Homeಅಂತರಾಷ್ಟ್ರೀಯಪ್ಯಾಲೆಸ್ತೀನ್ ಬೆಂಬಲಿಸಿದ ನೂರಾರು ವಿದ್ಯಾರ್ಥಿಗಳಿಗೆ ಸ್ವಯಂ ಗಡಿಪಾರು ಸೂಚನೆ ನೀಡಿದ ಟ್ರಂಪ್ ಆಡಳಿತ

ಪ್ಯಾಲೆಸ್ತೀನ್ ಬೆಂಬಲಿಸಿದ ನೂರಾರು ವಿದ್ಯಾರ್ಥಿಗಳಿಗೆ ಸ್ವಯಂ ಗಡಿಪಾರು ಸೂಚನೆ ನೀಡಿದ ಟ್ರಂಪ್ ಆಡಳಿತ

- Advertisement -
- Advertisement -

ಪ್ಯಾಲೆಸ್ತೀನ್ ಪರ ಪ್ರತಿಭಟನೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಸ್ವಯಂ ಗಡಿಪಾರು ಆಗುವಂತೆ ಅಮೆರಿಕದ ವಿದೇಶಾಂಗ ಇಲಾಖೆ (ಡಿಒಎಸ್‌) ಈ-ಮೇಲ್ ಕಳುಹಿಸಿದೆ ಎಂದು ವರದಿಯಾಗಿದೆ.

ಪ್ಯಾಲೆಸ್ತೀನ್ ಪರ ಪೋಸ್ಟ್‌ ಹಾಕಿದವರು ಮತ್ತು ಅದಕ್ಕೆ ಬೆಂಬಲ ವ್ಯಕ್ತಪಡಿಸಿದವರಿಗೂ ‘ರಾಷ್ಟ್ರವಿರೋಧಿ’ ಪೋಸ್ಟ್‌ ಹಾಕಲಾಗಿದೆ ಎಂದು ಆರೋಪಿಸಿ ಗಡಿಪಾರು ಆಗುವಂತೆ ಈ-ಮೇಲ್ ಕಳುಹಿಸಲಾಗಿದೆ ಎಂದು ವರದಿ ತಿಳಿಸಿದೆ.

ಇತ್ತೀಚಿನ ವರದಿಗಳ ಪ್ರಕಾರ, ಅಮೆರಿಕದಲ್ಲಿ 1.5 ಮಿಲಿಯನ್ ವಿದ್ಯಾರ್ಥಿ ವೀಸಾ ಹೊಂದಿರುವವರಿದ್ದಾರೆ. ಅದರಲ್ಲಿ 3.31 ಲಕ್ಷ ಭಾರತೀಯ ಮತ್ತು 2.77 ಚೀನಾದವರು ಒಳಗೊಂಡಿದ್ದಾರೆ.

ಡಿಒಎಸ್‌ ನಡೆಸಿ ಪರಿಶೀಲನೆ ಆಧರಿಸಿ ವಿದ್ಯಾರ್ಥಿಗಳ ವಿರುದ್ದ ಕ್ರಮ ಕೈಗೊಳ್ಳಲಾಗಿದೆ. ಇನ್ನುಮುಂದೆ ಎಫ್‌ (ಶೈಕ್ಷಣಿಕ ಅಧ್ಯಯನ ವೀಸಾ), ಎಂ (ವೃತ್ತಿಪರ ಅಧ್ಯಯನ ವೀಸಾ) ಅಥವಾ ಜೆ (ವಿನಿಮಯ ವೀಸಾ) ಗಾಗಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದರೆ, ಅವರ ಸಾಮಾಜಿಕ ಮಾಧ್ಯಮ ಖಾತೆಗಳು ಡಿಒಎಸ್‌ ಪರಿಶೀಲನೆಗೆ ಒಳಪಡಲಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಅಮೆರಿಕದ ನ್ಯಾಯ ಮತ್ತು ವಿದೇಶಾಂಗ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಉಲ್ಲೇಖಿಸಿ, ಆಕ್ಸಿಯೋಸ್ ಮಾಡಿರುವ ವರದಿ ಪ್ರಕಾರ, ಟ್ರಂಪ್ ಆಡಳಿತವು ಕೆಲವು ಕಾಲೇಜುಗಳನ್ನು ‘ಹಮಾಸ್ ಪರ’ ಎಂದು ನಿರ್ಧರಿಸಿದೆ. ಯಾವುದೇ ವಿದೇಶಿ ವಿದ್ಯಾರ್ಥಿಗಳನ್ನು ಆ ಕಾಲೇಜುಗಳು ಸೇರಿಸಿಕೊಳ್ಳದಂತೆ ತಡೆಯಲು ಪ್ರಯತ್ನಿಸುವ ಯೋಜನೆಗಳ ಬಗ್ಗೆ ಚರ್ಚಿಸುತ್ತಿದೆ.

ಟ್ರಂಪ್ ಆಡಳಿತಕ್ಕೆ ಈ ಯೋಚನೆಯು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರ “ಕ್ಯಾಚ್ ಅಂಡ್ ರಿವೋಕ್” ಕಾರ್ಯಕ್ರಮದಿಂದ ಬಂದಿದೆ. ಕ್ಯಾಚ್ ಅಂಡ್ ರಿವೋಕ್ ಕಾರ್ಯಕ್ರಮವು ಗಾಝಾದ ಯುದ್ಧದ ವಿರುದ್ಧ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಕೇಂದ್ರೀಕರಿಸುತ್ತಿದೆ ಎಂದು ಆಕ್ಸಿಯೋಸ್ ವರದಿ ತಿಳಿಸಿದೆ.

