Homeಅಂತರಾಷ್ಟ್ರೀಯ'ನರಹಂತಕ' ಇಸ್ರೇಲ್‌ ಪ್ರಧಾನಿ ನೆತನ್ಯಾಹು ಸಂದರ್ಶನಕ್ಕೆ ವಿರೋಧ: ಫ್ರಾನ್ಸ್‌ನ ಮಾದ್ಯಮ ಕಚೇರಿ ಹೊರಗೆ ಪ್ರತಿಭಟನೆ

‘ನರಹಂತಕ’ ಇಸ್ರೇಲ್‌ ಪ್ರಧಾನಿ ನೆತನ್ಯಾಹು ಸಂದರ್ಶನಕ್ಕೆ ವಿರೋಧ: ಫ್ರಾನ್ಸ್‌ನ ಮಾದ್ಯಮ ಕಚೇರಿ ಹೊರಗೆ ಪ್ರತಿಭಟನೆ

- Advertisement -
- Advertisement -

ಗಾಝಾ ಹತ್ಯಾಕಾಂಡದ ರುವಾರಿ, ನರಹಂತಕ ಇಸ್ರೇಲ್‌ ಪ್ರಧಾನಿ ಬೆಂಜಮನ್‌ ನೆತನ್ಯಾಹು ಸಂದರ್ಶನ ನಡೆಯುತ್ತಿದ್ದ ಪಶ್ಚಿಮ ಪ್ಯಾರಿಸ್ ಉಪನಗರದ ಫ್ರಾನ್ಸ್‌ನ ಖಾಸಗಿ ಬ್ರಾಡ್‌ಕಾಸ್ಟರ್ ‘TF1’ ಕಚೇರಿ ಹೊರಗೆ ಸಾವಿರಾರು ಮಂದಿ ಸೇರಿ ಪ್ರತಿಭಟನೆಯನ್ನು ನಡೆಸಿದ್ದಾರೆ.

ಭಾರೀ ಪೊಲೀಸ್ ಭದ್ರತೆಯಿದ್ದ ಮಾದ್ಯಮ ಕಟ್ಟಡದ ಬಳಿ ಪ್ರತಿಭಟನಾಕಾರರು ಪ್ಯಾಲೆಸ್ತೀನ್‌ ಧ್ವಜಗಳನ್ನು ಹಿಡಿದುಕೊಂಡು ಪ್ರತಿಭಟನೆ ಮಾಡಿದ್ದಾರೆ. “ಗಾಝಾ, ಪ್ಯಾರಿಸ್ ನಿಮ್ಮೊಂದಿಗೆ ಇದೆ”, ತಕ್ಷಣದ ಕದನ ವಿರಾಮ ಮಾಡಬೇಕು ಮತ್ತು ‘ಇಸ್ರೇಲ್’- ಕೊಲೆಗಾರ ಎಂದು ಘೋಷಣೆಯನ್ನು ಕೂಗಿದ್ದರೆ.

TF1 ಸುದ್ದಿ ಚಾನೆಲ್‌ನಲ್ಲಿ ಪ್ರಸಾರವಾದ ಸಂದರ್ಶನದಲ್ಲಿ, ನೆತನ್ಯಾಹು ಗಾಝಾದ ಮೇಲಿನ ಯುದ್ಧವನ್ನು ಸಮರ್ಥಿಸಿಕೊಂಡಿದ್ದಾರೆ ಮತ್ತು ನಾಗರಿಕರ ಸಾವಿನ ಸಂಖ್ಯೆಯು ಅತ್ಯಂತ ಕಡಿಮೆ ದರದಲ್ಲಿದೆ ಎಂದು ಹೇಳಿದ್ದಾರೆ. ಇಸ್ರೇಲ್ ನಾಗರಿಕರನ್ನು ಗುರಿಯಾಗಿಸಿಕೊಂಡಿಲ್ಲ ಅಥವಾ ಉದ್ದೇಶಪೂರ್ವಕವಾಗಿ ಕ್ಷಾಮವನ್ನು ಉಂಟುಮಾಡಲು ಪ್ರಯತ್ನಿಸುತ್ತಿಲ್ಲ ಎಂದು ನೆತನ್ಯಾಹು ಹೇಳಿಕೊಂಡಿದ್ದಾರೆ.

ಯುಎನ್ ಏಜೆನ್ಸಿಗಳು, ನೆರವು ಗುಂಪುಗಳು ಗಾಝಾ ಭೂಪ್ರದೇಶವನ್ನು ಪ್ರವೇಶಿಸುವ ಮಾನವೀಯ ನೆರವಿನ ಮೇಲೆ ಇಸ್ರೇಲ್ ನಿರ್ಬಂಧಗಳ ಪರಿಣಾಮವಾಗಿ ಗಾಝಾವು ಕ್ಷಾಮವನ್ನು ಅನುಭವಿಸುತ್ತಿದೆ ಎಂದು ಹೇಳುತ್ತಿದೆ, ಗಾಝಾದ ಮಕ್ಕಳ ಅನ್ನ, ನೀರು, ಆಹಾರ ಸೇರಿ ಮೂಲಭೂತ ಅವಶ್ಯಕತೆಗಳನ್ನು ಪೂರೈಸಲು ಸಾಧ್ಯವಾಗದೆ ಸಂಕಷ್ಟದಲ್ಲಿದ್ದಾರೆ.

