Homeಮುಖಪುಟಈ ರೀತಿಯ ನೂರಾರು ಪ್ರಕರಣಗಳು ನಡೆದಿವೆ, ಹಾಗಾಗಿ ಇಂಟರ್ನೆಟ್ ಬಂದ್ ಮಾಡಿದ್ದೇವೆ: ಬೆತ್ತಲೆ ಮೆರವಣಿಗೆ ಘಟನೆ...

ಈ ರೀತಿಯ ನೂರಾರು ಪ್ರಕರಣಗಳು ನಡೆದಿವೆ, ಹಾಗಾಗಿ ಇಂಟರ್ನೆಟ್ ಬಂದ್ ಮಾಡಿದ್ದೇವೆ: ಬೆತ್ತಲೆ ಮೆರವಣಿಗೆ ಘಟನೆ ಕುರಿತು ಮಣಿಪುರ ಸಿಎಂ ಹೇಳಿಕೆ

- Advertisement -
- Advertisement -

ದೇಶಾದ್ಯಂತ ಅಲ್ಲೋಲ ಕಲ್ಲೋಲ ಉಂಟು ಮಾಡಿರುವ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ , ಅತ್ಯಾಚಾರ ರೀತಿಯ ನೂರಾರು ಪ್ರಕರಣಗಳು ನಡೆದಿವೆ, ಹಾಗಾಗಿ ಇಂಟರ್ನೆಟ್ ಬಂದ್ ಮಾಡಿದ್ದೇವೆ ಎಂದು ಮಣಿಪುರ ಸಿಎಂ ಬಿರೇನ್ ಸಿಂಗ್ ಹೇಳಿದ್ದಾರೆ.

ಖಾಸಗಿ ಸುದ್ದಿವಾಹಿನಿ ಇಂಡಿಯಾ ಟುಡೆ ಚಾನೆಲ್ ಜೊತೆ ದೂರವಾಣಿ ಕರೆಯಲ್ಲಿ ಮಾತನಾಡಿದ ಅವರು, “ಇಲ್ಲಿ ಪ್ರತಿದಿನವೂ ಸಂಘರ್ಷ ನಡೆಯುತ್ತಿದೆ. ತುಂಬಾ ಮಂದಿ ಬಲಿಯಾಗಿದ್ದಾರೆ. ಇದೇ ರೀತಿಯ ಹಲವು ಎಫ್‌ಐಆರ್ ದಾಖಲಾದ ಬಗ್ಗೆ ಸಂದೇಶ ಬರುತ್ತಿದೆ. ಇಂತಹ ನೂರಾರು ಘಟನೆಗಳು ಮಣಿಪುರದಲ್ಲಿ ಎರಡು ತಿಂಗಳಲ್ಲಿ ನಡೆದಿದೆ. ಈ ವಿಡಿಯೋ ನಿನ್ನೆಯಷ್ಟೇ ಹೊರಗೆ ಬಂದಿದೆ. ಇಲ್ಲಿನ ‘ಗ್ರೌಂಡ್ ರಿಯಾಲಿಟಿ’ ನೋಡಿದ ಬಳಿಕ ನೀವು ಮಾತನಾಡಿ. ನಿಮ್ಮ ಆರೋಪಗಳನ್ನೆಲ್ಲ ಕೇಳಲು ನಾವು ತಯಾರಿಲ್ಲ. ಇದೇ ರೀತಿಯ ನೂರಾರು ಪ್ರಕರಣಗಳು ನಡೆದಿವೆ, ಅದಕ್ಕಾಗಿಯೇ ನಾವು ಇಂಟರ್ನೆಟ್‌ ಸೇವೆಯನ್ನು ಇಲ್ಲಿ ಬಂದ್ ಮಾಡಿದ್ದೇವೆ” ಎಂದಿದ್ದಾರೆ.

