Homeಕರ್ನಾಟಕಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

ಕೂಲಿ ಕಾರ್ಮಿಕರಾಗಿರುವ ಇಲ್ಲಿನ ಜನರು ಜೀವನೋಪಾಯಕ್ಕೆ ಕೂಲಿ ನಂಬಿದ್ದಾರೆ. ಮದ್ಯದಂಗಡಿಯಿಂದ ಬಡ ಜನರ ಜೀವನ ಬೀದಿಗೆ ಬೀಳಲಿದೆ ಎಂಬ ಆತಂಕ ಅವರದು..

- Advertisement -
- Advertisement -

ನೂರಾರು ಮಹಿಳೆಯರು ಮದ್ಯದಂಗಡಿ ತೆರವಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಸಿಂಗಟಗೆರೆ ಹೋಬಳಿಯ ಅಂಚೆ ಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಳೆದ ಮೂರು ದಿನಗಳಿಂದ ಮಹಿಳೆಯರು ಮತ್ತು ಗ್ರಾಮಸ್ಥರು ಮಳೆಯನ್ನೂ ಲೆಕ್ಕಿಸಿದೇ ಪ್ರತಿಭಟನೆ ನಡೆಸುತ್ತಿದ್ದಾರೆ.

ಬಹುತೇಕ ಸುಡಗಾಡು ಸಿದ್ದ ದಲಿತ ಸಮುದಾಯದಿಂದ ಕೂಡಿದ ಅಂಚೆ ಸೋಮನಹಳ್ಳಿ ಒಂದು ಚಿಕ್ಕ ಗ್ರಾಮ. ಗ್ರಾಮಸ್ಥರ ವಿರೋಧದ ನಡುವೆಯೇ ಏಕಾಏಕಿ ಊರಿನಲ್ಲಿ ಮದ್ಯದಂಗಡಿ ತೆರೆದಿರುವುದು ಮಹಿಳೆಯ ಆಕ್ರೋಶಕ್ಕೆ ಕಾರಣವಾಗಿದೆ. ಕೂಲಿ ಕಾರ್ಮಿಕರಾಗಿರುವ ಇಲ್ಲಿನ ಜನರು ಜೀವನೋಪಾಯಕ್ಕೆ ಕೂಲಿಯಿಂದ ಬರುವ ಅಲ್ಪ ಆದಾಯವನ್ನೇ ನಂಬಿದ್ದಾರೆ. ಮದ್ಯದಂಗಡಿಯಿಂದ ಬಡ ಜನರ ಜೀವನ ಬೀದಿಗೆ ಬೀಳಲಿದೆ ಎಂಬ ಆತಂಕದಿಂದ ಮಹಿಳೆಯರು ಸತತ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಮದ್ಯದಂಗಡಿ ತೆರವಿಗೆ ಮಹಿಳೆಯರ ಜೊತೆ ಗ್ರಾಮ ಪಂಚಾಯತಿ ಸದಸ್ಯರಾದ ಸವಿತಾ ಪ್ರಸನ್ನ, ಸ್ಥಳೀಯ ಹೋರಾಟಗಾರ ಮಂಜುನಾಥ್‌ ಮುಂತಾದವರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಗ್ರಾಮ ಪಂಚಾಯತಿಯಿಂದ ಯಾವುದೇ ಅನುಮತಿಯನ್ನು ಪಡೆಯದೇ ನಿಯಮವನ್ನು ಉಲ್ಲಂಘಿಸಿ ಮದ್ಯದಂಗಡಿ ತೆರೆಯಲಾಗಿದೆ ಎಂದು ಆರೋಪಿಸಿದ್ದಾರೆ.

ಅಂಚೆ ಸೋಮನಹಳ್ಳಿ ಗ್ರಾಮದ ಮಹಿಳೆಯರಿಂದ ಪ್ರತಿಭಟನೆ

ಅಂಚೆ ಸೋಮನಹಳ್ಳಿಯ ಬಹುತೇಕ ಜನರು ಅವಿದ್ಯಾವಂತ ಕೂಲಿ ಕಾರ್ಮಿಕರು. ಜನರ ಕಾನೂನಿನ ಅಜ್ಞಾನವನ್ನು ಅಸ್ತ್ರ ಮಾಡಿಕೊಂಡು ಕೆಲವರು ತಮ್ಮ ಲಾಭಕ್ಕಾಗಿ ಊರಿನ ಆರೋಗ್ಯವನ್ನು ಬಲಿಕೊಡಲು ಹೊರಟಿದ್ದಾರೆ ಎಂಬುದು ಹೋರಾಟ ನಿರತ ಮಹಿಳೆಯರ ಆರೋಪ.

