Homeಅಂತರಾಷ್ಟ್ರೀಯಪ್ಯಾಲೆಸ್ತೀನ್ ಬೆಂಬಲಿಸಿದ ನೂರಾರು ವಿದ್ಯಾರ್ಥಿಗಳಿಗೆ ಸ್ವಯಂ ಗಡಿಪಾರು ಸೂಚನೆ ನೀಡಿದ ಟ್ರಂಪ್ ಆಡಳಿತ

ಪ್ಯಾಲೆಸ್ತೀನ್ ಬೆಂಬಲಿಸಿದ ನೂರಾರು ವಿದ್ಯಾರ್ಥಿಗಳಿಗೆ ಸ್ವಯಂ ಗಡಿಪಾರು ಸೂಚನೆ ನೀಡಿದ ಟ್ರಂಪ್ ಆಡಳಿತ

- Advertisement -
- Advertisement -

ಪ್ಯಾಲೆಸ್ತೀನ್ ಪರ ಪ್ರತಿಭಟನೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಸ್ವಯಂ ಗಡಿಪಾರು ಆಗುವಂತೆ ಅಮೆರಿಕದ ವಿದೇಶಾಂಗ ಇಲಾಖೆ (ಡಿಒಎಸ್‌) ಈ-ಮೇಲ್ ಕಳುಹಿಸಿದೆ ಎಂದು ವರದಿಯಾಗಿದೆ.

ಪ್ಯಾಲೆಸ್ತೀನ್ ಪರ ಪೋಸ್ಟ್‌ ಹಾಕಿದವರು ಮತ್ತು ಅದಕ್ಕೆ ಬೆಂಬಲ ವ್ಯಕ್ತಪಡಿಸಿದವರಿಗೂ ‘ರಾಷ್ಟ್ರವಿರೋಧಿ’ ಪೋಸ್ಟ್‌ ಹಾಕಲಾಗಿದೆ ಎಂದು ಆರೋಪಿಸಿ ಗಡಿಪಾರು ಆಗುವಂತೆ ಈ-ಮೇಲ್ ಕಳುಹಿಸಲಾಗಿದೆ ಎಂದು ವರದಿ ತಿಳಿಸಿದೆ.

ಇತ್ತೀಚಿನ ವರದಿಗಳ ಪ್ರಕಾರ, ಅಮೆರಿಕದಲ್ಲಿ 1.5 ಮಿಲಿಯನ್ ವಿದ್ಯಾರ್ಥಿ ವೀಸಾ ಹೊಂದಿರುವವರಿದ್ದಾರೆ. ಅದರಲ್ಲಿ 3.31 ಲಕ್ಷ ಭಾರತೀಯ ಮತ್ತು 2.77 ಚೀನಾದವರು ಒಳಗೊಂಡಿದ್ದಾರೆ.

ಡಿಒಎಸ್‌ ನಡೆಸಿ ಪರಿಶೀಲನೆ ಆಧರಿಸಿ ವಿದ್ಯಾರ್ಥಿಗಳ ವಿರುದ್ದ ಕ್ರಮ ಕೈಗೊಳ್ಳಲಾಗಿದೆ. ಇನ್ನುಮುಂದೆ ಎಫ್‌ (ಶೈಕ್ಷಣಿಕ ಅಧ್ಯಯನ ವೀಸಾ), ಎಂ (ವೃತ್ತಿಪರ ಅಧ್ಯಯನ ವೀಸಾ) ಅಥವಾ ಜೆ (ವಿನಿಮಯ ವೀಸಾ) ಗಾಗಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದರೆ, ಅವರ ಸಾಮಾಜಿಕ ಮಾಧ್ಯಮ ಖಾತೆಗಳು ಡಿಒಎಸ್‌ ಪರಿಶೀಲನೆಗೆ ಒಳಪಡಲಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಅಮೆರಿಕದ ನ್ಯಾಯ ಮತ್ತು ವಿದೇಶಾಂಗ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಉಲ್ಲೇಖಿಸಿ, ಆಕ್ಸಿಯೋಸ್ ಮಾಡಿರುವ ವರದಿ ಪ್ರಕಾರ, ಟ್ರಂಪ್ ಆಡಳಿತವು ಕೆಲವು ಕಾಲೇಜುಗಳನ್ನು ‘ಹಮಾಸ್ ಪರ’ ಎಂದು ನಿರ್ಧರಿಸಿದೆ. ಯಾವುದೇ ವಿದೇಶಿ ವಿದ್ಯಾರ್ಥಿಗಳನ್ನು ಆ ಕಾಲೇಜುಗಳು ಸೇರಿಸಿಕೊಳ್ಳದಂತೆ ತಡೆಯಲು ಪ್ರಯತ್ನಿಸುವ ಯೋಜನೆಗಳ ಬಗ್ಗೆ ಚರ್ಚಿಸುತ್ತಿದೆ.

ಟ್ರಂಪ್ ಆಡಳಿತಕ್ಕೆ ಈ ಯೋಚನೆಯು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರ “ಕ್ಯಾಚ್ ಅಂಡ್ ರಿವೋಕ್” ಕಾರ್ಯಕ್ರಮದಿಂದ ಬಂದಿದೆ. ಕ್ಯಾಚ್ ಅಂಡ್ ರಿವೋಕ್ ಕಾರ್ಯಕ್ರಮವು ಗಾಝಾದ ಯುದ್ಧದ ವಿರುದ್ಧ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಕೇಂದ್ರೀಕರಿಸುತ್ತಿದೆ ಎಂದು ಆಕ್ಸಿಯೋಸ್ ವರದಿ ತಿಳಿಸಿದೆ.