ಈ ಹೀನ ಘಟನೆ ಕಳೆದ ಮೇ 4ರಂದು ನಡೆದು ಈ ಬಗ್ಗೆ ಮೇ 18ರಂದು ಎಫ್‌ಐಆರ್ ಆಗಿದೆ. ಓರ್ವ ಮುಖ್ಯಮಂತ್ರಿಯಾಗಿ ನಿಮಗೆ ಮಾಹಿತಿ ಇಲ್ಲವೇ? ಎಂಬ ನಿರೂಪಕಿಯ ಪ್ರಶ್ನೆಗೆ ಕೋಪೋದ್ರಿಕ್ತರಾದ ಸಿಎಂ ಮೇಲಿನ ಹೇಳಿಕೆ ನೀಡಿದ್ದು, ಈ ಘಟನೆಗೆ ಸಂಬಂಧಿಸಿ ಓರ್ವನನ್ನು ಬಂಧಿಸಿದ್ಧೇವೆ. ಯಾರೆಲ್ಲ ಇದ್ದಾರೋ ಅವರನ್ನು ಬಂಧಿಸುತ್ತೇವೆ’ ಎಂದು ಹೇಳುತ್ತಲೇ ಮುಂದಿನ ಪ್ರಶ್ನೆ ಕೇಳಿದಾಗ ಕರೆಯನ್ನು ಕಟ್ ಮಾಡಿದ್ದಾರೆ.

ಈ ರೀತಿಯಾಗಿ ಬಿರೇನ್ ಸಿಂಗ್ ಮಾತನಾಡಿರುವ ವಿಡಿಯೋ ತುಣುಕನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಹಲವರು ಅವರೊಬ್ಬ ಅಸಮರ್ಥ ಮುಖ್ಯಮಂತ್ರಿ ಎಂದು ಕಿಡಿಕಾರಿದ್ದಾರೆ.

ಮಣಿಪುರದಲ್ಲಿ ಕುಕಿ-ಜೋ ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಬುಧವಾರ ವಿಡಿಯೋವೊಂದು ವೈರಲ್ ಆಗಿದೆ. ಆ ಘಟನೆಯಲ್ಲಿನ ಸಂತ್ರಸ್ತ ಮಹಿಳೆಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡಿದ್ದು, ”ಆ ಗುಂಪಿನೊಂದಿಗೆ ಪೊಲೀಸರೇ ನಮನ್ನು ಬಿಟ್ಟಿದ್ದರು” ಎಂದು ಹೇಳಿದ್ದಾರೆ.

ಆ ವಿಡಿಯೋದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲು ಮಾಡಿ ಗಂಡಸರ ಗುಂಪೊಂದು ಮೆರವಣಿಗೆ ನಡೆಸುತ್ತಿರುವುದನ್ನು ಕಾಣುತ್ತದೆ. ಒಬ್ಬರು 20ರ ಹದಿಹರೆಯದ ಮಹಿಳೆ ಮತ್ತು ಇನ್ನೊಬ್ಬರು 40 ವರ್ಷದ ಮಹಿಳೆಯಾಗಿದ್ದಾರೆ. ಕೆಲವು ಪುರುಷರು ಇಬ್ಬರು ಮಹಿಳೆಯರನ್ನು ಹೊಲದ ಕಡೆಗೆ ಬಲವಂತವಾಗಿ ಎಳೆದೊಯ್ಯುತ್ತಿರುವುದನ್ನು ಕಾಣಬಹುದು. ಈ ಬಗ್ಗೆ ಮೇ 18ರಂದು ಪೊಲೀಸರಿಗೆ ದೂರು ಸಲ್ಲಿಸಲಾಗಿದೆ. ದೂರಿನಲ್ಲಿ, 20ರ ಹದಿಹರೆಯದ ಮಹಿಳೆಯನ್ನು ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ; ಬೆತ್ತಲು ಮೆರವಣಿಗೆ ಮಾಡಿ ಅತ್ಯಾಚಾರವೆಸಗಿದ ಗುಂಪಿಗೆ ನಮ್ಮನ್ನು ಒಪ್ಪಿಸಿದ್ದೇ ಪೊಲೀಸರು: ಮಣಿಪುರ ಸಂತ್ರಸ್ತೆಯ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...