ಇದನ್ನೂ ಓದಿ: ಮದ್ಯಸೇವನೆಗೆ ವಯೋಮಿತಿ: 25 ರಿಂದ 21ಕ್ಕೆ ಇಳಿಸಿದ ದೆಹಲಿ ಸರ್ಕಾರ

ಅತ್ತ ಮದ್ಯದಂಗಡಿ ಮಾಲೀಕ ಎ.ಜಿ.ಗಿರೀಶ್ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಪ್ರತಿಭಟನೆಯ ಕಾರಣಕ್ಕೆ ಎರಡು ಮೂರು ದಿನಗಳಿಂದ ಅಂಗಡಿಯನ್ನು ಮುಚ್ಚಿ ಸಿಬ್ಬಂದಿಗಳೂ ಕೂಡ ಕಾಣಿಸುತ್ತಿಲ್ಲ. ತಾತ್ಕಾಲಿಕವಾಗಿ ಮದ್ಯದಂಗಡಿ ಬಂದಾಗಿದೆ ನಿಜ. ಪ್ರತಿಭಟನೆ ನಿಂತ ತಕ್ಷಣ ಮತ್ತೆ ಅಂಗಡಿ ತೆರಯುತ್ತಾರೆ. ನಿತ್ಯ ಕೂಲಿ ಕೆಲಸ ಬಿಟ್ಟು ಜನರು ಧರಣಿ ನಡೆಸಲು ಸಾಧ್ಯವಿಲ್ಲ. ಮದ್ಯದಂಗಡಿ ತೆರೆಯಲೇ ಬೇಕೆಂದಿದ್ದರೆ ಜನವಸತಿ ಪ್ರದೇಶದಿಂದ ದೂರದಲ್ಲಿ ಎಲ್ಲಾದರೂ  ತೆರೆಯಲಿ ಎಂಬುದು ಅಂಚೆ ಸೋಮನಹಳ್ಳಿಯ ಬಹುತೇಕರ ಅಭಿಪ್ರಾಯ.

ಜನ ಸಾಮಾನ್ಯರ ವಿರೋಧವನ್ನು ಕಡೆಗಣಿಸಿ ಸರ್ಕಾರ ಮತ್ತು ಮದ್ಯೋದ್ಯಮಿಗಳು ಶಾಲೆ,ಆಸ್ಪತ್ರೆ ಮತ್ತು ಬುಡಕಟ್ಟು ಜನರಿರುವ ಪ್ರದೇಶದಲ್ಲಿ ವೈನ್‌ ಶಾಪ್ ತೆರೆಯಲು ಮುಂದಾಗಿದ್ದಾರೆ. ಕರ್ನಾಟಕ ಅಬಕಾರಿ ಅಧಿನಿಯಮ, 1967 ರ ರೂಲ್‌ 5 ರ ಪ್ರಕಾರ ಶಾಲೆ, ಧಾರ್ಮಿಕ ಸ್ಥಳ, ಆಸ್ಪತ್ರೆ, ಎಸ್‌ಸಿ ಎಸ್‌ಎಸ್‌ಟಿ ಸಮುದಾಯದ ಜನವಸತಿಯಿಂದ 100 ಮಿ. ಅಂತರದಲ್ಲಿ ಮದ್ಯದಂಗಡಿಯನ್ನು ತೆರೆಯುವಂತಿಲ್ಲ. ಕರ್ನಾಟಕ ವೈನ್‌ ಮರ್ಚೆಂಟ್ಸ್‌ vs ಕರ್ನಾಟಕ ರಾಜ್ಯ ಪ್ರಕರಣದಲ್ಲಿ ಹೈಕೋರ್ಟ್ ಜನವಸತಿ, ಶಿಕ್ಷಣ ಸಂಸ್ಥೆಗಳು, ಆರೋಗ್ಯ ಸಂಸ್ಥೆ, ಧಾರ್ಮಿಕ ಸ್ಥಳದ ಸಮೀಪ ಮದ್ಯದಂಗಡಿಯನ್ನು ತೆರೆಯಬಾರದು ಎಂದು ಆದೇಶ ನೀಡಿದೆ. ಜನ ವಿರೋಧವಿದ್ದಾಗ 100 ಮೀ. ಎಂಬ ಸರ್ಕಾರಿ ಮಾನದಂಡಕ್ಕೆ ಕಟ್ಟು ಬಿದ್ದು ಮದ್ಯದಂಗಡಿ ತೆರೆಯುವುದು ಸೂಕ್ತವಲ್ಲ ಎಂದು ಮಾನ್ಯ ಕರ್ನಾಟಕ ಹೈಕೋರ್ಟ್‌ 1997 ರಲ್ಲಿ ಅಭಿಪ್ರಾಯ ಪಟ್ಟಿದೆ.

