Homeಮುಖಪುಟಒಂದೇ ವೆಂಟಿಲೇಟರ್‌ ಫೋಟೊ ಹಂಚಿಕೊಂಡ ನೂರಾರು ಬಿಜೆಪಿ ಮುಖಂಡರು: ಪಬ್ಲಿಸಿಟಿ ಗಿಮ್ಮಿಕ್ ಎಂದ ನೆಟ್ಟಿಗರು!

ಒಂದೇ ವೆಂಟಿಲೇಟರ್‌ ಫೋಟೊ ಹಂಚಿಕೊಂಡ ನೂರಾರು ಬಿಜೆಪಿ ಮುಖಂಡರು: ಪಬ್ಲಿಸಿಟಿ ಗಿಮ್ಮಿಕ್ ಎಂದ ನೆಟ್ಟಿಗರು!

ಕೆಲವರು ’ಒನ್‌ ನೇಷನ್‌, ಒನ್‌ ವೆಂಟಿಲೇಟರ್‌’ ಎಂದು ಬಿಜೆಪಿ ಮುಖಂಡರನ್ನು ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ಇಂದು ಬೆಳಿಗ್ಗೆ ಟ್ವಿಟ್ಟರ್‌ನಲ್ಲಿ ಹಲವಾರು ಬಿಜೆಪಿ ಮುಖಂಡರು ಒಂದು ವೆಂಟಿಲೇಟರ್‌ ಫೋಟೊವನ್ನು ಹಂಚಿಕೊಂಡಿದ್ದರು. ಅದರ ಜೊತೆಗೆ “ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿಯವರನ್ನು ಪಿಎಂ ಕೇರ್ಸ್‌ ಲೆಕ್ಕ ಕೇಳುವವರಿಗೆ ಉತ್ತರ ಇಲ್ಲಿದೆ. ಸ್ವಾತಂತ್ರ್ಯಾ ನಂತರದಲ್ಲಿ ಆಸ್ಪತ್ರೆಗಳಲ್ಲಿ ಇಷ್ಟೊಂದು ಸಂಖ್ಯೆಯ ವೆಂಟಿಲೇಟರ್ ಗಳು ಹೆಚ್ಚಾಗಿರಲಿಲ್ಲ. ನಾವೆಲ್ಲ ಕಷ್ಟಪಟ್ಟು ಸಂಪಾದಿಸಿ ಪಿಎಂ ಕೇರ್ಸ್‌ಗೆ ನೀಡಿದ ಒಂದೊಂದು ರೂಪಾಯಿಯೂ ಜನರ ಸೇವೆಗೆ ಅರ್ಪಿತವಾಗುತ್ತಿದೆ” ಎಂದು ಬರೆಯಲಾಗಿತ್ತು.

ಅದೇ ಇಂಗ್ಲಿಷ್‌ನಲ್ಲಿಯೂ ಸಹ ಅದೇ ಅರ್ಥಬರುವ ವಾಕ್ಯವೊಂದನ್ನು ಬರೆದು ಅದೇ ವೆಂಟಿಲೇಟರ್‌ ಚಿತ್ರವನ್ನು ಪೋಸ್ಟ್‌ ಮಾಡಲಾಗಿತ್ತು. ಕರ್ನಾಟಕದ ಬಿ.ಶ್ರೀರಾಮುಲು, ಸಿ.ಟಿ ರವಿ ಮತ್ತು ಬಿ.ಎಲ್‌ ಸಂತೋಷ್‌ರವರು ಟ್ವೀಟ್‌ ಮಾಡಿದ್ದು, ಒಂದೇ ವೆಂಟಿಲೇಟರ್‌ ಚಿತ್ರವನ್ನು ಬಳಸಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಈಗಾಗಲೇ ನಿಧಿ ಸಂಗ್ರಹಕ್ಕಾಗಿ ಪ್ರಧಾನ ಮಂತ್ರಿ ಪರಿಹಾರ ನಿಧಿ ಇದ್ದರೂ ಕೂಡ ಇನ್ನೊದು PM CARES ನಿಧಿ ಏಕೆ ಬೇಕಿತ್ತು ಎಂಬ ಪ್ರಶ್ನೆ ದೊಡ್ಡ ಮಟ್ಟದಲ್ಲಿ ಕೇಳಿಬರುತ್ತಿದೆ.

ಇದೇ ಸಂದರ್ಭದಲ್ಲಿ ಈ PM CARES ನಿಧಿಯ ಆಡಿಟ್‌ನ್ನು ದೇಶದ ಪ್ರಖ್ಯಾತ CAG (Comptroller and Auditor General of India) ಮಾಡಲು ಬರುವುದಿಲ್ಲ. ಬದಲಿಗೆ ಪ್ರಧಾನ ಮಂತ್ರಿ ಸೇರಿದಂತೆ ಅದರ ಟ್ರಸ್ಟಿಗಳು ನೇಮಿಸಿದ ಸ್ವತಂತ್ರ ಲೆಕ್ಕಪರಿಶೋಧಕರಿಂದ ಆಡಿಟ್‌ ಮಾಡಲಾಗುವುದು ಎಂಬ ಅಂಶ ಬೆಳಕಿಗೆ ಬಂದಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಈ ಪಿಎಂ ಕೇರ್ಸ್‌‌ಗೆ ಎಷ್ಟು ಹಣ ಬಂದಿದೆ. ಅದರಲ್ಲಿ ಯಾವುದಕ್ಕೆ ಎಷ್ಟು ಹಣ ಖರ್ಚಾಗಿದೆ, ಎಷ್ಟು ಉಳಿದಿದೆ ಎಂಬ ನಂಬಿಕಾರ್ಹ ಮಾಹಿತಿ ಇದರಿಂದ ದೊರೆಯುವುದಿಲ್ಲ, ಆರ್‌ಟಿಐ ಅಡಿಯಲ್ಲಿಯೂ ಇದು ಬರುವುದಿಲ್ಲ ಎಂಬ ಆರೋಪ ಕೇಳಿಬಂದಿತ್ತು.

