Homeಕರ್ನಾಟಕಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

ಕೂಲಿ ಕಾರ್ಮಿಕರಾಗಿರುವ ಇಲ್ಲಿನ ಜನರು ಜೀವನೋಪಾಯಕ್ಕೆ ಕೂಲಿ ನಂಬಿದ್ದಾರೆ. ಮದ್ಯದಂಗಡಿಯಿಂದ ಬಡ ಜನರ ಜೀವನ ಬೀದಿಗೆ ಬೀಳಲಿದೆ ಎಂಬ ಆತಂಕ ಅವರದು..

- Advertisement -
- Advertisement -

ನೂರಾರು ಮಹಿಳೆಯರು ಮದ್ಯದಂಗಡಿ ತೆರವಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಸಿಂಗಟಗೆರೆ ಹೋಬಳಿಯ ಅಂಚೆ ಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಳೆದ ಮೂರು ದಿನಗಳಿಂದ ಮಹಿಳೆಯರು ಮತ್ತು ಗ್ರಾಮಸ್ಥರು ಮಳೆಯನ್ನೂ ಲೆಕ್ಕಿಸಿದೇ ಪ್ರತಿಭಟನೆ ನಡೆಸುತ್ತಿದ್ದಾರೆ.

ಬಹುತೇಕ ಸುಡಗಾಡು ಸಿದ್ದ ದಲಿತ ಸಮುದಾಯದಿಂದ ಕೂಡಿದ ಅಂಚೆ ಸೋಮನಹಳ್ಳಿ ಒಂದು ಚಿಕ್ಕ ಗ್ರಾಮ. ಗ್ರಾಮಸ್ಥರ ವಿರೋಧದ ನಡುವೆಯೇ ಏಕಾಏಕಿ ಊರಿನಲ್ಲಿ ಮದ್ಯದಂಗಡಿ ತೆರೆದಿರುವುದು ಮಹಿಳೆಯ ಆಕ್ರೋಶಕ್ಕೆ ಕಾರಣವಾಗಿದೆ. ಕೂಲಿ ಕಾರ್ಮಿಕರಾಗಿರುವ ಇಲ್ಲಿನ ಜನರು ಜೀವನೋಪಾಯಕ್ಕೆ ಕೂಲಿಯಿಂದ ಬರುವ ಅಲ್ಪ ಆದಾಯವನ್ನೇ ನಂಬಿದ್ದಾರೆ. ಮದ್ಯದಂಗಡಿಯಿಂದ ಬಡ ಜನರ ಜೀವನ ಬೀದಿಗೆ ಬೀಳಲಿದೆ ಎಂಬ ಆತಂಕದಿಂದ ಮಹಿಳೆಯರು ಸತತ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಮದ್ಯದಂಗಡಿ ತೆರವಿಗೆ ಮಹಿಳೆಯರ ಜೊತೆ ಗ್ರಾಮ ಪಂಚಾಯತಿ ಸದಸ್ಯರಾದ ಸವಿತಾ ಪ್ರಸನ್ನ, ಸ್ಥಳೀಯ ಹೋರಾಟಗಾರ ಮಂಜುನಾಥ್‌ ಮುಂತಾದವರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಗ್ರಾಮ ಪಂಚಾಯತಿಯಿಂದ ಯಾವುದೇ ಅನುಮತಿಯನ್ನು ಪಡೆಯದೇ ನಿಯಮವನ್ನು ಉಲ್ಲಂಘಿಸಿ ಮದ್ಯದಂಗಡಿ ತೆರೆಯಲಾಗಿದೆ ಎಂದು ಆರೋಪಿಸಿದ್ದಾರೆ.

ಅಂಚೆ ಸೋಮನಹಳ್ಳಿ ಗ್ರಾಮದ ಮಹಿಳೆಯರಿಂದ ಪ್ರತಿಭಟನೆ

ಅಂಚೆ ಸೋಮನಹಳ್ಳಿಯ ಬಹುತೇಕ ಜನರು ಅವಿದ್ಯಾವಂತ ಕೂಲಿ ಕಾರ್ಮಿಕರು. ಜನರ ಕಾನೂನಿನ ಅಜ್ಞಾನವನ್ನು ಅಸ್ತ್ರ ಮಾಡಿಕೊಂಡು ಕೆಲವರು ತಮ್ಮ ಲಾಭಕ್ಕಾಗಿ ಊರಿನ ಆರೋಗ್ಯವನ್ನು ಬಲಿಕೊಡಲು ಹೊರಟಿದ್ದಾರೆ ಎಂಬುದು ಹೋರಾಟ ನಿರತ ಮಹಿಳೆಯರ ಆರೋಪ.