ಇಸ್ರೇಲ್‌ ಯುದ್ಧ ಘೋಷಿಸಿ ಅ.7ರಂದು ಗಾಝಾ ಮೇಲೆ ದಾಳಿ ಪ್ರಾರಂಭಿಸಿದ ಬಳಿಕ ಕನಿಷ್ಠ 36,224 ಪ್ಯಾಲೆಸ್ತೀನಿಯನ್ನರು  ಕೊಲ್ಲಲ್ಪಟ್ಟರು ಮತ್ತು 81,777 ಮಂದಿ ಗಾಯಗೊಂಡಿದ್ದಾರೆ. ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡಕ್ಕೆ ಜಾಗತಿಕ ಖಂಡನೆ ಮತ್ತು ಹೇಗ್‌ನಲ್ಲಿರುವ ಅಂತರಾಷ್ಟ್ರೀಯ ನ್ಯಾಯಾಲಯವು ತಕ್ಷಣವೇ ನಗರದಿಂದ ಸೇನೆಯನ್ನು ಹಿಂತೆಗೆದುಕೊಳ್ಳುವಂತೆ ಆದೇಶಿಸಿದರೂ ಇಸ್ರೇಲ್ ರಾಫಾದ ಮೇಲೆ ಆಕ್ರಮಣವನ್ನು ಮುಂದುವರೆಸುತ್ತಿರುವುದರಿಂದ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರು ರಫಾದಿಂದ ಸ್ಥಳಾಂತರಗೊಂಡಿದ್ದಾರೆ.

 

ನೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ ಅರೆವೈದ್ಯಕೀಯ ಸಿಬ್ಬಂದಿಗಳ ಹತ್ಯೆ

ರಫಾದಲ್ಲಿ ಇಸ್ರೇಲ್‌ ಪಡೆಗಳಿಂದ ಕೊಲ್ಲಲ್ಪಟ್ಟ ಇಬ್ಬರು ಪ್ಯಾಲೆಸ್ತೀನ್‌ ರೆಡ್ ಕ್ರೆಸೆಂಟ್ ಸೊಸೈಟಿ (PRCS) ಅರೆವೈದ್ಯರ ಕುಟುಂಬಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ತನ್ನ ಸಂತಾಪವನ್ನು ವ್ಯಕ್ತಪಡಿಸಿದೆ.

ರಾಫಾದ ತಾಲ್ ಅಸ್-ಸುಲ್ತಾನ್ ಪ್ರದೇಶದಲ್ಲಿ ಹೈಥಮ್ ತುಬಾಸಿ ಮತ್ತು ಸುಹೇಲ್ ಹಸ್ಸೌನಾ ಅವರು ತಮ್ಮ ಆಂಬ್ಯುಲೆನ್ಸ್‌ನಲ್ಲಿ ಜನರ ಅಗತ್ಯಗಳಿಗೆ ಸ್ಪಂದಿಸುತ್ತಿದ್ದಾಗಿ ಇಸ್ರೇಲ್ ಉದ್ದೇಶಪೂರಕವಾಗಿ ದಾಳಿ ನಡೆಸಿ ಇಬ್ಬರು ಪ್ಯಾಲೆಸ್ತೀನ್‌ ರೆಡ್ ಕ್ರೆಸೆಂಟ್ ಸೊಸೈಟಿ ಸಿಬ್ಬಂದಿಗಳನ್ನು ಹತ್ಯೆ ಮಾಡಿದೆ ಎಂದು ಹೇಳಿಕೊಂಡಿದೆ. ಈವರೆಗೆ 19 ಪ್ಯಾಲೆಸ್ತೀನ್‌ ರೆಡ್ ಕ್ರೆಸೆಂಟ್ ಸೊಸೈಟಿ ಸಿಬ್ಬಂದಿಗಳು ಇಸ್ರೇಲ್‌ ದಾಳಿಗೆ ಬಲಿಯಾಗಿದ್ದಾರೆ.

ಗಾಝಾದ ನುಸಿರಾತ್ ನಿರಾಶ್ರಿತರ ಶಿಬಿರವನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ಮತ್ತೆ ನಡೆಸಿದ ದಾಳಿಗೆ ಮೂವರು ನಾಗರಿಕರು ಮೃತಪಟ್ಟಿದ್ದಾರೆ. ಗಾಝಾದ ಮೇಲೆ ಇಸ್ರೇಲ್‌ ಯುದ್ಧ ಘೋಷಿಸಿದಾಗ ಸುರಕ್ಷಿತ ಸ್ಥಳವೆಂದು ನಾಗರಿಕರು ತಾತ್ಕಾಲಿಕ ನೆಲೆ ಕಂಡುಕೊಂಡಿದ್ದ ರಫಾ ಮೇಲೆ ಇಸ್ರೇಲ್‌ ದಾಳಿಯನ್ನು ಪ್ರಾರಂಭಿಸಿದೆ. ಮೂಲಗಳ ಪ್ರಕಾರ ಈ ನಗರದಲ್ಲಿ ಈವರೆಗೆ 60ಕ್ಕೂ ಅಧಿಕ ಮಂದಿಯ ಹತ್ಯೆ ನಡೆದಿದೆ. ಅಲ್ಲಿನ ನಾಗರಿಕರ ಕೊನೆಯ ಆಶ್ರಯದ ಮೇಲಿನ ದಾಳಿಗೆ ಜಗತ್ತಿನಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಆದರೆ ಇಸ್ರೇಲ್‌ ತನ್ನ ಕ್ರೌರ್ಯವನ್ನು ಸಮರ್ಥಿಸಿಕೊಳ್ಳುತ್ತಿದೆ.

ಇದನ್ನು ಓದಿ: ಸಾವಿನ ಅಂಚಿನಲ್ಲಿರುವ ವ್ಯಕ್ತಿಯ ಹೇಳಿಕೆ ಹೆಚ್ಚು ಮಾನ್ಯತೆಯನ್ನು ಹೊಂದಿದೆ: ಸುಪ್ರೀಂಕೋರ್ಟ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...