Homeಮುಖಪುಟಒಂದೇ ವೆಂಟಿಲೇಟರ್‌ ಫೋಟೊ ಹಂಚಿಕೊಂಡ ನೂರಾರು ಬಿಜೆಪಿ ಮುಖಂಡರು: ಪಬ್ಲಿಸಿಟಿ ಗಿಮ್ಮಿಕ್ ಎಂದ ನೆಟ್ಟಿಗರು!

ಒಂದೇ ವೆಂಟಿಲೇಟರ್‌ ಫೋಟೊ ಹಂಚಿಕೊಂಡ ನೂರಾರು ಬಿಜೆಪಿ ಮುಖಂಡರು: ಪಬ್ಲಿಸಿಟಿ ಗಿಮ್ಮಿಕ್ ಎಂದ ನೆಟ್ಟಿಗರು!

ಕೆಲವರು ’ಒನ್‌ ನೇಷನ್‌, ಒನ್‌ ವೆಂಟಿಲೇಟರ್‌’ ಎಂದು ಬಿಜೆಪಿ ಮುಖಂಡರನ್ನು ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ಇಂದು ಬೆಳಿಗ್ಗೆ ಟ್ವಿಟ್ಟರ್‌ನಲ್ಲಿ ಹಲವಾರು ಬಿಜೆಪಿ ಮುಖಂಡರು ಒಂದು ವೆಂಟಿಲೇಟರ್‌ ಫೋಟೊವನ್ನು ಹಂಚಿಕೊಂಡಿದ್ದರು. ಅದರ ಜೊತೆಗೆ “ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿಯವರನ್ನು ಪಿಎಂ ಕೇರ್ಸ್‌ ಲೆಕ್ಕ ಕೇಳುವವರಿಗೆ ಉತ್ತರ ಇಲ್ಲಿದೆ. ಸ್ವಾತಂತ್ರ್ಯಾ ನಂತರದಲ್ಲಿ ಆಸ್ಪತ್ರೆಗಳಲ್ಲಿ ಇಷ್ಟೊಂದು ಸಂಖ್ಯೆಯ ವೆಂಟಿಲೇಟರ್ ಗಳು ಹೆಚ್ಚಾಗಿರಲಿಲ್ಲ. ನಾವೆಲ್ಲ ಕಷ್ಟಪಟ್ಟು ಸಂಪಾದಿಸಿ ಪಿಎಂ ಕೇರ್ಸ್‌ಗೆ ನೀಡಿದ ಒಂದೊಂದು ರೂಪಾಯಿಯೂ ಜನರ ಸೇವೆಗೆ ಅರ್ಪಿತವಾಗುತ್ತಿದೆ” ಎಂದು ಬರೆಯಲಾಗಿತ್ತು.

ಅದೇ ಇಂಗ್ಲಿಷ್‌ನಲ್ಲಿಯೂ ಸಹ ಅದೇ ಅರ್ಥಬರುವ ವಾಕ್ಯವೊಂದನ್ನು ಬರೆದು ಅದೇ ವೆಂಟಿಲೇಟರ್‌ ಚಿತ್ರವನ್ನು ಪೋಸ್ಟ್‌ ಮಾಡಲಾಗಿತ್ತು. ಕರ್ನಾಟಕದ ಬಿ.ಶ್ರೀರಾಮುಲು, ಸಿ.ಟಿ ರವಿ ಮತ್ತು ಬಿ.ಎಲ್‌ ಸಂತೋಷ್‌ರವರು ಟ್ವೀಟ್‌ ಮಾಡಿದ್ದು, ಒಂದೇ ವೆಂಟಿಲೇಟರ್‌ ಚಿತ್ರವನ್ನು ಬಳಸಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಈಗಾಗಲೇ ನಿಧಿ ಸಂಗ್ರಹಕ್ಕಾಗಿ ಪ್ರಧಾನ ಮಂತ್ರಿ ಪರಿಹಾರ ನಿಧಿ ಇದ್ದರೂ ಕೂಡ ಇನ್ನೊದು PM CARES ನಿಧಿ ಏಕೆ ಬೇಕಿತ್ತು ಎಂಬ ಪ್ರಶ್ನೆ ದೊಡ್ಡ ಮಟ್ಟದಲ್ಲಿ ಕೇಳಿಬರುತ್ತಿದೆ.

ಇದೇ ಸಂದರ್ಭದಲ್ಲಿ ಈ PM CARES ನಿಧಿಯ ಆಡಿಟ್‌ನ್ನು ದೇಶದ ಪ್ರಖ್ಯಾತ CAG (Comptroller and Auditor General of India) ಮಾಡಲು ಬರುವುದಿಲ್ಲ. ಬದಲಿಗೆ ಪ್ರಧಾನ ಮಂತ್ರಿ ಸೇರಿದಂತೆ ಅದರ ಟ್ರಸ್ಟಿಗಳು ನೇಮಿಸಿದ ಸ್ವತಂತ್ರ ಲೆಕ್ಕಪರಿಶೋಧಕರಿಂದ ಆಡಿಟ್‌ ಮಾಡಲಾಗುವುದು ಎಂಬ ಅಂಶ ಬೆಳಕಿಗೆ ಬಂದಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಈ ಪಿಎಂ ಕೇರ್ಸ್‌‌ಗೆ ಎಷ್ಟು ಹಣ ಬಂದಿದೆ. ಅದರಲ್ಲಿ ಯಾವುದಕ್ಕೆ ಎಷ್ಟು ಹಣ ಖರ್ಚಾಗಿದೆ, ಎಷ್ಟು ಉಳಿದಿದೆ ಎಂಬ ನಂಬಿಕಾರ್ಹ ಮಾಹಿತಿ ಇದರಿಂದ ದೊರೆಯುವುದಿಲ್ಲ, ಆರ್‌ಟಿಐ ಅಡಿಯಲ್ಲಿಯೂ ಇದು ಬರುವುದಿಲ್ಲ ಎಂಬ ಆರೋಪ ಕೇಳಿಬಂದಿತ್ತು.