ಇಂಡಿಯಾ ಸ್ಪೆಂಡ್‌ನ ಇತ್ತೀಚಿನ ವಿಶ್ಲೇಷಣೆಯ ಪ್ರಕಾರ ಇದುವರೆಗೆ ಪಿಎಂ ಕೇರ್ಸ್ ನಿಧಿಯಲ್ಲಿ ಕನಿಷ್ಠ 9,677.90 ಕೋಟಿ ರೂ ಇದೆ. ಈ ಪೈಕಿ 4,308 ಕೋಟಿ ರೂ.ಗಳನ್ನು ಸರ್ಕಾರಿ ಸಂಸ್ಥೆಗಳು ಮತ್ತು ಸಿಬ್ಬಂದಿ ದೇಣಿಗೆ ನೀಡಿದ್ದಾರೆ. ಇನ್ನೂ, ನಿಧಿಯ ಬಳಕೆಯ ಬಗ್ಗೆ ಇಲ್ಲಿಯವರೆಗೆ ಮಾಡಿದ ಏಕೈಕ ಪ್ರಕಟಣೆ ಮೇ 13 ರಂದು ಮಾಡಲಾಗಿದೆ. ಅದರಲ್ಲಿ 2,000 ಕೋಟಿ ರೂ ವೆಚ್ಚದಲ್ಲಿ ಅಹ್ಮದಾಬಾದ್‌ನ ಅತಿದೊಡ್ಡ COVID-19 ಆಸ್ಪತ್ರೆಗೆ ವೆಂಟಿಲೇಟರ್‌ಗಳನ್ನು ಸರಬರಾಜು ಮಾಡಿದ ರಾಜ್‌ಕೋಟ್ ಮೂಲದ ಸಂಸ್ಥೆಯಿಂದ ಕೇಂದ್ರ ಸರ್ಕಾರವು 5,000 ವೆಂಟಿಲೇಟರ್‌ಗಳನ್ನು ಖರೀದಿಸುತ್ತಿದೆ. ಆದರೆ ಈ ಯಂತ್ರಗಳು ಅಸಮರ್ಪಕವೆಂದು ಈಗಾಗಲೇ ಸಾಬೀತಾಗಿದೆ.


ಇದನ್ನೂ ಓದಿ: ಮೋದಿಗೆ ದುಬಾರಿ ಸೂಟ್‌ ನೀಡಿದ್ದ ಕಂಪನಿಯ ಫೇಕ್‌ ವೆಂಟಿಲೇಟರ್‌ ಹಗರಣ..


ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿ ಮುಖಂಡರು ಒಂದೇ ವೆಂಟಿಲೇಟರ್‌ ಫೋಟೊ ಹಾಕಿ ಪಿಎಂ ಕೇರ್ಸ್‌ ಹಣ ಪ್ರಾಮಾಣಿಕವಾಗಿ ಬಳಸಿದ್ದೇವೆ ಎಂಬ ಪ್ರಚಾರ ಪಡೆಯಲು ಮುಂದಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿವಾದವೆದ್ದಿದೆ.

ಪ್ರಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಈ ಬಗ್ಗೆ ಪ್ರಶ್ನೆ ಮಾಡಿದ್ದು, ಒಂದು ವೆಂಟಿಲೇಟರ್‌, ನೂರಾರು ಪ್ರಚಾರ ಎಂದು ಟೀಕಿಸಿದ್ದಾರೆ. ಅದರಲ್ಲಿ ಒಂದೇ ವೆಂಟಿಲೇಟರ್ ಅನ್ನು ನೂರಾರು ಬಿಜೆಪಿ ನಾಯಕರು ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ಗಳನ್ನು ಪೋಸ್ಟ್‌ ಮಾಡಲಾಗಿದೆ.

1 Ventilator 100 Publicity

Posted by Dhruv Rathee on Monday, June 15, 2020

ಇನ್ನು ಕೆಲವರು ’ಒನ್‌ ನೇಷನ್‌, ಒನ್‌ ವೆಂಟಿಲೇಟರ್‌’ ಎಂದು ಬಿಜೆಪಿ ಮುಖಂಡರನ್ನು ವ್ಯಂಗ್ಯವಾಡಿದ್ದಾರೆ. ಬಿಜೆಪಿ ಐಟಿ ಸೆಲ್‌ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ಕೆಲವರು ವಿವರಣೆ ನೀಡಿದ್ದು, ಬಿಜೆಪಿ ಸರ್ಕಾರ ಕೆಲಸ ಮಾಡದಿದ್ದರೂ ಸರಿಯೇ ಸಾಮಾಜಿಕ ಮತ್ತು ಮುಖ್ಯವಾಹಿನಿ ಮಾಧ್ಯಮಗಳನ್ನು ಬಳಸಿ ಹೇಗೆ ಪ್ರಚಾರ ಪಡೆಯುತ್ತಿದೆ ನೋಡಿ ಎಂದು ವಿವರಿಸಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನಾಳೆಯಿಂದ ಮತ್ತೆ ಲಾಕ್‌ಡೌನ್‌! ಈ ಸುದ್ದಿ ನಿಜವೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...