿ ಸರ್ಕಾರ ಕೆಲಸ ಮಾಡದಿದ್ದರೂ ಸರಿಯೇ ಸಾಮಾಜಿಕ ಮತ್ತು ಮುಖ್ಯವಾಹಿನಿ ಮಾಧ್ಯಮಗಳನ್ನು ಬಳಸಿ ಹೇಗೆ ಪ್ರಚಾರ ಪಡೆಯುತ್ತಿದೆ ನೋಡಿ ಎಂದು ವಿವರಿಸಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನಾಳೆಯಿಂದ ಮತ್ತೆ ಲಾಕ್‌ಡೌನ್‌! ಈ ಸುದ್ದಿ ನಿಜವೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...