ಇಂಡಿಯಾ ಸ್ಪೆಂಡ್‌ನ ಇತ್ತೀಚಿನ ವಿಶ್ಲೇಷಣೆಯ ಪ್ರಕಾರ ಇದುವರೆಗೆ ಪಿಎಂ ಕೇರ್ಸ್ ನಿಧಿಯಲ್ಲಿ ಕನಿಷ್ಠ 9,677.90 ಕೋಟಿ ರೂ ಇದೆ. ಈ ಪೈಕಿ 4,308 ಕೋಟಿ ರೂ.ಗಳನ್ನು ಸರ್ಕಾರಿ ಸಂಸ್ಥೆಗಳು ಮತ್ತು ಸಿಬ್ಬಂದಿ ದೇಣಿಗೆ ನೀಡಿದ್ದಾರೆ. ಇನ್ನೂ, ನಿಧಿಯ ಬಳಕೆಯ ಬಗ್ಗೆ ಇಲ್ಲಿಯವರೆಗೆ ಮಾಡಿದ ಏಕೈಕ ಪ್ರಕಟಣೆ ಮೇ 13 ರಂದು ಮಾಡಲಾಗಿದೆ. ಅದರಲ್ಲಿ 2,000 ಕೋಟಿ ರೂ ವೆಚ್ಚದಲ್ಲಿ ಅಹ್ಮದಾಬಾದ್‌ನ ಅತಿದೊಡ್ಡ COVID-19 ಆಸ್ಪತ್ರೆಗೆ ವೆಂಟಿಲೇಟರ್‌ಗಳನ್ನು ಸರಬರಾಜು ಮಾಡಿದ ರಾಜ್‌ಕೋಟ್ ಮೂಲದ ಸಂಸ್ಥೆಯಿಂದ ಕೇಂದ್ರ ಸರ್ಕಾರವು 5,000 ವೆಂಟಿಲೇಟರ್‌ಗಳನ್ನು ಖರೀದಿಸುತ್ತಿದೆ. ಆದರೆ ಈ ಯಂತ್ರಗಳು ಅಸಮರ್ಪಕವೆಂದು ಈಗಾಗಲೇ ಸಾಬೀತಾಗಿದೆ.


ಇದನ್ನೂ ಓದಿ: ಮೋದಿಗೆ ದುಬಾರಿ ಸೂಟ್‌ ನೀಡಿದ್ದ ಕಂಪನಿಯ ಫೇಕ್‌ ವೆಂಟಿಲೇಟರ್‌ ಹಗರಣ..


ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿ ಮುಖಂಡರು ಒಂದೇ ವೆಂಟಿಲೇಟರ್‌ ಫೋಟೊ ಹಾಕಿ ಪಿಎಂ ಕೇರ್ಸ್‌ ಹಣ ಪ್ರಾಮಾಣಿಕವಾಗಿ ಬಳಸಿದ್ದೇವೆ ಎಂಬ ಪ್ರಚಾರ ಪಡೆಯಲು ಮುಂದಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿವಾದವೆದ್ದಿದೆ.

ಪ್ರಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಈ ಬಗ್ಗೆ ಪ್ರಶ್ನೆ ಮಾಡಿದ್ದು, ಒಂದು ವೆಂಟಿಲೇಟರ್‌, ನೂರಾರು ಪ್ರಚಾರ ಎಂದು ಟೀಕಿಸಿದ್ದಾರೆ. ಅದರಲ್ಲಿ ಒಂದೇ ವೆಂಟಿಲೇಟರ್ ಅನ್ನು ನೂರಾರು ಬಿಜೆಪಿ ನಾಯಕರು ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ಗಳನ್ನು ಪೋಸ್ಟ್‌ ಮಾಡಲಾಗಿದೆ.

1 Ventilator 100 Publicity

Posted by Dhruv Rathee on Monday, June 15, 2020

ಇನ್ನು ಕೆಲವರು ’ಒನ್‌ ನೇಷನ್‌, ಒನ್‌ ವೆಂಟಿಲೇಟರ್‌’ ಎಂದು ಬಿಜೆಪಿ ಮುಖಂಡರನ್ನು ವ್ಯಂಗ್ಯವಾಡಿದ್ದಾರೆ. ಬಿಜೆಪಿ ಐಟಿ ಸೆಲ್‌ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ಕೆಲವರು ವಿವರಣೆ ನೀಡಿದ್ದು, ಬಿಜೆಪಿ ಸರ್ಕಾರ ಕೆಲಸ ಮಾಡದಿದ್ದರೂ ಸರಿಯೇ ಸಾಮಾಜಿಕ ಮತ್ತು ಮುಖ್ಯವಾಹಿನಿ ಮಾಧ್ಯಮಗಳನ್ನು ಬಳಸಿ ಹೇಗೆ ಪ್ರಚಾರ ಪಡೆಯುತ್ತಿದೆ ನೋಡಿ ಎಂದು ವಿವರಿಸಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನಾಳೆಯಿಂದ ಮತ್ತೆ ಲಾಕ್‌ಡೌನ್‌! ಈ ಸುದ್ದಿ ನಿಜವೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...