“ಕ್ಯಾಚ್ ಅಂಡ್ ರಿವೋಕ್” ಜಾರಿಯಾದ ಮೂರು ವಾರಗಳಲ್ಲಿ 300ಕ್ಕೂ ಹೆಚ್ಚು ವಿದೇಶಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೀಸಾಗಳನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಟ್ರಂಪ್ ಆಡಳಿತ ವಾಕ್‌ ಸ್ವಾತಂತ್ರ್ಯ ಮತ್ತು ನ್ಯಾಯಯುತ ಪ್ರಕ್ರಿಯೆಯನ್ನು ಕಿತ್ತುಕೊಂಡಿದೆ. ಗಾಝಾದಲ್ಲಿ ಆಕ್ರಮಣಕ್ಕೆ ಒಳಗಾದ ಜನರ ಪರ ಧ್ವನಿ ಎತ್ತಿದವರಿಗೆ ಅನ್ಯಾಯವಾಗಿ ಹಮಾಸ್ ನಂಟು ಕಲ್ಪಿಸಿದೆ ಎಂದು ವಿಮರ್ಶಕರು ಆಕ್ಷೇಪಿಸಿದ್ದಾರೆ.

ಹಮಾಸ್ ಪರ ಯಾರಿದ್ದಾರೆ ಎಂಬುದರ ಆಧಾರದ ಮೇಲೆ ಇಡೀ ವಿಶ್ವವಿದ್ಯಾಲಯಗಳನ್ನು ಪ್ರಮಾಣೀಕರಿಸುವ ಪರಿಕಲ್ಪನೆಯು ಆತಂಕಕಾರಿ ಎಂದು ಪಕ್ಷಾತೀತ ವಾಕ್ ಸ್ವಾತಂತ್ರ್ಯ ಗುಂಪಾದ ಫೌಂಡೇಶನ್ ಫಾರ್ ಇಂಡಿವಿಜುವಲ್ ರೈಟ್ಸ್ ಅಂಡ್ ಎಕ್ಸ್‌ಪ್ರೆಶನ್ (FIRE) ಹೇಳಿದೆ.

ಗಡಿಪಾರಾದ ಕೊಲಂಬಿಯಾ ವಿವಿ ಭಾರತೀಯ ವಿದ್ಯಾರ್ಥಿನಿ

‘ಹಿಂಸೆ ಮತ್ತು ಭಯೋತ್ಪಾದನೆಯನ್ನು ಪ್ರತಿಪಾದಿಸುತ್ತಿದ್ದಾರೆ’ ಮತ್ತು ಹಮಾಸ್ ಅನ್ನು ಬೆಂಬಲಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಡೊನಾಲ್ಡ್ ಟ್ರಂಪ್ ಆಡಳಿತವು ವೀಸಾ ರದ್ದುಗೊಳಿಸಿದ ಕೊಲಂಬಿಯಾ ವಿಶ್ವವಿದ್ಯಾಲಯದ ಭಾರತೀಯ ಪಿಎಚ್‌ಡಿ ವಿದ್ಯಾರ್ಥಿಯೊಬ್ಬರು ಇತ್ತೀಚೆಗೆ ಸ್ವಯಂ ಗಡೀಪಾರು ಮಾಡಿ ದೇಶ ತೊರೆದಿದ್ದಾರೆ.

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ನಗರ ಯೋಜನೆಯಲ್ಲಿ ಪಿಹೆಚ್‌ಡಿ ವಿದ್ಯಾರ್ಥಿಯಾಗಿದ್ದ ಭಾರತೀಯ ಪ್ರಜೆ ರಂಜನಿ ಶ್ರೀನಿವಾಸನ್ ಅವರು ಎಫ್‌-1 ವಿದ್ಯಾರ್ಥಿ ವೀಸಾದಲ್ಲಿ ಅಮೆರಿಕ ಪ್ರವೇಶಿಸಿದ್ದರು ಎಂದು ಅಮೆರಿಕದ ಗೃಹ ಭದ್ರತಾ ಇಲಾಖೆ (ಡಿಹೆಚ್‌ಎಸ್‌) ಶುಕ್ರವಾರ (ಮಾ.14) ಹೇಳಿಕೆಯಲ್ಲಿ ತಿಳಿಸಿತ್ತು.

ರಂಜನಿ ಶ್ರೀನಿವಾಸನ್ ಅವರು ಗಾಝಾದ ಹಮಾಸ್ ಗುಂಪನ್ನು ಬೆಂಬಲಿಸುವ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಅಮೆರಿಕ ವಿದೇಶಾಂಗ ಇಲಾಖೆ ಮಾರ್ಚ್ 5ರಂದು ಅವರ ವೀಸಾವನ್ನು ರದ್ದುಗೊಳಿಸಿತ್ತು. ಮಾರ್ಚ್ 11 ರಂದು ರಂಜನಿ ಅವರು ಕಸ್ಟಮ್ಸ್ ಅಂಡ್ ಬಾರ್ಡರ್ ಪ್ರೊಟೆಕ್ಷನ್ (ಸಿಬಿಪಿ) ಹೋಮ್ ಆ್ಯಪ್ ಬಳಸಿ ಸ್ವಯಂ-ಗಡೀಪಾರು ಮಾಡಿಕೊಂಡಿರುವುದಾಗಿ ಇಲಾಖೆ ತಿಳಿಸಿದೆ.

 

ಮ್ಯಾನ್ಮಾರ್, ಥೈಲ್ಯಾಂಡ್ ಭೂಕಂಪ: 700ಕ್ಕೂ ಅಧಿಕ ಸಾವು, ಸಾವಿರಾರು ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...