ಇದನ್ನೂ ಓದಿ: ಮದ್ಯಸೇವನೆಗೆ ವಯೋಮಿತಿ: 25 ರಿಂದ 21ಕ್ಕೆ ಇಳಿಸಿದ ದೆಹಲಿ ಸರ್ಕಾರ

ಅತ್ತ ಮದ್ಯದಂಗಡಿ ಮಾಲೀಕ ಎ.ಜಿ.ಗಿರೀಶ್ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಪ್ರತಿಭಟನೆಯ ಕಾರಣಕ್ಕೆ ಎರಡು ಮೂರು ದಿನಗಳಿಂದ ಅಂಗಡಿಯನ್ನು ಮುಚ್ಚಿ ಸಿಬ್ಬಂದಿಗಳೂ ಕೂಡ ಕಾಣಿಸುತ್ತಿಲ್ಲ. ತಾತ್ಕಾಲಿಕವಾಗಿ ಮದ್ಯದಂಗಡಿ ಬಂದಾಗಿದೆ ನಿಜ. ಪ್ರತಿಭಟನೆ ನಿಂತ ತಕ್ಷಣ ಮತ್ತೆ ಅಂಗಡಿ ತೆರಯುತ್ತಾರೆ. ನಿತ್ಯ ಕೂಲಿ ಕೆಲಸ ಬಿಟ್ಟು ಜನರು ಧರಣಿ ನಡೆಸಲು ಸಾಧ್ಯವಿಲ್ಲ. ಮದ್ಯದಂಗಡಿ ತೆರೆಯಲೇ ಬೇಕೆಂದಿದ್ದರೆ ಜನವಸತಿ ಪ್ರದೇಶದಿಂದ ದೂರದಲ್ಲಿ ಎಲ್ಲಾದರೂ  ತೆರೆಯಲಿ ಎಂಬುದು ಅಂಚೆ ಸೋಮನಹಳ್ಳಿಯ ಬಹುತೇಕರ ಅಭಿಪ್ರಾಯ.

ಜನ ಸಾಮಾನ್ಯರ ವಿರೋಧವನ್ನು ಕಡೆಗಣಿಸಿ ಸರ್ಕಾರ ಮತ್ತು ಮದ್ಯೋದ್ಯಮಿಗಳು ಶಾಲೆ,ಆಸ್ಪತ್ರೆ ಮತ್ತು ಬುಡಕಟ್ಟು ಜನರಿರುವ ಪ್ರದೇಶದಲ್ಲಿ ವೈನ್‌ ಶಾಪ್ ತೆರೆಯಲು ಮುಂದಾಗಿದ್ದಾರೆ. ಕರ್ನಾಟಕ ಅಬಕಾರಿ ಅಧಿನಿಯಮ, 1967 ರ ರೂಲ್‌ 5 ರ ಪ್ರಕಾರ ಶಾಲೆ, ಧಾರ್ಮಿಕ ಸ್ಥಳ, ಆಸ್ಪತ್ರೆ, ಎಸ್‌ಸಿ ಎಸ್‌ಎಸ್‌ಟಿ ಸಮುದಾಯದ ಜನವಸತಿಯಿಂದ 100 ಮಿ. ಅಂತರದಲ್ಲಿ ಮದ್ಯದಂಗಡಿಯನ್ನು ತೆರೆಯುವಂತಿಲ್ಲ. ಕರ್ನಾಟಕ ವೈನ್‌ ಮರ್ಚೆಂಟ್ಸ್‌ vs ಕರ್ನಾಟಕ ರಾಜ್ಯ ಪ್ರಕರಣದಲ್ಲಿ ಹೈಕೋರ್ಟ್ ಜನವಸತಿ, ಶಿಕ್ಷಣ ಸಂಸ್ಥೆಗಳು, ಆರೋಗ್ಯ ಸಂಸ್ಥೆ, ಧಾರ್ಮಿಕ ಸ್ಥಳದ ಸಮೀಪ ಮದ್ಯದಂಗಡಿಯನ್ನು ತೆರೆಯಬಾರದು ಎಂದು ಆದೇಶ ನೀಡಿದೆ. ಜನ ವಿರೋಧವಿದ್ದಾಗ 100 ಮೀ. ಎಂಬ ಸರ್ಕಾರಿ ಮಾನದಂಡಕ್ಕೆ ಕಟ್ಟು ಬಿದ್ದು ಮದ್ಯದಂಗಡಿ ತೆರೆಯುವುದು ಸೂಕ್ತವಲ್ಲ ಎಂದು ಮಾನ್ಯ ಕರ್ನಾಟಕ ಹೈಕೋರ್ಟ್‌ 1997 ರಲ್ಲಿ ಅಭಿಪ್ರಾಯ ಪಟ್ಟಿದೆ.