ಇದನ್ನೂ ಓದಿ: ಗಾಂಧಿ ಪ್ರತಿಮೆ ಇರುವ ಪ್ರದೇಶ ಧಾರ್ಮಿಕ ಸ್ಥಳವಲ್ಲ: ಕರ್ನಾಟಕ ಹೈಕೋರ್ಟ್

ಅಬಕಾರಿ ಪರವಾನಗೆಯನ್ನು ನೀಡುವ ಮುನ್ನ 100 ಮೀ. ಅಂತರ ಎಂಬ ನಿಯಮ 5 ಕ್ಕೆ ಬದ್ಧರಾಗಿ ಜನಸಾಮಾನ್ಯರ ಸಾಮಾಜಿಕ ಸ್ಥಿತಿಗತಿಗಳನ್ನು ಕಡೆಗಣಿಸಬಾರದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿರುತ್ತದೆ. ಸರ್ಕಾರ ನ್ಯಾಯಾಲಯದ ಆದೇಶ, ಜನ ಸಾಮಾನ್ಯರ ಜೀವನ, ಆರೋಗ್ಯ ಎಲ್ಲವನ್ನೂ ಕಡೆಗಣಿಸಿ  ಅಂಚೆ ಸೋಮನಹಳ್ಳಿಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಸುಡುಗಾಡು ಸಿದ್ದರ ಓಣಿಯ ಸಮೀಪ ಮದ್ಯದಂಗಡಿಯನ್ನು ತೆರೆಯಲು ಅವಕಾಶ ನೀಡಿರುವುದು ಈಗಾಗಲೇ ಮಹಿಳೆಯರ ಮತ್ತು ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿದೆ.

ಪೊಲೀಸರಿಂದ ಪ್ರತಿಭಟನೆ ತೆರವಿಗೆ ಯತ್ನ

ವೈನ್‌ ಶಾಪ್ ತೆರೆಯಲು ಸರ್ಕಾರ ಅನುಮತಿ ನೀಡಿದೆ. ಮದ್ಯದಂಗಡಿಗೆ ಪರವಾನಗಿ ಕೂಡ ಮಂಜೂರಾಗಿದೆ. ಅಂಗಡಿ ಮಾಲೀಕರು ಸರ್ಕಾರಕ್ಕೆ ನೀಡಬೇಕಾದ ಹಣವನ್ನು ಸಂದಾಯ ಮಾಡಿದ್ದಾರೆ. ಎಲ್ಲವೂ ಕಾನೂನು ಪ್ರಕಾರವೇ ಅಂಗಡಿಯನ್ನು ತೆರೆಯಲಾಗಿದ್ದು ನಿಯಮಾವಳಿಯನ್ನು ಉಲ್ಲಂಘನೆ ಮಾಡಲಾಗಿಲ್ಲ ಎಂದು ಕಡೂರು ವಿಭಾಗದ ಅಬಕಾರಿ ಇನ್ಸ್‌ಪೆಕ್ಟರ್ ಶ್ರೀಕಾಂತ್ ಮಾಹಿತಿ ನೀಡಿದ್ದಾರೆ. ಮದ್ಯದಂಗಡಿಯನ್ನು ವಿರೋಧಿಸುವವರು ನ್ಯಾಯಾಲಯದ ಮೊರೆ ಹೋಗಲಿ. ಸರ್ಕಾರದ ಕಾನೂನಿನ ವ್ಯಾಪ್ತಿಯಲ್ಲಿ ತೆರೆಯಲಾಗಿರುವ ಮದ್ಯದಂಗಡಿ ಮುಚ್ಚಲು ಸಾಧ್ಯವಿಲ್ಲ. ಸರ್ಕಾರ ನೇರವಾಗಿ ಅಬಕಾರಿ ಪರವಾನಗಿಯನ್ನು ನೀಡುತ್ತದೆ. ಇಲಾಖೆಯಲ್ಲಿ ಸಚಿವರ ಮಟ್ಟದಲ್ಲಿ ಮಂಜೂರಾದ ಪರವಾನಗಿಯನ್ನು ಕೆಳ ಹಂತದ ಅಧಿಕಾರಿಗಳು ರದ್ದು ಮಾಡಲು ಸಾಧ್ಯವಿಲ್ಲ. ನ್ಯಾಯಾಲಯ ಅಥವಾ ಸರ್ಕಾರಕ್ಕೆ ಮಾತ್ರ ಮದ್ಯದಂಗಡಿ ತೆರವು ಮಾಡುವ ಅಧಿಕಾರ ಇದೆ ಎಂದು ಅವರು ನಾನುಗೌರಿಗೆ ತಿಳಿಸಿದ್ದಾರೆ.