“ಕ್ಯಾಚ್ ಅಂಡ್ ರಿವೋಕ್” ಜಾರಿಯಾದ ಮೂರು ವಾರಗಳಲ್ಲಿ 300ಕ್ಕೂ ಹೆಚ್ಚು ವಿದೇಶಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೀಸಾಗಳನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಟ್ರಂಪ್ ಆಡಳಿತ ವಾಕ್‌ ಸ್ವಾತಂತ್ರ್ಯ ಮತ್ತು ನ್ಯಾಯಯುತ ಪ್ರಕ್ರಿಯೆಯನ್ನು ಕಿತ್ತುಕೊಂಡಿದೆ. ಗಾಝಾದಲ್ಲಿ ಆಕ್ರಮಣಕ್ಕೆ ಒಳಗಾದ ಜನರ ಪರ ಧ್ವನಿ ಎತ್ತಿದವರಿಗೆ ಅನ್ಯಾಯವಾಗಿ ಹಮಾಸ್ ನಂಟು ಕಲ್ಪಿಸಿದೆ ಎಂದು ವಿಮರ್ಶಕರು ಆಕ್ಷೇಪಿಸಿದ್ದಾರೆ.

ಹಮಾಸ್ ಪರ ಯಾರಿದ್ದಾರೆ ಎಂಬುದರ ಆಧಾರದ ಮೇಲೆ ಇಡೀ ವಿಶ್ವವಿದ್ಯಾಲಯಗಳನ್ನು ಪ್ರಮಾಣೀಕರಿಸುವ ಪರಿಕಲ್ಪನೆಯು ಆತಂಕಕಾರಿ ಎಂದು ಪಕ್ಷಾತೀತ ವಾಕ್ ಸ್ವಾತಂತ್ರ್ಯ ಗುಂಪಾದ ಫೌಂಡೇಶನ್ ಫಾರ್ ಇಂಡಿವಿಜುವಲ್ ರೈಟ್ಸ್ ಅಂಡ್ ಎಕ್ಸ್‌ಪ್ರೆಶನ್ (FIRE) ಹೇಳಿದೆ.

ಗಡಿಪಾರಾದ ಕೊಲಂಬಿಯಾ ವಿವಿ ಭಾರತೀಯ ವಿದ್ಯಾರ್ಥಿನಿ

‘ಹಿಂಸೆ ಮತ್ತು ಭಯೋತ್ಪಾದನೆಯನ್ನು ಪ್ರತಿಪಾದಿಸುತ್ತಿದ್ದಾರೆ’ ಮತ್ತು ಹಮಾಸ್ ಅನ್ನು ಬೆಂಬಲಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಡೊನಾಲ್ಡ್ ಟ್ರಂಪ್ ಆಡಳಿತವು ವೀಸಾ ರದ್ದುಗೊಳಿಸಿದ ಕೊಲಂಬಿಯಾ ವಿಶ್ವವಿದ್ಯಾಲಯದ ಭಾರತೀಯ ಪಿಎಚ್‌ಡಿ ವಿದ್ಯಾರ್ಥಿಯೊಬ್ಬರು ಇತ್ತೀಚೆಗೆ ಸ್ವಯಂ ಗಡೀಪಾರು ಮಾಡಿ ದೇಶ ತೊರೆದಿದ್ದಾರೆ.

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ನಗರ ಯೋಜನೆಯಲ್ಲಿ ಪಿಹೆಚ್‌ಡಿ ವಿದ್ಯಾರ್ಥಿಯಾಗಿದ್ದ ಭಾರತೀಯ ಪ್ರಜೆ ರಂಜನಿ ಶ್ರೀನಿವಾಸನ್ ಅವರು ಎಫ್‌-1 ವಿದ್ಯಾರ್ಥಿ ವೀಸಾದಲ್ಲಿ ಅಮೆರಿಕ ಪ್ರವೇಶಿಸಿದ್ದರು ಎಂದು ಅಮೆರಿಕದ ಗೃಹ ಭದ್ರತಾ ಇಲಾಖೆ (ಡಿಹೆಚ್‌ಎಸ್‌) ಶುಕ್ರವಾರ (ಮಾ.14) ಹೇಳಿಕೆಯಲ್ಲಿ ತಿಳಿಸಿತ್ತು.

ರಂಜನಿ ಶ್ರೀನಿವಾಸನ್ ಅವರು ಗಾಝಾದ ಹಮಾಸ್ ಗುಂಪನ್ನು ಬೆಂಬಲಿಸುವ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಅಮೆರಿಕ ವಿದೇಶಾಂಗ ಇಲಾಖೆ ಮಾರ್ಚ್ 5ರಂದು ಅವರ ವೀಸಾವನ್ನು ರದ್ದುಗೊಳಿಸಿತ್ತು. ಮಾರ್ಚ್ 11 ರಂದು ರಂಜನಿ ಅವರು ಕಸ್ಟಮ್ಸ್ ಅಂಡ್ ಬಾರ್ಡರ್ ಪ್ರೊಟೆಕ್ಷನ್ (ಸಿಬಿಪಿ) ಹೋಮ್ ಆ್ಯಪ್ ಬಳಸಿ ಸ್ವಯಂ-ಗಡೀಪಾರು ಮಾಡಿಕೊಂಡಿರುವುದಾಗಿ ಇಲಾಖೆ ತಿಳಿಸಿದೆ.

 

ಮ್ಯಾನ್ಮಾರ್, ಥೈಲ್ಯಾಂಡ್ ಭೂಕಂಪ: 700ಕ್ಕೂ ಅಧಿಕ ಸಾವು, ಸಾವಿರಾರು ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...