ಇದನ್ನೂ ಓದಿ: ಗಾಂಧಿ ಪ್ರತಿಮೆ ಇರುವ ಪ್ರದೇಶ ಧಾರ್ಮಿಕ ಸ್ಥಳವಲ್ಲ: ಕರ್ನಾಟಕ ಹೈಕೋರ್ಟ್

ಅಬಕಾರಿ ಪರವಾನಗೆಯನ್ನು ನೀಡುವ ಮುನ್ನ 100 ಮೀ. ಅಂತರ ಎಂಬ ನಿಯಮ 5 ಕ್ಕೆ ಬದ್ಧರಾಗಿ ಜನಸಾಮಾನ್ಯರ ಸಾಮಾಜಿಕ ಸ್ಥಿತಿಗತಿಗಳನ್ನು ಕಡೆಗಣಿಸಬಾರದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿರುತ್ತದೆ. ಸರ್ಕಾರ ನ್ಯಾಯಾಲಯದ ಆದೇಶ, ಜನ ಸಾಮಾನ್ಯರ ಜೀವನ, ಆರೋಗ್ಯ ಎಲ್ಲವನ್ನೂ ಕಡೆಗಣಿಸಿ  ಅಂಚೆ ಸೋಮನಹಳ್ಳಿಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಸುಡುಗಾಡು ಸಿದ್ದರ ಓಣಿಯ ಸಮೀಪ ಮದ್ಯದಂಗಡಿಯನ್ನು ತೆರೆಯಲು ಅವಕಾಶ ನೀಡಿರುವುದು ಈಗಾಗಲೇ ಮಹಿಳೆಯರ ಮತ್ತು ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿದೆ.

ಪೊಲೀಸರಿಂದ ಪ್ರತಿಭಟನೆ ತೆರವಿಗೆ ಯತ್ನ

ವೈನ್‌ ಶಾಪ್ ತೆರೆಯಲು ಸರ್ಕಾರ ಅನುಮತಿ ನೀಡಿದೆ. ಮದ್ಯದಂಗಡಿಗೆ ಪರವಾನಗಿ ಕೂಡ ಮಂಜೂರಾಗಿದೆ. ಅಂಗಡಿ ಮಾಲೀಕರು ಸರ್ಕಾರಕ್ಕೆ ನೀಡಬೇಕಾದ ಹಣವನ್ನು ಸಂದಾಯ ಮಾಡಿದ್ದಾರೆ. ಎಲ್ಲವೂ ಕಾನೂನು ಪ್ರಕಾರವೇ ಅಂಗಡಿಯನ್ನು ತೆರೆಯಲಾಗಿದ್ದು ನಿಯಮಾವಳಿಯನ್ನು ಉಲ್ಲಂಘನೆ ಮಾಡಲಾಗಿಲ್ಲ ಎಂದು ಕಡೂರು ವಿಭಾಗದ ಅಬಕಾರಿ ಇನ್ಸ್‌ಪೆಕ್ಟರ್ ಶ್ರೀಕಾಂತ್ ಮಾಹಿತಿ ನೀಡಿದ್ದಾರೆ. ಮದ್ಯದಂಗಡಿಯನ್ನು ವಿರೋಧಿಸುವವರು ನ್ಯಾಯಾಲಯದ ಮೊರೆ ಹೋಗಲಿ. ಸರ್ಕಾರದ ಕಾನೂನಿನ ವ್ಯಾಪ್ತಿಯಲ್ಲಿ ತೆರೆಯಲಾಗಿರುವ ಮದ್ಯದಂಗಡಿ ಮುಚ್ಚಲು ಸಾಧ್ಯವಿಲ್ಲ. ಸರ್ಕಾರ ನೇರವಾಗಿ ಅಬಕಾರಿ ಪರವಾನಗಿಯನ್ನು ನೀಡುತ್ತದೆ. ಇಲಾಖೆಯಲ್ಲಿ ಸಚಿವರ ಮಟ್ಟದಲ್ಲಿ ಮಂಜೂರಾದ ಪರವಾನಗಿಯನ್ನು ಕೆಳ ಹಂತದ ಅಧಿಕಾರಿಗಳು ರದ್ದು ಮಾಡಲು ಸಾಧ್ಯವಿಲ್ಲ. ನ್ಯಾಯಾಲಯ ಅಥವಾ ಸರ್ಕಾರಕ್ಕೆ ಮಾತ್ರ ಮದ್ಯದಂಗಡಿ ತೆರವು ಮಾಡುವ ಅಧಿಕಾರ ಇದೆ ಎಂದು ಅವರು ನಾನುಗೌರಿಗೆ ತಿಳಿಸಿದ್ದಾರೆ.