ಅಷ್ಟೇನು ವಿದ್ಯಾವಂತರಲ್ಲದ ಗ್ರಾಮಸ್ಥರು ಸರ್ಕಾರ ಮತ್ತು ಮದ್ಯದಂಗಡಿ ಮಾಲೀಕರ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡಿ ಹೋರಾಡುವಷ್ಟು ಶಕ್ತಿವಂತರಲ್ಲ. ಅಂಚೆಹಳ್ಳಿ ಗ್ರಾಮಸ್ಥರ ಈ ದೌರ್ಬಲ್ಯವನ್ನೇ ಅಸ್ತ್ರವನ್ನಾಗಿಸಿಕೊಂಡು ಮದ್ಯದಂಗಡಿ ತೆರೆಯಲು ಅನುಮತಿ ನೀಡಿರುವುದು ದುರದೃಷ್ಟದ ಸಂಗತಿ ಮತ್ತು ಇದರಿಂದ ಜನರ ಜೀವನಕ್ಕೆ ತೊಂದರೆಯಾಗಲಿದೆ.

ಈಗಾಗಲೇ ಅಬಕಾರಿ ಇಲಾಖೆಯಲ್ಲಿ ಲಂಚಾವತಾರದ ಆರೋಪಗಳು ಕೇಳಿಬಂದಿವೆ. ಅಬಕಾರಿ ಸಚಿವರ ವಿರುದ್ಧವೇ ಭ್ರಷ್ಟಾಚಾರದ ಹಗರಣದ ಆರೋಪವಿದೆ. ಇದೆಲ್ಲದರ ನಡುವೆ ಅಬಕಾರಿ ಇಲಾಖೆ ಸರ್ಕಾರಕ್ಕೆ ಆದಾಯವನ್ನು ತರುವ ದೃಷ್ಟಿಯಿಂದ ಗ್ರಾಮೀಣ ಪ್ರದೇಶಗಳಿಗೆ ಮದ್ಯದಂಗಡಿಗಳನ್ನು ವಿಸ್ತರಿಸುತ್ತಿರುವುದು ಯಾರ ಒಳಿತಿಗಾಗಿ ಎಂದು ಅಂಚೆ ಸೋಮನಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಸವಿತಾ ಪ್ರಸನ್ನ ಪ್ರಶ್ನಿಸುತ್ತಾರೆ. ಒಂದೆಡೆ ಗಾಂಧೀಜಿಯವರ 150 ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಬೇಕು ಎಂದು ಗ್ರಾಮ ಪಂಚಾಯತಗಳಿಗೆ ಆದೇಶಿಸುವ ಸರ್ಕಾರ ಮತ್ತೊಂದೆಡೆ ಮಹಾತ್ಮ ಗಾಂಧಿಯವರ ಸಂದೇಶಕ್ಕೆ ವಿರುದ್ಧವಾಗಿ ಜನರನ್ನು ಕುಡಿತಕ್ಕೆ ಪ್ರಚೋದಿಸುತ್ತಿದೆ. ಗ್ರಾಮದಲ್ಲಿ ಕುಂಟುಂಬಗಳು ಉಳಿಯಬೇಕಾದರೆ ಮದ್ಯದಂಗಡಿ ತೆರವಾಗಬೇಕು. ಅಲ್ಲಿಯವರೆಗೆ ಹೋರಾಟ ಮುಂದುವರೆಯುತ್ತದೆ ಎಂದು ಅವರು ಇದೇ ಸಂದರ್ಭದಲ್ಲಿ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ.

-ರಾಜೇಶ್ ಹೆಬ್ಬಾರ್‌


ಇದನ್ನೂ ಓದಿ: ಮದ್ಯ ಹೋಂ ಡೆಲೆವರಿ ಮಾಡುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸಲಹೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....