ಅಷ್ಟೇನು ವಿದ್ಯಾವಂತರಲ್ಲದ ಗ್ರಾಮಸ್ಥರು ಸರ್ಕಾರ ಮತ್ತು ಮದ್ಯದಂಗಡಿ ಮಾಲೀಕರ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡಿ ಹೋರಾಡುವಷ್ಟು ಶಕ್ತಿವಂತರಲ್ಲ. ಅಂಚೆಹಳ್ಳಿ ಗ್ರಾಮಸ್ಥರ ಈ ದೌರ್ಬಲ್ಯವನ್ನೇ ಅಸ್ತ್ರವನ್ನಾಗಿಸಿಕೊಂಡು ಮದ್ಯದಂಗಡಿ ತೆರೆಯಲು ಅನುಮತಿ ನೀಡಿರುವುದು ದುರದೃಷ್ಟದ ಸಂಗತಿ ಮತ್ತು ಇದರಿಂದ ಜನರ ಜೀವನಕ್ಕೆ ತೊಂದರೆಯಾಗಲಿದೆ.

ಈಗಾಗಲೇ ಅಬಕಾರಿ ಇಲಾಖೆಯಲ್ಲಿ ಲಂಚಾವತಾರದ ಆರೋಪಗಳು ಕೇಳಿಬಂದಿವೆ. ಅಬಕಾರಿ ಸಚಿವರ ವಿರುದ್ಧವೇ ಭ್ರಷ್ಟಾಚಾರದ ಹಗರಣದ ಆರೋಪವಿದೆ. ಇದೆಲ್ಲದರ ನಡುವೆ ಅಬಕಾರಿ ಇಲಾಖೆ ಸರ್ಕಾರಕ್ಕೆ ಆದಾಯವನ್ನು ತರುವ ದೃಷ್ಟಿಯಿಂದ ಗ್ರಾಮೀಣ ಪ್ರದೇಶಗಳಿಗೆ ಮದ್ಯದಂಗಡಿಗಳನ್ನು ವಿಸ್ತರಿಸುತ್ತಿರುವುದು ಯಾರ ಒಳಿತಿಗಾಗಿ ಎಂದು ಅಂಚೆ ಸೋಮನಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಸವಿತಾ ಪ್ರಸನ್ನ ಪ್ರಶ್ನಿಸುತ್ತಾರೆ. ಒಂದೆಡೆ ಗಾಂಧೀಜಿಯವರ 150 ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಬೇಕು ಎಂದು ಗ್ರಾಮ ಪಂಚಾಯತಗಳಿಗೆ ಆದೇಶಿಸುವ ಸರ್ಕಾರ ಮತ್ತೊಂದೆಡೆ ಮಹಾತ್ಮ ಗಾಂಧಿಯವರ ಸಂದೇಶಕ್ಕೆ ವಿರುದ್ಧವಾಗಿ ಜನರನ್ನು ಕುಡಿತಕ್ಕೆ ಪ್ರಚೋದಿಸುತ್ತಿದೆ. ಗ್ರಾಮದಲ್ಲಿ ಕುಂಟುಂಬಗಳು ಉಳಿಯಬೇಕಾದರೆ ಮದ್ಯದಂಗಡಿ ತೆರವಾಗಬೇಕು. ಅಲ್ಲಿಯವರೆಗೆ ಹೋರಾಟ ಮುಂದುವರೆಯುತ್ತದೆ ಎಂದು ಅವರು ಇದೇ ಸಂದರ್ಭದಲ್ಲಿ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ.

-ರಾಜೇಶ್ ಹೆಬ್ಬಾರ್‌


ಇದನ್ನೂ ಓದಿ: ಮದ್ಯ ಹೋಂ ಡೆಲೆವರಿ ಮಾಡುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸಲಹೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...